ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 60-65 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು ಯಾರಿಗಾದ್ರೂ ಈತನ ಬಗ್ಗೆ ಗುರುತು ಇದ್ರೆ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಮುಂಡಗೋಡ ಪೊಲೀಸ್ ಠಾಣೆ ಫೋನ್ ನಂಬರ್ 08301 222211 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕ್ರೈ ಪಿಎಸ್ಐ ಹೆಚ್.ಬಿ.ಕುಡುಗುಂಟಿ ತಿಳಿಸಿದ್ದಾರೆ
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಅಪರಾಧ ಜಗತ್ತು
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಧಾರವಾಡ: ಮಹಿಳೆ ಜೊತೆ ಪೋನಿನಲ್ಲಿ ಮಾತನಾಡಿದ್ದಾನೆಂದು ಸಂಶಯ ಪಟ್ಟು ಟಂಟಂ ಚಾಲಕನ ಮೇಲೆ ಒಂದೇ ಕುಟುಂಬದವರಿಂದ ಹಲ್ಲೆ ನಡೆದಿದೆ. ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ಮಾವಿನ ತೋಟದಲ್ಲಿ ಘಟನೆ ನಡೆದಿದೆ. ಇಮಾಮ್ ಸಾಬ್ ದೇವರಮನೆ (34) ಎನ್ನುವ ಟಂಟಂ ಚಾಲಕನ ಮೇಲೆ, ಸುಮಾರು 10 ಜನರಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ತೀವ್ರ ಹಲ್ಲೆಗೆ ಒಳಗಾದ ಇಮಾಮಸಾಬ್ ನ ಎರಡು ಕೈ ಮುರಿತಗೊಂಡಿವೆ. ಎಲುಬು ಮುರಿಯುವಂತೆ ಹೊಡೆದು ಕೈ ಮುರಿದಿರುವ ದುಷ್ಕರ್ಮಿಗಳು. ಕೊಟೂರು ಗ್ರಾಮದ ಅಗಸಿಮನಿ ಎಂಬ ಕುಟುಂಬದ...
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಟಾಟಾ ಎಸ್ ನಲ್ಲಿ ಸಾಗಿಸುತ್ತಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಚೇಸ್ ಮಾಡಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ತಾಲೂಕಿನ ಬಡ್ಡಿಗೇರಿಯಿಂದ ಹಾನಗಲ್ಲಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಟಾಟಾ ಎಸ್ ನಲ್ಲಿ ಆರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ತಿಳಿದ ಪೊಲೀಸರು ತಕ್ಷಣವೇ ಅಲರ್ಟ್ ಆಗಿದ್ದಾರೆ. ಹಾನಗಲ್ಲಿನ ಕಡೆಗೆ ವಾಹನ ಹೊರಟಿದೆ ಅನ್ನೊ ಮಾಹಿತಿ ತಿಳಿದ ಪೊಲೀಸ್ರು, ಪಟ್ಟಣದ ಹೊರ ವಲಯದ...
ಉತ್ತರ ಕನ್ನಡದ ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ರಾಜ್ಯ ಡಕಾಯಿತರ ಬಂಧನ..!
ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ಟೀಂ ನಿಜಕ್ಕೂ ಅದ್ಭುತ ಕಾರ್ಯ ಮಾಡಿದೆ. ದರೋಡೆಗೆ ಸಂಚು ರೂಪಿಸಿ ಬಸ್ ಹತ್ತಿ ಹೊರಟಿದ್ದ, ಇಬ್ಬರು ಖತರ್ನಾಕ್ ಅಂತರ್ ರಾಜ್ಯ ದರೋಡೆಕೋರರನ್ನ ಹೆಡೆಮುರಿ ಕಟ್ಟಿದ್ದಾರೆ. ಫಿಲ್ಡಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಕ್ರಿಮಿಗಳು ಮಾತ್ರ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಅನಮೋಡ್ ಚೆಕ್ ಪೊಸ್ಟ್..! ಅಂದಹಾಗೆ, ನಿನ್ನೆ ಶನಿವಾರ, ಅಂದ್ರೆ, ಜುಲೈ 27 ರಂದು ರಾಮನಗರದ ಅನಮೋಡ್ ಅಬಕಾರಿ ಚೆಕ್ ಪೊಸ್ಟ್ ನಲ್ಲಿ ಸಿಬ್ಬಂದಿಯವ್ರು ತಪಾಸಣೆ...
“ಅಣಬೆ ಪಲ್ಯ, ಬಿಸಿ ರೊಟ್ಟಿ ಮಾಡಿ ಇಡ್ರಿ, ಬಂದು ಉಣ್ತಿನಿ” ಅಂತ ಹೇಳಿ ಹೋದ ಹುಡುಗ ಹೆಣವಾಗಿ ಬಿಟ್ಟ..! ಪಾಳಾ ಯುವಕನ ಆತ್ಮಹತ್ಯೆ ಹಿಂದೆ ಹಲವು ಅನುಮಾನ..?
ಮುಂಡಗೋಡ ತಾಲೂಕಿನ ಪಾಳಾದ ಹುಡುಗ ರವಿ ಅಕ್ಕಸಾಲಿ ಸಾವಿನ ಹಿಂದೆ ಅನುಮಾನ ಇದೆಯಾ..? ಹುಡೇಲಕೊಪ್ಪದ ಮಾವಿನ ಗಿಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ರವಿಯ ಸಾವಿನ ಸುತ್ತ ಹತ್ತಾರು ಪ್ರಶ್ನೆಗಳು ಎದ್ದಿವೆ. ವಯಸ್ಸಲ್ಲದ ವಯಸ್ಸಲ್ಲಿ ಆತನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ದರ್ದಾದ್ರೂ ಏನಿತ್ತು ಅನ್ನೋದು ಕೆಲವರ ಪ್ರಶ್ನೆ..! ಅಣಬೆ ತಂದಿದ್ದ..! ಅಸಲು, ನಿನ್ನೆ ಇಡೀ ದಿನವೂ ಲವಲವಿಕೆಯಿಂದಲೇ ಇದ್ದ ರವಿ, ಮದ್ಯಾನ ಮನೆಗೆ ಕಾಡಿನಿಂದ ತಾಜಾ ಮಶರೂಮ್ (ಅಣಬೆ) ತಂದಿದ್ದ. ನಿಮಗೆ ಗೊತ್ತಿರಲಿ, ಉತ್ತರ ಕನ್ನಡದ ಕಾಡಲ್ಲಿ ಈ...
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ...
ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!
ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಖಾತಾ ಬದಲಾವಣೆಗಾಗಿ ವ್ಯಕ್ತಿ ಓರ್ವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣ ಪಂಚಾಯತದಲ್ಲಿ ನಡೆದಿದೆ. ಪಟ್ಟಣ ಪಂಚಾಯತ ಅಧಿಕಾರಿ ಪ್ರವೀಣ ಕುಮಾರ ಎಂಬುವವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60ಸಾವಿರ ನಗದು ಕೊಡುತ್ತಿದ್ದ ವೇಳೆ ಲೋಕಾಯುಕ್ತರು ನಡೆಸಿದ ದಾಳಿಯ ವೇಳೆ...
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!
ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!
ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ ಘಟನೆ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ...
ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?
ಮುಂಡಗೋಡ ಪಿಎಸ್ ಐ ಪರಶುರಾಮ್ ಮತ್ತವರ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ ಆಟದಲ್ಲಿ “ಬ್ಯುಸಿ” ಆಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೆ ಮೂವರು ಪರಾರಿಯಾಗಿದ್ದಾರೆ ಅನ್ನೋ ಮಾಹಿತಿ ಪಬ್ಲಿಕ್ ಫಸ್ಟ್ ಗೆ ತಿಳಿದು ಬಂದಿದೆ. ಅಂದಹಾಗೆ, ತಾಲೂಕಿನ ಕಾತೂರು ಸಮೀಪ ಇಸ್ಪೀಟು ಆಟದಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿರೋ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಂತೆ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇನ್ನು ಆಟದಲ್ಲಿ...









