ಮುಂಡಗೋಡ : ತಾಲೂಕಿನ ಆಲಳ್ಳಿ ಗ್ರಾಮದ ಕಾಡಿನಲ್ಲಿ ಅಣಬೆ ಕೀಳಲು ಹೋದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದ ಘಟನೆ ನಡೆದಿದೆ. ಇಂದು ನಸುಕಿನ ಜಾವ ಆಲಳ್ಳಿ ಗ್ರಾಮದ ಧರ್ಮಣ್ಣ ಖಂಡೋಜಿ ಹಾಗೂ ಸಂಗಡಿಗರು ಸೇರಿ ಆಲಳ್ಳಿ ಅರಣ್ಯದಲ್ಲಿ ಅಣಬೆ ಕೀಳಲು ಹೋದಾಗ ಧರ್ಮಣ್ಣನ ಮೇಲೆ ಕರಡಿ ದಾಳಿ ಮಾಡಿದೆ ಅಂತಾ ತಿಳಿದು ಬಂದಿದೆ. ಅರಣ್ಯದಂಚಿನಲ್ಲಿರುವ ಗೋವಿನಜೋಳ ಹೊಲಕ್ಕೆ ಹೋದ ಸಂದರ್ಭದಲ್ಲಿ ಮಂಗಗಳನ್ನು ಓಡಿಸಲು ಹೋದಾಗ ಕರಡಿ ದಾಳಿ ಮಾಡಿದೆ. ಕರಡಿಯ ಜೊತೆ ಎರಡು ಮರಿಗಳಿದ್ದವು. ಜೋರಾಗಿ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!
ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ...
ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ನಾಗರಿಕರಿಗೆ ರಕ್ಷಾಬಂಧನ..!
ಮುಂಡಗೋಡ: ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ನಿಮಿತ್ತ ಹಿರಿಯ ನಾಗರಿಕರಿಗೆ ರಾಖಿ ಕಟ್ಟುವ ಮೂಲಕ ಆಚರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ, ತಾಲೂಕಾಧ್ಯಕ್ಷೆ ಲೈಸಾ ಥಾಮಸ್, ಪ್ರದಾನ ಕಾರ್ಯದರ್ಶಿ ಅಂಜು ಪಾಯಣ್ಣವರ, ಉಪಾಧ್ಯಕ್ಷೆ ಸರಸ್ವತಿ ಕೊಂಡ್ಲಿ, ಮತ್ತು ಸವಿತಾ ಸಾನು ಸೇರಿ ಹಲವರು ಹಾಜರಿದ್ದರು.
ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!
ಮುಂಡಗೋಡ: ಪಟ್ಟಣದಲ್ಲಿ ಕೊರವ ಸಮಾಜದ ಶಿವಶರಣ ಶ್ರೀ ನೂಲಿ ಚಂದಯ್ಯ ನವರ ಜಯಂತೋತ್ಸವ ಕಾರ್ಯಕ್ರಮವನ್ನು ಬಂಕಾಪುರ ರಸ್ತೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾಜದ ಗುರುಹಿರಿಯರ ಹಾಗೂ ಸಮಾಜದ ಬಂಧು ಮಿತ್ರ ಸಹೋದರರ ಆಶ್ರಯದಲ್ಲಿ ಶಿವ ಶರಣರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಲಾಯಿತು. ಕಾಯಕಯೋಗಿ ನೂಲಿಯ ಚಂದಯ್ಯನವರು ಜನಿಸಿದ ದಿನವಾದ ಇಂದು ರಕ್ಷಾ ಬಂಧನದ ಪ್ರಯುಕ್ತವಾಗಿ ಬಂಧುಗಳಲ್ಲಿ ಶ್ರೀರಕ್ಷೆ ನಮ್ಮೆಲ್ಲರಿಗೂ ರಕ್ಷಣೆ ಆಗಲೆಂದು ರಕ್ಷಾಬಂಧನವನ್ನು ಮಾಡಿಸಿ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವೇಳೆ ತಾಲೂಕಿನ ಸಮಾಜದ ಎಲ್ಲ...
ನಾಗರಹಾವು ಸೆರೆಹಿಡಿದು ರಕ್ಷಿಸಿದ ಅರಣ್ಯ ಸಿಬ್ಬಂದಿ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ಹತ್ತಿರ ವಿರುವ ರಾಮಣ್ಣ ಕುನ್ನೂರ ಅವರ ಹಿತ್ತಲಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆತಂಕ ಹುಟ್ಟಿಸಿತ್ತು. ಹೀಗಾಗಿ, ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಕರೆ ಮಾಡಿದ್ರು. ನಂತರ ಬಂದ ಅರಣ್ಯ ಸಿಬ್ಬಂದಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದ್ರು. ನಂತರ ಸೆರೆಹಿಡಿದ ಹಾವನ್ನು ಸುರಕ್ಷಿತವಾಗಿ ಕಾಡಿನಲ್ಲಿ ಬಿಡಲಾಯಿತು.. ಹೀಗಾಗಿ, ಅಲ್ಲಿನ ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಗ್ರಾಮದ ಗ್ರಾಮದೇವಿ ದ್ಯಾಮವ್ವ ತಾಯಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರಿಸಲಾಯಿತು. 108 ದಿನದ ಉಡಿತುಂಬುವ ಕಾರ್ಯಕ್ರಮವನ್ನು ಗ್ರಾಮಸ್ಥರು ಶೃದ್ದಾಪೂರ್ವಕವಾಗಿ ನೆರವೇರಿಸಿದ್ರು. ಈ ವೇಳೆ ದ್ಯಾಮವ್ವ ತಾಯಿಗೆ ಸಾಂಪ್ರದಾಯಿಕವಾಗಿ ಉಡಿ ತುಂಬಲಾಯಿತು. ವಿಶೇಷವಾಗಿ ಪೂಜೆ ನೆರವೇರಿಸಿ ಪ್ರಸಾದ ಹಂಚಲಾಯಿತು. ಈ ವೇಳೆ ಗ್ರಾಮದ ಮುಖಂಡರು, ಮುತ್ತೈದೆಯರು ಸೇರಿದಂತೆ ಹಲವರು ಭಾಗಿಯಾಗಿದ್ರು.
ಸಿದ್ದಪ್ಪ ಹಡಪದ್ ಗೆ ಟಿಕೆಟ್ ನೀಡುವಂತೆ ಒತ್ತಾಯ: ಸಚಿವ ಹೆಬ್ಬಾರ್ ರನ್ನು ಭೇಟಿ ಮಾಡಿದ ಹುನಗುಂದ ಮುಖಂಡರು..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮುಖಂಡರು ಹಾಗೂ ಗ್ರಾಮದ ನೂರಾರು ಜನ ಬಿಜೆಪಿ ಕಾರ್ಯಕರ್ತರು ಇಂದು ಯಲ್ಲಾಪುರಕ್ಕೆ ತೆರಳಿ, ಸಚಿವ ಶಿವರಾಮ್ ಹೆಬ್ಬಾರ್ ರವರನ್ನು ಭೇಟಿಯಾಗಿದ್ರು. ಮುಂಬರುವ ಜಿಲ್ಲಾಪಂಚಾಯತಿ ಚುನಾವಣೆಗೆ ಇಂದೂರು ಜಿ ಪಂ ಕ್ಷೇತ್ರದಿಂದ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ್ ರವರಿಗೇ ಅಭ್ಯರ್ಥಿಯನ್ನಾಗಿಸಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಿದ್ದಪ್ಪ ಹಡಪದ್ ರವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಕಳೆದ ಎರಡು ಬಾರಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತಿದ್ದಾರೆ. ಇಂದೂರು ಕ್ಷೇತ್ರದಲ್ಲಿ ಸಿದ್ದಪ್ಪ ಹಡಪದ್...
ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪೋಟಕ ಬದಲಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆಗೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಕಳಾಹೀನವಾಗಿರೋ “ಕೈ” ಪಾಳಯಕ್ಕೆ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿಗಳೇ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಬಾತ್ಮಿ ಕ್ಷೇತ್ರದ ಬಿಜೆಪಿ ಪಾಲಿಗೆ ಖಂಡಿತ ಪೂರಕವಾಗಿಲ್ಲ. ಬದಲಾಗಿ ಇಲ್ಲಿನ ಬಿಜೆಪಿಗೆ “ಅದೇನೋ ಕಾದಿದೆ” ಅನ್ನೋ ಸ್ಪಷ್ಟ ಸೂಚನೆಗಳು ಕಾಣಸಿಗ್ತಿವೆ. ಆಂತರಿಕ ಕುದಿ… ನಿಜ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಇಡೀ ಕ್ಷೇತ್ರದಲ್ಲಿ ಆಂತರಿಕ ಬೆಗುದಿ ಅನ್ನೋದು ಬಹುಶಃ ಯಾರೂ...
ಇದು ಉತ್ತರ ಕನ್ನಡದ ಹೆಮ್ಮೆ..! ಪ್ರತಿಷ್ಠಿತ ನಾಸಾಗೆ ಕನ್ನಡ ಕುವರನ ಆಯ್ಕೆ..!!
ಸಿದ್ದಾಪುರ: ಹಂಟ್ಸ್ವಿಲ್ ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ (UAH) ಇಬ್ಬರು ಡಾಕ್ಟರೇಟ್ ವಿದ್ಯಾರ್ಥಿಗಳು ಸಲ್ಲಿಸಿರುವ ಸಂಶೋಧನಾ ಪ್ರಸ್ತಾವನೆಯನ್ನು ಬಾಹ್ಯಾಕಾಶ ವಿಜ್ಞಾನ ವಿಭಾಗವು ನಾಸಾ ಅರ್ಥ್ ಮತ್ತು ಸ್ಪೇಸ್ ಸೈನ್ಸ್ ಮತ್ತು ಟೆಕ್ನಾಲಜಿ (FINESST) ಅನುದಾನದಲ್ಲಿ NASA ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಭಾಜನವಾಗಿದೆ. ಕ್ಯಾಥರೀನ್ ಡೇವಿಡ್ಸನ್ ಮತ್ತು ದಿನೇಶ (ದಿನೇಶ್) ವಸಂತ ಹೆಗಡೆ ತಲಾ 135000 ಅಮೇರಿಕನ್ ಡಾಲರ್ ಅನ್ನು ಸ್ಟೈಫಂಡ್ , ಟ್ಯೂಷನ್, ಸಂಶೋಧನಾ ಚಟುವಟಿಕೆಗಳು ಮತ್ತು ಪ್ರಯಾಣ ವೆಚ್ಚಗಳನ್ನು ಭರಿಸಲು, ಕಾರ್ಯಾಗಾರಗಳು ಮತ್ತು ಸಮ್ಮೇಳನಗಳಿಗೆ ಹಾಜರಾಗಲು...
ಮುಂಡಗೋಡ ತೃಪ್ತಿ ವೈನ್ ಶಾಪ್ ನಲ್ಲಿ ಕಳ್ಳರ ಕೈಚಳಕ, ಪೊಲೀಸರು ದೌಡು..!
ಮುಂಡಗೋಡ: ಪಟ್ಟಣದ ತೃಪ್ತಿ ವೈನ್ ಶಾಪ್ ನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ತಡರಾತ್ರಿ ಅಂಗಡಿಯ ಮೇಲ್ಚಾವಣಿಯ ಹೆಂಚು ತೆರೆದು ಒಳನುಗ್ಗಿ ಕಳ್ಳತನ ಮಾಡಿರೋ ಖದೀಮರು ವೈನ್ ಶಾಪ್ ನಲ್ಲಿದ್ದ ಹಣ ಸೇರಿದಂತೆ ಮದ್ಯದ ಬಾಟಲ್ ಗಳನ್ನೂ ಕದ್ದೋಯ್ದಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕಳ್ಳತನವಾದ ಹಣವೆಷ್ಟು..? ಯಾವ್ಯಾವ ವಸ್ತುಗಳನ್ನು ಎಗರಿಸಲಾಗಿದೆ ಅನ್ನೋ ಬಗ್ಗೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನೇನು ಕೆಲವೇ ಹೊತ್ತಲ್ಲಿ ಕಳ್ಳತನದ ಅಸಲೀ ಮಾಹಿತಿಗಳು ಹೊರಬರಲಿದೆ.









