ಯಲ್ಲಾಪುರ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸುದ್ದಿಯಾಗ್ತಿದೆಯಾ..? ರಾಜ್ಯ ರಾಜಕಾರಣದಲ್ಲಿ ಸದ್ಯ ಯಲ್ಲಾಪುರ ಕ್ಷೇತ್ರವನ್ನು ಬಹುಶಃ ಓರೇಗಣ್ಣಿನಿಂದ ನೋಡುವಂತಹ ಊಹಾಪೋಹಗಳು ಜಾರಿಯಲ್ಲಿವೆ. ಯಾಕಂದ್ರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರ ಟೀಂ ನಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗೋದು ಪಕ್ಕಾ ಎನ್ನುವಂತಹ ಮಾತುಗಳು ಕೇಳಿ ಬರ್ತಿವೆ. ಅದ್ರಲ್ಲೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರೂ ಕಾಂಗ್ರೆಸ್ ಗೆ ಸೇರ್ತಾರೆ ಅನ್ನೋ ಸುದ್ದಿಗಳು ಹರಿದಾಡ್ತಿದೆ. ಆದ್ರೆ, ಇದೇಲ್ಲ ಜಸ್ಟ್ ರೂಮರ್ರು ಅಂತಾ ಶಾಸಕರ ಆಪ್ತ ವಲಯ ಸರಾಸಗಾಟಾಗಿ ತಳ್ಳಿ ಹಾಕ್ತಿದೆ....
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ಮುಂಡಗೋಡ ಸುದ್ದಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ನಂಬರ್ ಒಂದರ ಬಳಿ ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ. 948 ಗ್ರಾಂ ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡಗೋಡ ನೆಹರು ನಗರದ ಸಂದೇಶ ಸಂಗಪ್ಪ ಕೋಕರೆ, ತಾಲೂಕಿನ ಮಜ್ಜಿಗೇರಿಯ ರಿಯಾಜ್ ಅಹ್ಮದ್ ಹಜರೆಸಾಬ್ ಮುಗಳಿಕಟ್ಟಿ ಎಂಬುವ ಇಬ್ಬರು...
ಇಂದಿರಾನಗರ ಬಳಿ ಬೈಕಿಗೆ ಕಾರ್ ಡಿಕ್ಕಿ, ಕೊಪ್ಪ ಗ್ರಾಮದ ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಇಂದಿರಾನಗರ ಬಳಿ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಪಾದದ ಮಾಂಸ ಹೊರ ಬಿದ್ದಿದೆ. ಹೀಗಾಗಿ, ಸದ್ಯ ಗಾಯಾಳುವನ್ನು ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ಕೊಪ್ಪ (ಇಂದೂರು) ಗ್ರಾಮದ ಬಸವರಾಜ್ ಹಡಪದ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರನಾಗಿದ್ದಾನೆ. ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೋಗುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿಯಾಗಿದೆ. ಹೀಗಾಗಿ, ಕಾರಿನ ಮುಂಬಾಗ ಕೂಡ...
ಬಾಚಣಕಿಯಲ್ಲಿ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ, ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಯಲ್ಲಿ ಧ್ವಜಕ್ಕೆ ಇದೇಂತಾ ಗತಿ..? ಏನ್ ಮಾಡ್ತಿದ್ದಿರಿ ಅಧಿಕಾರಿಗಳೆ..?
ಇಡೀ ದೇಶ ಇವತ್ತು ರಾಷ್ಟ್ರಭಕ್ತಿಯ ಸಿಹಿ ಸಂಭ್ರಮದಲ್ಲಿದೆ. 77 ನೇಯ ಸ್ವತಂತ್ರ ದಿನಾಚರಣೆಯ ಮಹಾ ಸಂಭ್ರಮದಲ್ಲಿ ಎಲ್ಲೆಲ್ಲೂ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಆದ್ರೆ, ಮುಂಡಗೋಡ ತಾಲೂಕಿನ ಇದೊಂದು ಗ್ರಾಮದಲ್ಲಿ ಸರ್ಕಾರದ ಆದೇಶವಿದ್ದರೂ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ ಮಾಡಲಾಗಿದೆ. ಧ್ವಜ ಸ್ತಂಬ ಕಟ್ಟಿ, ಹೆಮ್ಮೆಯ ಧ್ವಜವನ್ನೂ ಕಂಬಕ್ಕೆ ಏರಿಸಿಟ್ಟು, ಇನ್ನೇನು ಧ್ವಜಾರೋಹಣ ಮಾಡಬೇಕಿದ್ದವರು ಭಾರೀ ಅಪಮಾನ ಮಾಡಿದ್ದಾರೆ. ಧ್ವಜ ಹಾರಿಸದೇ ಇಡೀ ಧ್ವಜ ಸ್ತಂಬವನ್ನೇ ಕಿತ್ತು ಹಾಕಿ ಏನೂ ಆಗಿಲ್ಲದವರಂತೆ ಬೆಪ್ಪಗೆ ಕುಳಿತಿದ್ದಾರೆ. ನಡೆದದ್ದು ಎಲ್ಲಿ..? ಅಂದಹಾಗೆ...
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಧ್ವಜಾರೋಹಣ, ಹೇಗಿತ್ತು ಗೊತ್ತಾ ಸಂಭ್ರಮ..!
ಮುಂಡಗೋಡ ತಾಲೂಕಿನೆಲ್ಲೆಡೆ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಜೋರಾಗಿತ್ತು. ಬೆಳಿಗ್ಗೆಯಿಂದ ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು. ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮುಂಡಗೋಡಿನಲ್ಲಿ..! ಇನ್ನು ತಾಲೂಕಾಡಳಿತದಿಂದ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಿತು. ತಹಶೀಲ್ದಾರ್ ಶಂಕರ್ ಗೌಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ರು.ಮಾಜಿ ಶಾಸಕ ವಿ.ಎಸ್.ಪಾಟೀಲ್, ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಸಿಪಿಐ ಬರಮಪ್ಪ ಲೋಕಾಪುರ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ತಾಲೂಕಿನ ಹಲವು ಸಾಧಕರಿಗೆ ತಾಲೂಕಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಪೊಲೀಸ್...
ಮುಂಡಗೋಡಿನಲ್ಲಿ ಸಿಕ್ತು ಬಳೆಯ ಚೀಲ, ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಅಟೋ ಚಾಲಕ..!
ಮುಂಡಗೋಡ: ಬಸ್ಸಿನಲ್ಲಿ 50 ಸಾವಿರ ಮೌಲ್ಯದ ಬಳೆ ಇದ್ದ ಬ್ಯಾಗ್ ಕಳೆದುಕೊಂಡಿದ್ದ ಮಹಿಳೆಗೆ ಪೊಲೀಸರ ಮೂಲಕ ವಾಪಸ್ ನೀಡಲಾಗಿದೆ. ಮುಂಡಗೋಡಿನ ಆಟೋ ಚಾಲಕನ ಸಮಯ ಪ್ರಜ್ಞೆ ಹಾಗೂ ಪ್ರಮಾಣಿಕತೆಯಿಂದ ಒಂದೊಳ್ಳೆ ಕೆಲಸವಾಗಿದೆ. ಅಂದಹಾಗೆ, ನಿನ್ನೆ ಶನಿವಾರ ಬನವಾಸಿಯ ಶಾರದಾ ಪಕ್ಕೀರಪ್ಪ ಬಜಂತ್ರಿ, ಎಂಬುವವರು ಬಸ್ಸಿನಲ್ಲಿ ತಮ್ಮ ಚೀಲವನ್ನು ಕಳೆದುಕೊಂಡಿದ್ದರು. ಹಾಗೆ ಕಳೆದುಕೊಂಡಿದ್ದ ಚೀಲದಲ್ಲಿ ಬರೋಬ್ಬರಿ 50 ಸಾವಿರ ರೂ. ಮೌಲ್ಯದ ಬಳೆ ಇತ್ತು. ಮುಂಡಗೋಡಿನ ಪಟ್ಟಣ ಪಂಚಾಯತಿ ಎದುರು ಅದ್ಯಾರೋ ಏನೋ ಆ ಚೀಲವನ್ನು ಇಳಿಸಿ ಬಿಟ್ಟಿದ್ದರು....
ಮುಂಡಗೋಡ ತಾಲೂಕಿನ 7 ಗ್ರಾಪಂ ಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ಸಂಪೂರ್ಣ ವಿವರ..!
ಮುಂಡಗೋಡ ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆದಿರೋ ಆಯ್ಕೆ ಪ್ರಕ್ರಿಯೆ ಹಲವು ಕುತೂಹಲಗಳ ನಡುವೆ, ಜಿದ್ದಾಜಿದ್ದಿನ ಮದ್ಯೆ ಕೊನೆಗೂ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದಿದೆ. ಹಾಗಿದ್ರೆ, ಯಾವ್ಯಾವ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿದೆ..? ಹಾಗಿದ್ರೆ ನೂತನ ಅಧ್ಯಕ್ಷ ಉಪಾಧ್ಯಕ್ಷರುಗಳು ಯಾರ್ಯಾರು..? ಇಲ್ಲಿದೆ ಫುಲ್ ಡಿಟೇಲ್ಸ್..! ಇಂದೂರು ಗ್ರಾಪಂ..! ಕುತೂಹಲಕ್ಕೆ ಕಾರಣವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯ...
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರು ಯಾರ್ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದೆ. ಹುನಗುಂದ ಗ್ರಾಪಂ..! ಪಬ್ಲಿಕ್ ಫಸ್ಟ್ ನ್ಯೂಸ್ ನಿನ್ನೆಯೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿದ್ದ ಹುನಗುಂದ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಷರೀಪಸಿಂಗ್ ಶಿಗ್ಗಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ ಜ್ಯೋತಿ ಮರಿಯಪ್ಪ ಮೇತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂದಿಕಟ್ಟಾ ಗ್ರಾಪಂ..! ಇನ್ನು ನಂದಿಕಟ್ಟಾ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ ಬೆಂಬಲಿತ ಸಂತೋಷ ಪರಶುರಾಮ್ ಭೋಸಲೇ...
ಹುನಗುಂದ ಗ್ರಾಪಂ ಅಧ್ಯಕ್ಷರ ಚುನಾವಣೆ: “ಕೈ” ಕಲಹದಲ್ಲಿ ಅರಳತ್ತಾ ಕಮಲ..? ಅಷ್ಟಕ್ಕೂ “ಅಂದರ್-ಬಾಹರ್” ಆಟದಲ್ಲಿ ಅಧ್ಯಕ್ಷ ಪಟ್ಟ ಯಾರಿಗೆ..?
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ನಾಳೆ ಬುಧವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಹುತೇಕ ಹುನಗುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ ಗಾದಿಯಲ್ಲಿ ಅಚ್ಚರಿಯ ಅಭ್ಯರ್ಥಿ ಖುರ್ಚಿ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. “ಅ” ವರ್ಗಕ್ಕೆ ಮೀಸಲು..! ಅಂದಹಾಗೆ, ಕಾಂಗ್ರೆಸ್ ಬೆಂಬಲಿತ 8 ಸದಸ್ಯರನ್ನು ಹೊಂದಿರೋ ಹುನಗುಂದ ಗ್ರಾಮ ಪಂಚಾಯತಿಯಲ್ಲಿ, ಬಿಜೆಪಿ ಬೆಂಬಲಿತ 6 ಜನ ಸದಸ್ಯರಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಯಲ್ಲಮ್ಮ ಇಟ್ಲಾಪುರ ಅಧ್ಯಕ್ಷರಾಗಿದ್ದರು. ಆದ್ರೆ, ಇವಾಗ ಸದ್ಯದ...
ಮುಂಡಗೋಡ ತಾಲೂಕಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ..! ಎಲ್ಲೇಲ್ಲಿ ಗೊತ್ತಾ..?
ಮುಂಡಗೋಡ ಪಟ್ಟಣವೂ ಸೇರಿದಂತೆ, ತಾಲೂಕಿನ ಹಲವು ಭಾಗಗಳಲ್ಲಿ ಇವತ್ತು ಮಂಗಳವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮುಂಡಗೋಡ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಸ್ಕಾಂ ಮುಂಡಗೋಡ ಉಪ ವಿಭಾಗದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಹೊಸ ಬ್ಯಾಟರಿ ಯೂನಿಟ್ ಗಳ ಅಳವಡಿಕೆ ಹಾಗೂ ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಇಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಎಲ್ಲೆಲ್ಲಿ ಪವರ್ ಕಟ್..? ಮುಂಡಗೋಡ ಪಟ್ಟಣ, ಟಿಬೇಟಿಯನ್ ಕಾಲೋನಿ, ಬಾಚಣಕಿ, ನಂದಿಕಟ್ಟಾ,...









