ಮುಂಡಗೋಡ: ಜಿಂಕೆಯೊಂದು ಬೈಕ್ ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಅತ್ತಿವೇರಿ ಪಕ್ಷಿಧಾಮದ ಹತ್ತಿರ ನಡೆದಿದೆ. ಮಾರುತಿ ರಾಮಣ್ಣ ಹುಲಿಹೊಂಡ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರ. ಈತ ಅತ್ತಿವೇರಿ ಪಕ್ಷಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ, ಏಕಾಏಕಿ ಜಿಂಕೆ ಬೈಕ್ ಮೇಲೆಯೇ ಜಿಗಿದಿದೆ. ಪರಿಣಾಮ, ಬೈಕ್ ಸವಾರ ಮಾರುತಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಮುಂಡಗೋಡಿನಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾಯ್ತು ಭಾರತ್ ಬಂದ್..! ಎಂದಿನಂತೆ ಸಹಜ, ಸಹಜ..!!
ಮುಂಡಗೋಡ: ಕೃಷಿ ಕಾಯ್ದೆ ತಿದ್ದುಪಡಿ ವಿಧೇಯಕ ವಿರೋಧಿಸಿ ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್, ಮುಂಡಗೋಡಿನಲ್ಲಿ ಸಾಂಕೇತಿಕ ಪ್ರತಿಭಟನೆಗಷ್ಟೇ ಸೀಮಿತವಾಗಿತ್ತು. ಬಿಟ್ಟರೆ, ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇತ್ತು. ಇಂದು ಬೆಳಗಿನಿಂದಲೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಓಪನ್ ಆಗಿತ್ತು. ವ್ಯಾಪಾರ ವಹಿವಾಟು ಎಂದಿನಂತೆ ಪ್ರಾರಂಭವಾಗಿತ್ತು. ಆಟೋ, ಬಸ್ ಗಳು ಎಂದಿನಂತೆ ರಸ್ತೆಗಿಳಿದಿದ್ದವು. ಆದ್ರೆ, ಇಲ್ಲಿನ ಕೆಲವು ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ...
ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಗ್ರಾಮಗಳಲ್ಲಿ ಪಂ.ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ..!
ಮುಂಡಗೋಡ- ತಾಲೂಕಿನ ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಸೇರಿದಂತೆ ತಾಲೂಕಿನಾದ್ಯಂತ ಇಂದು ಹಲವು ಗ್ರಾಮಗಳಲ್ಲಿ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105ನೇ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಕಾರ್ಯಕರ್ತರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಹುನಗುಂದ ಗ್ರಾಮದ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ, ಬೂತ್ ಗಳ ಅಧ್ಯಕ್ಷರುಗಳು, ಗ್ರಾಮಗಳ ಪ್ರಮುಖರು, ಬಿಜೆಪಿಯ ಹಿರಿಯರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.
ನಂದಿಕಟ್ಟಾ ಪಿಡಿಓ ಮೇಲೆ ಹಲ್ಲೆಗೆ ಖಂಡನೆ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಗ್ರಾಪಂ ನೌಕರರ ಒತ್ತಾಯ..!
ಮುಂಡಗೋಡ: ಪಂಚಾಯತ ಅಭಿವೃದ್ಧಿ ಅಧಿಕಾರಿ ವೆಂಕಪ್ಪ ಲಮಾಣಿಯವರ ಮೇಲೆ ದೈಹಿಕ ಹಲ್ಲೆ ನಡೆಸಿದವರ ಮೇಲೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಪಂಚಾಯತಿ ಪಿಡಿಓಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮನವಿ ಅರ್ಪಿಸಿದ್ರು. ನಂದಿಕಟ್ಟಾ ಗ್ರಾಮ ಪಂಚಾಯತ ಪಿಡಿಓ ವೆಂಕಪ್ಪ ಕೆ.ಲಮಾಣಿ ರವರ ಮೇಲೆ ದೈಹಿಕ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗೌಸುಸಾಬ ಮೌಲಾಲಿ ಯಳ್ಳುರ ಎಂಬುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಅಪರಾಧಿಗೆ ತಕ್ಕೆ ಶಿಕ್ಷೆಯಾಗಬೇಕು...
ಏಕಾಏಕಿ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದು ನರಳಾಡಿದ್ಲು ಯುವತಿ, ಭಯಬಿಟ್ಟು ಕಾಪಾಡಿದ್ರು ಮುಂಡಗೋಡಿಗರು..!
ನಿಜಕ್ಕೂ ಮುಂಡಗೋಡಿನ ಮಣ್ಣ ಕಣಕಣದಲ್ಲೇ ಮಾನವೀಯತೆ ಇದೆ ಅನ್ನೋದಕ್ಕೆ ಇವತ್ತಿನ ಈ ಘಟನೆಯೇ ಸಾಕ್ಷಿ. ಯುವತಿಯೊಬ್ಳು ರಸ್ತೆಯ ಮದ್ಯದಲ್ಲೇ ಪ್ರಜ್ಞಾಹೀನವಾಗಿ ಬಿದ್ದಾಗ ಸಾರ್ವಜನಿಕರೇ ಆ ಯುವತಿಯನ್ನ ಆಸ್ಪತ್ರೆಗೆ ಸೇರಿಸಿರೋ ಘಟನೆ ನಡೆದಿದೆ. ಏನಾಯ್ತು..? ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ಸಮೀಪ ಬಂಕಾಪುರ ರಸ್ತೆಯಲ್ಲಿ ಇಂದು ಮದ್ಯಾಹ್ನ ಓರ್ವ ಯುವತಿ ಏಕಾಏಕಿ ಪ್ರಜ್ಞೆ ತಪ್ಪಿ ರಸ್ತೆಯಲ್ಲೆ ಬಿದ್ದಿದ್ದಾಳೆ. ಆ ಹೊತ್ತಲ್ಲಿ ಆಕೆಯ ಜೊತೆಗಿದ್ದ ಓರ್ವ ಅಜ್ಜಿ ಆತಂಕದಲ್ಲಿ ಚೀರಾಟ ಶುರುವಿಟ್ಟಿದ್ದಾಳೆ. ಆ ಕ್ಷಣ ನಿಜಕ್ಕೂ ಈ ಘಟನೆ ಯಾರಿಗೂ...
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ...
ಮುಂಡಗೋಡಿನಲ್ಲಿ ಪೋಟೋ ಸ್ಟುಡಿಯೋ, ಮೊಬೈಲ್ ಅಂಗಡಿ ದೋಚಿದ್ದ ಕಳ್ಳ ಅಂದರ್..!
ಮುಂಡಗೋಡ: ಪಟ್ಟಣದಲ್ಲಿ ಸೆಪ್ಟೆಂಬರ್ 3 ರ ರಾತ್ರಿ ನಡೆದಿದ್ದ , ಪೋಟೊ ಸ್ಟುಡಿಯೋ ಹಾಗೂ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹಾಳಬಾವಿಕೇರಿಯ ಇಮಾಮಸಾಬ ದಾವಲಸಾಬ ಅಲ್ಲಿಬಾಯಿ (21) ಎಂಬುವವನೇ ಕಳ್ಳತನದ ಆರೋಪಿಯಾಗಿದ್ದಾನೆ. ಬಂಧಿತ ಅಂತರ್ ಜಿಲ್ಲಾ ಕಳ್ಳನಿಂದ ಪೇನಾಸಾನಿಕ್ ಎ.ಜಿ.ಎಸ್.ಸಿ-90 ವಿಡಿಯೋ ಕ್ಯಾಮರಾ, ನಿಕಾನ್ ಡಿ- 3500 ಡಿ.ಎಸ್.ಎಲ್.ಆರ್ ಫೋಟೋ ಕ್ಯಾಮರಾ, 20 ಮೊಬೈಲ್ ಗಳು ಹಾಗೂ ಮೊಬೈಲ್ ನ ಬಿಡಿ ಭಾಗಗಳು ಸೇರಿ, ಸುಮಾರು...
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ, ತಹಶೀಲ್ದಾರ ಕಚೇರಿಯೆದರು ಪ್ರತಿಭಟನೆ..!
ಮುಂಡಗೋಡ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಲು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪಂಚಮಸಾಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ರು. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಂಘದ ಕಾರ್ಯಕರ್ತರು, 2ಎ ಮೀಸಲಾತಿಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆಸಿದ್ದೆವು, ಆ ವೇಳೆ, ಸಿಎಂ ಆಗಿದ್ದ ಯಡಿಯೂರಪ್ಪ ಅವರು 2ಎ ಮೀಸಲಾತಿ ನೀಡಲು ಆರು ತಿಂಗಳು ಸಮಯ ಕೇಳಿದ್ದರು, ಆದ್ರೆ ಈಗ ಯಡಿಯೂರಪ್ಪರ ಸಮಯದ ಅವಧಿ ಮುಗಿದಿದೆ. ಈಗ ನೂತನವಾಗಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ, ಕೂಡಲೇ...
ಮುಂಡಗೋಡಿನಲ್ಲಿ ಸರಳ ವಿಶ್ವಕರ್ಮ ಜಯಂತಿ ಆಚರಣೆ..!
ಮುಂಡಗೋಡ: ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಉತ್ಸವ ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಹಶೀಲ್ದಾರ ಕಾರ್ಯಾಲಯದ ಅಧಿಕಾರಿಗಳು ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳ ವಿಶ್ವಕರ್ಮ ಸಮಾಜದ ಮುಖಂಡರು ಸರಳವಾಗಿ ಆಚರಿಸಿದ್ರು. ಈ ವೇಳೆ ವಿಶ್ವಕರ್ಮ ಸಮಾಜದ ಆರ್.ವಿ. ಬಡಿಗೇರ್, ಮೌನೇಶ್ ಬಡಿಗೇರ್, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸೇರಿ ವಿಶ್ವಕರ್ಮ ಸಮಾಜದ ಹಲವು ಮುಖಂಡರು ಭಾಗವಹಿಸಿದ್ದರು.
ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!
ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.









