ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಮಳೆಯ ಆತಂಕ ಶುರುವಾಗಿದೆ ಹೀಗಾಗಿ, ಅನ್ನದಾತರು ಫಸಲುಗಳ ರಕ್ಷಣೆಗೆ ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯ ಆತಂಕದ ನಡುವೆ ಭತ್ತದ ಕೊಯ್ಲಿಗೆ ಮುಂದಾಗಿದ್ದಾನೆ ರೈತ.. ಇನ್ನು, ಈ ಸಾರಿ ಮಳೆಯಲ್ಲಿ ಸಿಲುಕಿ ಸಂಪೂರ್ಣ ಹಾಳಾದ ಸ್ಥಿತಿಯಲ್ಲಿರೋ ಭತ್ತದ ಫಸಲು ಕಟಾವು ಮಾಡಲು ರೈತ ಭತ್ತ ಕಟಾವು ಮಾಡುವ ಯಂತ್ರಗಳ ಮೊರೆ ಹೋಗಿದ್ದಾನೆ.. ಹೀಗಾಗಿ ತಾಲೂಕಿನೆಲ್ಲೆಡೆ ಈಗ ಭತ್ತ ಕಟಾವು ಮಾಡೋ ಯಂತ್ರಗಳ ಸದ್ದೇ ಕೇಳುತ್ತಿದೆ. ಸಮಯವೂ ಉಳಿಯತ್ತೆ ಕೆಲಸವೂ ಕಡಿಮೆಯಾಗತ್ತೆ ಅನ್ನೋ ಕಾರಣಕ್ಕೆ...
Top Stories
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
Category: ಉತ್ತರ ಕನ್ನಡ
ನಂದಿಕಟ್ಟಾದಲ್ಲೂ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೂ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇಲ್ಲಿನ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಸದಸ್ಯರೇಲ್ಲರೂ ಒಂದೆಡೆ ಸೇರಿ ಸಭೆ ಮಾಡಿದ್ರು. ಮತದಾನ ಪ್ರಕ್ರಿಯೆಯ ಕುರಿತು ಚರ್ಚಿಸಿದ್ರು. ಮತದಾನ ಮಾಡುವ ವಿಧಾನಗಳ ಬಗ್ಗೆ ತಿಳುವಳಿಕೆ ಹಂಚಿಕೊಂಡ್ರು.. ಆನಂತರದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ರು. ಅಂದಹಾಗೆ, ಮತದಾನ ಕೇಂದ್ರದಲ್ಲಿ ಸುಗಮ ಮತದಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದಾರೆ.
ಹುನಗುಂದದಲ್ಲಿ ವಿ.ಪರಿಷತ್ ಚುನಾವಣೆ ಭರ್ಜರಿ ಮತದಾನ..!
ಮುಂಡಗೋಡ: ತಾಲೂಕಿನಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಬೆಳಗಿನಿಂದಲೂ ಭರ್ಜರಿಯಾಗೇ ನಡೆದಿದೆ. ತಾಲೂಕಿನ ಹುನಗುಂದದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಹುನಗುಂದದ ಶ್ರೀ ವಿಠಲ ರುಕ್ಮಾಯಿ ಹರಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸದಸ್ಯರು, ಅಲ್ಲೇ ಸಭೆ ನಡೆಸಿದ್ರು. ಆ ನಂತರದಲ್ಲಿ ಇಲ್ಲಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ರು. ಅದ್ರಂತೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರೂ ಕೂಡ ಇಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮತದಾನ...
ಚಿಗಳ್ಳಿಯಲ್ಲಿ ತೆಪ್ಪದ ರಥೋತ್ಸವ ಅಜ್ಜನ ರಥ ನೋಡಿ ಕಣ್ತುಂಬಿಕೊಂಡ ಭಕ್ತರು..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಗುರುವೀರಯೋಗೇಂದ್ರ ಸ್ವಾಮೀಜಿಯ ತೆಪ್ಪದ ರಥೋತ್ಸವ ಶೃದ್ಧಾಭಕ್ತಿಯಿಂದ ಜರುಗಿತು. ಇಲ್ಲಿನ ಕಲ್ಯಾಣಿಯಲ್ಲಿ ನಡೆದ ತೆಪ್ಪದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಹೊಂಡದ ದಡದಲ್ಲಿ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದರು ಭಕ್ತಿ ತೋರಿದ್ರು. ಸಂಜೆಯಾಗುತ್ತಿದ್ದಂತೆ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಕೆರೆಯಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ, ಭಕ್ತರ ಜಯಘೋಷಗಳು ಮೊಳಗಿದವು.
ಟಿಬೇಟಿಯನ್ ಕಾಲೋನಿಗಳಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಕೋವಿಡ್ ಕಟ್ಟೇಚ್ಚರ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗಳಲ್ಲಿ ಕೆಲಸಕ್ಕೆ ಹೋಗುವ ಸುತ್ತ ಮುತ್ತಲ ಹಳ್ಳಿಗಳ ಕೂಲಿ ಕಾರ್ಮಿಕರಿಗೆ ಆತಂಕ ಶುರುವಾಗಿದೆ. ರವಿವಾರ ತಾಲೂಕಿನ ಹುನಗುಂದ ಗ್ರಾಮದ ಮಹಿಳೆಯೋರ್ವಳಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು ಮತ್ತಷ್ಟು ಆತಂಕಕ್ಕೇ ಕಾರಣವಾಗಿದೆ. ನಿತ್ಯವೂ ಇಲ್ಲಿನ ಟಿಬೇಟಿಯನ್ ಕಾಲೋನಿಗಳಿಗೆ ಕೆಲಸಕ್ಕೆ ತೆರಳುವ ನೂರಾರು ಕಾರ್ಮಿಕರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯಾ ಗ್ರಾಮಗಳ ಗ್ರಾಮ ಪಂಚಾಯತಿಗಳು ಸೂಚನೆ ನೀಡಿವೆ.
ಹುನಗುಂದಕ್ಕೆ ಮತ್ತೆ ವಕ್ಕರಿಸಿದ ಕೊರೋನಾ, ಓರ್ವ ಮಹಿಳೆಗೆ ಸೋಂಕು ದೃಢ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ...
ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಕಾರ್ತಿಕ ಅಮವಾಸ್ಯೆಯ ನಿಮಿತ್ತ ಕಾರ್ತಿಕೋತ್ಸವ ಆಚರಿಸಲಾಯಿತು. ವಿವಿದ ಚಿತ್ರಗಳ ರೂಪದಲ್ಲಿ ದೀಪ ಬೆಳಗಿಸಿ ಭಕ್ತರು ಸಂಭ್ರಮಿಸಿದ್ರು. ದೇವಸ್ಥಾನದ ಅಂಗಳದಲ್ಲಿ ರಂಗೋಲಿ ಬಿಡಿಸಿ ಅದರ ಪ್ರಕಾರವೇ ದೀಪಗಳನ್ನು ಬೆಳಗಿಸಿದ್ರು. ಕಾರ್ತಿಕ ದೀಪ ಬೆಳಗಿಸೋ ಮೊದಲು ದೇವಿಗೆ ವಿಶೇಷ ಪೂಜೆ ಮಾಡಲಾಯಿತು.. ಇನ್ನು ಕಾರ್ತಿಕೋತ್ಸವದ ನಂತರ ಅನ್ನ ಸಂತರ್ಪಣೆ ನೆರವೇರಿಸಲಾಯಿತು.
ನಿದ್ದೆಯಿಂದ ಎದ್ದ ಮುಂಡಗೋಡ PWD, ಅಮ್ಮಾಜಿ ಕೆರೆ ದಂಡೆಯ ಮೇಲೆ ಸುರಕ್ಷತಾ ಕ್ರಮ..!
ಮುಂಡಗೋಡ: ಪಟ್ಟಣದ ಹೊರ ವಲಯದಲ್ಲಿ ಇತ್ತಿಚೆಗೆ ಸಂಭವಿಸಿದ ಕಾರು ದುರಂತದಲ್ಲಿ ದಂಪತಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ಹೀಗಾಗಿ, ಅಪಘಾತಗಳಿಗೆ ಆಮಂತ್ರಣ ನೀಡುತ್ತಿದ್ದ ಅಮ್ಮಾಜಿ ಕೆರೆಯ ದಂಡೆಯ ಮೇಲೆ ಬೇಲಿ ಹಾಕಲಾಗಿದೆ. ಇಲ್ಲಿನ ಪಿಡಬ್ಲ್ಯೂಡಿ ಇಲಾಖೆ ಈಗಷ್ಟೆ ಎಚ್ಚೆತ್ತುಕೊಂಡಿದ್ದು ಕೆರೆಯ ದಂಡೆಯ ಮೇಲೆ ಕಟ್ಟಿಗೆಯ ಕಂಬಗಳನ್ನು ನಿಲ್ಲಿಸಿ ಅದಕ್ಕೆ ಕೆಂಪು ಪಟ್ಟಿಯನ್ನು ಕಟ್ಟಲಾಗಿದೆ. ಅಲ್ಲದೇ ಸಣ್ಣ ಸಣ್ಣ ಚೀಲಗಳನ್ನು ತುಂಬಿ ಇಡಲಾಗಿದೆ.. ಇದ್ರಿಂದ ರಾತ್ರಿ ಸಮಯದಲ್ಲಿ ಅಪಘಾತ ಸಂಭವಿಸುವುದನ್ನು ಕೊಂಚ ತಪ್ಪಿಸಲು ಕ್ರಮ ಕೈಗೊಂಡಿದೆ.
ಮುಂಡಗೋಡ ಮಹಾಲಕ್ಷ್ಮಿ ದೇವಾಲಯದಲ್ಲಿ ಕಾರ್ತಿಕೋತ್ಸವ, ವರ್ಧಂತಿ ಉತ್ಸವ..!
ಮುಂಡಗೋಡ: ಪಟ್ಟಣದ ಇಂದಿರಾನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಇಂದು ಕಾರ್ತಿಕ ಅಮವಾಸ್ಯೆಯ ನಿಮಿತ್ತ ಕಾರ್ತಿಕೋತ್ಸವ ಹಾಗೂ 18 ನೇ ವರ್ಧಂತಿ ಉತ್ಸವ ಕಾರ್ಯಕ್ರಮ ನಡೆಯುತ್ತಿದೆ.. ಇಂದು ಬೆಳಗಿನಿಂದಲೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಹೋಮ ಹವನಗಳು ನಡಯುತ್ತಿವೆ. ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಲಿದೆ.. ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ದೇವಸ್ಥಾನದಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.
ಸಿದ್ದನಕೊಪ್ಪದ ಸ್ಪರ್ಧಾ ಹೋರಿಗೆ ಹುಟ್ಟುಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಸಿದ್ದನಕೊಪ್ಪದಲ್ಲಿ ವಿಶೇಷ ಹುಟ್ಟುಹಬ್ಬ ಆಚರಿಸಲಾಗಿದೆ. ಸ್ಪರ್ಧಾ ಹೋರಿಗೆ ಜನ್ಮ ದಿನ ಆಚರಣೆ ಮಾಡಲಾಗಿದೆ.. ಹೋರಿಗೆ ವಿಶೇಷ ಅಲಂಕಾರ ಮಾಡಿ, ಕೇಕು ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಲಾಗಿದೆ. ನೂರಾರು ಜನರು ಸೇರಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಹೋರಿಯ ಗುಣಗಾನ ಮಾಡಲಾಯಿತು. ಈ ವೇಳೆ ಗ್ರಾಮಸ್ಥರು ಹಾಗೂ ಹೋರಿಯ ಮಾಲೀಕರು ಕುಣಿದು ಕುಪ್ಪಳಿಸಿದ್ರು.. ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.. ಈ ಸಂದರ್ಭದಲ್ಲಿ ಮಳಗಿಯ ಬಿಜೆಪಿ ಮುಖಂಡ ಸಂತೋಷ ಶೇಟ್ ರಾಯ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು..









