ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದಲ್ಲಿ ಗಾಡಾ ಓಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರೋ ಹೋರಿಗೆ ಹುಟ್ಟು ಹಬ್ಬ ಆಚರಿಸಿದ್ರು. ಗ್ರಾಮಸ್ಥರೇಲ್ಲರೂ ಸೇರಿ ರಾಜಾ ಎಂಬ ಹೆಸರಿನ ಹೋರಿಗೆ ವಿಶೇಷ ಅಲಂಕಾರ ಮಾಡಿ, ತಳೀರು ತೋರಣ ಕಟ್ಟಿ, ಕೇಕ್ ಕತ್ತರಿಸಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡಿದ್ರು. ಅಲ್ಲದೇ ಗ್ರಾಮಸ್ಥರು ತಮ್ಮನೆಚ್ಚಿನ ಹೋರಿಗೆ ವಿಶೇಷ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಮಹಿಳೆಯರು ಆರತಿ ಬೆಳಗಿದರು, ಜಯಘೋಷಗಳೊಂದಿಗೆ ಕುಣಿದು ಕುಪ್ಪಳಿಸಿದ್ರು.
Top Stories
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
Category: ಮುಂಡಗೋಡ ಸುದ್ದಿ
ತೈಲ ಬೆಲೆ ಇಳಿಸುವಂತೆ ಮಹಿಳಾ ಕಾಂಗ್ರೆಸ್ ಪ್ರತಿಭಟನೆ, ಮನವಿ ಸಲ್ಲಿಕೆ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಇಂದು, ಗ್ಯಾಸ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವಂತೆ ಮುಂಡಗೋಡ ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಮುಖಾಂತರ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಮಣ್ಣಪ್ಪ ಗೌಡ್ರು, ಮಾಜಿ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಶಾರದಾ ಬಾಯಿ ರಾಠೋಡ್, ಧರ್ಮರಾಜ ನಡಗೇರಿ, ಎಂ. ಎನ್. ದುಂಡಸಿ, ಅಲಿ ಹಸನ್ ಬೆಂಡಿಗೇರಿ, ಮಲ್ಲಿಕಾರ್ಜುನ್ ಗೌಳಿ, ಜೈನು ಬೆಂಡಿಗೇರಿ, ಅಲ್ಲಾಉದ್ದೀನ್ ಕಮಡೊಳ್ಳಿ,ಪ್ರಶಾಂತ್...
ನಂದಿಕಟ್ಟಾ ಪ್ಲಾಟ್ ನಲ್ಲಿ ಕುಡಿಯಲು ನೀರಿಲ್ಲ, ಗದ್ದೆಗಳಿಗೆ ಅಲೆದಾಡಿ ನೀರು ತರದೇ ಗತಿಯಿಲ್ಲ; ಎಲ್ಲಿದೆ ಆಡಳಿತ..?
ನಂದಿಕಟ್ಟಾ ಗ್ರಾಮದ ನವನಗರ ಪ್ಲಾಟ್ ನ ಜನರು ನಿತ್ಯವೂ ಪರದಾಡುತ್ತಿದ್ದಾರೆ. ಯಾಕಂದ್ರೆ, ಇವ್ರಿಗೆ ಕುಡಿಯಲು ನೀರೇ ಸಿಗುತ್ತಿಲ್ಲ. ನಿತ್ಯವೂ ಕುಡಿಯುವ ನೀರಿಗಾಗಿ ಮಕ್ಕಳು, ಮರಿಗಳೊಂದಿಗೆ ಕೊಡಹೊತ್ತು ಗದ್ದೆಗಳಲ್ಲಿ ತಿರುಗಾಡುವ ಪರಿಸ್ಥಿತಿ ಇಲ್ಲಿನ ಜನ್ರದ್ದು.. ಹೀಗಾಗಿ, ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸ್ತಿದಾರೆ ನಿವಾಸಿಗಳು. ಏನಿದು ಸಮಸ್ಯೆ..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ವಾರ್ಡ ನಂಬರ್ 2 ರಲ್ಲಿ ಬರೋ ನವನಗರ ಪ್ಲಾಟ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೀಗಾಗಿ, ಪ್ರತಿದಿನ ಇಲ್ಲಿನ ಜನ ಬಹುತೇಕ...
ಸಚಿವ ಹೆಬ್ಬಾರ್ ಅಂದ್ರೆ ರೈತರ ಪಾಲಿನ ಭಗೀರಥ: ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ
ಮುಂಡಗೋಡ; ಸಚಿವ ಶಿವರಾಮ್ ಹೆಬ್ಬಾರ್ ಕ್ಷೇತ್ರದ ರೈತರ ಮನಸಲ್ಲಿ ಭಗೀರಥರ ಸ್ಥಾನ ಪಡೆದಿದ್ದಾರೆ ಅಂತಾ ಹಿರಿಯ ಪತ್ರಕರ್ತ, ಸಂಪಾದಕ ಹರಿಪ್ರಕಾಶ್ ಕೋಣೆಮನೆ ಸಚಿವ ಹೆಬ್ಬಾರ್ ರವರನ್ನು ಹಾಡಿಹೊಗಳಿದ್ರು. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್ (ಸೆಲ್ಕೋ) ಸಂಸ್ಥೆಗಳು ನೀಡಿದ ಡಯಾಲಿಸಿಸ್ ಯಂತ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಸಚಿವರ ಪ್ರಯತ್ನದಿಂದ ಮೊದಲ ಬಾರಿಗೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಇನ್ನು, ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮ ಸಂಸ್ಥೆಯ ಮೂಲಕವಾಗಿ 35 ಲಕ್ಷ...
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...
ಇಂದೂರು ಸಂತೆಗೆ ಬರೋ ವ್ಯಾಪಾರಿಗಳಿಗೆ ಇದೇಂಥಾ ಕಿರಿಕಿರಿ..? ಪಿಡಿಓ ಸಾಹೇಬ್ರೆ ಎಲ್ಲಿದ್ದೀರಿ..?
ಮುಂಡಗೋಡ:ತಾಲೂಕಿನ ಇಂದೂರು ಸಂತೆಯಲ್ಲಿ ವ್ಯಾಪಾರಿಗಳಿಗೆ ಇನ್ನಿಲ್ಲದ ಕಿರಿಕಿರಿ ಆಗ್ತಿದೆ. ಕರ ವಸೂಲಿ ಹೆಸ್ರಲ್ಲಿ ಇಲ್ಲಿ ದಂಧೆ ಮಾಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಟೆಂಡರ್ ಅವದಿ ಮುಗಿದು ತಿಂಗಳುಗಳೇ ಕಳೆದ್ರೂ ಇಲ್ಲಿ ವ್ಯಾಪಾರಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗ್ತಿದೆ. ಆದ್ರೆ ಇದನ್ನೇಲ್ಲ ನಿಭಾಯಿಸಬೇಕಿದ್ದ ಪಿಡಿಓ ಮಾತ್ರ ಅದೇನು ಮಾಡ್ತಿದಾರೋ ಯಾರಿಗೂ ಗೊತ್ತಿಲ್ಲ. ಬಾಯಿಗೆ ಬಂದದ್ದೇ ರೇಟು..! ಇಂದೂರು ಸಂತೆಯಲ್ಲಿ ಸುತ್ತ ಮುತ್ತಲ ತಾಲೂಕು ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಿಗಳು ಬರ್ತಾರೆ. ಅಲ್ಲದೇ ರೈತರು ತಮ್ಮ ಗದ್ದೆಗಳಲ್ಲಿ ಬೆಳೆದ...
ಮುಂಡಗೋಡ ಪಿಐ ಪ್ರಭುಗೌಡರಿಗೆ ಕುಂದರ್ಗಿ ಯುವಕರಿಂದ ಸನ್ಮಾನ..!
ಮುಂಡಗೋಡ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಐ ಆಗಿ ಸೇವೆ ಸಲ್ಲಿಸಿ ಇದೀಗ ಡಿವೈಎಸ್ಪಿಯಾಗಿ ಬಡ್ತಿ ಹೊಂದಿ, ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆ ಆಗ್ತಿರೊ ಪ್ರಭುಗೌಡ ಕಿರೆದಳ್ಳಿಯವರಿಗೆ ಕುಂದರ್ಗಿಯ ಯುವಕರು ಸನ್ಮಾನಿಸಿದ್ರು. ಕುಂದರ್ಗಿ ಗ್ರಾಮದ ಓಂಕಾರ ಯುವಕ ಮಂಡಳದ ಯುವಕರು ಹಾಗೂ ಗ್ರಾಮಸ್ಥರು ಪ್ರಭುಗೌಡರವರಿಗೆ ಶಾಲು ಹೊದಿಸಿ, ಸಿಹಿ ತಿನ್ನಿಸಿ ಶುಭ ಕೋರಿದರು. ಈ ವೇಳೆ ಕುಂದರ್ಗಿ ಗ್ರಾಮದ ಹಲವರು ಭಾಗಿಯಾಗಿದ್ರು.
ಮುಂಡಗೋಡಿನಲ್ಲಿ ಬಿಡಾಡಿ ದನಗಳದ್ದೇ ಕಾರುಬಾರು; ಪಪಂ ಬೇಜವಾಬ್ದಾರಿ ಕೇಳೋರ್ಯಾರು..?
ಮುಂಡಗೋಡ: ಪಟ್ಟಣದಲ್ಲಿ ಈಗ ಎಲ್ಲೆಂದರಲ್ಲಿ ಬಿಡಾಡಿ ದನಗಳ ಕಾರುಬಾರು ಜೋರಾಗಿದೆ. ಪಟ್ಟಣ ಪಂಚಾಯತಿಯವರ ನಿರ್ಲಕ್ಷದಿಂದ ವಾಹನ ಸವಾರರು ಪರದಾಡುವ ಸ್ಥಿತಿ ಇದೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಹಾಗೂ ಪಟ್ಟಣದ ಹಲವು ಮುಖ್ಯ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳು ರಸ್ತೆಯಲ್ಲೇ ಗುಂಪು ಗುಂಪಾಗಿ ಠಿಕಾಣಿ ಹೂಡುತ್ತವೆ. ರಸ್ತೆಯ ನಡುವೆಯೇ ಹಿಂಡು ಹಿಂಡಾಗಿ ಮಲಗಿರುತ್ತವೆ. ಹೀಗಾಗಿ, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಇನ್ನಿಲ್ಲದ ತೊಂದರೆ ಅನುಭವಿಸುವಂತಾಗಿದೆ. ಕೆಲವು ಸಾರಿ ಅದೇಷ್ಟೋ ಜನ ಸವಾರರು ಬಿಡಾಡಿ ದನಗಳ ಕಾಟದಿಂದ ಬಿದ್ದು...
ಚೀಪ್ ರೇಟ್ ಚಿನ್ನದ ಗ್ಯಾಂಗ್, ಬಲೆಗೆ ಬಿದ್ದಿದ್ದೇ ರೋಚಕ..! “ಧರ್ಮೆ”ಯ ಅಂಗಳದ ದರೋಡೆ ಕೇಸ್ ನ ಇಂಚಿಂಚೂ ಕತೆಯಿದು..!
ಚೀಪ್ ರೇಟ್ ಚಿನ್ನದ ಹೆಸ್ರಲ್ಲಿ ದರೋಡೆಗಿಳಿದು ಲಕ್ಷ ಲಕ್ಷ ವಂಚಿಸುತ್ತಿದ್ದ ಖತರ್ನಾಕ ಗ್ಯಾಂಗ್ ನ ಹೆಡೆಮುರಿ ಕಟ್ಟುವಲ್ಲಿ ಮುಂಡಗೋಡ ಪೊಲೀಸ್ರು ಬಹುತೇಕ ಯಶಸ್ವಿಯಾಗಿದ್ದಾರೆ. ಪರಿಣಾಮ, ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆದು ಹೋಗಿದ್ದ ರಾಬರಿ ಕೇಸ್ ಒಂದು ಹಂತದಲ್ಲಿ ತಾರ್ಕಿಕ ಅಂತ್ಯದತ್ತ ಬಂದು ನಿಂತಿದೆ. ಕೇಸ್ ನಲ್ಲಿ ಕಂತೆಗಟ್ಟಲೇ ಹಣವನ್ನು ಎಗರಿಸಿ ಪರಾರಿಯಾಗಿದ್ದ ಖದೀಮರನ್ನು ನಮ್ಮ ಹೆಮ್ಮೆಯ ಮುಂಡಗೋಡ ಪೊಲೀಸ್ರು ಎಳೆದು ತಂದಿದ್ದಾರೆ. ಹೀಗಾಗಿ, ಮುಂಡಗೋಡ ಪೋಲಿಸರಿಗೊಂದು ಬಿಗ್ ಸೆಲ್ಯೂಟ್..! 9-ಮೈನೆಸ್-6…! ಅಂದಹಾಗೆ, ಸಧ್ಯ ಪ್ರಕರಣದಲ್ಲಿ ಬರೋಬ್ಬರಿ...
ಹುನಗುಂದದಲ್ಲಿ ಮನೆಯಲ್ಲೇ ಯುವಕ ನೇಣಿಗೆ ಶರಣು..!
ಮುಂಡಗೋಡ: ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ನಡೆದಿದೆ. ಸಂಜೀವ್ ಫಕ್ಕೀರಪ್ಪ ಹೊನ್ನಳ್ಳಿ(30) ನೇಣಿಗೆ ಶರಣಾದ ಯುವಕನಾಗಿದ್ದಾನೆ. ರಾತ್ರಿ 8 ಗಂಟೆಯ ಹೊತ್ತಿಗೆ ಮನೆಯಲ್ಲೇ ಎಲ್ಲರೊಂದಿಗೆ ಇದ್ದ ಮೃತ ಯುವಕ, ಮನೆಯವರೇಲ್ಲರೂ ಹೊರಗಡೆ ಕುಳಿತಿದ್ದಾಗ, ಒಳಗೆ ಹೋಗಿ ಮನೆಯ ಜಂತಿಗೆ ನೇಣು ಬಿಗಿದುಕೊಂಡಿದ್ದಾನೆ. ಪೋಷಕರು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಅಷ್ಟೊತ್ತಿಗಾಗಲೇ ಯುವಕ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ...









