ಮುಂಡಗೋಡಿನ ಲೋಕೋಪಯೋಗಿ ಇಲಾಖೆಯ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸಿದ್ದ, ಸದ್ಯ ಕಲಘಟಗಿ PWD ಉಪವಿಭಾಗದ ಸಹಾಯಕ ಇಂಜಿನೀಯರ್ ಆಗಿ ಕಾರ್ಯ ನಿರ್ವಹಿಸ್ತಿದ್ದ ಎಂ.ರಾಮರಾವ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಹುಬ್ಬಳ್ಳಿಯ ಸನ್ಪೋಲ್ ಚರ್ಚ್ ಹತ್ತಿರ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಎಂ.ರಾಮರಾವ್ ರವರ ಅಂತಿಮ ಸಂಸ್ಕಾರ ನಾಳೆ ದಿನಾಂಕ 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಸನ್ ಪೀಟರ್ ಚರ್ಚನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಅಂತಾ ಕುಟುಂಬದವರು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ಸಮಯಕ್ಕೆ ಬಾರದ ಬಸ್ ಹುನಗುಂದದಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ದಿಢೀರ್ ಪ್ರತಿಭಟನೆ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ನಿತ್ಯವೂ ಶಾಲಾ, ಕಾಲೇಜಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ಸುಮಾರು 3 ತಾಸಿಗೂ ಹೆಚ್ಚು ಕಾಲ ಬಸ್ ತಡೆದು ಪ್ರತಿಭಟಿಸಿದ್ದಾರೆ. ಸೋಮವಾರ ಮುಂಜಾನೆ 7 ಗಂಟೆಯಿಂದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಯಾವೊಂದು ಬಸ್ಸೂ ಕೂಡ ಸಮಯಕ್ಕೆ ಸರಿಯಾಗಿ ಬರುವುದೇ ಇಲ್ಲ. ಹೀಗಾಗಿ, ನಿತ್ಯವೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಕೆಲವು ಸಾರಿ ಸಮಯ ಮೀರಿ ಕಾಲೆಜುಗಳಿಗೆ ವಿದ್ಯಾರ್ಥಿಗಳು ಹೋಗದೇ ಮನೆಯಲ್ಲೇ ಉಳಿಯಬೇಕಾದ ಪರಿಸ್ಥಿತಿ...
ಅತ್ತಿವೇರಿ ಬಸವಧಾಮದಲ್ಲಿ ಡಿಸೆಂಬರ್ 3 ರಂದು ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ- ಮಾತೆ ಬಸವೇಶ್ವರಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ...
ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ದಂಧೆ, ಇಬ್ಬರು ಆರೆಸ್ಟ್..!
ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಗೋಮಾಂಸ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಓರ್ವ ಟಿಬೇಟಿಗನೂ ಸೇರಿದಂತೆ ಇಬ್ಬರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಟಿಬೇಟಿಯನ್ ಕಾಲೋನಿ ನಂಬರ್ 3 ರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಪಂಚ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ, ಮೋದಿ ಅಲೆ ಕೆಲಸ ಮಾಡಲಿದೆ- ಟಿಬೇಟಿಯನ್ ಕ್ಯಾಂಪ್ ಗೆ ಆಗಮಿಸಿದ ಅರುಣಾಚಲ ಸಿಎಂ ಪೇಮಾ ಖಂಡು ಹೇಳಿಕೆ
ಮುಂಡಗೋಡ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ, ಬಿಜೆಪಿ ಪರ ಫಲಿತಾಂಶ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಆಳ್ವಿಕೆಗೆ ಮೆಚ್ಚುಗೆ ಇದ್ದು ಬಿಜೆಪಿ ಸಕಾರಾತ್ಮಕ ಫಲಿತಾಂಶ ಸಿಗಲಿದೆ ಎಂಬ ಭರವಸೆ ಇದೆ ಅಂತಾ ಅರುಣಾಚಲ ಸಿಎಂ ಪೇಮಾ ಖಂಡು ಭವಿಷ್ಯ ನುಡಿದ್ರು. ಎರಡು ದಿನಗಳ ಕಾಲ ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ಗೆ ಭೇಟಿ ನೀಡಿರೋ ಅವ್ರು ಮಾತನಾಡಿದರು. ಇನ್ನು ಮಣಿಪುರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾತನಾಡಿದ ಅವ್ರು, ಅಲ್ಲಿ ಗಲಭೆ...
ಮುಂಡಗೋಡಿನಲ್ಲಿ ಖತರ್ನಾಕ ATM ವಂಚಕಿಯ ಬಂಧನ, ಹಣ ಡ್ರಾ ಮಾಡಿ ಕೊಡುವುದಾಗಿ ವಂಚಿಸಿದ್ದ ಲೇಡಿ..!
ಮುಂಡಗೋಡ: ಎಟಿಎಂ ನಿಂದ ಹಣ ಡ್ರಾ ಮಾಡಿ ಕೊಡುವುದಾಗಿ ಹೇಳಿ, ಬರೋಬ್ಬರಿ 69 ಸಾವಿರ ರೂ. ವಂಚಿಸಿದ್ದ ಖತರ್ನಾಕ ವಂಚಕಿಯನ್ನು ಮುಂಡಗೋಡ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಕಳೆದ ಸೆಪ್ಟೆಂಬರ್ 29 ರಂದು ನಡೆದಿದ್ದ ಎಟಿಎಂ ವಂಚನೆ ಪ್ರಕರಣವನ್ನು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಖಾರಿಪುರ ತಾಲೂಕಿನ ಶಿರಾಳಕೊಪ್ಪದ ಆರೋಪಿ ಮಹಿಳೆ ಕೌಸರಬಾನು ನಜೀರಸಾಬ ಹಿರೇಕರೂರು(35) ಎಂಬುವವಳನ್ನು ಬಂಧಿಸಿ, 12 ಸಾವಿರ ರೂ. ಹಣ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಮೈನಳ್ಳಿಯ ಸಹೀನಾಜ್ ಮಹಮ್ಮದ್ ಸಲೀಂ...
ಕಾತೂರು ಸಮೀಪದ ಗೋಟಗೋಡಿಕೊಪ್ಪದಲ್ಲಿ ಚಿರತೆ ದಾರುಣ ಸಾವು..! ಅಷ್ಟಕ್ಕೂ ಚಿರತೆಯ ಸಾವಿಗೆ ಎನು ಕಾರಣ..?
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪ ಸಮೀಪದ ಮುಕ್ತಿ ಮಠದ ಹತ್ತಿರ ಎರಡು ವರ್ಷದ ಗಂಡು ಚಿರತೆ ದಾರುಣ ಸಾವು ಕಂಡಿದೆ. ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿರತೆಯ ಸಾವು ಹೇಗಾಯ್ತು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಮದ್ಯಾಹ್ನವೇ..? ಶುಕ್ರವಾರ ಮದ್ಯಾಹ್ನವೇ ಗೋಟಗೋಡಿಕೊಪ್ಪದ ಮುಕ್ತಿ ಮಠದ ಹತ್ತಿರದ ಗದ್ದೆಗಳ ಪಕ್ಕದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ರೈತರು ಚಿರತೆಯ ಮೃತದೇಹ ಕಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಮೃತದೇಹದ...
ಅನಧಿಕೃತ ಇಟ್ಟಿಗೆ ಭಟ್ಟಿಗಳು ಬಾಲ ಬಿಚ್ಚಂಗಿಲ್ಲ, ಮತ್ತೆ ದಂಧೆಗಿಳಿದ್ರೆ ಹುಶಾರ್ ಅಂತಾ ಎಚ್ಚರಿಸಿದ್ರು ತಹಶೀಲ್ದಾರ್..!
ಮುಂಡಗೋಡ ತಾಲೂಕಿನಲ್ಲಿ ಅಕ್ರಮ ಇಟ್ಟಿಗೆ ಭಟ್ಟಿ ದಂಧೆಗೆ ಬಹುತೇಕ ಮೂಗುದಾರ ಬಿದ್ದಂತಾಗಿದೆ. ತಾಲೂಕಿನಲ್ಲಿ ಇನ್ಮೇಲೆ ಮತ್ತೆ ಇಟ್ಟಿಗೆ ಭಟ್ಟಿ ದಂಧೆ ಶುರು ಮಾಡಿದ್ರೆ ಸುಮ್ನೆ ಬಿಡಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತು ಪತ್ರಕರ್ತರು ಹಾಗೂ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ತಹಶೀಲ್ದಾರ್ ಸಂದೇಶ ರವಾನಿಸಿದ್ದಾರೆ. ಎಲ್ಲವೂ ಅನಧಿಕೃತವಂತೆ..! ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಎಲ್ಲವೂ ಅನಧಿಕೃತ ಇಟ್ಟಿಗೆ ಭಟ್ಟಿಗಳಂತೆ. ಇಲ್ಲಿ ಯಾರೊಬ್ರೂ ಅಧಿಕೃತ ಪರವಾನಗಿ ಪಡೆದು ದಂಧೆ ಮಾಡಿಯೇ ಇಲ್ಲ...
ಚಿಗಳ್ಳಿಯಲ್ಲಿ ನೇಣಿಗೆ ಶರಣಾದ ವ್ಯಕ್ತಿ, ಕಲ್ಲಪ್ಪಜ್ಜನ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮದ ಹೊರ ವಲಯದಲ್ಲಿರೋ ಕಲ್ಲಪ್ಪಜ್ಜಯ್ಯನ ಗುಡ್ಡದ ದೇವಸ್ಥಾನದ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ. ಚಿಗಳ್ಳಿಯ ಈರಪ್ಪ ಫಕ್ಕೀರಪ್ಪ ಲಕ್ಕಿಕೊಪ್ಪ (45) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ, ಯಾವುದೋ ಕಾರಣಕ್ಕೆ ಇಂದು ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ...
ಶಂಕರ್ ಫಕೀರಪ್ಪ ಗೆ ಪಿಹೆಚ್ ಡಿ ಪದವಿ ಪ್ರಧಾನ, ಸಿಹಿ ತಿನ್ನಿಸಿ ಸಂಭ್ರಮ..!
ಧಾರವಾಡ: ಶಂಕರ್ ಫಕೀರಪ್ಪ ಅವರು, ಧಾರವಾಡ ವಿಶ್ವ ವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ ಪಡೆದಿದ್ದಾರೆ. ನಿನ್ನೆ ಸೋಮವಾರ ಧಾರವಾಡ ವಿಶ್ವವಿದ್ಯಾಲಯ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ ಗೆಹ್ಲೊಟ್ ಪದವಿ ಪ್ರಧಾನ ಮಾಡಿದ್ರು. ಅಂದಹಾಗೆ, ಶಂಕರ್ ಫಕೀರಪ್ಪ ಇವ್ರು ಪಿಹೆಚ್ ಡಿ ಪದವಿ ಪಡೆದಿದ್ದಕ್ಕೆ, ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ಸೇರಿದಂತೆ ಸಮಾಜದ ಹಲವು ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ. ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.









