ಮುಂಡಗೋಡ; ತಾಲೂಕಿನ ವಡಗಟ್ಟಾ ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದಲ್ಲಿ ನಡೆದಾಡಲೂ ಆಗದ ಸ್ಥಿತಿಯಲ್ಲಿದೆ, PWD ಇಲಾಖೆಯ ಅಧಿಕಾರಿಗಳು ನಿರ್ಲಕ್ಷ ವಹಿಸ್ತಿದ್ದಾರೆ ಅನ್ನೋ ಸುದ್ದಿ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಕಟಿಸುತ್ತಿದ್ದಂತೆ PWD ಇಂಜಿನೀಯರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಬೆಳಿಗ್ಗೆ ರಸ್ತೆಯ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯ ಕುರಿತು ವಿಸ್ತೃತ ವರದಿ ಪ್ರಕಟವಾಗಿತ್ತು. ವರದಿ ಪ್ರಸಾರವಾದ ಅರ್ಧ ಗಂಟೆಯಲ್ಲೇ ಅಧಿಕಾರಿಗಳು ಬೇಟಿ ನೀಡಿ, ರಸ್ತೆಯ ಅವ್ಯವಸ್ಥೆ ಸರಿಪಡಿಸಲು ಮುಂದಾಗಿದ್ದಾರೆ. ಇನ್ನು PWD ಇಂಜಿನೀಯರ್...
Top Stories
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
Category: ಮುಂಡಗೋಡ ಸುದ್ದಿ
ಮುಂಡಗೋಡ PWD “ಪ್ಯಾಚ್ ಪೇಮೆಂಟ್” ನಲ್ಲಿ ಹಡಾಲೆದ್ದು ಹೋದ ರಸ್ತೆಗಳೆಷ್ಟು..? ಇಂಜಿನೀಯರ್ ಎಲ್ಲಿದ್ದೀಯಪ್ಪಾ..?
ಮುಂಡಗೋಡ; ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಅನ್ನೋದು ಇದೆಯಾ ಅಥವಾ ಬೀಗ ಜಡಕೊಂಡು ಎಲ್ಲಾದ್ರೂ ಹಾಳಾಗಿ ಹೋಗಿದೆಯಾ..? ಇಂತಹದ್ದೊಂದು ಪ್ರಶ್ನೆ ಮುಂಡಗೋಡ ತಾಲೂಕಿನ ಮಂದಿ ಕೇಳ್ತಿದಾರೆ. ಯಾಕಂದ್ರೆ ತಾಲೂಕಿನ ಬಹುತೇಕ ರಸ್ತೆಗಳ ಸ್ಥಿತಿ ಹಡಾಲೆದ್ದು ಹೋಗಿದೆ. ಆದ್ರೆ, PWD ಅನ್ನೋ ಇಲಾಖೆಯ ಅಧಿಕಾರಿಗಳು ಮಾತ್ರ ಅದೇಲ್ಲೋ ಹೋಗಿ ಗಡದ್ದಾಗಿ ನಿದ್ದೆ ಮಾಡ್ತಿದಾರೆ. ವಡಗಟ್ಟಾ- ಅಗಡಿ ರಸ್ತೆ ಕತೆ..! ನಿಜ, ಈ ಲೋಕೋಪಯೋಗಿ ಇಲಾಖೆಯ ಅಡಿಯಲ್ಲೇ ಬರುವ ವಡಗಟ್ಟಾ-ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದ ಹತ್ತಿರ ಹದಗೆಟ್ಟು ಹಳ್ಳ ಹಿಡಿದಿದೆ....
ಮೊಹರಂ ಹುಲಿವೇಷಧಾರಿ ಹಾಗೂ ತಮಟೆ ಕಲಾವಿದನ ಜುಗಲ್ ಬಂದಿ..!
ಮುಂಡಗೋಡ: ತಾಲೂಕಿನಲ್ಲಿ ಸದ್ಯ ಮೊಹರಂ ಆಚರಣೆ ಭಕ್ತಿ ಭಾವದಿಂದ ನೆರವೇರುತ್ತಿದೆ. ತಾಲೂಕಿನಾಧ್ಯಂತ ಪಂಜಾಗಳನ್ನು ಪ್ರತಿಷ್ಟಾಪಿಸಲಾಗಿದೆ. ಹೀಗಾಗಿ, ಹುಲಿ ವೇಷಧಾರಿಗಳ ಕುಣಿತವೂ ಎಲ್ಲೆಲ್ಲೂ ಕಂಡು ಬರುತ್ತಿದೆ. ಅದ್ರಂತೆ, ಇಂದು ಮುಂಡಗೋಡ ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತ ಹುಲಿವೇಷಧಾರಿ ಬಂದಿದ್ದರು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಬಂದಿದ್ದ ಪ್ರಸಿದ್ಧ ತಮಟೆ ಕಲಾವಿದ ಪ್ರತಾಪ್ ಅವರು ತಮಟೆ ಬಾರಿಸಿದ್ರು. ತಮಟೆ ಶಬ್ದಕ್ಕೆ ಹುಲಿ ವೇಷಧಾರಿ ಸಕತ್ ಸ್ಟೆಪ್ ಹಾಕಿದ್ರು. ಮುಂಡಗೋಡಿನ ಶಿವಾಜಿ ಸರ್ಕಲ್ ಬಳಿ ಹುಲಿಯ ನೃತ್ಯಕ್ಕೆ ಜನರು ಫಿದಾ ಆಗಿ ಚಪ್ಪಾಳೆ...
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವಂತೆ ಮನವಿ..!
ಮುಂಡಗೋಡ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪಿಸುವಂತೆ ಇಂದು ಮುಂಡಗೋಡಿನ ರಾಯಣ್ಣ ಅಭಿಮಾನಿ ಬಳಗದಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಳೆದ ಹಲವು ವರ್ಷಗಳಿಂದ ಪಟ್ಟಣದ ಯಲ್ಲಾಪುರ-ಬಂಕಾಪುರ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆ ಅಂತಾ ನಾಮಕರಣ ಮಾಡಲಾಗಿದೆ. ಆ ಕುರಿತು ಪಟ್ಟಣ ಪಂಚಾಯತಿಯಲ್ಲಿ ದಾಖಲಾಗಿದೆ. ಆದ್ರೆ ತಾಲೂಕಿನ ಸುಮಾರು 50 ಕಿಮಿ ವ್ಯಾಪ್ತಿಯಲ್ಲಿ ಎಲ್ಲಿಯೂ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆಯಾಗಿಲ್ಲ. ಹೀಗಾಗಿ, ಪಟ್ಟಣದ ಕಂಬಾರಗಟ್ಟಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ಮುಂದಿನ ಪೀಳಿಗೆಗೆ ರಾಯಣ್ಣನವರ...
ಇದು ಮುಂಡಗೋಡ ಪುಟಾಣಿಗಳ ಪವರ್ ಫುಲ್ ಸ್ಟೆಪ್..!
ಮುಂಡಗೋಡ; ಪಟ್ಟಣದಲ್ಲಿ ರವಿವಾರ 75 ನೇ ಸ್ವಾತಂತ್ರ ದಿನಾಚರಣೆ ಸಂಭ್ರಮ ಜೋರಾಗಿತ್ತು.. ಇಲ್ಲಿನ ಪ್ರತೀ ಗಲ್ಲಿಗಳಲ್ಲೂ ಭಾರತ ಮಾತೆಯ ತ್ರಿವರ್ಣಧ್ವಜ ರಾರಾಜಿಸುತ್ತಿತ್ತು.. ಪಟ್ಟಣದ ಸಂಘಸಂಸ್ಥೆಗಳು ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ರು..ಇನ್ನು ಸ್ವಾತಂತ್ರ ದಿನಾಚರಣೆ ನಿಮಿತ್ತ ಮುಂಡಗೋಡಿನ ಪುಟ್ಟ ಪುಟಾಣಿ ಮಕ್ಕಳು ದೇಶಭಕ್ತಿಗೀತೆಗೆ ಹೆಜ್ಜೆ ಹಾಕಿದ್ದಾರೆ.. ಸ್ವಾತಂತ್ರ ಸಂಭ್ರಮದ ಕ್ಷಣಗಳನ್ನು ವಿನೂತನ ಡ್ಯಾನ್ಸ್ ಮಾಡುವ ಮೂಲಕ ದೇಶಭಕ್ತಿಯ ಕಂಪು ಹರಿಸಿದ್ದಾರೆ.. ಹಾಗಾದ್ರೆ ಆ ಸಕತ್ ಸ್ಟೆಪ್ ಹೇಗಿದೆ ಗೊತ್ತಾ.. ನೀವೂ ನೋಡಿ..
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.
ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!
ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು. ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.
ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾನ್..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಖಾಲಿ ಟ್ರಾಕ್ಟರ್ ಇಂಜಿನ್ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಯಲ್ಲಪ್ಪ ಫಕ್ಕೀರಪ್ಪ ತುಳಜಾನವರ್ ಎಂಬುವ ಯುವಕ, ಕೇವಲ ಒಂದು ನಿಮಿಷದಲ್ಲಿ100 ಅಡಿ ದೂರ ಟ್ರಾಕ್ಟರ್ ಎಳೆದು ಸಾಹಸ ತೋರಿಸಿದ್ರು. ಹೀಗಾಗಿ, ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದ್ರು. ಜಯಶಾಲಿ ಯುವಕನಿಗೆ ಕೊಪ್ಪ ಗ್ರಾಮಸ್ಥರು ಸನ್ಮಾನಿಸಿ ಬಹುಮಾನ ನೀಡಿದ್ರು.
ಇಬ್ಬರು ಅಂತರ್ ಜಿಲ್ಲಾ ಕಳ್ಳರ ಹೆಡೆಮುರಿ ಕಟ್ಟಿದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಅವ್ರು ದೇವಸ್ಥಾನ, ಒಂಟಿ ಮನೆಗಳನ್ನು ಗುಡಿಸಿ ಗುಂಡಾಂತರ ಮಾಡೋ ಮಹಾನ್ ಖದೀಮರು, ಅವಕಾಶ ಸಿಕ್ರೆ ರಾಬರಿ ಮಾಡಿ ಬಾಚಿಕೊಂಡು ಹೋಗೋ ಖತರ್ನಾಕ ಕಿರಾತಕರು, ಆದ್ರೆ ಈಗ ಮುಂಡಗೋಡ ಪೊಲೀಸರ ಕೈಗೆ ತಗಲಾಕ್ಕೊಂಡು ಬಿಟ್ಟಿದ್ದಾರೆ. ತಾಲೂಕಿನ ಮಂದಿಗೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ದೇವರನ್ನೇ ಬಿಡದವರು..! ಯಸ್, ಇವ್ರು ಅಕ್ಷರಶಃ ಅಂತರ್ ಜಿಲ್ಲಾ ಪ್ರೊಫೆಷನಲ್ ಕಳ್ಳರು. ಮುಂಡಗೋಡ ತಾಲೂಕಿನಲ್ಲಿ ದೇವಸ್ಥಾನ, ಮನೆ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದವರು. ಆದ್ರೆ ನಸೀಬು...
ಇಂದೂರಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ..!
ಮುಂಡಗೋಡ: ತಾಲೂಕಿನ ಇಂದೂರು ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರೋ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಿದೆ. ಇಂದೂರು ಹೊರವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.









