ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕನ ಲವ್ ಕಹಾನಿ ಮತ್ತೆ ರಿಯಲ್ ಲೈಫ್ ಗೆ ಬಂದು ನಿಂತಿದೆ. ಟಿಕ್ ಟಾಕ್ ನಲ್ಲಿ ಶುರುವಾಗಿದ್ದ ಪ್ರೀತಿ ಮದುವೆಯ ಮೂರು ಗಂಟಿನೊಂದಿಗೆ ಬಾಂಧವ್ಯ ಬೆಸೆದುಕೊಂಡು ಅದೇನೋ ಮನಸ್ತಾಪಗಳು ತಪ್ಪು ಕಲ್ಪನೆಗಳಿಂದ ದೂರವಾಗಿದ್ದ ಒಂದೂವರೇ ವರ್ಷದ ಪ್ರೇಮ್ ಕಹಾನಿ ಮತ್ತದೇ ಹಳೆಯ ಪ್ರೀತಿಯ ಬಂಧನದಲ್ಲಿ ಬೆಸೆದುಕೊಂಡಿದೆ. ಹಾಗಂತ ಮೊನ್ನೆಯಷ್ಟೇ ನೊಂದು ಮನದಾಳ ಬಿಚ್ಚಿಟ್ಟಿದ್ದ ಮಹಿಳೆ ಈಗ ತನ್ನ ಲೈಫು ಸರಿಯಾಯ್ತು ಕಣ್ರಿ ಅಂತಾ ಖುಶಿಯಿಂದಲೇ ಹೇಳಿಕೊಂಡಿದ್ದಾಳೆ. ತಪ್ಪು ಕಲ್ಪನೆಗಳಾಗಿತ್ತು..! ನನ್ನ ಪತಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?
ಅದು ಅಪ್ಪಟ ಒಂದೂವರೇ ವರ್ಷದ ಪ್ರೇಮ್ ಕಹಾನಿ. ಆಕೆ ದೂರದ ಬೆಂಗಳೂರಿನವಳು, ಈತ ಮುಂಡಗೋಡ ತಾಲೂಕಿನ ನಂದಿಕಟ್ಟಾದವನು. ಟಿಕ್ ಟಾಕ್ ನಲ್ಲೇ ಶುರುವಾದ ಪ್ರೇಮ ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ಕೊನೆಗೆ ಮದುವೆಯ ಮೂರು ಗಂಟು ಬೀಳುವಂತೆ ಮಾಡಿತ್ತು. ಆದ್ರೀಗ ಆ ಸಂಬಂಧ ಅಕ್ಷರಶಃ ಮೂರಾಬಟ್ಟೆಯಾಗಿದೆ. ಹಾಗಂತ, ಆ ಮಹಿಳೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತನ್ನ ನೂತನ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಅದ್ರ ಜೊತೆ ನಂಗೆ ನನ್ನ ಪತಿಯನ್ನ ಹುಡುಕಿ ಕೊಡಿ...
ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು
ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...
ಹುನಗುಂದ ಗ್ರಾಮದಲ್ಲಿ ಸರಾಯಿ ನಿಷೇಧ, ಗ್ರಾಮಸ್ಥರ ತೀರ್ಮಾನ, ಸರಾಯಿ ಮಾರಿದ್ರೆ 50 ಸಾವಿರ ದಂಡ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಗ್ರಾಮದಲ್ಲಿ ಸರಾಯಿ ನಿಷೇಧ ಮಾಡಲಾಗಿದೆ. ಈ ಮೂಲಕ ಅದೇಷ್ಟೋ ಬಡ ಮಹಿಳೆಯರ ಬಹುದಿನದ ಆಸೆ ನೆರವೇರಿದಂತಾಗಿದೆ. ಗ್ರಾಮದಲ್ಲಿ ಇಂದು ಸಭೆ ಸೇರಿದ್ದ ಗ್ರಾಮಸ್ಥರು, ಮುಖಂಡರು ಈ ಬಗ್ಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇಂದಿನಿಂದ ಗ್ರಾಮದಲ್ಲಿ ಸರಾಯಿ ನಿಷೇಧಿಸಿ ಠರಾವು ಬರೆದಿದ್ದಾರೆ. ಒಂದುವೇಳೆ ಗ್ರಾಮದಲ್ಲಿ ಸರಾಯಿ ಮಾರಾಟ ಮಾಡಿದ್ರೆ 50 ಸಾವಿರ ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ.
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!
ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!
ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್...
ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಇಂದು ಬೆಳಿಗ್ಗೆ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಮ್ಮಾಜಿ ಕೆರೆಯಲ್ಲಿ ಧುಮುಕಿತ್ತು. ಹೀಗಾಗಿ, ಲಾರಿಯಲ್ಲಿದ್ದವರನ್ನು ಸಾರ್ವಜನಿಕರು ರಕ್ಷಣೆ ಮಾಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಸದ್ಯ ಕೆರೆಯಲ್ಲಿ ಪಲ್ಟಿಯಾಗಿ ಅರ್ದಮರ್ದ ಮುಳುಗಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಈ ವೇಳೆ ಯಲ್ಲಾಪುರ ಮುಂಡಗೋಡ ರಸ್ತೆಯಲ್ಲಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.









