ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ನಾಗರಿಕರಿಗೆ ರಕ್ಷಾಬಂಧನ..!
ಮುಂಡಗೋಡ: ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ನಿಮಿತ್ತ ಹಿರಿಯ ನಾಗರಿಕರಿಗೆ ರಾಖಿ ಕಟ್ಟುವ ಮೂಲಕ ಆಚರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ, ತಾಲೂಕಾಧ್ಯಕ್ಷೆ ಲೈಸಾ ಥಾಮಸ್, ಪ್ರದಾನ ಕಾರ್ಯದರ್ಶಿ ಅಂಜು ಪಾಯಣ್ಣವರ, ಉಪಾಧ್ಯಕ್ಷೆ ಸರಸ್ವತಿ ಕೊಂಡ್ಲಿ, ಮತ್ತು ಸವಿತಾ ಸಾನು ಸೇರಿ ಹಲವರು ಹಾಜರಿದ್ದರು.
ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!
ಮುಂಡಗೋಡ: ಪಟ್ಟಣದಲ್ಲಿ ಕೊರವ ಸಮಾಜದ ಶಿವಶರಣ ಶ್ರೀ ನೂಲಿ ಚಂದಯ್ಯ ನವರ ಜಯಂತೋತ್ಸವ ಕಾರ್ಯಕ್ರಮವನ್ನು ಬಂಕಾಪುರ ರಸ್ತೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾಜದ ಗುರುಹಿರಿಯರ ಹಾಗೂ ಸಮಾಜದ ಬಂಧು ಮಿತ್ರ ಸಹೋದರರ ಆಶ್ರಯದಲ್ಲಿ ಶಿವ ಶರಣರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಲಾಯಿತು. ಕಾಯಕಯೋಗಿ ನೂಲಿಯ ಚಂದಯ್ಯನವರು ಜನಿಸಿದ ದಿನವಾದ ಇಂದು ರಕ್ಷಾ ಬಂಧನದ ಪ್ರಯುಕ್ತವಾಗಿ ಬಂಧುಗಳಲ್ಲಿ ಶ್ರೀರಕ್ಷೆ ನಮ್ಮೆಲ್ಲರಿಗೂ ರಕ್ಷಣೆ ಆಗಲೆಂದು ರಕ್ಷಾಬಂಧನವನ್ನು ಮಾಡಿಸಿ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವೇಳೆ ತಾಲೂಕಿನ ಸಮಾಜದ ಎಲ್ಲ...
ನಾಗರಹಾವು ಸೆರೆಹಿಡಿದು ರಕ್ಷಿಸಿದ ಅರಣ್ಯ ಸಿಬ್ಬಂದಿ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ಹತ್ತಿರ ವಿರುವ ರಾಮಣ್ಣ ಕುನ್ನೂರ ಅವರ ಹಿತ್ತಲಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆತಂಕ ಹುಟ್ಟಿಸಿತ್ತು. ಹೀಗಾಗಿ, ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಕರೆ ಮಾಡಿದ್ರು. ನಂತರ ಬಂದ ಅರಣ್ಯ ಸಿಬ್ಬಂದಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದ್ರು. ನಂತರ ಸೆರೆಹಿಡಿದ ಹಾವನ್ನು ಸುರಕ್ಷಿತವಾಗಿ ಕಾಡಿನಲ್ಲಿ ಬಿಡಲಾಯಿತು.. ಹೀಗಾಗಿ, ಅಲ್ಲಿನ ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಗ್ರಾಮದ ಗ್ರಾಮದೇವಿ ದ್ಯಾಮವ್ವ ತಾಯಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರಿಸಲಾಯಿತು. 108 ದಿನದ ಉಡಿತುಂಬುವ ಕಾರ್ಯಕ್ರಮವನ್ನು ಗ್ರಾಮಸ್ಥರು ಶೃದ್ದಾಪೂರ್ವಕವಾಗಿ ನೆರವೇರಿಸಿದ್ರು. ಈ ವೇಳೆ ದ್ಯಾಮವ್ವ ತಾಯಿಗೆ ಸಾಂಪ್ರದಾಯಿಕವಾಗಿ ಉಡಿ ತುಂಬಲಾಯಿತು. ವಿಶೇಷವಾಗಿ ಪೂಜೆ ನೆರವೇರಿಸಿ ಪ್ರಸಾದ ಹಂಚಲಾಯಿತು. ಈ ವೇಳೆ ಗ್ರಾಮದ ಮುಖಂಡರು, ಮುತ್ತೈದೆಯರು ಸೇರಿದಂತೆ ಹಲವರು ಭಾಗಿಯಾಗಿದ್ರು.
ಸಿದ್ದಪ್ಪ ಹಡಪದ್ ಗೆ ಟಿಕೆಟ್ ನೀಡುವಂತೆ ಒತ್ತಾಯ: ಸಚಿವ ಹೆಬ್ಬಾರ್ ರನ್ನು ಭೇಟಿ ಮಾಡಿದ ಹುನಗುಂದ ಮುಖಂಡರು..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮುಖಂಡರು ಹಾಗೂ ಗ್ರಾಮದ ನೂರಾರು ಜನ ಬಿಜೆಪಿ ಕಾರ್ಯಕರ್ತರು ಇಂದು ಯಲ್ಲಾಪುರಕ್ಕೆ ತೆರಳಿ, ಸಚಿವ ಶಿವರಾಮ್ ಹೆಬ್ಬಾರ್ ರವರನ್ನು ಭೇಟಿಯಾಗಿದ್ರು. ಮುಂಬರುವ ಜಿಲ್ಲಾಪಂಚಾಯತಿ ಚುನಾವಣೆಗೆ ಇಂದೂರು ಜಿ ಪಂ ಕ್ಷೇತ್ರದಿಂದ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ್ ರವರಿಗೇ ಅಭ್ಯರ್ಥಿಯನ್ನಾಗಿಸಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಿದ್ದಪ್ಪ ಹಡಪದ್ ರವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಕಳೆದ ಎರಡು ಬಾರಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತಿದ್ದಾರೆ. ಇಂದೂರು ಕ್ಷೇತ್ರದಲ್ಲಿ ಸಿದ್ದಪ್ಪ ಹಡಪದ್...
ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪೋಟಕ ಬದಲಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆಗೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಕಳಾಹೀನವಾಗಿರೋ “ಕೈ” ಪಾಳಯಕ್ಕೆ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿಗಳೇ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಬಾತ್ಮಿ ಕ್ಷೇತ್ರದ ಬಿಜೆಪಿ ಪಾಲಿಗೆ ಖಂಡಿತ ಪೂರಕವಾಗಿಲ್ಲ. ಬದಲಾಗಿ ಇಲ್ಲಿನ ಬಿಜೆಪಿಗೆ “ಅದೇನೋ ಕಾದಿದೆ” ಅನ್ನೋ ಸ್ಪಷ್ಟ ಸೂಚನೆಗಳು ಕಾಣಸಿಗ್ತಿವೆ. ಆಂತರಿಕ ಕುದಿ… ನಿಜ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಇಡೀ ಕ್ಷೇತ್ರದಲ್ಲಿ ಆಂತರಿಕ ಬೆಗುದಿ ಅನ್ನೋದು ಬಹುಶಃ ಯಾರೂ...
ಮುಂಡಗೋಡ ತೃಪ್ತಿ ವೈನ್ ಶಾಪ್ ನಲ್ಲಿ ಕಳ್ಳರ ಕೈಚಳಕ, ಪೊಲೀಸರು ದೌಡು..!
ಮುಂಡಗೋಡ: ಪಟ್ಟಣದ ತೃಪ್ತಿ ವೈನ್ ಶಾಪ್ ನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ತಡರಾತ್ರಿ ಅಂಗಡಿಯ ಮೇಲ್ಚಾವಣಿಯ ಹೆಂಚು ತೆರೆದು ಒಳನುಗ್ಗಿ ಕಳ್ಳತನ ಮಾಡಿರೋ ಖದೀಮರು ವೈನ್ ಶಾಪ್ ನಲ್ಲಿದ್ದ ಹಣ ಸೇರಿದಂತೆ ಮದ್ಯದ ಬಾಟಲ್ ಗಳನ್ನೂ ಕದ್ದೋಯ್ದಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕಳ್ಳತನವಾದ ಹಣವೆಷ್ಟು..? ಯಾವ್ಯಾವ ವಸ್ತುಗಳನ್ನು ಎಗರಿಸಲಾಗಿದೆ ಅನ್ನೋ ಬಗ್ಗೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನೇನು ಕೆಲವೇ ಹೊತ್ತಲ್ಲಿ ಕಳ್ಳತನದ ಅಸಲೀ ಮಾಹಿತಿಗಳು ಹೊರಬರಲಿದೆ.
ಬಾಚಣಕಿ ತಾಪಂ ಕ್ಷೇತ್ರಕ್ಕೆ ಮೊನ್ಸಿ ಥಾಮಸ್ ಗೆ “ಕೈ” ಬಲ..? ತೆರೆಮರೆಯಲ್ಲೇ ನಡೀತಿದೆ ಕಸರತ್ತು..!
ಮುಂಡಗೋಡ: ಜಿಲ್ಲಾ ಪಂಚಾಯತ ತಾಲೂಕಾ ಪಂಚಾಯತ ಚುನಾವಣೆ ಕಾವು ಮತ್ತೆ ಏರ ತೊಡಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತುದಿಗಾಲಲ್ಲಿ ನಿಂತಿದೆ ಅನ್ನೋ ಸಂಗತಿ ಹೊರಬೀಳುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಮತ್ತೆ ಒಳಗೊಳಗೆ ಚುನಾವಣೆಯ ಪೀಕಲಾಟಗಳು ಶುರುವಾಗಿವೆ. ಅದರ ಭಾಗವಾಗಿ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಬಾಚಣಕಿ ತಾಪಂ ಕ್ಷೇತ್ರದಲ್ಲಿ ಟಿಕೆಟ್ ಹಂಬಲಗಳು ಎರಡೂ ಕ್ಷೇತ್ರದಲ್ಲಿ ಚಾಲ್ತಿ ಪಡೆದುಕೊಂಡಿವೆ. ಕಾಂಗ್ರೆಸ್ ಗೆ ಮೊನ್ಸಿ..! ಬಾಚಣಕಿ ತಾಪಂ ಕ್ಷೇತ್ರ ಬಾಚಣಕಿ, ನ್ಯಾಸರ್ಗಿ, ಅರಷಿಣಗೇರಿ, ಮಜ್ಜಿಗೇರಿ...
ಹುಲಿ ವೇಷದ ಕಂದಾಚಾರದಲ್ಲಿ ಪುಟ್ಟ ಕಂದಮ್ಮಗಳ ಶೋಷಣೆ ಎಷ್ಟು ಸರಿ..? ಅಧಿಕಾರಿಗಳೇ ಒಂದಿಷ್ಟು ಗಮನಹರಿಸಿ..!
ಮುಂಡಗೋಡ: “ಮೊಹರಂ” ಇದು ಬಹುತೇಕ ಹಿಂದು ಮುಸ್ಲಿಂ ಭಾವೈಕ್ಯತೆಯಿಂದ ಆಚರಿಸಲ್ಪಡೋ ಹಬ್ಬ. ಈ ಹಬ್ಬ ಬಂತು ಅಂದ್ರೆ ಸಾಕು ತಾಲೂಕಿನಲ್ಲಿ ಕೆಲವು ಮೂಢ ನಂಬಿಕೆಗಳೂ ಕೂಡ ಜೊತೆ ಜೊತೆಯಾಗೇ ಜಾರಿಯಾಗುತ್ತಿವೆ. ಪ್ರತೀ ವರ್ಷವೂ ಈ ಹಬ್ಬದಲ್ಲಿ ಅದೊಂದು ಪದ್ದತಿ ನಿಜಕ್ಕೂ ಪ್ರಜ್ಞಾವಂತರಿಗೆ ಒಂದಿಷ್ಟು ಆತಂಕ ಮೂಡಿಸಿದೆ. ಹುಲಿವೇಷ..! ಅಸಲು, ಮೊಹರಂ ಬಂತು ಅಂದ್ರೆ ತಾಲೂಕಿನಲ್ಲಿ ಅದೊಂದು ಪದ್ದತಿ ಇವತ್ತಿಗೂ ಜಾರಿಯಲ್ಲಿದೆ. ಪಂಜಾಗಳಿಗೆ ಹರಕೆ ಹೊರುವ ಭಕ್ತರು ಹರಕೆ ಈಡೇರಿದ ಮೇಲೆ ಹುಲಿವೇಷ ಹಾಕುತ್ತಾರೆ. ಮೈಗೇಲ್ಲ ಬಣ್ಣದಿಂದ ಹುಲಿಯ...









