ಹಳಿಯಾಳ: ಗಾಂಜಾ ಮಾರಾಟ ಮಾಡಲು ಪಟ್ಟಣಕ್ಕೆ ಬರುತ್ತಿದ್ದ ವ್ಯಕ್ತಿಯನ್ನು ಸಿನಿಮಿಯ ರೀತಿಯಲ್ಲಿ ಟ್ರೇಸ್ ಮಾಡಿ ಹಿಡಿದಿದ್ದಾರೆ ಹಳಿಯಾಳ ಪೊಲೀಸ್ರು. ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದು ಕಲ್ಲಯ್ಯ ಚಂಬಯ್ಯ ಗುಡಿ ಎಂಬುವನೇ ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ. ಅಂದಹಾಗೆ, ಹಳಿಯಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸದ್ಯ ನವರಾತ್ರಿಯ ಸಂಭ್ರಮ ಜೋರಾಗಿದೆ. ಗ್ರಾಮಗಳಲ್ಲಿ ದಸರಾ ಹಬ್ಬದ ನಿಮಿತ್ಯ ದುರ್ಗಾದೌಡ್ ಮೆರೆವಣಿಗೆ ಸಂಭ್ರಮದಿಂದ ನಡೆಯುತ್ತಿದೆ. ಹೀಗಾಗಿ ದುರ್ಗಾ ದೌಡ್ ಮೆರವಣಿಗೆಯ ಬಂದೋಬಸ್ತ್ ಗಾಗಿ ತೆರಳಿದ್ದ ಹಳಿಯಾಳ ಪಿಎಸ್ ಐ ವಿನೋದ್ ರೆಡ್ಡಿ ಹಾಗೂ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?
ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇಮಾದರಿಯಲ್ಲಿ ವೈನ್...
ಸಿಪಿಐ ವಾಹನ ಚಾಲಕ ಪೊಲೀಸಪ್ಪ ಲಂಚ ಸ್ವೀಕರಿಸುವಾಗಲೇ ಬಲೆಗೆ, “ಲೋಕಾ” ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕ ಇಬ್ಬರು..!
ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...
ಶಿರಸಿಯಲ್ಲಿ NIA ದಾಳಿ, ಓರ್ವ SDPI ಮುಖಂಡನ ಬಂಧನ, ಬಂಧಿತ ತನ್ನ ಮನೆಯ ಗೋಡೆಯ ಮೇಲೆ ಏನೇಲ್ಲ ಬರೆದಿದ್ದ ಗೊತ್ತಾ..?
ಶಿರಸಿ: ರಾಜ್ಯದ ವಿವಿಧೆಡೆ ರಾಷ್ಟ್ರೀಯ ತನಿಖಾ ಪಡೆಗಳಿಂದ ದಾಳಿಯಾಗಿದೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲೂ ಎನ್ಐಎ ಹಾಗೂ ಐಬಿ ತಂಡದಿಂದ ದಾಳಿ ನಡೆದಿದೆ. ಪರಿಣಾಮ, ಶಿರಸಿ ತಾಲೂಕಿನ ಟಿಪ್ಪು ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಓರ್ವ ಎಸ್ಡಿಪಿಐ ಮುಖಂಡನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಸ್ಡಿಪಿಐ ಮುಖಂಡ ಹಝೀಝ್ ಅಬ್ದುಲ್ ಶುಕುರ್ ಹೊನ್ನಾವರ್ (45) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಬೆಳಿಗ್ಗೆ 3.30ರಿಂದಲೇ ಹಝೀಝ್ ಮನೆಯ ಮೇಲೆ ದಾಳಿ ನಡೆಸಲು ಪೊಲೀಸರ ದಂಡೇ ನೆರೆದಿತ್ತು ಆದ್ರೆ ಬೆಳ್ಳಂ ಬೆಳಿಗ್ಗೆ...
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!
ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...
ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...
ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!
ಮುಂಡಗೋಡ ಯಲ್ಲಾಪುರ ಗಡಿಭಾಗದ ಹುಣಶೆಟ್ಟಿಕೊಪ್ಪದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಇನ್ನು, ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತಿದ್ದ ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಿಗಳ್ಳಿಯಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಯಲ್ಲಾಪುರದಿಂದ ಜಾನಪದ ಕಲಾವಿದರನ್ನು ಕರೆತರುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿದೆ. 7-8 ಜನ ಜಾನಪದ ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಹುಣಶೆಟ್ಟಿಕೊಪ್ಪದ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ರಸ್ತೆ ಮೇಲೆ ಅಡ್ಡಲಾಗಿ ಬಿದ್ದಿದ್ದ ಕ್ರೂಸರ್ ಅನ್ನು...
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...









