ಭಟ್ಕಳ: ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸ್ರು ಬಂಧಿಸಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೊಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಿ, 500 ಕೆಜಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆಯಲಾಗಿದೆ. ಹಾನಗಲ್ ತಾಲೂಕಿನ ಮೌಲಾ ಅಲಿ ಬಾಷಾ ಸಾಬ್, ಭಟ್ಕಳದವರಾದ ಜೀಲಾನಿ ಮೋಹಿದ್ದೀನ್, ಮುಝರಪ್ ಎಂಬುವ ಆರೋಪಿಗಳೆ ಬಂಧನಕ್ಕೊಳಗಾದವರು. ಈ ಕುರಿತು, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಹಾಗೆ ನೀರಿನಲ್ಲಿ ತೇಲಿ ಬಂದ ಶವ ಯಾರದ್ದು..?
ಹುಬ್ಬಳ್ಳಿ: ಅಪರಿಚಿತ ಶವವೊಂದು ನೀರಿನಲ್ಲಿ ತೇಲಿಕೊಂಡು ಬಂದಿರುವ ಘಟನೆ ಹುಬ್ಬಳ್ಳಿಯ ಹೆಗ್ಗೇರಿಯ ನಾಲಾದಲ್ಲಿ ನಡೆದಿದೆ. ಸುಮಾರು 35 ವರ್ಷದ ಆಸುಪಾಸಿನ ವ್ಯಕ್ತಿಯ ಶವವು ನಾಲಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಯುವ ಮುಖಂಡ ಪರ್ವೀಜ್ ಕಟ್ಟಿಮನಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯ ಬಗ್ಗೆ ಹಾಗೂ ಆತನ ಸಾವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ....
ಹುಡೇಲಕೊಪ್ಪ ಬಳಿ ಬೈಕ್, ಬೊಲೆರೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಶಿರಸಿ ರಸ್ತೆಯ ಹುಡೇಲಕೊಪ್ಪ ಬಳಿ ಭೀಕರ ಅಪಘಾತ ನಡೆದಿದೆ. ಬೊಲೆರೊ ಪಿಕ್ ಅಪ್ ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ಅಟ್ಟಣಗಿಯ ರಾಜೇಶ್ ಚಲವಾದಿ(21) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಶ್ರೀಕಾಂತ್ ಅನ್ನೋ ಮತ್ತೋರ್ವ ಬೈಕ್ ಹಿಂಬದಿಯ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಸದ್ಯ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಅಪಘಾತದ ತೀವ್ರತೆಗೆ ಬೊಲೆರೋ ಪಿಕ್...
ತೋಟಕ್ಕೆ ಹಾಕಿದ್ದ ವಿದ್ಯುತ್ ಬೇಲಿಗೆ ತಾಗಿ ವ್ಯಕ್ತಿ ದಾರುಣ ಸಾವು..!
ಶಿರಸಿ: ವಿದ್ಯುತ್ ತಂತಿ ಬೇಲಿ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮತ್ತೀಘಟ್ಟಾ ಸಮೀಪದ ಸೂರಗುಪ್ಪದಲ್ಲಿ ನಡೆದಿದೆ. ಲವ ಗೌಡ (38) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕಾಡು ಪ್ರಾಣಿ ಹಾವಳಿಯಿಂದ ತೋಟವನ್ನು ರಕ್ಷಿಸಿಕೊಳ್ಳುವ ಉದ್ದೇಶಕ್ಕೆ ಹಾಕಿದ್ದ ಐಬೇಕ್ಸ್ ಬೇಲಿಗೆ ತಗುಲಿ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕ್ರೈಂ ವಿಭಾಗದ ಪಿಎಸ್ಐ. ಶ್ಯಾಮ ಪಾವಸ್ಕರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಗ್ಗಿನಕೇರಿಯ ಕಬ್ಬಿನ ಗದ್ದೆಯಲ್ಲಿ ಹೆಣವಾದ ಯುವಕ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?
ಮುಂಡಗೋಡ: ತಾಲೂಕಿನ ಉಗ್ಗಿನಕೇರಿಯಲ್ಲಿ ನಡೆಯಬಾರದ ದುರಂತವೊಂದು ನಡೆದು ಹೋಗಿದೆ. ರಾತ್ರಿ ಕಾಡಿನಲ್ಲಿ ಮರ ಕಡಿಯಲು ಹೋಗಿದ್ದ ಅಂತಾ ಹೇಳಲಾದ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಪ್ರದೀಪ್ ಜುಜೇ ಸಿದ್ಧಿ(35) ಎಂಬುವ ವ್ಯಕ್ತಿ ಪ್ರಾಣ ಕಳೆದುಕೊಂಡವ. ಈತ ಸೋಮವಾರ ತಡರಾತ್ರಿ ತನ್ನ ಮತ್ತೊಬ್ಬ ಸಂಗಡಿಗನೊಂದಿಗೆ ಉಗ್ಗಿನಕೇರಿ ಅರಣ್ಯ ಪ್ರದೇಶದಲ್ಲಿ ಮರ ಕಡಿಯಲು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಮರ ಕಡಿದು ಮರದ ತುಂಡನ್ನು ಹೊತ್ತು ತರುತ್ತಿದ್ದಾಗ ಉಗ್ಗಿನಕೇರಿ ಗ್ರಾಮದ ಹೊರವಲಯದಲ್ಲಿನ ಕಬ್ಬಿನ ಗದ್ದೆಯಲ್ಲಿ, ಕಾಡು ಪ್ರಾಣಿಗಳ ಹತೋಟಿಗೆ ಹಾಕಲಾಗಿದ್ದ ವಿದ್ಯುತ್ ಲೈನ್...
ದ್ವಿತೀಯ PUC ಪರೀಕ್ಷೆ ರದ್ದಾಗಿದ್ದಕ್ಕೆ ಈ ವಿದ್ಯಾರ್ಥಿನಿಯದ್ದು ಎಂಥ ದುರಂತ ನೋಡಿ..!
ಶಿರಸಿ: ಸಾಮಾನ್ಯವಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅದ್ರಲ್ಲೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಈಗಿನ ಉದ್ಯೋಗ ಕ್ಷೇತ್ರದಲ್ಲಿ ಬೇಸ್ ಅಂತಾನೆ ಪರಿಗಣಿಸಲ್ಪಟ್ಟಿದೆ. ಹಲವಾರು ವಿದ್ಯಾರ್ಥಿಗಳು ಪರೀಕ್ಷೆ ರದ್ದಾದ ಖುಷಿಯಲ್ಲಿರುತ್ತಾರೆ. ಆದ್ರೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗೆ ಅಂತಾನೆ ಊಟ, ನಿದ್ದೆ ಬಿಟ್ಟು ಓದೋ ಉದಾಹರಣೆಗಳು ಕೂಡ ಇವೆ. ಅದ್ರಲ್ಲೂ ಈ ಕೋವಿಡ್ ಅನ್ನೋದು ಬಂದಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅಧೋಗತಿಯಾಗಿದೆ. ಸರ್ಕಾರಗಳೂ ಕೂಡ ಪದೇ ಪದೇ ನಿರ್ಣಯಗಳನ್ನ ಬದಲಿಸುತ್ತಿರೋದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ...
ನ್ಯಾಸರ್ಗಿಯಲ್ಲಿ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರ ವಿರುದ್ಧ ಕೇಸ್..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ಮಾಡಿ 4 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೈಲಾರಿ ಮಹದೇವಪ್ಪ ಸಾಗರ, ಮಂಜುನಾಥ್ ಹನ್ಮಂತಪ್ಪ ಉಪಾದ್ಯಾಯ, ಬಸವಂತಪ್ಪ ಲಕ್ಷ್ಮಣ ಮಡ್ಡಿ ಹಾಗೂ ಮಂಜುನಾಥ ನಾಗಪ್ಪ ಧರ್ಮೋಜಿ ಎಂಬುವ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ದಾಳಿ ವೇಳೆ 2,200 ರೂ.ನಗದು ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಭಾರಿ ಮಳೆಯಿಂದ ಶೇಂಗಾ ಬೆಳೆ ಮಣ್ಣುಪಾಲು; ಮನನೊಂದ ರೈತ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಕಾಡಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇವೇಂದ್ರಪ್ಪ ಈರಪ್ಪ ತೆಗ್ಗಳ್ಳಿ(60) ಎಂಬುವ ರೈತನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. 4 ಎಕರೆ ಜಮೀನು ಹೊಂದಿರೋ ರೈತ ಈ ವರ್ಷ 1ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿ ಶೇಂಗಾ ಬೆಳೆದಿದ್ದ. ಆದ್ರೆ ಇತ್ತಿಚೆಗೆ ಸುರಿದ ಭಾರೀ ಮಳೆಯಿಂದ ಬೆಳೆದಿದ್ದ ಶೇಂಗಾ ಎಲ್ಲಾ ಹಾಳಾಗಿತ್ತು. ಹೀಗಾಗಿವಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆ ಕೈಕೊಟ್ಟ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ...
ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ
ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಪೊಲೀಸರ ವಶಕ್ಕೆ..!
ಭಟ್ಕಳ: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸರಿಂದ ಮಹಿಳೆ ಬಂಧನವಾಗಿದೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆಯಾಗಿದ್ದು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬುವನನ್ನು 8 ವರ್ಷದ ಹಿಂದೆ ದುಬೈನಲ್ಲಿವಿವಾಹವಾಗಿದ್ದ ಮಹಿಳೆ, 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಆನಂತರ, 2015ರಲ್ಲಿ ಕಳ್ಳಮಾರ್ಗದ ಮೂಲಕ ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತದೊಳಕ್ಕೆ ಪ್ರವೇಶ ಮಾಡಿದ್ದಳು. ಭಟ್ಕಳದ ನವಾಯತ...









