ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಾಯಿಗಳ ದಾಳಿಗೆ ತುತ್ತಾಗಿ ಕೋತಿ ಮರಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಮರದ ಮೇಲೆ ಆಟವಾಡುತ್ತಿದ್ದ ಕೋತಿ ಮರಿ ಕೈ ತಪ್ಪಿ ಕೆಳಗೆ ಬಿದ್ದ ಕೂಡಲೇ ಅಲ್ಲೇ ಇದ್ದ ನಾಯಿಗಳ ಹಿಂಡು ದಾಳಿ ಮಾಡಿ ಕೋತಿ ಮರಿಯನ್ನು ಕೊಂದು ಹಾಕಿವೆ. ಹೀಗಾಗಿ ಗ್ರಾಮಸ್ಥರು ಸಾವನ್ನಪ್ಪಿದ ಕೋತಿ ಮರಿಗೆ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನಡೆಸಿದ್ರು. ಈ ವೇಳೆ ಗ್ರಾಮದ ಹಲವರು ಭಾಗವಹಿಸಿದ್ದರು.
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: ಉತ್ತರ ಕನ್ನಡ
ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..!...
ಸಂಸದ ಡಿ.ಕೆ. ಸುರೇಶ್ ವಿರುದ್ಧ ಮುಂಡಗೋಡ ಬಿಜೆಪಿಗರ ಆಕ್ರೋಶ, ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ...
ಎಂಇಎಸ್ ಪುಂಡಾಟ ಖಂಡಿಸಿ ಮುಂಡಗೋಡಿನಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ..!
ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ...
ಬೆಳಗಾವಿಯಲ್ಲಿ ನಾಳೆ ಹಡಪದ ಅಪ್ಪಣ್ಣ ಸಮಾಜದಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ..!
ಮುಂಡಗೋಡ: ಹಡಪದ ಅಪ್ಪಣ್ಣ ಸಮಾಜದ ಬಾಂಧವರು ನಾಳೆ ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರೋ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ಶ್ರೀಗಳು ಹಾಗೂ ಸುಕ್ಷೇತ್ರ ತಂಗಡಿಗಿ ಮಠದ ಪರಮಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾಳೆ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ...
ಡಿ.22 ಕ್ಕೆ ಅರಣ್ಯ ಅತಿಕ್ರಮಣದಾರ ರಿಂದ “ಬೆಳಗಾವಿ ಚಲೋ”
ಮುಂಡಗೋಡ: ತಾಲೂಕಿನ ವಿವಿಧ ಅರಣ್ಯ ಅತಿಕ್ರಮಣ ಪ್ರದೇಶಗಳ ಅತಿಕ್ರಮಣದಾರರು, ಇದೇ ಡಿ. 22 ಕ್ಕೆ ‘ಬೆಳಗಾವಿ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಇಂದು ಕಾರ್ಯಕ್ರಮದ ಪೂರ್ವಭಾವಿ ಸಭೆ ಮುಂಡಗೋಡಿನಲ್ಲಿ ಜರುಗಿತು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನು ಹಂತ, ಹಂತವಾಗಿ ಒಕ್ಕಲೆಸಲಾಗುವದು ಎಂಬ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಅತಂತ್ರವಾಗಿರುವ ಆತಂಕದಲ್ಲಿ ಇರುವುದರಿಂದ, ಅರಣ್ಯವಾಸಿಗಳ ಪರ ಸರಕಾರ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿ ಡಿ....
ನಂದಿಕಟ್ಟಾದಲ್ಲಿ ನಟ ಪುನೀತ್ ನೆನಪಲ್ಲಿ, ಮುಕ್ತ ಕಬಡ್ಡಿ ಪಂದ್ಯಾವಳಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪಂದ್ಯಾವಳಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು. ಇನ್ನು ಕಬಡ್ಡಿ ಪಂದ್ಯಾವಳಿಗೆ ದೂರ ದೂರದ ಕಬಡ್ಡಿ ತಂಡಗಳು ಬಂದು ಭಾಗವಹಿಸಿವೆ. ಪ್ರಥಮ ಬಹುಮಾನವಾಗಿ 20 ಸಾವಿರ ರೂ. ಎರಡನೇ ಬಹುಮಾನವಾಗಿ 15 ಸಾವಿರ ರೂಪಾಯಿ ಮೂರನೇ ಬಹುಮಾನವಾಗೊ 10 ಸಾವಿರ ರೂಪಾಯಿ, ನಾಲ್ಕನೇ ಬಹುಮಾನವಾಗಿ 5 ಸಾವಿರ ರೂಪಾಯಿ ಇಡಲಾಗಿದೆ. ಇನ್ನು...
ಅತ್ತಿವೇರಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆ ತೆರವು..!
ಮುಂಡಗೋಡ: ತಾಲೂಕಿನ ಅತ್ತಿವೇರಿ ದರ್ಗಾ ಹತ್ತಿರ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಯನ್ನು ಹುನಗುಂದ ಗ್ರಾಮ ಪಂಚಾಯತಿಯವರು ತೆರವುಗೊಳಿಸಿದ್ರು. ಅತ್ತಿವೇರಿ ಗ್ರಾಮದಲ್ಲಿ ಮನೆ ಹೊಂದಿದ್ದರೂ ಸರ್ಕಾರದ ಗಾಂವಠಾಣ ಜಾಗದಲ್ಲಿ ಮತ್ತೊಂದು ಮನೆ ನಿರ್ಮಿಸಿಕೊಂಡಿದ್ದ ವ್ಯಕ್ತಿಗೆ ಗ್ರಾಮ ಪಂಚಾಯತಿಯಿಂದ ನೋಟೀಸ್ ನೀಡಲಾಗಿತ್ತು. ನೋಟೀಸ್ ಮೂಲಕ ಮನೆ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಆದ್ರೂ ಸಹಿತ ಮನೆ ತೆರವು ಮಾಡಿಕೊಳ್ಳದ ಕಾರಣ ಇಂದು ಪೊಲೀಸರ ಸಹಾಯದೊಂದಿಗೆ ಅಕ್ರಮ ಮನೆ ತೆರವು ಮಾಡಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ...
ವಡಗಟ್ಟಾ ಬಳಿ ಬೈಕ್ ಗೆ ಅಡ್ಡ ಬಂದ ಕಾಡುಹಂದಿ, ಬೈಕ್ ಬಿದ್ದು, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ವಡಗಟ್ಟಾ- ಹುನಗುಂದ ರಸ್ತೆಯಲ್ಲಿ ಬೈಕ್ ಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಪ್ರಸಾದ್ ಕುಂಜು (51) ಎಂಬುವವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ ಹುನಗುಂದ ಹಾಗೂ ವಡಗಟ್ಟಾ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿರುವಾಗ ಘಟನೆ ನಡೆದಿದೆ. ಬೈಕ್ ಮೇಲಿಂದ ಬಿದ್ದು ಗಾಯಗೊಂಡು ಒದ್ದಾಡುತ್ತಿದ್ದ ವೇಳೆ ಗ್ರಾಮಸ್ಥರು ರಕ್ಷಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದೂರಿನಲ್ಲಿ ಪರಿಷತ್ ಗೆಲುವಿಗೆ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.









