ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೇ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ, ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಖತರ್ನಾಕ ಖದೀಮರ ಕಾಲಿಗೆ ಗುಂಡು ಹಾರಿಸಲಾಗಿದೆ. ಪರಿಣಾಮ ಇಬ್ಬರು ಆಸ್ಪತ್ರೆ ಪಾಲಾಗಿದ್ದಾರೆ. ಅಂದಹಾಗೆ, ಮಂಗಳೂರು ಮೂಲದ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೋಡಲಾಗ್ತಿದೆ. ಅಂದಹಾಗೆ, ಮಂಗಳೂರು ಮೂಲದ...
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಇಂದೂರು ಸಮೀಪದ 6 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ನಡೆದ ಕಾರ್ಯಾಚರಣೆಯಲ್ಲಿ ಒಂದು ಪುಟ್ಟ ಕರು ಸೇರಿದಂತೆ, ನಾಲ್ಕು ಜಾನುವಾರುಗಳನ್ನು ರಕ್ಷಿಸಲಾಗಿದೆ. ಇಂದೂರಿನಿಂದ ಕಲಘಟಗಿಗೆ ಸಾಗಿಸಲಾಗುತ್ತಿತ್ತು ಎನ್ನಲಾದ ಜಾನುವಾರುಗಳನ್ನು ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಧ್ಯ ಆರೋಪಿ ಹಾಗೂ ಜಾನುವಾರು ಸಮೇತ ವಾಹನ ಮುಂಡಗೋಡ ಪೊಲೀಸ್ ಠಾಣೆಯ...
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಯಲ್ಲಾಪುರ ಠಾಣೆಯ ದಕ್ಷ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಯಲ್ಲಾಪುರ ಶಿರಸಿ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ನಡೆದಿದ್ದ ಖತರ್ನಾಕ ದರೋಡೆ ಕೇಸನ್ನು ಕೆಲವೇ ಅಂದ್ರೆ ಕೆಲವೇ ಗಂಟೆಗಳಲ್ಲಿ ಬೇಧಿಸಿ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ. ಯಲ್ಲಾಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಘಟನೆ ಏನು..? ಅದು ಮೊನ್ನೆ ಮಂಗಳವಾರ ದಿನಾಂಕ 19ರ ಮುಸ್ಸಂಜೆಲಿ ನಡೆದಿದ್ದ ಘಟನೆ.. ಅವತ್ತು, ಶಿರಸಿಯ ಕಟ್ಟಿಗೆ ವ್ಯಾಪಾರಿಯೊಬ್ಬ ತನ್ನ ವ್ಯಾಪಾರದ ಸಲುವಾಗಿ ಯಲ್ಲಾಪುರಕ್ಕೆ ಬಂದಿದ್ದ. ಆತನ ಹೆಸ್ರು ಅಖ್ತರ್...
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ...
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವಾಗಿ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ ವಿನಾಯಕ ನಿಗೆ ಚಾಕು ಇರಿದಿದ್ದಾನೆ. ಚಾಕುವಿನಿಂದ...
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ. ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ...
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಮುಂಡಗೋಡ ಪಟ್ಟಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೋಲ್ಡ್ ಸ್ಮಿತ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಭೂ ವ್ಯವಹಾರದಲ್ಲಿ ಆಗಿರೋ ದಗಲ್ಬಾಜಿಗೆ ಮನನೊಂದು ಸುಸೈಡ್ ಮಾಡಿಕೊಂಡಿದ್ದಾರೆ ಅಂತಾ ಮೃತನ ಪತ್ನಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪರಿಣಾಮ ಹುಬ್ಬಳ್ಳಿಯ 6 ಜನರ ವಿರುದ್ಧ ಕೇಸು ದಾಖಲಾಗಿದೆ. ಜ್ಯುವೇಲ್ಲರಿ ಶಾಪ್ ಮಾಲೀಕ..! ಅಂದಹಾಗೆ, ಮುಂಡಗೋಡ ಪಟ್ಟಣದಲ್ಲಿ ಜ್ಯುವೇಲ್ಲರಿ ಶಾಪ್ ನಡೆಸುತ್ತಿದ್ದ ಆಶ್ರಿತ್ ಮೋಹನ್ ವೇರ್ಣೇಕರ್(45) ಎಂಬುವವನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೂ ವ್ಯವಹಾರದಲ್ಲಿ ಮೋಸ..!...









