ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...
Top Stories
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
Category: ಮುಂಡಗೋಡ ಸುದ್ದಿ
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!
ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...
ಮುಂಡಗೋಡಿನಲ್ಲಿ ವಿಶ್ವಕರ್ಮ ಜಯಂತಿ ಸರಳ ಉತ್ಸವ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಾಗೂ ಮುಂಡಗೋಡ ತಾಲೂಕ ವಿಶ್ವಕರ್ಮ ಸಮಾಜ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮ ಭಗವಾನರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು. ನಂತರ ಇಲಾಖೆಯ ವತಿಯಿಂದ, ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ, ವಿಶ್ವಕರ್ಮ ಸಮಾಜದ ಶ್ರೀಮತಿ ರೇಣುಕಾ ಬಡಿಗೇರ, ಈಶ್ವರಪ್ಪ ಬಡಿಗೇರ ಇಂದೂರು, ಮೌನೇಶ ಬಡಿಗೇರ ಉಗ್ಗಿನಕೇರಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಇಓ...
ಇಂದು “ನಮೋ ಜನ್ಮದಿನ” ಹಡಪದ ಸಮಾಜದಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ..!
ಮುಂಡಗೋಡ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಡಪದ ಅಪ್ಪಣ್ಣ ಸಮಾಜದಿಂದ ವಿಶೇಷವಾಗಿ ಮೋದಿಯವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಜ್ಞಾನಪ್ರಜ್ಞಾ ಅಂಧಮಕ್ಕಳ ವಿಶೇಷ ವಸತಿ ಶಾಲೆಯಲ್ಲಿ ಅಂಧ ಮಕ್ಕಳಿಗೆ ಕ್ಷೌರ ಸೇವೆ ಸಲ್ಲಿಸಲಾಯಿತು. ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ನೇತೃತ್ವದಲ್ಲಿ ಸುಮಾರು 35 ಅಂಧ ಮಕ್ಕಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು. ಕದಂಬ ಹೇರ್ ಡ್ರೆಸಸ್ ನ ಕ್ಷೌರಿಕ ಬಾಂಧವರು ಅಂಧ ಮಕ್ಕಳಿಗೆ ಬೆಳಿಗಿನಿಂದಲೇ ಕ್ಷೌರ...
ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...
ಕೊಪ್ಪದ “ಉತ್ತಮ ಶಿಕ್ಷಕಿ” ಗೆ ಹಳೆಯ ವಿದ್ಯಾರ್ಥಿಗಳು ಹಾಗೂ SDMC ಸದಸ್ಯರಿಂದ ಗೌರವ ಸನ್ಮಾನ..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗೀತಾ ಪಟಗಾರ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಇಂದು ಕೊಪ್ಪದ ಹಳೆಯ ವಿದ್ಯಾರ್ಥಿಗಳಿಂದ ಹಾಗೂ SDMC ಸದಸ್ಯರುಗಳಿಂದ ಗೌರವ ಸನ್ಮಾನ ಮಾಡಲಾಯಿತು. ಅಂದಹಾಗೆ, 26 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಂದಲಗೇರಿ ಶಾಲೆಯಲ್ಲಿ 9 ವರ್ಷ ಹಾಗೂ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿರಸಿ...
ಕರ್ನಾಟಕದಲ್ಲಿ “ಹಿಂದಿ ದಿವಸ್” ಆಚರಣೆ ಬೇಡವೇ ಬೇಡ, ಸರ್ಕಾರಕ್ಕೆ ಮುಂಡಗೋಡ ರಾಯಣ್ಣ ಬಳಗದಿಂದ ಹಕ್ಕೊತ್ತಾಯ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಮನವಿ ಅರ್ಪಿಸಲಾಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿರೋ ಅಭಿಮಾನಿ ಬಳಗ ಹಿಂದಿ ದಿವಸ್ ಆಚರಣೆ ಬೇಡ ಅಂತಾ ಆಗ್ರಹಿಸಿದ್ದಾರೆ. ಕನ್ನಡ ಒಕ್ಕೂಟ ವ್ಯವಸ್ಥೆ ಮಾರಕವಾಗಿರುವ ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸಬೇಕು, ಒಕ್ಕೂಟ ಭಾರತ ಸಂವಿಧಾನದಲ್ಲಿ 22 ಭಾಷೆಗಳಿಗೂ ಸರಿ ಸಮಾನತೆಯಿದೆ. ಹೀಗಾಗಿ, ಹಿಂದಿ ಭಾಷೆಗೆ ಅಷ್ಟೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ನಮ್ಮ ಕನ್ನಡಿಗರ ತೆರಿಗೆ...
ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ. ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ...
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...









