ಕಾರವಾರ- ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಜಿದ್ದಾ ಜಿದ್ದು ಬಗೆ ಹರಿಯುವ ಲಕ್ಷಣಗಳೇ ಕಾಣ್ತಿಲ್ಲ.. ಕಳೆದ ಮೂರು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರೋ ಸಾರಿಗೆ ಚಾಲಕ, ನಿರ್ವಾಹಕರು ನಾಳೆಯೂ ಮುಷ್ಕರ ಮುಂದುವರೆಸಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಂಧಾನ ಮತ್ತೆ ವಿಫಲವಾಗಿದೆ. ವಿಧಾನ ಸಭೆಯಲ್ಲಿ ನಡೆದ ಸಭೆಯಲ್ಲಿ ಬಹುತೇಕ ಸರ್ಕಾರದ ಜೊತೆ ಸಂಧಾನ ಯಶಸ್ವಿ ಅಂತಾನೇ ಭಾವಿಸಲಾಗಿತ್ತು.. ಆದ್ರೆ, ಸಭೆಯ ಬಳಿಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನಾಳೆ ಮುಷ್ಕರ ಮುಂದುವರಿಯೋ ಬಗ್ಗೆ ಪ್ರೀಡಂ ಪಾರ್ಕ್ ನಲ್ಲಿ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಉತ್ತರ ಕನ್ನಡ
ಗ್ರಾ.ಪಂ ಚುನಾವಣೆ; ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣು: ಡಿಸಿ ಡಾ.ಹರೀಶ್ ಕುಮಾರ್
ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿನ ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ ಮುಗಿದಿದೆ. ಇನ್ನು, ಎರಡನೇ ಹಂತದಲ್ಲಿ ಸಿದ್ದಾಪುರ, ಸಿರಸಿ, ಮುಂಡಗೊಡ, ಯಲ್ಲಾಪುರ, ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾಗಳಲ್ಲಿ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ...
ಹುನಗುಂದ ಬಳಿ ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಗಡಿ ಮಹಿಳೆ
ಮುಂಡಗೋಡ- ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ 108 ಅಂಬುಲೆನ್ಸ್ ನಲ್ಲಿಯೇ ಗರ್ಭಿಣಿಯೊಬ್ರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.. ಮುಂಡಗೋಡ ತಾಲೂಕಿನ ಅಗಡಿ ಗ್ರಾಮದ 22 ವರ್ಷ ವಯಸ್ಸಿನ ಲಕ್ಷ್ಮೀ ಸುನಿಲ್ ಲಮಾಣಿ ಎಂಬುವರಿಗೆ ಇವತ್ತು ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ 108 ಅಂಬುಲೆನ್ಸ್ ಮೂಲಕ ಮುಂಡಗೋಡ ಆಸ್ಪತ್ರೆಗೆ ಗರ್ಭಿಣಿಯನ್ನು ಸಾಗಿಸುವ ಮದ್ಯೆ ಹುನಗುಂದ ಕ್ರಾಸ್ ಬಳಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.. ಇದು ಇವ್ರಿಗೆ ಎರಡನೇಯ ಹೆರಿಗೆಯಾಗಿದ್ದು ಮಗು ಆರೋಗ್ಯವಾಗಿದೆ.. ಈ ವೇಳೆ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್...
ನಾಳೆಯೂ ಬಸ್ ಗಳು ರಸ್ತೆಗಿಳಿಯಲ್ಲ; ಕುಟುಂಬಸ್ಥರೊಂದಿಗೆ ಪ್ರತಿಭಟನೆಗೆ ಸಜ್ಜಾದ ಸಾರಿಗೆ ನೌಕರರು
ಬೆಂಗಳೂರು- ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ಜೋರಾಗುವ ಲಕ್ಷಣಗಳು ಕಾಣ್ತಿವೆ.. ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಅಂತಾ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸ್ತಿರೋ ಸಾರಿಗೆ ಸಂಸ್ಥೆಯ ಚಾಲಕರು ಹಾಗೂ ನಿರ್ವಾಹಕರು ಎರಡು ದಿನದಿಂದ ಯಾವುದೇ ಸರ್ಕಾರಿ ಬಸ್ ಗಳನ್ನು ರಸ್ತೆಗಿಳಿಸಿಲ್ಲ.. ಪರಿಣಾಮ ನಿನ್ನೆಯಿಂದ ರಾಜ್ಯದಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಇನ್ನು, ಸರ್ಕಾರ ಪ್ರತಿಭಟನಾನಿರತರ ಜೊತೆಗೆ ನಡೆಸುತ್ತಿರೊ ಸಂಧಾನಗಳು ಯಶಸ್ವಿಯಾಗಿಲ್ಲ.. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲ ನೀಡಿದ ಮೇಲಂತೂ ಸಾರಿಗೆ ನೌಕರರ ಮುಷ್ಕರ ಮತ್ತಷ್ಟು...
ಅಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಮುಂಡಗೋಡ- ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ 108 ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರೋ ಘಟನೆ ಮಳಗಿ ಸಮೀಪ ಶಿರಸಿ ರಸ್ತೆಯಲ್ಲಿ ನಡೆದಿದೆ.. ಗೋಟಗೋಡಿಕೊಪ್ಪದ ರೂಪಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.. ಗೊಟಗೋಡಿಕೊಪ್ಪದಿಂದ ಶಿರಸಿ ಗೆ ಹೋಗುವ ಮಾರ್ಗ ಮದ್ಯೆ ಹೆರಿಗೆಯಾಗಿದ್ದು ತಾಯಿ ಮಗು ಆರೋಗ್ಯವಾಗಿದೆ..
ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ
ಮುಂಡಗೋಡ: ಕಾಡಾನೆಗಳು ಭತ್ತದ ಕಾಳು ಬಣವೆಯನ್ನು ತಿಂದು ತುಳಿದು ಹಾನಿ ಮಾಡಿದ್ದನ್ನೆ ಮನಸ್ಸಿಗೆ ಹಚ್ಚಿಕೊಂಡು ತಾಲೂಕಿನ ಬೆಡಸಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ತೊಗರಳ್ಳಿ ಗ್ರಾಮದ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.. ಪ್ರಭಾಕರ್ ವಾಮನ ಕೊರ್ಸಿ(51) ಆತ್ಮಹತ್ಯೆ ಮಾಡಿಕೊಂಡ ರೈತ.. ಈತ ತನ್ನ ವ್ಯವಸಾಯಕ್ಕೆಂದು ವಿವಿಧ ಬ್ಯಾಂಕ ಹಾಗೂ ಸಂಘ ಸಂಸ್ಥೆಗಳಲ್ಲಿ ಸುಮಾರು 4ಲಕ್ಷ 20 ಸಾವಿರ ರೂಪಾಯಿ ಸಾಲ ಮಾಡಿ ಹೊಲದಲ್ಲಿ ಭತ್ತದ ಬೆಳೆಯನ್ನು ಬೆಳೆದು ಕೊಯ್ಲು ಮಾಡಿ ಕಾಳು ತುಂಬಿದ...
ಕಾಲುವೆಯಲ್ಲೂ ಅಕ್ರಮದ ವಾಸನೆ.?; ತನಿಖೆ ಕೋರಿ ತಹಶೀಲ್ದಾರರಿಗೆ ಅಟ್ಟಣಗಿ ಗ್ರಾಮಸ್ಥರ ಮನವಿ
ಮುಂಡಗೋಡ-ತಾಲೂಕಿನ ಅಟ್ಟಣಗಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯವರು ಕೈಗೊಂಡ ಕಾಲುವೆ ಕಾಮಗಾರಿ ಕಳಪೆಯಾಗಿದೆ, ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಬೇಕೆಂದು ಅಟ್ಟಣಗಿ ಗ್ರಾಮಸ್ಥರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ನಾಗನೂರ( ಹನುಮಾಪುರ) ಗ್ರಾಮ ಪಂಚಾಯತ ವ್ಯಾಪ್ತಿಯ ಅಟ್ಟಣಗಿ ಕೆರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಈ ಕಾಮಗಾರಿ ಅಂದಾಜು ಮೊತ್ತ 50 ಲಕ್ಷ ಇದ್ದು ಕಾಮಗಾರಿ ಸಂಪೂರ್ಣ ಕಳಪೆ ಮಾಡಿದ್ದಾರೆ. ಈ ಕಾಮಗಾರಿಯಿಂದ ಅಟ್ಟಣಗಿ ಭಾಗದ ಸುಮಾರು 400 ರಿಂದ 500 ಎಕರೆ ಜಮೀನಿಗೆ ನೀರು ಹಾಯಲು...
ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಸಿಡ್ಲಗುಂಡಿಯಲ್ಲಿ 1 ಎಕರೆ ಕಬ್ಬು ಭಸ್ಮ
ಮುಂಡಗೋಡ- ಗದ್ದೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ, 1 ಎಕರೆ ಕಬ್ಬು ಸುಟ್ಟು ಕರಕಲಾದ ಘಟನೆ ತಾಲೂಕಿನ ಸಿಡ್ಲಗುಂಡಿಯಲ್ಲಿ ನಡೆದಿದೆ.. ಸಿಡ್ಲಗುಂಡಿಯ ರೈತ ಶಾಮು ದಾಕ್ಲು ಶಿಂಧೆ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯ ಮೇಲೆ ಹಾದು ಹೋಗಿರೋ ಕೆಇಬಿ ವಿದ್ಯತ್ ಕಂಬದ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕಿಡಿ ಹೊತ್ತಿಕೊಂಡು ಅವಘಡ ಸಂಭವಿಸಿದೆ.. ಘಟನೆಯಲ್ಲಿ ಸುಮಾರು 1 ಲಕ್ಷ ಮೌಲ್ಯದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯವಾಗಿದೆ.. ಹೀಗಾಗಿ...
ಗ್ರಾಮ ಪಂಚಾಯತಿ ಚುನಾವಣೆ ಸಚಿವ ಹೆಬ್ಬಾರಗೆ ಪ್ರತಿಷ್ಠೆ..! ಕಾಂಗ್ರೆಸ್ಸಿಗೆ ಆಕ್ಸಿಜನ್..?
ಮುಂಡಗೋಡ- ಸದ್ಯ ಗ್ರಾಮ ಪಂಚಾಯತಿ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ.. ಹೀಗಾಗಿ ತಾಲೂಕಿನಾಧ್ಯಂತ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.. ಅಧಿಕೃತ ಪಕ್ಷದ ಚಿನ್ಹೆಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸದೇ ಇದ್ದರೂ, ಆಯಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸೋದಂತೂ ಸತ್ಯ.. ಅದ್ರಲ್ಲೂ ಮುಂಡಗೋಡ ತಾಲೂಕಿನ ಅಷ್ಟೂ ಗ್ರಾಮ ಪಂಚಾಯತಿಗಳಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲೇ ಬೇಕು, ಸಂಪೂರ್ಣ ಗ್ರಾಮ ಪಂಚಾಯತಿಗಳು ಕೇಸರಿಮಯವಾಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿರೋ ಹೆಬ್ಬಾರ್ ಪಡೆಗೆ ತಾಲೂಕಿನಲ್ಲಿ ಒಂದಿಷ್ಟು ಪಕ್ಷದ...
ಲೆಫ್ಟಿನೆಂಟ್ ಅಭಯ್ ಪಂಡಿತ್ ಸಾಧನೆ; ಕನಸಿನ ಮುಂಡಗೋಡ ತಂಡದಿಂದ ಸನ್ಮಾನ
ಮುಂಡಗೋಡ- ಮುಂಡಗೋಡಿನ ಯುವಕ ಅಭಯ್ ಪಂಡಿತ್ ಚೆನ್ನೈನ ಭಾರತೀಯ ಸೇನೆಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ನವೆಂಬರ್ 21 ರಂದು ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡು ಸಾಧನೆಗೈದಿದ್ದಾರೆ. ಮುಂದೆ ರಾಜಸ್ಥಾನದ ವೆಸ್ಟರ್ನ್ ಸೆಕ್ಟರ್ ನಲ್ಲಿ ಸೇವೆ ಸಲ್ಲಿಸಲು ಹೊರಟಿದ್ದಾರೆ. ಈ ಮೂಲಕ ಮುಂಡಗೋಡಿನ ಮೊದಲ ಲೆಫ್ಟಿನೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೀಗಾಗಿ, ನಮ್ಮ ಕನಸಿನ ಮುಂಡಗೋಡ ವೇದಿಕೆ ವತಿಯಿಂದ ಲೆಫ್ಟಿನೆಂಟ್ ಅಭಯ್ ಪಂಡಿತ್ ಅವರಿಗೆ ಮುಂಡಗೋಡಿನ ಪರವಾಗಿ ಅಭಿನಂದಿಸಿ ,ಗೌರವಿಸಲಾಯಿತು.

