ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ. ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಮುಂಡಗೋಡ ಬಿಜೆಪಿಯ...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಕಿಮ್ಸ್ ಗೆ ದಾಖಲು..!
ಮುಂಡಗೋಡ: ವಿಷ ಸೇವಿಸಿದ ಮಹಿಳೆಯೋರ್ವಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಕೋಡಂಬಿಯಲ್ಲಿ ನಡೆದಿದೆ. ಪ್ರೇಮಾ ಕೃಷ್ಣಪ್ಪ ಕೊರಗರ್ ಎಂಬುವ ಗೃಹಿಣಿಯೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವಳಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಮುಂಡಗೋಡಿನ 108 ಅಂಬ್ಯುಲೆನ್ಸ್ ಸಿಬ್ಬಂದಿ, ತಾಲ್ಲೂಕು ಆಸ್ಪತ್ರೆ ಮುಂಡಗೋಡಿಂದ ಹುಬ್ಬಳ್ಳಿ ಕಿಮ್ಸ್ ಗೆ,108 ಅಂಬ್ಯುಲೆನ್ಸ್ ಮುಖಾಂತರ ದಾಖಲಿಸಿದ್ದಾರೆ. 108 ಅಂಬ್ಯುಲೆನ್ಸ್ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಸಿ. ಬಳೂರು, ಚಾಲಕ ಕೆಂಚೇಶ್ ಇ. ಎನ್ ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ...
ಮಾಜಿ ಗ್ರಾಪಂ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ವಿಧಿವಶ, ಗ್ರಾಮಸ್ಥರ ಕಂಬನಿ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮಾಜಿ ಗ್ರಾಮ ಪಂಚಾಯತ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ. ಮಂಗಳವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವ್ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ರೈತರ ಬೋರವೆಲ್ ರಿಪೇರಿ ಮಾಡುತ್ತಿದ್ದ ಮರಿಯಪ್ಪ ಮೇತ್ರಿ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನವರಾತ್ರಿ ಸಂಭ್ರಮ, ಆಂಜನೇಯ ಸ್ವಾಮಿಗೆ ಹೋಮ, ಹವನ..!
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತು ನವರಾತ್ರಿಯ ಸಂಭ್ರಮದಲ್ಲಿ, ಮಂತ್ರ ಘೋಷಗಳ ಸದ್ದು ರಿಂಗಣಿಸಿದೆ. ನವರಾತ್ರಿಯ ವಿಶೇಷ ಸಂದರ್ಭದಲ್ಲಿ, ಅದ್ರಲ್ಲೂ ಶನಿವಾರದ ದಿನ ಇಲ್ಲಿನ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನ ನಡೆಸಲಾಗಿದೆ. ನೂತನವಾಗಿ ಅಧಿಕಾರ ವಹಿಸಿಕೊಂಡಿರೋ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು ಸೇರಿದಂತೆ ಠಾಣೆಯ ಎಲ್ಲಾ ಸಿಬ್ಬಂದಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ರು.
ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!
ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಮನೆ ಮಾತಾಗಿದೆ. ಹಳ್ಳಿ, ಹಳ್ಳಿಗಳಲ್ಲಿ ಹೆಜ್ಜೆಗೊಬ್ರು ಮಟ್ಕಾ ಬುಕ್ಕಿಗಳು ತಲೆ ಎತ್ತಿದ್ದಾರೆ, ಆದ್ರೆ ಇದನ್ನೇಲ್ಲ ಕಂಟ್ರೋಲ್ ಮಾಡಬೇಕಿದ್ದ ಪೊಲೀಸರು ಮಾತ್ರ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ.. ಹಾಗಂತ, ನಾವು ಹೇಳ್ತಿಲ್ಲ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಂಡಗೋಡಿನ ಯುವ ಪಡೆ ಲಿಖಿತವಾಗಿ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಿದೆ. ಯಸ್, ಮುಂಡಗೋಡ ಭಜರಂಗದಳದ ಕಾರ್ಯಕರ್ತ ಮಂಜುನಾಥ್ ಪವಾರ್ ಇಂತಹದ್ದೊಂದು ದೂರನ್ನು ಎಸ್ಪಿ ಸಾಹೇಬ್ರಿಗೆ ಸಲ್ಲಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಅನ್ನೋದು ಬಡ ಜನರ ಜೀವ...
ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!
ಮುಂಡಗೋಡ: ತಾಲೂಕಿನ ಚೌಡಳ್ಳಿಯ ಹಲವು ಯುವಕರು ಸಿಡಿದು ನಿಂತಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ, ಮಹಿಳಾ ಸದಸ್ಯರುಗಳ ಪತಿ, ಅಥವಾ ಸಂಬಂಧಿಕರೇ ದರ್ಬಾರು ನಡೆಸ್ತಿದಾರೆ ಅಂತಾ ಆರೋಪಿಸಿ ದೂರು ನೀಡಿದ್ದಾರೆ. ಯಸ್, ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಪಂಚಾಯತ್ ಸದಸ್ಯರ ಪರವಾಗಿ, ಅವರ ಸಂಬಂಧಿಕರು ಹಾಗೂ ಮಹಿಳಾ ಸದಸ್ಯರ ಪತಿ, ಹೀಗೆ ಕುಟುಂಬಸ್ಥರು ಪಂಚಾಯತ್ ಕೆಲಸಕಾರ್ಯಗಳಲ್ಲಿ ತಾವು ಅವರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದ್ದು, ಇದನ್ನ ಖಂಡಿಸಿ ಗ್ರಾಮದ ವಿದ್ಯಾಧರ್ ಶಿವಾಜಿ...
ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!
ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನವಾಗಿದೆ. ಹಾರ್ಡವೇರ್ ಅಂಗಡಿಯ ಸೆಟರ್ಸ್ ಮುರಿದು ಕಳ್ಳರು ಕೈಚಳಕ ತೋರಿದ್ದಾರೆ. ಅಂಗಡಿಯಲ್ಲಿದ್ದ 15 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ರಸ್ತೆಯ ಪೆಟ್ರೊಲ್ ಬಂಕ್ ಪಕ್ಕದಲ್ಲೇ ಇರುವ ಹಾರ್ಡವೇರ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಹಾರ್ಡವೇರ್ ಅಂಗಡಿಯ ಕೌಂಟರಿನಲ್ಲಿದ್ದ 15 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಮುಂಡಗೋಡ ಪೊಲೀಸರು ಯಥಾರೀತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿನ್ನೆಯಷ್ಟೇ ತಾಲೂಕಿನ ಮಳಗಿಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ...
ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ..? ಇದು ನಿಜವಾ..?
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ ಅಂತಾ ತಿಳಿದು ಬಂದಿದೆ. ಇವತ್ತು ಗಾಂಧಿ ಜಯಂತಿ ಎಲ್ಲಿಯೂ ಮದ್ಯದ ಅಂಗಡಿಗಳನ್ನು ತೆರೆಯುವ ಹಾಗಿಲ್ಲ. ಆದ್ರೆ, ಅಗಡಿಯಲ್ಲಿ ಮಾತ್ರ ರಾಜಾರೋಶವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಹೀಗಾಗಿ, ಬಾತ್ಮಿ ತಿಳಿದು ಸ್ಥಳಕ್ಕೆ ಹೋಗಿದ್ದ ಪೊಲೀಸರಿಗೆ ಖಾತ್ರಿಯಾಗಿದೆ. ಮಾಲು ಸಮೇತ ಎಳೆದು ತಂದಿದ್ದಾರಂತೆ ಪೊಲೀಸ್ರು. ಹಾಗಂತ, ಮಾಹಿತಿಯಿದೆ, ಆದ್ರೆ, ಅಸಲು ಏನು ಅಂತಾ ಪೊಲೀಸರೇ ಹೇಳಬೇಕಿದೆ. ಅಷ್ಟಕ್ಕೂ ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಇರೋ ಈ...
ಮಳಗಿಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ..! ಆತಂಕದಲ್ಲಿದ್ದಾರೆ ಜನ..!!
ಮುಂಡಗೋಡ: ಮಳಗಿಯಲ್ಲಿ ಕಳ್ಳರು ಮತ್ತೆ ಕೈಚಳಕ ತೋರಿದ್ದಾರೆ. ಇಲ್ಲಿನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು, ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ತಿಂಗಳಲ್ಲೇ ಇದು ಮಳಗಿಯಲ್ಲಿ ಮೂರನೇ ಕಳ್ಳತನದ ಪ್ರಕರಣವಾಗಿದೆ. ಹೀಗಾಗಿ, ಮಳಗಿಯಲ್ಲೇ ಠಾಣೆ ಇದ್ದರೂ ಅಲ್ಲಿನ ಪೊಲೀಸರು ಅದೇನು ಮಾಡ್ತಿದಾರೆ..? ಅನ್ನೋ ಪ್ರಶ್ನೆ ಎದುರಾಗಿದೆ. ನಿನ್ನೆ ತಡರಾತ್ರಿ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಹಿಂಬದಿಯ ಸೆಟರ್ಸ್ ಮುರಿದು ಒಳ ನುಗ್ಗಿರೋ ಕಳ್ಳರು, ಎಲ್ಲೆಂದರಲ್ಲಿ ತಡಕಾಡಿದ್ದಾರೆ. ಆದ್ರೆ, ಅದೃಷ್ಟವಶಾತ್...
ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?
ಮುಂಡಗೋಡ ಬಿಜೆಪಿಯ ಕಾರ್ಯಕರ್ತರ ಒಳ ಗುದ್ದಾಟ ಮುಗಿಯುವ ಲಕ್ಷಣಗಳು ಸದ್ಯಕ್ಕಂತೂ ಕಾಣ್ತಿಲ್ಲ. ಅದ್ಯಾವ ಕಾರಣಕ್ಕೋ ಏನೋ ಹಲವ್ರಿಗೆ ಅಸಮಾಧಾನ ಅನ್ನೋದು ಒಳಗೊಳಗೇ ಕುದಿಯುತ್ತಿದೆ. ಹೀಗಾಗಿ, ಇಲ್ಲಿನ ಬಿಜೆಪಿ ಕಾರ್ಯಕರ್ತರ ಒಳನೋವು ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟಗೊಳ್ತಿವೆ. ಒಂದು ಕಣ್ಣಿಗೆ ಸುಣ್ಣ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಕಾರ್ಯಕರ್ತರ ನೋವು ಕೇಳುವವರೇ ಇಲ್ವಾ..? ಕಾರ್ಯಕರ್ತರಲ್ಲಿ ಮುಖಂಡರ ನಡುವೆ ಅದೇಷ್ಟರ ಮಟ್ಟಿಗೆ ಗುಂಪುಗಾರಿಕೆಯಿದೆಯೋ ಅದೇಲ್ಲ ಜಾತಿಯಾದಾರಿತವಾ..? ಜಾತಿಗೊಂದು ಬಣ ಸೃಷ್ಟಿಯಾಗಿದೆಯಾ ಕಮಲ ಪಡೆಯಲ್ಲಿ..? ಇಂತಹ ಅನುಮಾನಗಳು ಸದ್ಯಕ್ಕಂತೂ ತಲೆ ಚಿಟ್ಟು ಹಿಡಿಸಿದೆ....









