Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ನಂದಿಕಟ್ಟಾದ “ಗಟಾರು ಸಮಸ್ಯೆ” ಪರಿಶೀಲಿಸಿದ ಸದಸ್ಯರು..! ಪಿಡಿಓ ಸಾಹೇಬ್ರೇ ನಿಮ್ಮ ನಿರ್ಲಕ್ಷ ಸರಿನಾ..?

ನಂದಿಕಟ್ಟಾದ “ಗಟಾರು ಸಮಸ್ಯೆ” ಪರಿಶೀಲಿಸಿದ ಸದಸ್ಯರು..! ಪಿಡಿಓ ಸಾಹೇಬ್ರೇ ನಿಮ್ಮ ನಿರ್ಲಕ್ಷ ಸರಿನಾ..?

ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಿನ್ನೆ ಗುರುವಾರ ನಡೆದಿದ್ದ ಪುಟ್ಟ ಬಾಲಕಿ ಗಟಾರಿನಲ್ಲಿ ಬಿದ್ದು ಒದ್ದಾಡಿದ ಘಟನೆಗೆ ಸಂಬಂಧಿಸಿದಂತೆ ಇಂದು ನಂದಿಕಟ್ಟಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದ್ರೆ ಪಿಡಿಓ ಸಾಹೇಬ್ರು ಮಾತ್ರ ಪಂಚಾಯತಿಗೆ ಬಂದರೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ ತೋರಿದ್ದಾರೆ ಅಂತಾ ಕೆಲವ್ರು ಅಸಮಾಧಾನ ಹೊರ ಹಾಕಿದ್ರು. ಅವೈಜ್ಞಾನಿಕ ಗಟಾರು‌ ನಿರ್ಮಾಣ..! ಇನ್ನು ಗಟಾರಗಳ ಅವ್ಯವಸ್ಥೆ ಕಣ್ಣಾರೆ ಕಂಡ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ತಕ್ಷಣವೇ...

Post
ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!

ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಇವತ್ತು ಭಯಾನಕ ಘಟನೆಯೊಂದು ನಡೆದು ಹೋಗಿದೆ. ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೇ ವರ್ಷದ ಪುಟ್ಟ ಕಂದಮ್ಮ ಕೊಳಚೆ ತುಂಬಿದ್ದ ಗಟಾರಿನಲ್ಲಿ ಬಿದ್ದು ಒದ್ದಾಡಿದೆ‌. ಅದೃಷ್ಟವಶಾತ್ ಹಾಗೆ ಬಿದ್ದ ಪುಟ್ಟ ಮಗುವನ್ನು ತಕ್ಷಣವೇ ಅಜ್ಜಿ ಮೇಲಕ್ಕೆತ್ತಿದ್ದಾರೆ. ಇಲ್ಲವಾಗಿದ್ದರೆ, ಪುಟ್ಟ ಮಗು ಈಗ ನೆನಪಾಗಿ ಉಳಿಯುತ್ತಿತ್ತು ಅಷ್ಟೆ. ಮಗು ಬದುಕಿದ್ದೇ ಪುಣ್ಯ..! ಹೌದು, ನಂದಿಕಟ್ಟಾ ಗ್ರಾಮದ ಮಕ್ಬುಲ್ ಖಾನ್ ಶಾಹಪುರ್ ಎಂಬುವರ, ಒಂದೂವರೇ ವರ್ಷದ ಪುಟ್ಟ ಬಾಲಕಿ ಇವತ್ತು ಮದ್ಯಾಹ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಈ...

Post
ಇಂದೂರಿನಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದು ಚಿರತೆ ಮರಿನಾ..?

ಇಂದೂರಿನಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದು ಚಿರತೆ ಮರಿನಾ..?

ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಇಬ್ಬರು ಮಹಿಳೆಯರ ಮೇಲೆ ಚಿರತೆ ಮರಿ ದಾಳಿ ಮಾಡಿದೆ ಅನ್ನೋ ಮಾಹಿತಿ ಲಭ್ಯವಾಗಿದೆ‌. ಇಂದು ಬೆಳಿಗ್ಗೆ ಗದ್ದೆಯ ಕೆಲಸಕ್ಕಾಗಿ ಹೋಗುತ್ತಿದ್ದ ವೇಳೆ ಎರಡು ಮರಿಗಳೊಂದಿಗೆ ಚಿರತೆ ಅಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಆ ವೇಳೆ ತಾಯಿ ಚಿರತೆ ಮುಂದೆ ಹೋಗಿದೆ. ಆದ್ರೆ ಚಿರತೆ ಮರಿಗಳು ಮಾತ್ರ ಮಹಿಳೆಯರ ಮೇಲೆ ಅಟ್ಯಾಕ್ ಮಾಡಿವೆ ಎನ್ನಲಾಗಿದೆ‌. ಇಬ್ಬರು ಮಹಿಳೆಯರ ಮೇಲೆ ಮರಿ ದಾಳಿ ಮಾಡಿದೆ ಆದ್ರೆ, ಅದ್ರಲ್ಲಿ ಓರ್ವ ಮಹಿಳೆ ಗೀತಾ ನಾಗಪ್ಪ ದೊಡ್ಮನಿ ಎಂಬುವವರಿಗೆ...

Post
ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ; ಮುಂಡಗೋಡಿನಲ್ಲಿ ಬಿಜೆಪಿಗರ ಸಂಭ್ರಮ..!

ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ; ಮುಂಡಗೋಡಿನಲ್ಲಿ ಬಿಜೆಪಿಗರ ಸಂಭ್ರಮ..!

ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸುತ್ತಿರೋ ಹಿನ್ನೆಲೆಯಲ್ಲಿ, ಇಂದು ಪ್ರಮಾಣ ವಚನ ಸ್ವೀಕರಿಸಿದ ವೇಳೆ ಮುಂಡಗೋಡಿನಲ್ಲಿ ಹೆಬ್ಬಾರ್ ಬೆಂಬಲಿಗರು ಸಂಭ್ರಮಿಸಿದ್ರು‌. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು , ಹೆಬ್ಬಾರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಈ ವೇಳೆ ಬಿಜೆಪಿ ಮುಖಂಡ ಸಿದ್ದಪ್ಪ ಹಡಪದ್, ತಾಲೂಕಾ ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ಭರತ್ ಹದಳಗಿ, ಪ್ರಶಾಂತ್ ಲಮಾಣಿ, ರಾಮಣ್ಣ ಲಮಾಣಿ, ಯಲ್ಲಪ್ಪ ಮಜ್ಜಿಗೇರಿ, ಅಶೋಕ...

Post
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!

ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಿಐ ಪ್ರಭುಗೌಡ ಹಾಗೂ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...

Post
ನ್ಯಾಸರ್ಗಿ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ..!

ನ್ಯಾಸರ್ಗಿ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ..!

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನ್ಯಾಸರ್ಗಿ ಸೂರ್ಯನಾರಾಯಣ, ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಬಾಚಣಕಿ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಬಾಚಣಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇದ್ದರು,  ಅಯ್ಯಪ್ಪ ಭಜಂತ್ರಿ, ಉದಯ ಶಿರಾಲಿ, ವೆಂಕಟೇಶ್ ಕಾಟ್ವೆಕರ್, ಮಾಂತೇಶ್ ಕೇಣಿ, ಅಣ್ಣಪ್ಪ ಬೋವಿ ಸೇರಿದಂತೆ ಹಲವರು ಮನವಿ ಅರ್ಪಿಸಿದ್ರು.

Post
ಸನವಳ್ಳಿಯ ಬಡವರ ನಿವೇಶನ ಅತಿಕ್ರಮಣ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಕ್ರಮ..!

ಸನವಳ್ಳಿಯ ಬಡವರ ನಿವೇಶನ ಅತಿಕ್ರಮಣ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಕ್ರಮ..!

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51ರಲ್ಲಿ ಹಂಚಿದ್ದ 16 ನಿವೇಶನಗಳನ್ನು ಪಕ್ಕದ ಜಮೀನಿನ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ ಅಲ್ಲಿನ ನಿವಾಸಿಗಳು ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನಾಲಾದ ಜಮೀನಿನ ಅಳತೆ ಮಾಡಿ, ಅಲ್ಲಿನ ನಿವಾಸಿಗಳಿಗೆ ನ್ಯಾಯ ಒದಗಿಸಿ ಕೊಡುವ...

Post
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...

Post
ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಮುಂಡಗೋಡ: ತಾಲೂಕಿನ ಕಾತೂರು ಸಮೀಪದಲ್ಲಿ ಲಾರಿ ಚಾಲಕನನ್ನು ಅಪಹರಿಸಿ ಅವನಲ್ಲಿದ್ದ 22 ಸಾವಿರ ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಅಬ್ದುಲ್ ಪೀರಸಾಬ್ ಶೇಖ್ ಎಂಬುವ ಲಾರಿ ಚಾಲಕನೇ ಹಣ ಕಳೆದುಕೊಂಡವನಾಗಿದ್ದಾನೆ. ಹುಬ್ಬಳ್ಳಿಯಿಂದಲೇ ಬೊಲೆರೋ ವಾಹನದಲ್ಲಿ ಹಿಂಬಾಲಿಸಿದ್ದ ನಾಲ್ಕು ಜನ ದುಷ್ಕರ್ಮಿಗಳು, ಲಾರಿ ಚಾಲಕ ಮೂತ್ರ ವಿಸರ್ಜನೆಗೆಂದು ಲಾರಿ ನಿಲ್ಲಿಸಿದಾಗ ಏಕಾಏಕಿ ಬಂದು ಅಟ್ಯಾಕ್ ಮಾಡಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ತಮ್ಮ‌ ಬೊಲೆರೋ ವಾಹನದಲ್ಲೇ ಲಾರಿ ಚಾಲಕನನ್ನು...

Post
ಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!

ಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!

ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮು‌ಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.