Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ...

Post
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..!  ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?

ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?

ಈ ಸುದ್ದಿ ಬರೆಯುವ ಮುನ್ನ.. ನನ್ನ‌ ಮುಂಡಗೋಡ ತಾಲೂಕಿನ ಪ್ರಾಮಾಣಿಕ ಶಿಕ್ಷಕ‌ ವೃಂದಕ್ಕೆ ನಾನು ತಲೆ ಬಾಗಿ ನಮನ‌ ಸಲ್ಲಿಸ್ತಿನಿ. ಇಡೀ ಶಿಕ್ಷಕ ಸಮುದಾಯದ ಬಗೆಗೆ ನನ್ನ ಹೃದಯದಲ್ಲಿ ಬಹು ಉನ್ನತ ಸ್ಥಾನ ಇದೆ. ಹೆಮ್ಮೆ ಇದೆ. ಹೀಗಾಗಿ, ಬಹುತೇಕ ಪ್ರಾಮಾಣಿಕ ಶಿಕ್ಷಕ ದೇವರುಗಳ ಪಾದಕ್ಕೆ ಶಿರ ಸಾಸ್ಟಾಂಗ ನಮನಗಳನ್ನು ಅರ್ಪಿಸಿ, ನಿಮ್ಮೊಳಗೇ ಮೆರೆದಾಡುವ ಕೆಲ ಕೂಟದ ವಿರುದ್ಧ ಸಮರ ಸಾರಬೇಕಿರೋದು ಸದ್ಯದ ಅವಶ್ಯಕತೆ.‌ ಹಾಗಂತ, ತಾವೇ ಬಹುತೇಕರು ನನಗೆ ನೂರಾರು ಫೋನ್ ಕರೆ ಮಾಡಿ ತಮ್ಮೊಳಗಿನ...

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್,   ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಮುಂಡಗೋಡ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ, ಖಾಸಗಿ ಫೈನಾನ್ಸ್ ಶಾಖೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮುಂಡಗೋಡ ಬಿಇಓ ಸುಮಾ ಜಿ. ಯವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳು, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಮೂರು ದಿನಗಳ ಒಳಗಾಗಿ ಸೂಕ್ತ ಕಾರಣ ನೀಡಿ ಉತ್ತರಿಸುವಂತೆ...

Post
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..!  ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

 ಮುಂಡಗೋಡ ತಾಲೂಕಿನಲ್ಲಿ ಸದ್ಯ SSLC ಪರೀಕ್ಷೆಯ ಸಲುವಾಗಿ ಇಡೀ ಶಿಕ್ಷಣ ಇಲಾಖೆಯೇ ತಲೆ ಕೆಡಿಸಿಕೊಂಡು 100% ಫಲಿತಾಂಶ ತರಲೇ ಬೇಕು ಅಂತಾ ಹಗಲಿರುಳು ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಡೀ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಕಣ್ಣಿಗೆ ಎಣ್ಣೆಬಿಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ರೆಡಿ ಮಾಡ್ತಿದಾರೆ. ಸತ್ಯ ಅಂದ್ರೆ ನಮ್ಮ ಮುಂಡಗೋಡಿಗೆ ನೂತನವಾಗಿ ಬಂದಿರೋ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಜಕ್ಕೂ ನಮ್ಮ ಪಾಲಿನ ಹೆಮ್ಮೆ. ಪ್ರಬುದ್ದ ತೆಯ ಸಾಕಾರ ಮೂರ್ತಿ..! ಆದ್ರೆ, ಇದೇಲ್ಲದರ ನಡುವೆಯೂ ಕೆಲವ್ರು “ತಾವು ನಡೆದದ್ದೇ...

Post
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

ಮುಂಡಗೋಡ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರ ಜನ್ಮ ದಿನವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಮಾಜಿ ಶಾಸಕ ವಿ.ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್ ದುಂಡಸಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ರಾಜಶೇಖರ ಹಿರೇಮಠ, ಪ.ಪಂ ಸದಸ್ಯ ಮಹ್ಮದಗೌಸ ಮಖಾಂದಾರ, ಶಿವರಾಜ ಸುಬ್ಬಾಯವರ, ನಜೀರ್ ಅಹ್ಮದ ದರ್ಗಾವಾಲೆ, ಆಲೆಹಸನ ಬೆಂಡಿಗೇರಿ,...

Post
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕ‌ಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...

Post
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!

ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!

ಮುಂಡಗೋಡ ಪಟ್ಟಣದ ನೆಹರು ನಗರದಲ್ಲಿ ಜೇನು ನೋಣಗಳ ದಾಳಿಯಾಗಿದೆ. ಪರಿಣಾಮ ಆರು ಜನರಿಗೆ ಗಾಯವಾಗಿದೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪಟ್ಟಣದ ನೆಹರು ನಗರದ ನನ್ನೇಸಾಬ್ ಶೇಖ್ ಮನೆಯ ಹತ್ತಿರದ ಗಿಡದಲ್ಲಿ ಜೇನು ಗೂಡು ಕಟ್ಟಿತ್ತು. ಇವತ್ತು ಮದ್ಯಾನ ಬಿಸಿಲಿನ ತಾಪಕ್ಕೋ ಅಥವಾ ಯಾರಾದ್ರೂ ಕಲ್ಲೆಸೆದ ಕಾರಣಕ್ಕೋ ಜೇನು ನೋಣಗಳು ಎದ್ದಿವೆ. ಈ ಹೊತ್ತಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ಆರು ಜನರಿಗೆ ಕಚ್ಚಿ ಗಾಯಗೊಳಿಸಿವೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯಗೊಳಿಸಿವೆ. ಸದ್ಯ ಗಾಯಾಳುಗಳನ್ನು...

Post
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!

ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!

ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತದ ಕಳಕಿಕಾರೆ ಮಜಿರೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಬಹುತೇಕ‌ ಇಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಸಂಕಟ ಒಂದೆಡೆಯಾದ್ರೆ, ಗ್ರಾಮಸ್ಥರಿಗೆ ನೀರು ಪೂರೈಸಲು ಮೈನಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಪರದಾಡುವ ಸ್ಥಿತಿಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಅಂದಹಾಗೆ, ಮೈನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಕೀಕಾರೆಯಲ್ಲಿ RWS ಇಲಾಖೆಯಿಂದ ಬೋರ್ವೆಲ್ ಕೊರೆದಿದ್ದಾರೆ. ಆದ್ರೆ, ಜೀವಜಲ ಮಾತ್ರ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿನ ಜನ್ರಿಗೆ ಕುಡಿಯುವ...

Post
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವೀರಶೈವ ಧರ್ಮ ಸಂಸ್ಥಾಪಕ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. 2024-25 ಸಾಲಿನಯುಗಮಾನೋತ್ಸವ ಹಿನ್ನೆಲೆಯಲ್ಲಿ ಹುನಗುಂದ ಗ್ರಾಮದ ಮಂತ್ರವಾಡಿ ಮಠದ ಶ್ರೀ ರೇಣುಕ ಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬ್ಯಾಹಟ್ಟಿಯ ಉಜ್ಜಯಿನಿ ಶಾಖಾ ಹಿರೇಮಠದ ಶ್ರೀ ಷ ಬ್ರ ಮರುಳ ಸಿದ್ಧ ಶಿವಾಚಾರ್ಯ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುನಗುಂದ ಸರ್ವಧರ್ಮದ ಗುರು ಹಿರಿಯರು, ಜಂಗಮ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

Post
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಮುಂಡಗೋಡಿನ ವ್ಯಕ್ತಿ ಭೀಕರ ಸಾವು ಕಂಡಿದ್ದಾನೆ. ತನ್ನದೇ ಬೈಕ್ ಪಕ್ಕದಲ್ಲಿ ಸಾವನ್ನಪ್ಪಿರೋ ವ್ಯಕ್ತಿ ಅನುಮಾನಾಸ್ಪದವಾಗಿ ಹೆಣವಾಗಿದ್ದಾನೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಮಂಜುನಾಥ್ ಜಾಧವ್(45) ಅಲಿಯಾಸ್ ಮಂಜು ಮೂಡಸಾಲಿ ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿ ಅಂತಾ ಅನುಮಾನಿಸಲಾಗಿದೆ. ಅಸಲು, KA 31 E F 3587 ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್ ನ ಪಕ್ಕದಲ್ಲೇ ರಕ್ತಸಿಕ್ತವಾಗಿ ಬಿದ್ದಿರೋ ವ್ಯಕ್ತಿ, ಮಂಜುನಾಥ್ ಜಾಧವ್ ಅಂತ ಹೇಳಲಾಗ್ತಿದೆ. ಬಂಕಾಪುರ ಪಟ್ಟಣದ ಹೊರವಲಯದ ರಸ್ತೆ ಪಕ್ಕದಲ್ಲಿ ಘಟನೆ ನಡೆದಿದೆ....