ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
Top Stories
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
Category: ಮುಂಡಗೋಡ ಸುದ್ದಿ
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!
ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...
ಮುಂಡಗೋಡಿನಲ್ಲಿ ವಿಶ್ವಕರ್ಮ ಜಯಂತಿ ಸರಳ ಉತ್ಸವ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಾಗೂ ಮುಂಡಗೋಡ ತಾಲೂಕ ವಿಶ್ವಕರ್ಮ ಸಮಾಜ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮ ಭಗವಾನರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು. ನಂತರ ಇಲಾಖೆಯ ವತಿಯಿಂದ, ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ, ವಿಶ್ವಕರ್ಮ ಸಮಾಜದ ಶ್ರೀಮತಿ ರೇಣುಕಾ ಬಡಿಗೇರ, ಈಶ್ವರಪ್ಪ ಬಡಿಗೇರ ಇಂದೂರು, ಮೌನೇಶ ಬಡಿಗೇರ ಉಗ್ಗಿನಕೇರಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಇಓ...
ಇಂದು “ನಮೋ ಜನ್ಮದಿನ” ಹಡಪದ ಸಮಾಜದಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ..!
ಮುಂಡಗೋಡ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಡಪದ ಅಪ್ಪಣ್ಣ ಸಮಾಜದಿಂದ ವಿಶೇಷವಾಗಿ ಮೋದಿಯವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಜ್ಞಾನಪ್ರಜ್ಞಾ ಅಂಧಮಕ್ಕಳ ವಿಶೇಷ ವಸತಿ ಶಾಲೆಯಲ್ಲಿ ಅಂಧ ಮಕ್ಕಳಿಗೆ ಕ್ಷೌರ ಸೇವೆ ಸಲ್ಲಿಸಲಾಯಿತು. ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ನೇತೃತ್ವದಲ್ಲಿ ಸುಮಾರು 35 ಅಂಧ ಮಕ್ಕಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು. ಕದಂಬ ಹೇರ್ ಡ್ರೆಸಸ್ ನ ಕ್ಷೌರಿಕ ಬಾಂಧವರು ಅಂಧ ಮಕ್ಕಳಿಗೆ ಬೆಳಿಗಿನಿಂದಲೇ ಕ್ಷೌರ...
ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...
ಕೊಪ್ಪದ “ಉತ್ತಮ ಶಿಕ್ಷಕಿ” ಗೆ ಹಳೆಯ ವಿದ್ಯಾರ್ಥಿಗಳು ಹಾಗೂ SDMC ಸದಸ್ಯರಿಂದ ಗೌರವ ಸನ್ಮಾನ..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗೀತಾ ಪಟಗಾರ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಇಂದು ಕೊಪ್ಪದ ಹಳೆಯ ವಿದ್ಯಾರ್ಥಿಗಳಿಂದ ಹಾಗೂ SDMC ಸದಸ್ಯರುಗಳಿಂದ ಗೌರವ ಸನ್ಮಾನ ಮಾಡಲಾಯಿತು. ಅಂದಹಾಗೆ, 26 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಂದಲಗೇರಿ ಶಾಲೆಯಲ್ಲಿ 9 ವರ್ಷ ಹಾಗೂ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿರಸಿ...
ಕರ್ನಾಟಕದಲ್ಲಿ “ಹಿಂದಿ ದಿವಸ್” ಆಚರಣೆ ಬೇಡವೇ ಬೇಡ, ಸರ್ಕಾರಕ್ಕೆ ಮುಂಡಗೋಡ ರಾಯಣ್ಣ ಬಳಗದಿಂದ ಹಕ್ಕೊತ್ತಾಯ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಮನವಿ ಅರ್ಪಿಸಲಾಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿರೋ ಅಭಿಮಾನಿ ಬಳಗ ಹಿಂದಿ ದಿವಸ್ ಆಚರಣೆ ಬೇಡ ಅಂತಾ ಆಗ್ರಹಿಸಿದ್ದಾರೆ. ಕನ್ನಡ ಒಕ್ಕೂಟ ವ್ಯವಸ್ಥೆ ಮಾರಕವಾಗಿರುವ ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸಬೇಕು, ಒಕ್ಕೂಟ ಭಾರತ ಸಂವಿಧಾನದಲ್ಲಿ 22 ಭಾಷೆಗಳಿಗೂ ಸರಿ ಸಮಾನತೆಯಿದೆ. ಹೀಗಾಗಿ, ಹಿಂದಿ ಭಾಷೆಗೆ ಅಷ್ಟೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ನಮ್ಮ ಕನ್ನಡಿಗರ ತೆರಿಗೆ...
ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ. ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ...









