ಮುಂಡಗೋಡ- ತಾಲೂಕಿನಲ್ಲಿ ಮಳೆಯ ಅವಾಂತರಗಳು ಶುರುವಾಗಿದೆ. ಶುಕ್ರವಾರ ತಾಲೂಕಿನ ಹುಲಿಹೊಂಡ ಗ್ರಾಮದ ಗದ್ದೆಯಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ಪರಿಣಾಮ, ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದ 9 ಜನರಿಗೆ ಸಿಡಿಲಿನ ಶಾಖ ತಟ್ಟಿ ಚಿಕ್ಕ ಪುಟ್ಟ ಗಾಯವಾದ ಘಟನೆ ನಡೆದಿದೆ. ಹುಲಿಹೊಂಡ ಗ್ರಾಮದ ರಾಮಪ್ಪ ಬಸಪ್ಪ ಕಬ್ಬೇರ್ ಎಂಬುವವರು ತಮ್ಮ ಜಮೀನಿನಲ್ಲಿ ನಿನ್ನೆ ಶುಕ್ರವಾರ ಗೋವಿನ ಜೋಳ ಬೀಜ ಬಿತ್ತನೆ ಮಾಡುತ್ತಿದ್ದರು. ಈ ವೇಳೆ ಮಳೆ ಬಂದ ಕಾರಣ ಮಳೆಯ ಹನಿಯಿಂದ ತಪ್ಪಿಸಿಕೊಳ್ಳಲು ಬೀಜ ಬಿತ್ತನೆಯಲ್ಲಿ ತೊಡಗಿದ್ದ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
VRDM ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸೆಪ್ಟಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದೇಶಪಾಂಡೆ ರೂಡ್ ಸೆಟಿ ವತಿಯಿಂದ ಇಂದು ಮೆಡಿಕಲ್ ಸೆಪ್ಟಿ ಕಿಟ್ ವಿತರಿಸಲಾಯಿತು. ತಾಲೂಕಿನ ಹುನಗುಂದ ಗ್ರಾಮದ ವಿರಕ್ತ ಮಠದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ಉದ್ಘಾಟಿಸಿ ಮಾತನಾಡಿದ್ರು. ಹುನಗುಂದ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಕುನ್ನೂರ್, ಉಪಾಧ್ಯಕ್ಷ ತುಕಾರಾಮ್ ಹೊನ್ನಳ್ಳಿ, ಕಾಂಗ್ರೆಸ್ ಯುವ ಮುಖಂಡ ಧರ್ಮರಾಜ್ ನಡಗೇರಿ, ಗ್ರಾಪಂ ಸದಸ್ಯರಾದ ಈಶ್ವರಗೌಡ ಅರಳಿಹೊಂಡ ಸೇರಿ ದೇಶಪಾಂಡೆ ರೂಡಸೆಟಿಯ ಸಂಚಾಲಕರು ಉಪಸ್ತಿತರಿದ್ದರು.
ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!
ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ದೇಹಳ್ಳಿ, ಆನಗೋಡ ಹಾಗೂ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳ, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ,ಗ್ರಾಮಗಳಲ್ಲಿ ಕೊರೊನಾ ಸೋಂಕನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಸ್ಥರನ್ನು ಭೇಟಿಯಾಗಿ ಕೋವಿಡ್ 19 ಸೋಂಕಿನ ಕುರಿತು ಜಾಗೃತಿ ಮೂಡಿಸಿ,ಕೋವಿಡ್ ನ...
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.
12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು. ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.
ಕಾರವಾರ ಡಿಸಿ ಕಛೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಹೆಬ್ಬಾರ್ ಸಭೆ..!
ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ...
ಜಿಲ್ಲಾಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ..!
ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಅಸಲಿ ನೋಟಿಗೆ ಕೋಟಾನೋಟು ಮಾರಾಟ ಜಾಲ: 6 ಜನ ದಂಧೆಕೋರರ ಬಂಧನ..!
ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ...
ನಂದಿಕಟ್ಟಾದಲ್ಲಿ ಕೊರೋನಾ ಸೋಂಕಿತರಿಗೆ ಔಷಧಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ರೈತ ಮೂರ್ಚಾ ಅಧ್ಯಕ್ಷರಾದ ಕಲ್ಲನಗೌಡ ಬಸನ ಗೌಡ್ರ, ತಾಲೂಕ ಎಪಿಎಮ್ ಸಿ ಸದಸ್ಯರು ನಿಂಗಪ್ಪಾ ಕವಟೆ, ಪರಶುರಾಮ್ ಮೇಂತೆಕಾರ, ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ...
SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗುವುದು ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ. ಇನ್ನು...





