ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
Top Stories
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Category: ಮುಂಡಗೋಡ ಸುದ್ದಿ
ಸಿಡ್ಲಗುಂಡಿ ಬಳಿ ಲಾರಿ, ಬೊಲೆರೊ ಮದ್ಯೆ ಮುಖಾಮುಕಿ ಡಿಕ್ಕಿ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ..!
ಮುಂಡಗೋಡ:ತಾಲೂಕಿನ ಯಲ್ಲಾಪುರ ರಸ್ತೆಯಲ್ಲಿ ಅಪಘಾತವಾಗಿದೆ. ಅಶೋಕ ಲೈಲ್ಯಾಂಡ್ ಹಾಗೂ ಬುಲೆರೊ ವಾಹನದ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಿಡ್ಲಗುಂಡಿ, ಮೈನಳ್ಳಿ ಸಮೀಪದ ಕಿರು ಸೇತುವೆ ಬಳಿ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ, ಡಿಕ್ಕಿಯ ರಭಸಕ್ಕೆ ಅಶೋಕ ಲೈಲಾಂಡ್ ಲಾರಿ ಉರುಳಿ ಬಿದ್ದಿದೆ. ಇಷ್ಟಾದ್ರೂ, ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಬೊಲೆರೋ ವಾಹನದಲ್ಲಿ ಸಾಕಷ್ಟು ಜನ ಪ್ರಯಾಣಿಕರಿದ್ರು. ಆದ್ರೆ ಯಾರಿಗೂ ತೊಂದರೆಯಾಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ...
ಇನ್ನೂ ಕೆಲಸ ಬಾಕಿ ಇದೆ, ಮುಗಿದ ಮೇಲೆಯೇ ರಾಜೀನಾಮೆ ಅಂದ್ರು ಇಂದೂರು ಗ್ರಾಪಂ ಅಧ್ಯಕ್ಷೆ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ರಾಜೀನಾಮೆ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಯಾವ ಲಕ್ಷಣಗಳೂ ತೋರುತ್ತಿಲ್ಲ. ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ “ಇನ್ನಷ್ಟು ಪ್ರಮುಖ ಕೆಲಸಗಳಿವೆ ಅವೇಲ್ಲ ಮುಗಿಯೋವರೆಗೆ ರಾಜೀನಾಮೆ ಕೊಡಲ್ಲ” ಅಂತಾ ಕಡ್ಡಿ ಮುರಿದಂತೆ ಹೇಳಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿರೋ ಅಧ್ಯಕ್ಷರು ಸ್ಪಷ್ಟವಾಗಿ ಉತ್ತರಿಸಿದ್ದಾರೆ. ನಮ್ಮಲ್ಲಿ ಗೊಂದಲವೇ ಇಲ್ಲ..! ಅಸಲು, ನಮ್ಮಲ್ಲಿ ಯಾವ ಗೊಂದಲವೇ ಇಲ್ಲ. ನಾವೇಲ್ಲರೂ ಒಗ್ಗಟ್ಟಾಗೇ ಇದ್ದಿವಿ. ನಂಗೆ ನಮ್ಮ ಸದಸ್ಯರೇಲ್ಲರೂ ಬೆಂಬಲ ಕೊಟ್ಟಿದ್ದಾರೆ. ಆದ್ರೆ, ಕೋವಿಡ್...
ಇಂದೂರು ಬಳಿ ಸ್ಕೂಟಿಗೆ ಅಡ್ಡ ಬಂದ ಎಮ್ಮೆ; ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡ ನಂದಿಕಟ್ಟಾ ಯುವಕ..!
ಮುಂಡಗೋಡ : ತಾಲೂಕಿನ ಇಂದೂರು ಬಳಿ ಅಪಘಾತವಾಗಿದೆ. ಎಮ್ಮೆ ಅಡ್ಡ ಬಂದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಹೆಸರು ಇನ್ನು ತಿಳಿದು ಬಂದಿಲ್ಲ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಗ್ರಾಪಂ ನಲ್ಲಿ 15-15 ರ ಹಾವು ಏಣಿಯಾಟ..! ಅಧ್ಯಕ್ಷ ಪಟ್ಟಕ್ಕಾಗಿ ಒಳಗೊಳಗೇ ಬೇಗುದಿ..?
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯಲ್ಲಿ ಒಳಗೊಳಗೇ ಅಸಮಾಧಾನದ ಹೊಗೆಯಾಡ್ತಿದೆಯಾ..? ಬಹುತೇಕ ಒಗ್ಗಟ್ಟಾಗಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಒಳಗೊಳಗೆ ಕುದಿಯುವಂತಾಗಿದೆಯಾ..? ಒಳ ಒಪ್ಪಂದದಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಬದಲಾವಣೆಗಾಗಿ ಜಾತಕ ಪಕ್ಷಿಯಂತೆ ಕಾದು ಕೂರುವಂತಾಗಿದೆಯಾ..? ಹೌದು ಅಂತಿದೆ ಮೂಲಗಳು. ಬಿಜೆಪಿ ಸಾಮ್ರಾಜ್ಯ..! ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತರ ಸಾಮ್ರಾಜ್ಯವಿದೆ. ಅದೇನೇ ತಿಪ್ಪರಲಾಗ ಹಾಕಿದ್ರೂ ಇಲ್ಲಿ ಬಿಜೆಪಿ ಬೆಂಬಲಿತರ ಅಧಿಕಾರ ಬಿಲ್ ಕುಲ್ ಬಿಜೆಪಿಗೇ ಇರತ್ತೆ. ಯಾಕಂದ್ರೆ, 16 ಸದಸ್ಯ ಬಲದ ಇಂದೂರು...
ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ಆಧ್ಯಕ್ಷರ ಆಯ್ಕೆ ಕಸರತ್ತು, ಪಟ್ಟಕ್ಕೇರ್ತಾರಾ ರೇಣುಕಾ..?
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ನೇತ್ರಾ ಹನುಮಂತ್ ಜಾಡರ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಒಟ್ಟೂ 13 ಸದಸ್ಯ ಬಲದ ಸಾಲಗಾಂವ್ ಗ್ರಾಮ ಪಂಚಾಯತಿಯಲ್ಲಿ ಬಹುತೇಕ ಬಿಜೆಪಿ ಬೆಂಬಲಿತರದ್ದೇ ಪಾರುಪತ್ಯ. ಹೀಗಾಗಿ, 15 ತಿಂಗಳ ಅಧಿಕಾರ ನಡೆಸಿರೋ ನೇತ್ರಾ ಹನುಮಂತ್ ಜಾಡರ್ ಅಧಿಕಾರ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ ಮತ್ತೊಂದು 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರ ಆಯ್ಕೆಗೆ ಅನುವು...
ಬಾಚಣಕಿ ಗ್ರಾಪಂ ನೂತನ ಅಧ್ಯಕ್ಷರಾಗಿ ಸಂತೋಷ ಸಣ್ಣಮನಿಗೆ ಭರ್ಜರಿ ಗೆಲುವು..!
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಂತೋಷ ಸಣ್ಣಮನಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಭರ್ಜರಿ ಜಯ ಸಿಕ್ಕಿದೆ. 13 ಸದಸ್ಯರಲ್ಲಿ 9 ರ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಆದ್ರೆ, ಇಂದು ನಡೆದ ಚುನಾವಣೆಯಲ್ಲಿ ಬರೋಬ್ಬರಿ 9 ಜನರ ಬೆಂಬಲದೊಂದಿಗೆ ಸಂತೋಷ ಸಣ್ಣಮನಿ...
ಬಾಚಣಕಿ ಗ್ರಾಪಂ ಅಧ್ಯಕ್ಷ ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಇಂದು ಮದ್ಯಾನ 1 ಗಂಟೆಯ ನಂತರ ನಡೆಯಲಿರೋ ಚುನಾವಣೆಯಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ..? ಅನ್ನೋ ಕುತೂಹಲಕ್ಕೆ ಉತ್ತರ ಸಿಗಲಿದೆ. 13 ಸದಸ್ಯ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಹೀಗಾಗಿನೇ ಕಾಂಗ್ರೆಸ್ ಬೆಂಬಲಿತ ನಾಗರಾಜ್ ಉಪಾದ್ಯೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ರು. ಅದ್ರಂತೆ, ಅರಶಿಣಗೇರಿಯ ತಿಪ್ಪವ್ವ ಢಾಕಪ್ಪ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!
ಸಚಿವ ಶಿವರಾಂ ಹೆಬ್ಬಾರ್ ಅದ್ಯಾಕೋ ಏನೋ ಕಾರ್ಯಕರ್ತರ ಮನಸಿನಾಳ ಅರ್ಥೈಸಿಕೊಳ್ಳುವಲ್ಲಿ ವಿಫಲರಾಗ್ತಿದಾರಾ..? ಇಂತಹದ್ದೊಂದು ಅನುಮಾನ, ಕ್ಷೇತ್ರದ ಸದ್ಯದ ಸ್ಥಿತಿ ನೋಡಿದ್ರೆ ಎಂಥವರಿಗೂ ಅರ್ಥವಾಗ್ತಿದೆ. ಅಸಲು, ಸಚಿವರು ಮಾಡಿರೋ ಸಣ್ಣದೊಂದು ನಿರ್ಲಕ್ಷಕ್ಕೆ ಮುಂಡಗೋಡ ಪಟ್ಟಣ ಪಂಚಾಯತಿ ಸದ್ಯ ಕೊತ ಕೊತ ಕುದಿಯುತ್ತಿದೆ. ಬಿಜೆಪಿಯೊಳಗಿನ ಆಂತರಿಕ ಬೇಗುದಿ ಸ್ಫೋಟಗೊಂಡಿದೆ. ಅವಿಶ್ವಾಸ ಮಂಡನೆಗೆ ಅರ್ಜಿ..! ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಅರ್ಜಿ ಸಲ್ಲಿಕೆಯಾಗಿದೆ. ಅದ್ಯಕ್ಷೆ ರೇಣುಕಾ ರವಿ ಹಾವೇರಿ ಹಾಗೂ ಉಪಾಧ್ಯಕ್ಷ ಮಂಜುನಾಥ್ ಹರ್ಮಲಕರ್...
ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಓರ್ವನ ಮೇಲೆ ಕೇಸು ದಾಖಲಿಸಲಾಗಿದೆ. ಅಗಡಿಯ ನಾಗರಾಜ್ ರೇಖಪ್ಪ ಲಮಾಣಿ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದ್ದು, ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.









