ಮುಂಡಗೋಡ: ಜಿಲ್ಲಾ ಪಂಚಾಯತ ತಾಲೂಕಾ ಪಂಚಾಯತ ಚುನಾವಣೆ ಕಾವು ಮತ್ತೆ ಏರ ತೊಡಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತುದಿಗಾಲಲ್ಲಿ ನಿಂತಿದೆ ಅನ್ನೋ ಸಂಗತಿ ಹೊರಬೀಳುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಮತ್ತೆ ಒಳಗೊಳಗೆ ಚುನಾವಣೆಯ ಪೀಕಲಾಟಗಳು ಶುರುವಾಗಿವೆ. ಅದರ ಭಾಗವಾಗಿ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಬಾಚಣಕಿ ತಾಪಂ ಕ್ಷೇತ್ರದಲ್ಲಿ ಟಿಕೆಟ್ ಹಂಬಲಗಳು ಎರಡೂ ಕ್ಷೇತ್ರದಲ್ಲಿ ಚಾಲ್ತಿ ಪಡೆದುಕೊಂಡಿವೆ. ಕಾಂಗ್ರೆಸ್ ಗೆ ಮೊನ್ಸಿ..! ಬಾಚಣಕಿ ತಾಪಂ ಕ್ಷೇತ್ರ ಬಾಚಣಕಿ, ನ್ಯಾಸರ್ಗಿ, ಅರಷಿಣಗೇರಿ, ಮಜ್ಜಿಗೇರಿ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಹುಲಿ ವೇಷದ ಕಂದಾಚಾರದಲ್ಲಿ ಪುಟ್ಟ ಕಂದಮ್ಮಗಳ ಶೋಷಣೆ ಎಷ್ಟು ಸರಿ..? ಅಧಿಕಾರಿಗಳೇ ಒಂದಿಷ್ಟು ಗಮನಹರಿಸಿ..!
ಮುಂಡಗೋಡ: “ಮೊಹರಂ” ಇದು ಬಹುತೇಕ ಹಿಂದು ಮುಸ್ಲಿಂ ಭಾವೈಕ್ಯತೆಯಿಂದ ಆಚರಿಸಲ್ಪಡೋ ಹಬ್ಬ. ಈ ಹಬ್ಬ ಬಂತು ಅಂದ್ರೆ ಸಾಕು ತಾಲೂಕಿನಲ್ಲಿ ಕೆಲವು ಮೂಢ ನಂಬಿಕೆಗಳೂ ಕೂಡ ಜೊತೆ ಜೊತೆಯಾಗೇ ಜಾರಿಯಾಗುತ್ತಿವೆ. ಪ್ರತೀ ವರ್ಷವೂ ಈ ಹಬ್ಬದಲ್ಲಿ ಅದೊಂದು ಪದ್ದತಿ ನಿಜಕ್ಕೂ ಪ್ರಜ್ಞಾವಂತರಿಗೆ ಒಂದಿಷ್ಟು ಆತಂಕ ಮೂಡಿಸಿದೆ. ಹುಲಿವೇಷ..! ಅಸಲು, ಮೊಹರಂ ಬಂತು ಅಂದ್ರೆ ತಾಲೂಕಿನಲ್ಲಿ ಅದೊಂದು ಪದ್ದತಿ ಇವತ್ತಿಗೂ ಜಾರಿಯಲ್ಲಿದೆ. ಪಂಜಾಗಳಿಗೆ ಹರಕೆ ಹೊರುವ ಭಕ್ತರು ಹರಕೆ ಈಡೇರಿದ ಮೇಲೆ ಹುಲಿವೇಷ ಹಾಕುತ್ತಾರೆ. ಮೈಗೇಲ್ಲ ಬಣ್ಣದಿಂದ ಹುಲಿಯ...
ಇವ್ರೇನು “ಯಮದೂತರಾ..? ತಮ್ಮ ಆಸ್ಪತ್ರೆಯ ತ್ಯಾಜ್ಯವನ್ನು ನ್ಯಾಸರ್ಗಿ ರಸ್ತೆಗೆ ಎಸಿತಾರಲ್ಲ, ನಾಚಿಕೆಯಾಗಲ್ವಾ..?
ಮುಂಡಗೋಡ: ಪಟ್ಟಣದ ಅಯ್ಯಪ್ಪ ದೇವಸ್ಥಾನದ ಹತ್ತಿರ ನ್ಯಾಸರ್ಗಿಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರು ಭಯದಲ್ಲೇ ಓಡಾಡುವ ಪರಿಸ್ಥಿತಿ ಇದೆ. ಯಾಕಂದ್ರೆ, ಇಲ್ಲಿ ಅದ್ಯಾರೋ ಮತಿಹೀನ ಆಸ್ಪತ್ರೆಯವರು ತಮ್ಮ ಆಸ್ಪತ್ರೆಯ ತ್ಯಾಜ್ಯಗಳನ್ನು ತಂದು ಎಲ್ಲೆಂದರಲ್ಲಿ ಬಿಸಾಡಿ ಹೋಗ್ತಿದಾರೆ. ಹೊಟ್ಟೆಗೇನು ಸೆಗಣಿ ತಿಂತಾರಾ..? ಹಾಗಂತ, ಇಲ್ಲಿನ ರಸ್ತೆಯಲ್ಲಿ ತಿರುಗಾಡೋ ನ್ಯಾಸರ್ಗಿಯ ಜನ ಆಕ್ರೋಶ ವ್ಯಕ್ತ ಪಡಿಸ್ತಿದಾರೆ. ಯಾಕಂದ್ರೆ, ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಿದ ಸಿರೀಂಜ್, ಸೂಜಿಗಳು ಸೇರಿದಂತೆ ಔಷಧಿಯ ಖಾಲಿ ಬಾಟಲ್ ಗಳನ್ನು ಇಲ್ಲಿ ತಂದು ಎಸೆದು ಹೋಗಲಾಗ್ತಿದೆ. ಹಾಗಿದ್ದಾಗ, ಅದ್ಯಾವ ವೈದ್ಯ...
ರಸ್ತೆಯ ಅವ್ಯವಸ್ಥೆ ಕಣ್ಣಾರೆ ಕಂಡ PWD ಇಂಜಿನೀಯರ್..! ಫಿಲ್ಡಿಗೆ ಇಳಿದೇ ಬಿಟ್ರು ಸಾಹೇಬ್ರು..!!
ಮುಂಡಗೋಡ; ತಾಲೂಕಿನ ವಡಗಟ್ಟಾ ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದಲ್ಲಿ ನಡೆದಾಡಲೂ ಆಗದ ಸ್ಥಿತಿಯಲ್ಲಿದೆ, PWD ಇಲಾಖೆಯ ಅಧಿಕಾರಿಗಳು ನಿರ್ಲಕ್ಷ ವಹಿಸ್ತಿದ್ದಾರೆ ಅನ್ನೋ ಸುದ್ದಿ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಕಟಿಸುತ್ತಿದ್ದಂತೆ PWD ಇಂಜಿನೀಯರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಬೆಳಿಗ್ಗೆ ರಸ್ತೆಯ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯ ಕುರಿತು ವಿಸ್ತೃತ ವರದಿ ಪ್ರಕಟವಾಗಿತ್ತು. ವರದಿ ಪ್ರಸಾರವಾದ ಅರ್ಧ ಗಂಟೆಯಲ್ಲೇ ಅಧಿಕಾರಿಗಳು ಬೇಟಿ ನೀಡಿ, ರಸ್ತೆಯ ಅವ್ಯವಸ್ಥೆ ಸರಿಪಡಿಸಲು ಮುಂದಾಗಿದ್ದಾರೆ. ಇನ್ನು PWD ಇಂಜಿನೀಯರ್...
ಮುಂಡಗೋಡ PWD “ಪ್ಯಾಚ್ ಪೇಮೆಂಟ್” ನಲ್ಲಿ ಹಡಾಲೆದ್ದು ಹೋದ ರಸ್ತೆಗಳೆಷ್ಟು..? ಇಂಜಿನೀಯರ್ ಎಲ್ಲಿದ್ದೀಯಪ್ಪಾ..?
ಮುಂಡಗೋಡ; ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಅನ್ನೋದು ಇದೆಯಾ ಅಥವಾ ಬೀಗ ಜಡಕೊಂಡು ಎಲ್ಲಾದ್ರೂ ಹಾಳಾಗಿ ಹೋಗಿದೆಯಾ..? ಇಂತಹದ್ದೊಂದು ಪ್ರಶ್ನೆ ಮುಂಡಗೋಡ ತಾಲೂಕಿನ ಮಂದಿ ಕೇಳ್ತಿದಾರೆ. ಯಾಕಂದ್ರೆ ತಾಲೂಕಿನ ಬಹುತೇಕ ರಸ್ತೆಗಳ ಸ್ಥಿತಿ ಹಡಾಲೆದ್ದು ಹೋಗಿದೆ. ಆದ್ರೆ, PWD ಅನ್ನೋ ಇಲಾಖೆಯ ಅಧಿಕಾರಿಗಳು ಮಾತ್ರ ಅದೇಲ್ಲೋ ಹೋಗಿ ಗಡದ್ದಾಗಿ ನಿದ್ದೆ ಮಾಡ್ತಿದಾರೆ. ವಡಗಟ್ಟಾ- ಅಗಡಿ ರಸ್ತೆ ಕತೆ..! ನಿಜ, ಈ ಲೋಕೋಪಯೋಗಿ ಇಲಾಖೆಯ ಅಡಿಯಲ್ಲೇ ಬರುವ ವಡಗಟ್ಟಾ-ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದ ಹತ್ತಿರ ಹದಗೆಟ್ಟು ಹಳ್ಳ ಹಿಡಿದಿದೆ....
ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು..!
ಕುಮಟಾ: ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ಸಾವು ಕಂಡ ಘಟನೆ ತಾಲೂಕಿನ ಬಾಡ ಬೀಚ್ ನಲ್ಲಿ ನಡೆದಿದೆ. ದಾವಣಗೇರೆ ಮೂಲದ ಮೇಘ ಎಂ(24) ಹಾಗೂ ರೇಣುಕಾ ಪ್ರಸಾದ್ (24) ಮೃತ ವಿದ್ಯಾರ್ಥಿಗಳು. ಇಂಜಿನಿಯರಿಂಗ್ ವಿದ್ಯಾಭ್ಯಾಸ ಈ ವರ್ಷ ಮುಗಿದಿತ್ತು. ಹೀಗಾಗಿ, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ದುರ್ಘಟನೆ ನಡೆದಿದೆ. ಮೇಘಾ ಮೃತದೇಹ ಸಿಕ್ಕಿದ್ದು, ರೇಣುಕಾ ಪ್ರಸಾದ್ ದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೊಹರಂ ಹುಲಿವೇಷಧಾರಿ ಹಾಗೂ ತಮಟೆ ಕಲಾವಿದನ ಜುಗಲ್ ಬಂದಿ..!
ಮುಂಡಗೋಡ: ತಾಲೂಕಿನಲ್ಲಿ ಸದ್ಯ ಮೊಹರಂ ಆಚರಣೆ ಭಕ್ತಿ ಭಾವದಿಂದ ನೆರವೇರುತ್ತಿದೆ. ತಾಲೂಕಿನಾಧ್ಯಂತ ಪಂಜಾಗಳನ್ನು ಪ್ರತಿಷ್ಟಾಪಿಸಲಾಗಿದೆ. ಹೀಗಾಗಿ, ಹುಲಿ ವೇಷಧಾರಿಗಳ ಕುಣಿತವೂ ಎಲ್ಲೆಲ್ಲೂ ಕಂಡು ಬರುತ್ತಿದೆ. ಅದ್ರಂತೆ, ಇಂದು ಮುಂಡಗೋಡ ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತ ಹುಲಿವೇಷಧಾರಿ ಬಂದಿದ್ದರು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಬಂದಿದ್ದ ಪ್ರಸಿದ್ಧ ತಮಟೆ ಕಲಾವಿದ ಪ್ರತಾಪ್ ಅವರು ತಮಟೆ ಬಾರಿಸಿದ್ರು. ತಮಟೆ ಶಬ್ದಕ್ಕೆ ಹುಲಿ ವೇಷಧಾರಿ ಸಕತ್ ಸ್ಟೆಪ್ ಹಾಕಿದ್ರು. ಮುಂಡಗೋಡಿನ ಶಿವಾಜಿ ಸರ್ಕಲ್ ಬಳಿ ಹುಲಿಯ ನೃತ್ಯಕ್ಕೆ ಜನರು ಫಿದಾ ಆಗಿ ಚಪ್ಪಾಳೆ...
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವಂತೆ ಮನವಿ..!
ಮುಂಡಗೋಡ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪಿಸುವಂತೆ ಇಂದು ಮುಂಡಗೋಡಿನ ರಾಯಣ್ಣ ಅಭಿಮಾನಿ ಬಳಗದಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಳೆದ ಹಲವು ವರ್ಷಗಳಿಂದ ಪಟ್ಟಣದ ಯಲ್ಲಾಪುರ-ಬಂಕಾಪುರ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆ ಅಂತಾ ನಾಮಕರಣ ಮಾಡಲಾಗಿದೆ. ಆ ಕುರಿತು ಪಟ್ಟಣ ಪಂಚಾಯತಿಯಲ್ಲಿ ದಾಖಲಾಗಿದೆ. ಆದ್ರೆ ತಾಲೂಕಿನ ಸುಮಾರು 50 ಕಿಮಿ ವ್ಯಾಪ್ತಿಯಲ್ಲಿ ಎಲ್ಲಿಯೂ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆಯಾಗಿಲ್ಲ. ಹೀಗಾಗಿ, ಪಟ್ಟಣದ ಕಂಬಾರಗಟ್ಟಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ಮುಂದಿನ ಪೀಳಿಗೆಗೆ ರಾಯಣ್ಣನವರ...
ಇದು ಮುಂಡಗೋಡ ಪುಟಾಣಿಗಳ ಪವರ್ ಫುಲ್ ಸ್ಟೆಪ್..!
ಮುಂಡಗೋಡ; ಪಟ್ಟಣದಲ್ಲಿ ರವಿವಾರ 75 ನೇ ಸ್ವಾತಂತ್ರ ದಿನಾಚರಣೆ ಸಂಭ್ರಮ ಜೋರಾಗಿತ್ತು.. ಇಲ್ಲಿನ ಪ್ರತೀ ಗಲ್ಲಿಗಳಲ್ಲೂ ಭಾರತ ಮಾತೆಯ ತ್ರಿವರ್ಣಧ್ವಜ ರಾರಾಜಿಸುತ್ತಿತ್ತು.. ಪಟ್ಟಣದ ಸಂಘಸಂಸ್ಥೆಗಳು ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ರು..ಇನ್ನು ಸ್ವಾತಂತ್ರ ದಿನಾಚರಣೆ ನಿಮಿತ್ತ ಮುಂಡಗೋಡಿನ ಪುಟ್ಟ ಪುಟಾಣಿ ಮಕ್ಕಳು ದೇಶಭಕ್ತಿಗೀತೆಗೆ ಹೆಜ್ಜೆ ಹಾಕಿದ್ದಾರೆ.. ಸ್ವಾತಂತ್ರ ಸಂಭ್ರಮದ ಕ್ಷಣಗಳನ್ನು ವಿನೂತನ ಡ್ಯಾನ್ಸ್ ಮಾಡುವ ಮೂಲಕ ದೇಶಭಕ್ತಿಯ ಕಂಪು ಹರಿಸಿದ್ದಾರೆ.. ಹಾಗಾದ್ರೆ ಆ ಸಕತ್ ಸ್ಟೆಪ್ ಹೇಗಿದೆ ಗೊತ್ತಾ.. ನೀವೂ ನೋಡಿ..
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.









