ಮುಂಡಗೋಡ: ತಾಲೂಕಿನ ಹಲವೆಡೆ ಮಳೆ ಗಾಳಿ, ಸಿಡಿಲಿನ ಅರ್ಭಟ ಜೋರಾಗಿತ್ತು. ತಾಲೂಕಿನ ಇಂದೂರು ಗ್ರಾಮದಲ್ಲಿ ಭರಸಿಡಿಲು ಬಡಿದು ಎರಡು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಇಲ್ಲಿನ ಕಲ್ಮೇಶ್ ದುಗ್ಗಳ್ಳಿ ಎಂಬುವವರ ಮನೆಯ ಹಿತ್ತಲಿನಲ್ಲಿರೋ ತೆಂಗಿನ ಮರಕ್ಕೆ ಭರಸಿಡಿಲು ಬಡಿದು ಹೊತ್ತಿ ಉರಿದಿವೆ. ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿದೆ. ಹೀಗಾಗಿ ಆತಂಕಗೊಂಡ ಗ್ರಾಮಸ್ಥರು ನಿಬ್ಬೆರಗಾಗಿ ಆ ಸಿಡಿಲಾಘಾತದ ರೋಮಾಂಚಕ ಕ್ಷಣ ನೋಡಿದ್ದಾರೆ. ಸಿಡಿಲಿನ ಹೊಡೆತಕ್ಕೆ ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ
ಮುಂಡಗೋಡ: ತಾಲೂಕಿನ ಮೂಡಸಾಲಿ ಕ್ರಾಸ್ ಬಳಿ ಬಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದಂತಾಗಿದೆ. ಎತ್ತಿನ ಚಕ್ಕಡಿಗೆ KSRTC ಬಸ್ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಕಡೆ ಹೊರಟಿದ್ದ ಚಕ್ಕಡಿಗೆ ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಗ್ರಾಮದ ಸಂತೋಷ ತಿಪ್ಪಣ್ಣ ಹರಿಜನ (30), ಮಂಜುನಾಥ್ ಬಸಪ್ಪ ಡೊಳ್ಳೇಶ್ವರ್ (38) ಎಂಬುವರಿಗೆ ಗಾಯವಾಗಿದೆ. KSRTC ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರೀ ಅವಘಡ ತಪ್ಪಿದಂತಾಗಿದೆ. ತಡರಾತ್ರಿಯಲ್ಲಿ ಘಟನೆ...
ಬಡ್ಡಿಗೇರಿ ಅಪಘಾತ ಪ್ರಕರಣ: ಚಾಲಕನ ವಿರುದ್ಧ ಕೇಸ್, ಟಾಟಾ ಎಸ್ ನಲ್ಲಿ ಜನರನ್ನ ಸಾಗಿಸುವಂತಿಲ್ಲ, ಪೊಲೀಸರ ಖಡಕ್ ಕ್ರಮ..!
ಮುಂಡಗೊಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ನಡೆದಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಟಾ ಎಸ್ ವಾಹನ ಚಾಲಕನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಾಟಾ ಏಸ್ ವಾಹನ ನಂ-ಕೆಎ-25/ಸಿ-5779 ನೇದರ ಚಾಲಕ ಮುಂಡಗೋಡ ವಡ್ಡರ ಓಣಿಯ ಮಂಜುನಾಥ ಈರಪ್ಪ ಬೋವಿ ಎಂಬುವನ ಮೇಲೆ ಪ್ರಕರಣ ದಾಖಲಾಗಿದ್ದು, ಈತನು ತನ್ನ ಟಾಟಾ ಏಸ್ ವಾಹನವನ್ನು ಅತೀವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದು, ಅಲ್ಲದೆ ಒಟ್ಟೂ 21 ಜನರಿಗೆ ಭಾರಿ ಗಾಯ ಪಡಿಸಿರುತ್ತಾನೆ...
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?
ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...
ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...
ಸನವಳ್ಳಿಯಲ್ಲಿ ಗದ್ದೆಯ ಬೇಲಿಗೆ ಕೊಂಬು ಸಿಲುಕಿಸಿಕೊಂಡು ಅಪಾಯದಲ್ಲಿದ್ದ ಜಿಂಕೆಯ ರಕ್ಷಣೆ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಗದ್ದೆಯಲ್ಲಿ ಬೇಲಿಗೆ ಸಿಲುಕಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಗಂಡು ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಸನವಳ್ಳಿ ಗ್ರಾಮದ ರೈತ ಕೃಷ್ಣಪ್ಪ ಎಲಿವಾಳ ಎಂಬುವವರ ಜಮೀನಿನ ಬೇಲಿಗೆ ಜಿಂಕೆ ತನ್ನ ಕೊಂಬು ಸಿಲುಕಿಸಿಕೊಂಡು ಜೀವ ಕಳೆದುಕೊಳ್ಳುವ ಅಪಾಯದಲ್ಲಿತ್ತು. ಹೀಗಾಗಿ, ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ರಕ್ಷಕ ಶ್ರೀಧರ್ ಭಜಂತ್ರಿ ಸ್ಥಳಕ್ಕೆ ಆಗಮಿಸಿ ಅಪಾಯದಲ್ಲಿದ್ದ ಗಂಡು ಜಿಂಕೆಯ ರಕ್ಷಣೆ ಮಾಡಿದ್ದಾರೆ. ಬೇಲಿಯಿಂದ ಕೊಂಬು ಬಿಡಿಸಿದ ತಕ್ಷಣವೇ ಬದುಕಿದೆಯಾ ಬಡಜೀವ ಅಂತಾ ಜಿಂಕೆ ಅಲ್ಲಿಂದ...
ಮುಂಡಗೋಡ ತಹಶೀಲ್ದಾರ್ ವಿರುದ್ಧ ದಲಿತರ ಅನಿರ್ಧಿಷ್ಟ ಧರಣಿ, ಸಾಹೇಬ್ರೇ ಇನ್ನೂ ಎಷ್ಟು ದಿನ..?
ನಿಜ, ಮುಂಡಗೋಡಿನ ಇತಿಹಾಸದಲ್ಲೇ ಇದು ಬಹುದೊಡ್ಡ ನಾಚಿಗ್ಗೇಡಿನ ಸಂಗತಿ ಅಂದ್ರೂ ತಪ್ಪಿಲ್ಲ ಅನಿಸತ್ತೆ. ತಾಲೂಕಿನ ದಂಡಾಧಿಕಾರಿಯೊಬ್ಬರ ವಿರುದ್ಧ ಈ ಪರಿಯ ಹೋರಾಟ ಬಹುಶಃ ಹಿಂದೆ ಎಂದೂ ನಡೆದಿರಲಿಲ್ಲವೆನೋ..? ಇಷ್ಟಾದ್ರೂ ಆ ಅಧಿಕಾರಿಯನ್ನ ಬಚಾವ್ ಮಾಡುವಲ್ಲಿ ತೆರೆಮರೆಯ ಕಸರತ್ತು ನಡೆಸ್ತಿರೋ “ದೊಡ್ಡ”ವರಿಗೆ ಏನೂ ಅನಿಸ್ತಾನೇ ಇಲ್ವಾ..? ಅದೂ ಹೋಗಲಿ, ತಮ್ಮ ಮೇಲೆ ಅಂತಹದ್ದೊಂದು ಭಯಂಕರ ಆರೋಪ ಬಂದು, ಪೊಲೀಸ್ ಠಾಣೆಯ ಮೆಟ್ಟಿಲೇರಿ ಜಗಜ್ಜಾಹೀರಾದಾಗಲೂ ಆ ಅಧಿಕಾರಿಗೆ ಮುಂಡಗೋಡಿಗರ ತಾಳ್ಮೆ ಅರ್ಥ ಆಗ್ತಿಲ್ವಾ..? ಇದು ಬಹುತೇಕ ಮುಂಡಗೋಡಿನ ಪ್ರಜ್ಞಾವಂತರ ಪ್ರಶ್ನೆ..!...
ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!
ಮುಂಡಗೋಡ: ತಾಲೂಕಿನ ಹನುಮಾಪುರದ ಬಳಿ ಭಾರೀ ದುರಂತವೊಂದು ಸಂಭವಿಸಿದೆ. ಜಲಮಿಷನ್ ಯೋಜನೆಯ ಕಾಮಗಾರಿ ವೇಳೆ ಬೃಹತ್ ಪೈಪು ಮೈಮೇಲೆ ಬಿದ್ದು ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮೂಲತಃ ಬಿಹಾರದವನಾದ ರಾಜು ಯಾದವ್ (35) ಮೃತಪಟ್ಟ ದುರ್ಧೈವಿಯಾಗಿದ್ದು, ಇಂದು ಕಾರ್ಯನಿರ್ವಹಿಸುವ ವೇಳೆ ಆಕಸ್ಮಿಕವಾಗಿ ಬೃಹತ್ ಪೈಪ್ ಆಯತಪ್ಪಿ ಕಾರ್ಮಿಕನ ಮೈಮೇಲೆ ಬಿದ್ದಿದೆ. ಹೀಗಾಗಿ, ಕಾರ್ಮಿಕನ ದೇಹ ಚಿದ್ರಗೊಂಡಿದೆ. ಸದ್ಯ ಮುಂಡಗೋಡ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.









