Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..!

ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..!

Police News Karwar: ಕಾರವಾರ: ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಅಮೀತ್ ಸಿಂಗ್ ಹೇಳಿದರು. ಅವರು ಸೋಮವಾರ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಂಚಾರ ಜಾಗೃತಿ ಕೆಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅವುಗಳನ್ನು ತಡೆಯುವ ನಿಟ್ಟಿನಲ್ಲಿ, ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಿ ಜಾಗೃತೆಯಿಂದ ವಾಹನ...

Post
ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!

ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!

Fake doctor News: ಕಾರವಾರ: ಜಿಲ್ಲೆಯ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ನಕಲಿ ಕ್ಲಿನಿಕ್‌ಗಳು ಮತ್ತು ವೈದ್ಯರ ವಿರುದ್ದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೆಪಿಎಂಇ ಅಡಿಯಲ್ಲಿ ನೋದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..! ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ 3 ಕ್ಲಿನಿಕ್‌ಗಳ ಮೇಲೆ...

Post
ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!

ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!

Karwar Health News: ಕಾರವಾರ; ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಅಕ್ರಮವಾಗಿ ಗರ್ಭ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಪ್ರಕರಣಗಳು ನಡೆಯದಂತೆ ನಿರಂತರವಾಗಿ ನಿಗಾವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್‌ ಯೋಜನೆಗಳಿವು; ಇಲ್ಲಿದೆ...

Post

ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!

Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ‌. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ...

Post
ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!

ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!

Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ...

Post
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ‌ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!

ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ‌ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!

Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!

ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!

Mundgod News:”ಆಪರೇಷನ್ ಸಿಂಧೂರ”ನಲ್ಲಿ ಭಾರತೀಯ ಸೈನಿಕರು ತೋರಿದ ಅಪ್ರತಿಮ ಹೋರಾಟವನ್ನು ಬೆಂಬಲಿಸಿ ಮುಂಡಗೋಡ ಪಟ್ಟಣದಲ್ಲಿ ಜಾತ್ಯಾತೀತವಾಗಿ “ತಿರಂಗಾ ಯಾತ್ರೆ” ನಡೆಯಿತು. ಪಟ್ಟಣದ ಹಳೂರಿನ ಶ್ರೀ‌ಮಾರಿಕಾಂಬಾ ದೇವಸ್ಥಾನದಿಂದ ಬೃಹತ್ ರಾಷ್ಟ್ರಧ್ವಜದೊಂದಿಗೆ ಯಾತ್ರೆ ಹೊರಟು, ಶಿವಾಜಿ ಸರ್ಕಲ್ ಬಳಿ ಬಂದು ಸೇರುತ್ತಿದೆ. ಯಾತ್ರೆಯುದ್ದಕ್ಕೂ ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ಬೆಂಬಲಿಸಿದ್ರು.

Post
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ

ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ

ಕಾರವಾರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರವಾರ ತಾಲೂಕಾ ಘಟಕದ ಕಾರ್ಯನಿರತ ಪತ್ರಕರ್ತರ ನೂತನ ಸಂಘದ ಪದಾಧಿಕಾರಿಗಳ ಆಯ್ಕೆಯನ್ನ‌ ಪತ್ರಿಕಾಭವನದಲ್ಲಿ ನಡೆಸಲಾಗಿದ್ದು, ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಪವರ್‌ ಟಿವಿ ಜಿಲ್ಲಾ ವರದಿಗಾರ ಉದಯ ಬರ್ಗಿ, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಜಿಲ್ಲಾ ವರದಿಗಾರ ಪ್ರಮೋದ ಹರಿಕಂತ್ರ, ಕಾರ್ಯದರ್ಶಿಯಾಗಿ ನ್ಯೂಸ್ 18 ಜಿಲ್ಲಾ ವರದಿಗಾರ ದರ್ಶನ ನಾಯ್ಕ, ಖಜಾಂಚಿಯಾಗಿ ಸುವರ್ಣವಾಹಿನಿ ಜಿಲ್ಲಾ ವರದಿಗಾರ ಭರತರಾಜ್ ಕಲ್ಲಡಕ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ...

Post
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!

ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!

Women skill training: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆ/ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದ್ದು, ಪ್ರಸ್ತುತ ಗ್ರಾಮೀಣ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯಲಾಗದೇ, ಆದಾಯ ಗಳಿಕೆಗಾಗಿ...

Post
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು  ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ

ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ

Covid-19 News: ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೆಹಲಿ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳು ಲಭ್ಯವಿರುವಂತೆ ನೋಡಿಕೊಂಡು ಸಜ್ಜಾಗಿರುವಂತೆ ಸಲಹೆ ನೀಡಿದೆ. ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರದವರೆಗೆ 23 ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ರೋಗಿಗಳು ದೆಹಲಿಯ ನಿವಾಸಿಗಳೇ ಅಥವಾ ನಗರದ ಹೊರಗೆ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆಯೇ ಎಂಬ ವಿವರಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಆರೋಗ್ಯ ಸಚಿವ...