ಯಲ್ಲಾಪುರ: ಸಮೀಪದ ಅರೆಬೈಲ್ ಘಟ್ಟದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ನ ಟ್ಯಾಂಕ್ ಕಳಚಿ ಹೆದ್ದಾರಿಗೆ ಬಿದ್ದ ಪರಿಣಾಮ ಭಾರೀ ಆತಂಕ ಮನೆಮಾಡಿತ್ತು. ಮಹಾರಾಷ್ಟ್ರ ಮೂಲದ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ, ಭಾರತ್ ಗ್ಯಾಸ್ ಕಂಪನಿಯ ಗ್ಯಾಸ್ ತುಂಬಿದ ಟ್ಯಾಂಕ್ ಹೊತ್ತೊಯ್ಯುತಿದ್ದ ಟ್ಯಾಂಕರ್ ಇದಾಗಿದ್ದು, ಸ್ಥಳಕ್ಕೆ ತಕ್ಷಣದಲ್ಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದರಿಂದ ಗ್ಯಾಸ್ ಲೀಕ್ ಆಗದಂತೆ ಅಗ್ನಿಶಾಮಕ ಸಿಬ್ಬಂದಿ ತಡೆದಿದ್ದಾರೆ. ಹೀಗಾಗಿ, ಕೆಲ ಹೊತ್ತು ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 63 ಸಂಪೂರ್ಣ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
12 ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಮಾಜಿ ಪೊಲೀಸಪ್ಪ ಅಂದರ್..!
ಮುಂಡಗೋಡ: ಪೊಲೀಸ್ ಇಲಾಖೆಯಲ್ಲಿ ನೌಕರಿ ಕೊಡಿಸ್ತಿನಿ ಅಂತಾ ನಂಬಿಸಿ, 12 ಜನ ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಷರಶಃ ಭೂಗತನಾಗಿ ತಲೆಮರೆಸಿಕೊಂಡಿದ್ದ ಬಂಧಿತ, ವಂಚನೆಯ ಆರೋಪಿ ಸಂತೋಷ ಗುದಗಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಇನ್ನೇನು ಸಂಜೆಯಷ್ಟೊತ್ತಿಗೆ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಈ ವಂಚಕ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸಿದ್ದೇ ರೋಚಕ ಕಣ್ರಿ.. ನಿನ್ನೆಯ ಕತೆ ಮುಂದುವರಿದ ಭಾಗ..! ಅದು ಕಳೆದ ಮಂಗಳವಾರ, ಮುಂಡಗೋಡ ಪೊಲೀಸರು, ವಂಚನೆಗೊಳಗಾದ ಯುವಕರು...
ಕಳ್ಳ ಇವನೇ ನೋಡಿ..! ಮೊಬೈಲ್ ಶಾಪ್ ದೋಚಿದ ಕಳ್ಳನ ಕರಾಮತ್ತು ಹೇಗಿದೆ ಗೊತ್ತಾ..?
ಮುಂಡಗೋಡ: ಯಲ್ಲಾಪುರ ರಸ್ತೆಯ ಶ್ರೀ ಮೊಬೈಲ್ ಶಾಪ್ ದೋಚಿದ ಕಳ್ಳ ಕೊನೆಗೂ ತನ್ನ ಕುರುಹು ಬಿಟ್ಟು ಹೋಗಿದ್ದಾನೆ. ಕಳ್ಳ ಅಂಗಡಿಗೆ ನುಗ್ಗಿ ಮೊಬೈಲ್ ಎಗರಿಸೋ ಅಷ್ಟೂ ದೃಷ್ಯಗಳೂ ಸಿಸಿಟಿವಿಯಲ್ಲಿ ಸೆರೆಯಾಗಿವೆ. “ಕತ್ತಲಿನಲ್ಲಿ ಯಾರಯ್ಯಾ ನನ್ನ ನೋಡ್ತಾರೆ” ಅಂತಾ ಬೆಳ್ಳಂ ಬೆಳಿಗ್ಗೆ ನಾಲ್ಕೂವರೇ ಹೊತ್ತಲ್ಲಿ, ಪುಟ್ಟದೊಂದು ಮೊಬೈಲ್ ಟಾರ್ಚ್ ಬೆಳಕಲ್ಲೇ ಮೊಬೈಲ್ ಅಂಗಡಿಗೆ ಕನ್ನ ಹಾಕೋ ಖದೀಮ, ತನ್ನ ಲೀಲೆಗಳನ್ನು ಅಲ್ಲೇ ಕಣ್ಣರಳಿಸಿ ಕೂತಿರೋ ಸಿಸಿಟಿವಿ ದಾಖಲಿಸಿಕೊಳ್ಳತ್ತೆ ಅಂತಾ ಬಹುಶಃ ಆತನಿಗೆ ಗೊತ್ತಿರಲಿಲ್ಲವೇನೋ. ಅಂದಹಾಗೆ, ಈ ಸಿಸಿಟಿವಿಯಲ್ಲಿ ಸೆರೆಯಾಗಿರೋ...
ಅಯ್ಯೋ, ನಿನ್ನೆ ನಡೆದಿದ್ದು ಒಂದೇ ಕಳ್ಳತನ ಅಲ್ಲಾ..! ಅದೇ ರಸ್ತೆಯ ಪೋಟೊ ಸ್ಟುಡಿಯೋನೂ ದೋಚಿದ್ರು ನೋಡಿ ಕಳ್ಳರು..!!
ಮುಂಡಗೋಡ: ಪಟ್ಟಣದಲ್ಲಿ ರಾತ್ರಿ ಮತ್ತೊಂದು ಕಳ್ಳತನ ನಡೆದಿದೆ. ಶ್ರೀ ಮೊಬೈಲ್ ಶಾಪ್ ದೋಚಿದ ಹಾಗೇ, ಅದೇ ಮಾದರಿಯಲ್ಲಿ ಯಲ್ಲಾಪುರ ರಸ್ತೆಯ ಶ್ರೀ ಶಕ್ತಿ ಪೋಟೋ ಸ್ಟುಡಿಯೋಗೆ ನುಗ್ಗಿ ಬೆಲೆ ಬಾಳುವ ವಿಡಿಯೊ ಕ್ಯಾಮೆರಾ, ಪೋಟೊ ಕ್ಯಾಮೆರಾ, ಹಾರ್ಡ್ ಡಿಸ್ಕ್ ಸೇರಿ ಹಲವು ವಸ್ತಗಳನ್ನು ಎಗರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಹುಶಃ, ನಿನ್ನೆ ರಾತ್ರಿ ಮೊಬೈಲ್ ಶಾಪ್ ದೋಚಿರೋ ಕಳ್ಳರೇ, ಪೋಟೋ ಸ್ಟುಡಿಯೋಗೂ ನುಗ್ಗಿರೋ ಸಾಧ್ಯತೆ ಇದೆ. ಇನ್ನು ಯಲ್ಲಾಪುರ ರಸ್ತೆಯ ಈ ಏರಿಯಾದಲ್ಲಿ ಕಳ್ಳರು ಅಷ್ಟೊಂದು ಲೀಲಾಜಾಲವಾಗಿ...
ಮುಂಡಗೋಡಿನಲ್ಲಿ ಮತ್ತೆ ಕಳ್ಳರ ಕರಾಮತ್ತು, ಮೊಬೈಲ್ ಶಾಪ್ ದೋಚಿದ ಖದೀಮರು..!
ಮುಂಡಗೋಡ: ಪಟ್ಟಣದಲ್ಲಿ ಅದ್ಯಾಕೋ ಏನೋ ಕಳ್ಳರ ಕೈಚಳಕಗಳು ಕಡಿಮೆಯೇ ಆಗುತ್ತಿಲ್ಲ. ಪಟ್ಟಣದ ವೈನ್ ಶಾಪ್ ಕಳ್ಳತನ ನಡೆದು ಇನ್ನೂ ತಿಂಗಳಾಗಿಲ್ಲ, ಈಗ ಮತ್ತೆ ಮೊಬೈಲ್ ಅಂಗಡಿಯೊಂದಕ್ಕೆ ಖದೀಮರು ಕನ್ನ ಹಾಕಿದ್ದಾರೆ. ನಿನ್ನೆ ರಾತ್ರಿ, ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರೋ ಶ್ರೀಧರ್ ಉಪ್ಪಾರ್ ಎಂಬುವವರ “ಶ್ರೀ ಮೊಬೈಲ್” ಶಾಪ್ ನ ಮೇಲ್ಚಾವಣಿ ತೆಗೆದ ಒಳನುಗ್ಗಿರೋ ಕಳ್ಳರು ಬೆಲೆಬಾಳುವ ಮೊಬೈಲ್ ಸೇರಿ ಹಲವು ವಸ್ತುಗಳನ್ನು ಎಗರಿಸಿದ್ದಾರೆ ಅಂತಾ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಳ್ಳತನವಾದ ವಸ್ತುಗಳ ಅಸಲೀ ಮೌಲ್ಯ ಎಷ್ಟು,...
ಸ್ಪೀಕರ್ ಕಾಗೇರಿಯವರ ಸಂಸ್ಕೃತ ಶ್ಲೋಕ ಪಠಣ ಹೇಗಿದೆ ಗೊತ್ತಾ..?
ಸಿದ್ದಾಪುರ: ಸರಳತೆ, ಸಜ್ಜನಿಕೆಯಿಂದ ಹೆಸರಾಗಿರೋ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಂಸ್ಕೃತ ಗುರುವಾಗಿದ್ದರು. ಸಿದ್ದಾಪುರ ತಾಲೂಕಿನ ಕೊರ್ಲಕೈ ಪಂಚಾಯ್ತಿ ವ್ಯಾಪ್ತಿಯ ಜಿಡ್ಡಿ ಶಾಲೆಯ ಕೊಠಡಿ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಆಗನಿಸಿದ್ದ ಅವ್ರು, ಈ ಸಂದರ್ಭದಲ್ಲಿ ಮಕ್ಕಳಿಗೆ ಸಂಸ್ಕೃತ ಮಂತ್ರವನ್ನು ಹೇಳಿಕೊಡುವ ಮೂಲಕ ಸುದ್ದಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಮಕ್ಕಳು ಸಂಸ್ಕೃತ ಶ್ಲೋಕವನ್ನು ಹೇಳಿದಾಗ ಸಂತಸಗೊಂಡ ಸ್ಪೀಕರ್ ಕಾಗೇರಿಯವರು ಮಕ್ಕಳನ್ನು ಕರೆದು ಸಂಸ್ಕೃತ ಶ್ಲೋಕವನ್ನು ಹೇಳಿಕೊಡುವ ಮೂಲಕ ಮಕ್ಕಳಿಗೆ ಗುರುವಾದರು. ಸ್ಪಷ್ಟ ಉಚ್ಚಾರದೊಂದಿಗೆ ಸಂಸ್ಕೃತ ಮಂತ್ರ ಪಠಣ ಮಾಡಿದ್ದು ಅವ್ರ ಅಭಿಮಾನಿಗಳಿಗೆ...
ಮಾಜಿ ಪೊಲೀಸಪ್ಪನ ವಂಚಕ ಪುರಾಣ; ಬಗೆದಷ್ಟು ಬಯಲಾಗತ್ತೆ “ಪೀಕಾ”ಯಣ..! ಅಷ್ಟಕ್ಕೂ, ಆತನ ಅಸಲಿ ಕಹಾನಿ ಏನು ಗೊತ್ತಾ..?
ಖಾಕಿ ಪಡೆಯಲ್ಲೂ ಇನ್ನಿಲ್ಲದ ಎತ್ತುವಳಿ ಶೂರರಿದ್ದಾರೆ, ಅವ್ರಿಂದ ಹುಶಾರಾಗಿರಿ ಅಂತಾ ಉತ್ತರ ಕನ್ನಡ ಎಸ್ಪಿ ಪ್ರಕಾಶ ದೇವರಾಜು ಇತ್ತಿಚೇಗಷ್ಟೇ ಖಡಕ್ಕಾಗಿ ಹೇಳಿದ್ರು. ಅಲ್ದೇ ಹಿರಿಯ ಅಧಿಕಾರಿಗಳ ಹೆಸ್ರಲ್ಲಿ ದುಡ್ಡು ಪೀಕೊ ಕೆಲ ಪೊಲೀಸರು, ವಂಚಕರು ದಂಧೆಗೆ ಇಳಿದಿದ್ದಾರೆ. ಅಂತವರಿಗೆ ಯಾರೂ ಬಿಡಿಗಾಸೂ ಕೊಡಬೇಡಿ, ಹಾಗೇನಾದ್ರೂ ಕೇಳಿದ್ರೆ ನೇರವಾಗಿ ನಂಗೆ ಕಂಪ್ಲೇಂಟ್ ಕೊಡಿ ಅಂತಾ ಖಡಕ್ಕಾದ ಮಾತು ಹೇಳಿದ್ರು. ಹಾಗಾದ್ರೆ, ಅವ್ರು ಇಂತವರನ್ನ ನೋಡಿಯೇ ಹೇಳಿದ್ರಾ..? ಗೊತ್ತಿಲ್ಲ. ಹಾಗಾದ್ರೆ, ಎಸ್ಪಿ ಸಾಹೇಬ್ರು ಹೇಳಿದ್ದಾದ್ರೂ ಏನು ಒಮ್ಮೆ ಕೇಳಿ, ಆಮೇಲೆ...
ಯಲ್ಲಾಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಸಿ.ಸಿ.ಪಾಟೀಲ್ ಬೇಟಿ..!
ಯಲ್ಲಾಪುರ: ಮಳೆಯಿಂದಾಗಿ ಹಾನಿಗೊಳಗಾಗಿ ಭೂಕುಸಿತವಾಗಿದ್ದ ಯಲ್ಲಾಪುರ ತಾಲೂಕಿನ ಕಳಚೆ, ಗುಳ್ಳಾಪುರ ಭಾಗಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸಚಿವರು ಭೇಟಿ ನೀಡಿದಾಗ ಗ್ರಾಮಸ್ಥರು ಗ್ರಾಮವನ್ನೇ ಸ್ಥಳಾಂತರ ಮಾಡುವಂತೆ ಮನವಿ ನೀಡಿದರು. ಗುಳ್ಳಾಪುರದಲ್ಲಿ ಪ್ರವಾಹದಿಂದಾಗಿ ಕೊಚ್ಚಿಹೋಗಿರುವ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಈ ಪ್ರದೇಶದಲ್ಲಿ ಹಾನಿಯಾಗಿರುವ ಬಗ್ಗೆ ಸಿ ಎಂ ಜೊತೆ ಮಾತುಕತೆ ನಡೆಸಿ ಶೀಘ್ರದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡುವುದಾಗಿ ಸಚಿವರು ಭರವಸೆ...
ಅಗಡಿಯ “ಮೈಲಾರಿ”ಗೆ ಹುಟ್ಟುಹಬ್ಬದ ಸಂಭ್ರಮ..! ಹಾಗಾದ್ರೆ ಯಾರು ಈ ಮೈಲಾರಿ..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ನಿಂಗಪ್ಪ ಬರಮಪ್ಪ ತಳವಾರ ಎಂಬುವವರು ತಾವು ಮುದ್ದಿನಿಂದ ಸಾಕಿದ ಹೋರಿಗೆ ಹುಟ್ಟು ಹಬ್ಬ ಆಚರಿಸಿ ಸಂಭ್ರಮಿಸಿದ್ರು. ತಮ್ಮ ಮನೆಯ ಮುದ್ದಿನ ಮಗನ ಹಾಗೆ ಸಾಕಿದ ಮೈಲಾರಿ ಎಂಬ ಹೋರಿಗೆ ನಾಲ್ಕನೇ ವರ್ಷದ ಹುಟ್ಟು ಹಬ್ಬ ಆಚರಿಸಿದ್ರು. ಅಂದಹಾಗೆ, ಮೈಲಾರಿ ಅನ್ನೋ ಹೋರಿ ಈಗಾಗಲೇ ನಾಲ್ಕೈದು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದೆ. ತಮ್ಮ ಮನೆಯಲ್ಲೆ ಹುಟ್ಟಿ ಬೆಳೆದ ಹೋರಿಗೆ ಇಡೀ ಮನೆಯ ಮಂದಿ ತಮ್ಮ ಮನೆಮಗನ ಹಾಗೇ ಮುದ್ದು ಮಾಡುತ್ತಾರೆ. ಪ್ರೀತಿಯಿಂದ ತುತ್ತು...
ಹುನಗುಂದ ವಿಠ್ಠಲ ರುಕ್ಮಾಯಿ ಮಂದಿರದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ..!
ಮುಂಡಗೋಡ:ತಾಲೂಕಿನ ಹುನಗುಂದ ಗ್ರಾಮದ ವಿಠಲ ರುಕ್ಮಿಣಿ ಹರಿಮಂದಿರದಲ್ಲಿ ರವಿವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 29-8-2021 ರಂದು ರವಿವಾರ ದಿವಸ ಬೆಳಿಗ್ಗೆ 10-00 ಘಂಟೆಗೆ ವಿಠ್ಹಲ ರುಕ್ಮಿಣಿ ಹರಿ ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣನನ್ನು ತೊಟ್ಟಿಲು ಹಾಕುವ ಕಾರ್ಯಕ್ರಮ ಇರುತ್ತದೆ. ಮಧ್ಯಾನ ಪ್ರಸಾಧ ವ್ಯವಸ್ಥೆ ಇರುವದರಿಂದ ಎಲ್ಲಾ ಭಕ್ತಾದಿಗಳು ಭಾಗವಹಿಸಬೇಕೆಂದು ಪಾಂಡುರಂಗ ಸೇವಾ ಸಮಿತಿಯವರು ಮನವಿ ಮಾಡಿದ್ದಾರೆ.









