ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಖಾಸಗಿ ಮೆಕ್ಕೆಜೋಳ ಬೀಜ ಬಿತ್ತಿ ಉತ್ತಮ ಫಸಲು ಪಡೆದ ರೈತರಿಗೆ ಕಂಪನಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉತ್ತಮವಾಗಿ ಫಸಲು ಬೆಳೆದ ನಂದಿಕಟ್ಟಾದ ರೈತ ಶಿವಾಜಿ ರಾಧಾಪುರ ಹಾಗೂ ಹುಲಿಹೊಂಡ ಗ್ರಾಮದ ರೈತ ಸಿದ್ದಣ್ಣ ವಾಲೀಕಾರ್ ಗೆ ಸನ್ಮಾನಿಸಲಾಯಿತು. ಈ ವೇಳೆ ನಂದಿಕಟ್ಟಾ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು, ಮುಖಂಡರು ಭಾಗಿಯಾಗಿದ್ರು.
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ಗಬ್ಬೇದ್ದು ಹೋಗಿದೆ ಹುನಗುಂದ ಬಸವಣ್ಣ ಹೊಂಡ, ಪಿಡಿಓ ಸಾಹೇಬ್ರೇ ಒಂದಿಷ್ಟು ಗಮನಿಸಿ..!
ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರೇ ಒಮ್ಮೆಯಾದ್ರೂ ನೀವು ಗ್ರಾಮದಲ್ಲಿರೋ ಬಸವಣ್ಣ ದೇವರ ಹೊಂಡ ಕಣ್ತುಂಬ ನೋಡಿದ್ದೀರಾ..? ಅಧ್ಯಕ್ಷರೇ, ನೀವಾದ್ರೂ ಈ ಹೊಂಡದ ಅವ್ಯವಸ್ಥೆ, ಗಬ್ಬೇದ್ದು ಹೋಗಿರೋ ಪರಿಯನ್ನ ಕಂಡಿದ್ದೀರಾ.. ದಯವಿಟ್ಟು ಒಮ್ಮೆ ಬಂದು ದರ್ಶನ ಮಾಡ್ಕೊಳ್ಳಿ, ಹಾಗಂತ, ಬಸವಣ್ಣ ಹೊಂಡದ ಅಕ್ಕಪಕ್ಕದ ಜನ ಹಿಡಿಶಾಪ ಹಾಕ್ತಿದಾರೆ. ಆದ್ರೆ, ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರು ಮಾತ್ರ ಗಪ್ ಚುಪ್ ಆಗಿದ್ದಾರೆ. ಈಗ ಈ ದೃಷ್ಯದಲ್ಲಿ ನೀವು ನೋಡಿರೋ ಈ ಹೊಂಡ ಒಂದು ಕಾಲದಲ್ಲಿ ಇಡೀ ಊರಿನ...
ಮುಂಡಗೋಡ ತಾಲೂಕಿನಲ್ಲಿ ಶೇ. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!
ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು...
ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!
ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಮಳೆಯ ಆತಂಕ ಶುರುವಾಗಿದೆ ಹೀಗಾಗಿ, ಅನ್ನದಾತರು ಫಸಲುಗಳ ರಕ್ಷಣೆಗೆ ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯ ಆತಂಕದ ನಡುವೆ ಭತ್ತದ ಕೊಯ್ಲಿಗೆ ಮುಂದಾಗಿದ್ದಾನೆ ರೈತ.. ಇನ್ನು, ಈ ಸಾರಿ ಮಳೆಯಲ್ಲಿ ಸಿಲುಕಿ ಸಂಪೂರ್ಣ ಹಾಳಾದ ಸ್ಥಿತಿಯಲ್ಲಿರೋ ಭತ್ತದ ಫಸಲು ಕಟಾವು ಮಾಡಲು ರೈತ ಭತ್ತ ಕಟಾವು ಮಾಡುವ ಯಂತ್ರಗಳ ಮೊರೆ ಹೋಗಿದ್ದಾನೆ.. ಹೀಗಾಗಿ ತಾಲೂಕಿನೆಲ್ಲೆಡೆ ಈಗ ಭತ್ತ ಕಟಾವು ಮಾಡೋ ಯಂತ್ರಗಳ ಸದ್ದೇ ಕೇಳುತ್ತಿದೆ. ಸಮಯವೂ ಉಳಿಯತ್ತೆ ಕೆಲಸವೂ ಕಡಿಮೆಯಾಗತ್ತೆ ಅನ್ನೋ ಕಾರಣಕ್ಕೆ...
ನಂದಿಕಟ್ಟಾದಲ್ಲೂ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೂ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇಲ್ಲಿನ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಸದಸ್ಯರೇಲ್ಲರೂ ಒಂದೆಡೆ ಸೇರಿ ಸಭೆ ಮಾಡಿದ್ರು. ಮತದಾನ ಪ್ರಕ್ರಿಯೆಯ ಕುರಿತು ಚರ್ಚಿಸಿದ್ರು. ಮತದಾನ ಮಾಡುವ ವಿಧಾನಗಳ ಬಗ್ಗೆ ತಿಳುವಳಿಕೆ ಹಂಚಿಕೊಂಡ್ರು.. ಆನಂತರದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ರು. ಅಂದಹಾಗೆ, ಮತದಾನ ಕೇಂದ್ರದಲ್ಲಿ ಸುಗಮ ಮತದಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದಾರೆ.
ಹುನಗುಂದದಲ್ಲಿ ವಿ.ಪರಿಷತ್ ಚುನಾವಣೆ ಭರ್ಜರಿ ಮತದಾನ..!
ಮುಂಡಗೋಡ: ತಾಲೂಕಿನಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಬೆಳಗಿನಿಂದಲೂ ಭರ್ಜರಿಯಾಗೇ ನಡೆದಿದೆ. ತಾಲೂಕಿನ ಹುನಗುಂದದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಹುನಗುಂದದ ಶ್ರೀ ವಿಠಲ ರುಕ್ಮಾಯಿ ಹರಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸದಸ್ಯರು, ಅಲ್ಲೇ ಸಭೆ ನಡೆಸಿದ್ರು. ಆ ನಂತರದಲ್ಲಿ ಇಲ್ಲಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ರು. ಅದ್ರಂತೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರೂ ಕೂಡ ಇಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮತದಾನ...
ಚಿಗಳ್ಳಿಯಲ್ಲಿ ತೆಪ್ಪದ ರಥೋತ್ಸವ ಅಜ್ಜನ ರಥ ನೋಡಿ ಕಣ್ತುಂಬಿಕೊಂಡ ಭಕ್ತರು..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಗುರುವೀರಯೋಗೇಂದ್ರ ಸ್ವಾಮೀಜಿಯ ತೆಪ್ಪದ ರಥೋತ್ಸವ ಶೃದ್ಧಾಭಕ್ತಿಯಿಂದ ಜರುಗಿತು. ಇಲ್ಲಿನ ಕಲ್ಯಾಣಿಯಲ್ಲಿ ನಡೆದ ತೆಪ್ಪದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಹೊಂಡದ ದಡದಲ್ಲಿ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದರು ಭಕ್ತಿ ತೋರಿದ್ರು. ಸಂಜೆಯಾಗುತ್ತಿದ್ದಂತೆ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಕೆರೆಯಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ, ಭಕ್ತರ ಜಯಘೋಷಗಳು ಮೊಳಗಿದವು.
ಟಿಬೇಟಿಯನ್ ಕಾಲೋನಿಗಳಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಕೋವಿಡ್ ಕಟ್ಟೇಚ್ಚರ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗಳಲ್ಲಿ ಕೆಲಸಕ್ಕೆ ಹೋಗುವ ಸುತ್ತ ಮುತ್ತಲ ಹಳ್ಳಿಗಳ ಕೂಲಿ ಕಾರ್ಮಿಕರಿಗೆ ಆತಂಕ ಶುರುವಾಗಿದೆ. ರವಿವಾರ ತಾಲೂಕಿನ ಹುನಗುಂದ ಗ್ರಾಮದ ಮಹಿಳೆಯೋರ್ವಳಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು ಮತ್ತಷ್ಟು ಆತಂಕಕ್ಕೇ ಕಾರಣವಾಗಿದೆ. ನಿತ್ಯವೂ ಇಲ್ಲಿನ ಟಿಬೇಟಿಯನ್ ಕಾಲೋನಿಗಳಿಗೆ ಕೆಲಸಕ್ಕೆ ತೆರಳುವ ನೂರಾರು ಕಾರ್ಮಿಕರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯಾ ಗ್ರಾಮಗಳ ಗ್ರಾಮ ಪಂಚಾಯತಿಗಳು ಸೂಚನೆ ನೀಡಿವೆ.
ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಕಾರ್ತಿಕ ಅಮವಾಸ್ಯೆಯ ನಿಮಿತ್ತ ಕಾರ್ತಿಕೋತ್ಸವ ಆಚರಿಸಲಾಯಿತು. ವಿವಿದ ಚಿತ್ರಗಳ ರೂಪದಲ್ಲಿ ದೀಪ ಬೆಳಗಿಸಿ ಭಕ್ತರು ಸಂಭ್ರಮಿಸಿದ್ರು. ದೇವಸ್ಥಾನದ ಅಂಗಳದಲ್ಲಿ ರಂಗೋಲಿ ಬಿಡಿಸಿ ಅದರ ಪ್ರಕಾರವೇ ದೀಪಗಳನ್ನು ಬೆಳಗಿಸಿದ್ರು. ಕಾರ್ತಿಕ ದೀಪ ಬೆಳಗಿಸೋ ಮೊದಲು ದೇವಿಗೆ ವಿಶೇಷ ಪೂಜೆ ಮಾಡಲಾಯಿತು.. ಇನ್ನು ಕಾರ್ತಿಕೋತ್ಸವದ ನಂತರ ಅನ್ನ ಸಂತರ್ಪಣೆ ನೆರವೇರಿಸಲಾಯಿತು.
ನಿದ್ದೆಯಿಂದ ಎದ್ದ ಮುಂಡಗೋಡ PWD, ಅಮ್ಮಾಜಿ ಕೆರೆ ದಂಡೆಯ ಮೇಲೆ ಸುರಕ್ಷತಾ ಕ್ರಮ..!
ಮುಂಡಗೋಡ: ಪಟ್ಟಣದ ಹೊರ ವಲಯದಲ್ಲಿ ಇತ್ತಿಚೆಗೆ ಸಂಭವಿಸಿದ ಕಾರು ದುರಂತದಲ್ಲಿ ದಂಪತಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ಹೀಗಾಗಿ, ಅಪಘಾತಗಳಿಗೆ ಆಮಂತ್ರಣ ನೀಡುತ್ತಿದ್ದ ಅಮ್ಮಾಜಿ ಕೆರೆಯ ದಂಡೆಯ ಮೇಲೆ ಬೇಲಿ ಹಾಕಲಾಗಿದೆ. ಇಲ್ಲಿನ ಪಿಡಬ್ಲ್ಯೂಡಿ ಇಲಾಖೆ ಈಗಷ್ಟೆ ಎಚ್ಚೆತ್ತುಕೊಂಡಿದ್ದು ಕೆರೆಯ ದಂಡೆಯ ಮೇಲೆ ಕಟ್ಟಿಗೆಯ ಕಂಬಗಳನ್ನು ನಿಲ್ಲಿಸಿ ಅದಕ್ಕೆ ಕೆಂಪು ಪಟ್ಟಿಯನ್ನು ಕಟ್ಟಲಾಗಿದೆ. ಅಲ್ಲದೇ ಸಣ್ಣ ಸಣ್ಣ ಚೀಲಗಳನ್ನು ತುಂಬಿ ಇಡಲಾಗಿದೆ.. ಇದ್ರಿಂದ ರಾತ್ರಿ ಸಮಯದಲ್ಲಿ ಅಪಘಾತ ಸಂಭವಿಸುವುದನ್ನು ಕೊಂಚ ತಪ್ಪಿಸಲು ಕ್ರಮ ಕೈಗೊಂಡಿದೆ.









