ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಮತ್ತೊಂದು ದುರಂತ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಜನರನ್ನ ಬಚಾವ್ ಮಾಡಲಾಗಿದೆ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ, ಅಮ್ಮಾಜಿ ಕೆರೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕೆರೆಯಲ್ಲೇ ಧುಮುಕಿದೆ. ಲಾರಿಯಲ್ಲಿದ್ದವರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ತಕ್ಷಣವೇ ಸಹಾಯಕ್ಕೆ ಬಂದ ಸಾರ್ವಜನಿಕರು ಲಾರಿಯಲ್ಲಿದ್ದವರನ್ನು ರಕ್ಷಿಸಿ ಹೊರ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಅಮ್ಮಾಜಿ ಕೆರೆಯಲ್ಲಿ ಇತ್ತಿಚೇಗಷ್ಟೇ ಕಾರು ಮುಳುಗಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!
ಮೇ 20 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಆ ಪಂಚಾಯತಿಯ 1ಸ್ಥಾನಕ್ಕೆ ಮತದಾನ..!
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಮೇ 20 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಏಪ್ರಿಲ್ ನಿಂದ, 2022ರ ಜುಲೈ ತಿಂಗಳವರೆಗೆ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...
ಇಂದೂರಿನಲ್ಲಿ ಸಿಡಿಲಾಘಾತ, ಹೊತ್ತಿ ಉರಿದ ತೆಂಗಿನ ಮರಗಳು..!
ಮುಂಡಗೋಡ: ತಾಲೂಕಿನ ಹಲವೆಡೆ ಮಳೆ ಗಾಳಿ, ಸಿಡಿಲಿನ ಅರ್ಭಟ ಜೋರಾಗಿತ್ತು. ತಾಲೂಕಿನ ಇಂದೂರು ಗ್ರಾಮದಲ್ಲಿ ಭರಸಿಡಿಲು ಬಡಿದು ಎರಡು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಇಲ್ಲಿನ ಕಲ್ಮೇಶ್ ದುಗ್ಗಳ್ಳಿ ಎಂಬುವವರ ಮನೆಯ ಹಿತ್ತಲಿನಲ್ಲಿರೋ ತೆಂಗಿನ ಮರಕ್ಕೆ ಭರಸಿಡಿಲು ಬಡಿದು ಹೊತ್ತಿ ಉರಿದಿವೆ. ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿದೆ. ಹೀಗಾಗಿ ಆತಂಕಗೊಂಡ ಗ್ರಾಮಸ್ಥರು ನಿಬ್ಬೆರಗಾಗಿ ಆ ಸಿಡಿಲಾಘಾತದ ರೋಮಾಂಚಕ ಕ್ಷಣ ನೋಡಿದ್ದಾರೆ. ಸಿಡಿಲಿನ ಹೊಡೆತಕ್ಕೆ ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ
ಮುಂಡಗೋಡ: ತಾಲೂಕಿನ ಮೂಡಸಾಲಿ ಕ್ರಾಸ್ ಬಳಿ ಬಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದಂತಾಗಿದೆ. ಎತ್ತಿನ ಚಕ್ಕಡಿಗೆ KSRTC ಬಸ್ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಕಡೆ ಹೊರಟಿದ್ದ ಚಕ್ಕಡಿಗೆ ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಗ್ರಾಮದ ಸಂತೋಷ ತಿಪ್ಪಣ್ಣ ಹರಿಜನ (30), ಮಂಜುನಾಥ್ ಬಸಪ್ಪ ಡೊಳ್ಳೇಶ್ವರ್ (38) ಎಂಬುವರಿಗೆ ಗಾಯವಾಗಿದೆ. KSRTC ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರೀ ಅವಘಡ ತಪ್ಪಿದಂತಾಗಿದೆ. ತಡರಾತ್ರಿಯಲ್ಲಿ ಘಟನೆ...
ಬಡ್ಡಿಗೇರಿ ಅಪಘಾತ ಪ್ರಕರಣ: ಚಾಲಕನ ವಿರುದ್ಧ ಕೇಸ್, ಟಾಟಾ ಎಸ್ ನಲ್ಲಿ ಜನರನ್ನ ಸಾಗಿಸುವಂತಿಲ್ಲ, ಪೊಲೀಸರ ಖಡಕ್ ಕ್ರಮ..!
ಮುಂಡಗೊಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ನಡೆದಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಟಾ ಎಸ್ ವಾಹನ ಚಾಲಕನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಾಟಾ ಏಸ್ ವಾಹನ ನಂ-ಕೆಎ-25/ಸಿ-5779 ನೇದರ ಚಾಲಕ ಮುಂಡಗೋಡ ವಡ್ಡರ ಓಣಿಯ ಮಂಜುನಾಥ ಈರಪ್ಪ ಬೋವಿ ಎಂಬುವನ ಮೇಲೆ ಪ್ರಕರಣ ದಾಖಲಾಗಿದ್ದು, ಈತನು ತನ್ನ ಟಾಟಾ ಏಸ್ ವಾಹನವನ್ನು ಅತೀವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದು, ಅಲ್ಲದೆ ಒಟ್ಟೂ 21 ಜನರಿಗೆ ಭಾರಿ ಗಾಯ ಪಡಿಸಿರುತ್ತಾನೆ...
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?
ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...
ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...
ಸನವಳ್ಳಿಯಲ್ಲಿ ಗದ್ದೆಯ ಬೇಲಿಗೆ ಕೊಂಬು ಸಿಲುಕಿಸಿಕೊಂಡು ಅಪಾಯದಲ್ಲಿದ್ದ ಜಿಂಕೆಯ ರಕ್ಷಣೆ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಗದ್ದೆಯಲ್ಲಿ ಬೇಲಿಗೆ ಸಿಲುಕಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಗಂಡು ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಸನವಳ್ಳಿ ಗ್ರಾಮದ ರೈತ ಕೃಷ್ಣಪ್ಪ ಎಲಿವಾಳ ಎಂಬುವವರ ಜಮೀನಿನ ಬೇಲಿಗೆ ಜಿಂಕೆ ತನ್ನ ಕೊಂಬು ಸಿಲುಕಿಸಿಕೊಂಡು ಜೀವ ಕಳೆದುಕೊಳ್ಳುವ ಅಪಾಯದಲ್ಲಿತ್ತು. ಹೀಗಾಗಿ, ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ರಕ್ಷಕ ಶ್ರೀಧರ್ ಭಜಂತ್ರಿ ಸ್ಥಳಕ್ಕೆ ಆಗಮಿಸಿ ಅಪಾಯದಲ್ಲಿದ್ದ ಗಂಡು ಜಿಂಕೆಯ ರಕ್ಷಣೆ ಮಾಡಿದ್ದಾರೆ. ಬೇಲಿಯಿಂದ ಕೊಂಬು ಬಿಡಿಸಿದ ತಕ್ಷಣವೇ ಬದುಕಿದೆಯಾ ಬಡಜೀವ ಅಂತಾ ಜಿಂಕೆ ಅಲ್ಲಿಂದ...









