ಮುಂಡಗೋಡ: ತಾಲೂಕಿನ ವಿವಿಧ ಅರಣ್ಯ ಅತಿಕ್ರಮಣ ಪ್ರದೇಶಗಳ ಅತಿಕ್ರಮಣದಾರರು, ಇದೇ ಡಿ. 22 ಕ್ಕೆ ‘ಬೆಳಗಾವಿ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಇಂದು ಕಾರ್ಯಕ್ರಮದ ಪೂರ್ವಭಾವಿ ಸಭೆ ಮುಂಡಗೋಡಿನಲ್ಲಿ ಜರುಗಿತು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನು ಹಂತ, ಹಂತವಾಗಿ ಒಕ್ಕಲೆಸಲಾಗುವದು ಎಂಬ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಅತಂತ್ರವಾಗಿರುವ ಆತಂಕದಲ್ಲಿ ಇರುವುದರಿಂದ, ಅರಣ್ಯವಾಸಿಗಳ ಪರ ಸರಕಾರ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿ ಡಿ....
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ನಂದಿಕಟ್ಟಾದಲ್ಲಿ ನಟ ಪುನೀತ್ ನೆನಪಲ್ಲಿ, ಮುಕ್ತ ಕಬಡ್ಡಿ ಪಂದ್ಯಾವಳಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪಂದ್ಯಾವಳಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು. ಇನ್ನು ಕಬಡ್ಡಿ ಪಂದ್ಯಾವಳಿಗೆ ದೂರ ದೂರದ ಕಬಡ್ಡಿ ತಂಡಗಳು ಬಂದು ಭಾಗವಹಿಸಿವೆ. ಪ್ರಥಮ ಬಹುಮಾನವಾಗಿ 20 ಸಾವಿರ ರೂ. ಎರಡನೇ ಬಹುಮಾನವಾಗಿ 15 ಸಾವಿರ ರೂಪಾಯಿ ಮೂರನೇ ಬಹುಮಾನವಾಗೊ 10 ಸಾವಿರ ರೂಪಾಯಿ, ನಾಲ್ಕನೇ ಬಹುಮಾನವಾಗಿ 5 ಸಾವಿರ ರೂಪಾಯಿ ಇಡಲಾಗಿದೆ. ಇನ್ನು...
ಅತ್ತಿವೇರಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆ ತೆರವು..!
ಮುಂಡಗೋಡ: ತಾಲೂಕಿನ ಅತ್ತಿವೇರಿ ದರ್ಗಾ ಹತ್ತಿರ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಯನ್ನು ಹುನಗುಂದ ಗ್ರಾಮ ಪಂಚಾಯತಿಯವರು ತೆರವುಗೊಳಿಸಿದ್ರು. ಅತ್ತಿವೇರಿ ಗ್ರಾಮದಲ್ಲಿ ಮನೆ ಹೊಂದಿದ್ದರೂ ಸರ್ಕಾರದ ಗಾಂವಠಾಣ ಜಾಗದಲ್ಲಿ ಮತ್ತೊಂದು ಮನೆ ನಿರ್ಮಿಸಿಕೊಂಡಿದ್ದ ವ್ಯಕ್ತಿಗೆ ಗ್ರಾಮ ಪಂಚಾಯತಿಯಿಂದ ನೋಟೀಸ್ ನೀಡಲಾಗಿತ್ತು. ನೋಟೀಸ್ ಮೂಲಕ ಮನೆ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಆದ್ರೂ ಸಹಿತ ಮನೆ ತೆರವು ಮಾಡಿಕೊಳ್ಳದ ಕಾರಣ ಇಂದು ಪೊಲೀಸರ ಸಹಾಯದೊಂದಿಗೆ ಅಕ್ರಮ ಮನೆ ತೆರವು ಮಾಡಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ...
ವಡಗಟ್ಟಾ ಬಳಿ ಬೈಕ್ ಗೆ ಅಡ್ಡ ಬಂದ ಕಾಡುಹಂದಿ, ಬೈಕ್ ಬಿದ್ದು, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ವಡಗಟ್ಟಾ- ಹುನಗುಂದ ರಸ್ತೆಯಲ್ಲಿ ಬೈಕ್ ಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಪ್ರಸಾದ್ ಕುಂಜು (51) ಎಂಬುವವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ ಹುನಗುಂದ ಹಾಗೂ ವಡಗಟ್ಟಾ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿರುವಾಗ ಘಟನೆ ನಡೆದಿದೆ. ಬೈಕ್ ಮೇಲಿಂದ ಬಿದ್ದು ಗಾಯಗೊಂಡು ಒದ್ದಾಡುತ್ತಿದ್ದ ವೇಳೆ ಗ್ರಾಮಸ್ಥರು ರಕ್ಷಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದೂರಿನಲ್ಲಿ ಪರಿಷತ್ ಗೆಲುವಿಗೆ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
ಹುನಗುಂದ ಗ್ರಾಮದಲ್ಲೂ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು..
ಅರಶಿಣಗೇರಿ ಕಾಲುವೆ ಕಾಮಗಾರಿ ಕಳಪೆ, ದುರಸ್ಥಿ ಮಾಡುವಂತೆ ರೈತರ ಆಗ್ರಹ..!
ಮುಂಡಗೋಡ: ತಾಲೂಕಿನ ಅರಶಿಣಗೇರಿ ಕೆರೆಯ ಕಾಲುವೆಯನ್ನು ಆದಷ್ಟು ಬೇಗ ದುರಸ್ತಿ ಮಾಡಿಸಿ ರೈತರಿಗೆ ಬೇಸಿಗೆ ಬೆಳೆ ಬೆಳೆಯಲು ಅನುವು ಮಾಡಿಕೊಡಬೇಕಾಗಿ ರೈತರು ಮನವಿ ಮಾಡ್ತಿದಾರೆ. ಅರಶಿಣಗೇರಿ, ಅಗಡಿ ಹುನಗುಂದ ಗ್ರಾಮಗಳ ರೈತರ ಜೀವನಾಡಿಯಾಗಿರೋ ಅರಶಿಣಗೇರಿ ಕೆರೆಯ ಕಾಲುವೆಯನ್ನು ಈಗಾಗಲೇ ದುರಸ್ಥಿ ಕಾರ್ಯ ಮಾಡಿರೋ ಚಿಕ್ಕ ನೀರಾವರಿ ಇಲಾಖೆ ಅರ್ದಮರ್ದ ಕೆಲಸ ಮಾಡಿ ಹೋಗಿದ್ದಾರೆ ಅಲ್ಲದೇ ಹಾಗೆ ಮಾಡಿರೋ ಕೆಲಸವನ್ನೂ ಕಳಪೆಯಾಗಿ ಮಾಡಿದ್ದಾರೆ. ಹೀಗಾಗಿ ಈ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕಾಲುವೆಯ ದುರಸ್ತಿ ಮಾಡಿ, ಕಾಮಗಾರಿ...
ನಂದಿಕಟ್ಟಾದಲ್ಲಿ ಎಗ್ ರೈಸ್ ಅಂಗಡಿ ಕಳ್ಳತನಕ್ಕೆ ವಿಫಲ ಯತ್ನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಎಗ್ ರೈಸ್ ಅಂಗಡಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ನಂದಿಕಟ್ಟಾ ಗ್ರಾಮದ ಮಂಜುನಾಥ್ ಎಂಬ ಯುವಕ ಕೆಲವರ್ಷಗಳಿಂದ ಎಗ್ ರೈಸ್ ಶಾಪ್ ನಡೆಸುತ್ತಿದ್ದ ನಿನ್ನೆ ಮಧ್ಯರಾತ್ರಿ ಕಳ್ಳರು ಕಳ್ಳತನ ಮಾಡಲು ಅಂಗಡಿಯ ಹಿಂದಿನ ಗೋಡೆಯನ್ನು ಒಡೆಯಲು ಯತ್ನಿಸಿದ್ದಾರೆ. ಆದ್ರೆ, ಅಂಗಡಿಯಲ್ಲಿ ಯಾವುದೇ ವಸ್ತುಗಳು ಕಳ್ಳತನವಾಗಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಟ್ರ್ಯಾಕ್ಟರ್ ಟೇಪ್ ರಿಕಾರ್ಡರ್ ತೆಗೆದಿರೋ ಕಳ್ಳರು ಅದನ್ನ ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂಗಡಿ ಹಿಂದುಗಡೆ ಗೋಡೆಗೆ ಕನ್ನ ಹಾಕಿರೋ ಕಳ್ಳರು ರಂದ್ರ...
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಗೆಲುವಿನ ಸಂಭ್ರಮ..!
ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ಪಟಾಕಿ ಸಿಡಿಸಿ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು. ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಶಿವರಾಮ್ ಹೆಬ್ಬಾರ್ ಪರವಾಗಿಯೂ ಘೋಷಣೆ ಕೂಗಿ ಸಂಭ್ರಮಿಸಿದ್ರು. ಈ ವೇಳೆ ಬಿಜೆಪಿಯ ಹಲವು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ರು.
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕೋತಿಗಳ ಸಾಮ್ರಾಜ್ಯ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನಿತ್ಯವೂ ಮಂಗಗಳ ತುಂಟಾಟ ಮಿತಿ ಮೀರಿದೆ.. ಯಾರ ಭಯವೂ ಇಲ್ಲದೇ ಮಂಗಗಳು ಇಲ್ಲಿ ಮಾಡೋ ಕೀಟಲೆಗಳು ಕೆಲವೊಮ್ಮೆ ಸಾರ್ವಜನಿಕರಿಗೆ ಫಜೀತಿ ತಂದಿಡುತ್ತಿವೆ. ಶಿವಾಜಿ ಸರ್ಕಲ್ ಬಳಿಯ ಬಿಲ್ಡಿಂಗ್ ಗಳ ಮೇಲೆ ವಾನರ ಸೇನೆ ಜಿಗಿದಾಡುತ್ತಿವೆ. ವಿದ್ಯುತ್ ಲೈನ್ ಗಳು ಮಂಗಗಳ ಜಿಗಿದಾಟಕ್ಕೆ ಹರಿದು ಹೋಗುತ್ತಿವೆ. ಇನ್ನು ಸರ್ಕಲ್ ನಲ್ಲಿ ಕಟ್ಟಿರೋ ವಿವಿಧ ಬ್ಯಾನರ್ ಗಳನ್ನು ಹರಿದು ಹಾಕುತ್ತಿವೆ. ಹೀಗಾಗಿ, ಸಾರ್ವಜನಿಕರಿಗೆ ಮಂಗಗಳ ಕೀಟಲೆಗಳದ್ದೇ ಸಮಸ್ಯೆಯಾಗಿದೆ.









