ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರಧ್ವಜ ನಿರ್ವಹಣೆ ಕಾರ್ಯಾಗಾರ..!
ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದ್ರು. ತಾಲೂಕಾಡಳಿತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಭಾರತ ಸೇವಾದಲದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರೋ ತರಬೇತಿ ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನಿರ್ವಹಣೆಯ ಕುರಿತು ತಹಶೀಲ್ದಾರ್ ಶಂಕರ್ ಗೌಡಿ ಮಾಹಿತಿ ನೀಡಿದ್ರು. ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ...
ಧಾತ್ರಿ ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ,ಪುಸ್ತಕ ವಿತರಣೆ..!
ಮುಂಡಗೋಡ: ತಾಲೂಕಿನ ಕೋಡಂಬಿ, ಬೆಡಸಗಾಂವ್, ಮಳಗಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಧಾತ್ರಿ ಫೌಂಡೇಶನ್ ವತಿಯಿಂದ ಉಚಿತ ಪಠ್ಯ, ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಭಟ್, ಫಣಿರಾಜ್ ಹದಳಗಿ, ಗಿರೀಶ್ ಕಾತೂರು, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ದಿವಾನ್ ಸಾಬ್, ವಿಜಯ್ ಕುರುಬರ ಹಾಗೂ ಪಂಚಾಯತ್ ಅಧ್ಯಕ್ಷರು, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಮುಖಂಡರು, ಶಿಕ್ಷಕವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!
ಮುಂಡಗೋಡಿನ ಯುವಕರ ಪಡೆಯೊಂದು ತಾಲೂಕಿನ ಹೆಮ್ಮೆಗೆ ಕಾರಣವಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಂಡಗೋಡಿನ ನೃತ್ಯ ಪಟುಗಳು ಭಾಗಿಯಾಗಿದ್ದಾರೆ. ಇಂದು ರವಿವಾರ ರಾತ್ರಿ ನಮ್ಮ ಹೆಮ್ಮೆಯ ಯುವಕರ ಡ್ಯಾನ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅಂದಹಾಗೆ, ಮುಂಡಗೋಡಿನ ಮಾಸ್ ಅಕಾಡೆಮಿಯ ಹುಲಿಗಳು ಇವ್ರು. ಸಂದೀಪ್ ಕೋರಿ, ಸಾನಿಕಾ ಪವಾರ್,ರಂಜಿತಾ ಜೀವಣ್ಣವರ, ಮನೋಜ್ ಮೆತ್ರಾಣಿ ಎಂಬುವ ಡ್ಯಾನ್ಸ್ ಕಲಿಗಳು ಟಿವಿ ಪರದೆಯ ಮೇಲೆ ಇಂದು ಮಿಂಚಲಿದ್ದಾರೆ. ಪ್ರತೀ ಶನಿವಾರ, ರವಿವಾರ ಜೀ ಕನ್ನಡ...
ಚೌಡಳ್ಳಿ-ಮಲವಳ್ಳಿ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ- ಮಲವಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಎರಡನೇ ಅವಧಿಗೆ, ನೂತನ ಅಧ್ಯಕ್ಷರಾಗಿ ಮೌಲಾಸಾಬ ಪೀರ್ ಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮುಖಂಡರಾದ ವೈ.ಪಿ ಪಾಟೀಲ್, ಅರ್ಜುನಪ್ಪ ಸಿಗ್ನಳಿ, ಪಿ. ಜಿ.ಪಾಟೀಲ, ಪರಶುರಾಮ್ ತಹಸೀಲ್ದಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ.ಭುಜಂಗಿ, ಪರಶುರಾಮ್ ಕುರಿಯವರ್, ಬಸವರಾಜ್ ಉಗ್ಗಿನಕೇರಿ, ರಾಮಚಂದ್ರ ರಾಥೋಡ್, ಮಹೇಶ್ ಅರ್ಕಸಾಲಿ, ಚವಡಳ್ಳಿ ಗ್ರಾಪಂ ಸದಸ್ಯ ಪ್ರದೀಪ್ ಚವಾಣ್, ಅಬ್ದುಲ್ ಖಾದರ್...
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....
ಬೆಳಿಗ್ಗೆ ಬಿಜೆಪಿ, ರಾತ್ರಿ ಕಾಂಗ್ರೆಸ್ ಅನ್ನೋ “ಶಕುನಿ” ಲೀಡರ್ಸ್ ನಮಗೆ ಬೇಕಾಗಿಲ್ಲ: ರವಿಗೌಡ ಪಾಟೀಲ್ ಖಡಕ್ ಮಾತು..!
ಬೆಳಿಗ್ಗೆ ಬಿಜೆಪಿಯಲ್ಲಿ ಚಹಾ ಕುಡಿದು, ರಾತ್ರಿಯಾದಂತೆ ಕಾಂಗ್ರೆಸ್ ಜೊತೆ ಚೀಯರ್ಸ್ ಹೇಳೊ, ಬೆನ್ನಿಗೆ ಚೂರಿ ಹಾಕೊ ಕಾರ್ಯಕರ್ತರು, ಮುಖಂಡರು ನಮಗೆ ಬೇಕಾಗಿಲ್ಲ. ಅಂತಹ ಮನಸ್ಥಿತಿಯವರು ಇದ್ರೆ ಈಗಲೇ ಈ ಸಭೆಯಿಂದಲೇ ಎದ್ದು ಹೋಗಿ ಅಂತಾ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲ್ ಖಡಕ್ಕಾಗೇ ಎಚ್ಚರಿಸಿದ್ರು. ಅವ್ರು, ಮುಂಡಗೋಡ ತಾಲೂಕಿನ ಇಂದೂರಿನ ಕಲ್ಮೇಶ್ವರ ದೇವಸ್ಥಾನದಲ್ಲಿ ನಡೆದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ರು. ಕೊಪ್ಪರಿಗೆ ಹಾಲಿನಲ್ಲಿ ಒಂದು ಸಣ್ಣ ಉಪ್ಪಿನ...
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...









