ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಹೆಜ್ಜೆಗೊಂದರಂತೆ ಇರೋ ಅಕ್ರಮ ಇಟ್ಟಿಗೆ ಭಟ್ಟಿಗಳ ಮೇಲೆ ತಹಶೀಲ್ದಾರ್ ಶಂಕರ್ ಗೌಡಿ ಸಾಹೇಬ್ರು ಸಮರ ಸಾರಿದ್ದಾರೆ. ನಿನ್ನೆ ಇಡೀ ಸನವಳ್ಳಿಯ ಅಕ್ರಮ ಇಟ್ಟಿಗೆ ಭಟ್ಟಿ ಮಾಲೀಕರಿಗೆ ಛಳಿ ಬಿಡಿಸಿದ್ದಾರೆ. ಹೀಗಾಗಿ, ತಾಲೂಕಿನ ಮಂದಿ ತಹಶೀಲ್ದಾರರ ಖಡಕ್ ಕ್ರಮಕ್ಕೆ ಶ್ಲಾಘನೆ ವ್ಯಕ್ತ ಪಡಿಸ್ತಿದಾರೆ. ನಿಜ..! ತಾಲೂಕಿನ ಸನವಳ್ಳಿಯಲ್ಲಿ ಇಟ್ಟಿಗೆ ಭಟ್ಟಿಗಳ ರಾಜಾರೋಶತನಕ್ಕೆ ಕಡಿವಾಣ ಹಾಕುವ ಅವಶ್ಯಕತೆ ಇದ್ದೇ ಇದೆ. ಅದನ್ನ ಇಡೀ ತಾಲೂಕಿನ ಜನ ಬಯಸಿದ್ರು. ಕಾರಣವೆಂದ್ರೆ, ಅಲ್ಲಿ ಸಾಕಷ್ಟು ಕಾನೂನುಗಳ ಉಲ್ಲಂಘನೆ ಆಗ್ತಿತ್ತು....
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!
ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?
ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ನ್ಯಾಸರ್ಗಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಅಂದಾ ದರ್ಬಾರ್..? ವಿದ್ಯಾರ್ಥಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಯಾಕೆ ಅಂತಾ ಕೇಳಿದ್ರೆ ಹೀಗೆ ಮಾಡೋದಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿರೋ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಬೇಕಾಬಿಟ್ಟಿ ವರ್ತನೆಗೆ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ತಮಗಿಷ್ಟ ಬಂದಂತೆ ಹಣ ವಸೂಲಿ ಮಾಡುತ್ತಿರೋ ಕೆಲವು ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ದುರಂತ ಅಂದ್ರೆ, ಇಲ್ಲಿನ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಲು ಹೋದ ಸಮಾಜಿಕ ಕಾರ್ಯಕರ್ತನಿಗೇ ಅವಾಚ್ಯವಾಗಿ ನಿಂದಿಸಿದ್ದಾರಂತೆ ಇಲ್ಲಿನ ಶಿಕ್ಷಕರು..! ಆಗಿದ್ದೇನು..? ಅಂದಹಾಗೆ, ನ್ಯಾಸರ್ಗಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಅಂತಾ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು...
ಪಾಳಾದ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ: ತಾಲೂಕಿನ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾನೆ. ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರಾಕ್ಟರ್ ಟ್ರೈಲಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು ಭೀಕರವಾಗಿದೆ. ಚಿಗಳ್ಳಿ ಗ್ರಾಮದ ಪ್ರವೀಣ್ ಬಸವರಾಜ್ ಬೆನ್ನೂರ್ (28) ಎಂಬುವವನೇ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದಾನೆ. ಈತ ಇವತ್ತು ಹಾನಗಲ್ಲಿನಿಂದ ಟ್ರ್ಯಾಕ್ಟರ್ ನಲ್ಲಿ ಕಲ್ಲು ತುಂಬಿಕೊಂಡು ಚಿಗಳ್ಳಿ ಗ್ರಾಮಕ್ಕೆ ಅಣ್ಣ ಸೇರಿ ಮೂವರೊಂದಿಗೆ ಬರುತ್ತಿದ್ದ.. ಈ ವೇಳೆ ಪಾಳಾ ಬಳಿಯ ರಾಮಾಪುರ ಕ್ರಾಸ್ ಹತ್ತಿರ ಟ್ರ್ಯಾಕ್ಟರ್...
ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ ಮಾಡಿ ಶುಭ ಕೋರಿದ ವಿಎಸ್ಪಿ..!
ಬೆಂಗಳೂರು: ನೂತನವಾಗಿ ಸಚಿವ ಸಂಪುಟ ಸೇರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲಘಟಗಿ ಶಾಸಕ ಸಂತೋಷ ಲಾಡ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ನವರಿಗೆ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್ ಭೇಟಿ ಮಾಡಿ ಶುಭಕೋರಿದ್ರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಭೇಟಿ ಮಾಡಿ ಶುಭಾಶಯ ತಿಳಿಸಿದ ವಿ.ಎಸ್.ಪಾಟೀಲ್ ರಿಗೆ ಮುಖಂಡರಾದ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ್ ಸೇರಿದಂತೆ ಹಲವರು ಸಾಥ್ ನೀಡಿದ್ರು.
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...









