Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!

ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!

ಕಾರವಾರ; ಜಿಲ್ಲೆಯಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ನೀಡಲಾಗುವ ಅಡುಗೆ ಅನಿಲದ ಸಿಲೆಂಡರ್‌ಗಳು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದ ರೀತಿಯಲ್ಲಿ ಹೆಚ್ಚಿನ ನಿಗಾವಹಿಸಿ, ವಾಣಿಜ್ಯ ಚಟುವಟಿಕೆಗಳು ನಡೆಯುವ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.

Post
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!

ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!

ಕಾರವಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಮೇ 7 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುರುಡೇಶ್ವರದ ಗೃಹ ಕಚೇರಿಯಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡಿದ್ದು , ಜಿಲ್ಲೆಯ ಹಾಗೂ ಕ್ಷೇತ್ರದ ಸಾರ್ವಜನಿಕರು ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Post
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಶಿರಸಿ: ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಅವರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ...

Post
ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!

ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!

 ಶಿರಸಿ; ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಶಿರಸಿ ಮತ್ತು ಸಿದ್ಧಾಪುರ ದಲ್ಲಿ ನಡೆಯುವ ಕಾರ್ಯಕ್ರಮಗಳಿಗಾಗಿ ಶಿರಸಿ ಮಾರಿಕಾಂಬ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಬಂದಿಳಿದರು. ರಾಜ್ಯಪಾಲ ಥಾವರ ಚಂದ್ ಗೆಹಲೊಟ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿಕೊಂಡರು. ಶಿರಸಿಯಲ್ಲಿ ನಡೆದ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ ಗಳು, ತಾಯಿಯ ಸ್ಮೃರಣೆಯಲ್ಲಿ ಒಂದು ವೃಕ್ಷ ದಡಿ, ಶಿರಸಿಯ ಅರಣ್ಯ ಕಾಲೇಜಿನ ಆವರಣದಲ್ಲಿ ತಮ್ಮ ದಿವಂಗತ ತಾಯಿ ಶ್ರೀಮತಿ ಕೇಸರಿ ದೇವಿ...

Post
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!

ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!

ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು...

Post
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಆಗಿ ವಿನೋದ್ ರೆಡ್ಡಿ ಚಾರ್ಜ್ ತಕ್ಕೊಂಡು ನಾಲ್ಕೈದು ದಿನ ಆಗಿದೆ. ನಮ್ಮ ಹನ್ಮಂತ್ ಗುಡುಗುಂಟಿಯವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಹುತೇಕ ನಿರೀಕ್ಷೆಯಂತೆಯೇ ರೆಡ್ಡಿ ಸಾಹೇಬ್ರು ಬಂದು ಕೂತಿದ್ದಾರೆ. ನಿಜ ಅಂದ್ರೆ, ಸದ್ಯಕ್ಕಂತೂ, ಪಕ್ಕಾ ಎನರ್ಜೆಟಿಕ್ ಆಗಿರೋ ಹೊಸ ಕ್ರೈಂ ಪಿಎಸ್ಐ, ತಾಲೂಕಿನ ಕ್ರೈಮು ಗಳಿಗೆ ಕಡಿವಾಣ ಹಾಕಲು ಉತ್ಸುಕರಾದಂತೆ ಕಾಣ್ತಿದಾರೆ. ಇವ್ರು ಗಟ್ಟಿ ಹೆಜ್ಜೆ ಇಟ್ಟು ಬಂದ ಕಡೆಯಲ್ಲೇಲ್ಲಾ ಇವ್ರ ಪರವಾಗಿ ಒಂದಿಷ್ಟು ಒಳ್ಳೆಯ ಮಾತುಗಳೇ ಕೇಳಿ ಬರ್ತಿವೆ. ಆದ್ರೆ,...

Post
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ

ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ

ಕಾರವಾರ: ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ನಾಲ್ಕು ಪ್ರಶಸ್ತಿಗಳು ಲಭಿಸಿವೆ ಎಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕ ಧನಂಜಯ ಆಚಾರ್ಯ ರವರು ಹರ್ಷ ವ್ಯಕ್ತಪಡಿಸಿದ್ದಾರೆ. 2024-25 ಆರ್ಥಿಕ ವರ್ಷದಲ್ಲಿ ನಿವ್ವಳ ಖಾತೆಗಳ ಸಂಖ್ಯೆಯ ವಿಭಾಗದಲ್ಲಿ ಹಾಗೂ ಅಂಚೆ ಉಳಿತಾಯ ಯೋಜನೆಯ ವಿವಿಧ ಹೊಸ ಖಾತೆಯನ್ನು ತೆರೆಯುವ ವಿಭಾಗದಲ್ಲಿ ಕಾರವಾರ ಅಂಚೆ ವಿಭಾಗ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದೆ. ಅಂಚೆ ಕಚೇರಿ ಉಳಿತಾಯ ಯೋಜನೆಯ ವಿವಿಧ ಹೊಸ ಖಾತೆಗಳನ್ನು ತೆರೆಯುವ ಉಪ ಅಂಚೆ ಕಚೇರಿಗಳ ವಿಭಾಗದಲ್ಲಿ...

Post
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ

ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ

ಕಾರವಾರ: ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10 ಗಣತಿದಾರರಿಗೆ ಒರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೇ.5 ರಿಂದ 17 ವರೆಗೆ ಗಣತಿದಾರರು ಮನೆ ಮನೆ...

Post
ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ  ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!

ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!

ರಾಜ್ಯದಲ್ಲಿ SSLC ಫಲಿತಾಂಶ ಹೊರಬಿದ್ದಿದೆ. ಅದ್ರಂತೆ, ಮುಂಡಗೋಡ ತಾಲೂಕಿನಲ್ಲೂ SSLC ಫಲಿತಾಂಶ ಘೋಷಣೆ ಆಗಿದ್ದು, 65.3 ರಷ್ಟು ಶೇಕಡವಾರು ಫಲಿತಾಂಶ ತಾಲೂಕಿನ ಪಾಲಾಗಿದೆ. ಅದ್ರಲ್ಲಿ ಅತಿಹೆಚ್ಚು ಅಂಕ ಪಡೆದ ತಾಲೂಕಿನ ಮೂವರು ವಿದ್ಯಾರ್ಥಿಗಳ ಹೆಸರು ಇಲ್ಲಿದೆ‌. ತಾಲೂಕಿನ ಮಳಗಿ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಸುರೇಶ್ ನಾಯ್ಕ್ 625 ಕ್ಕೆ 614 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಇನ್ನು ಮುಂಡಗೋಡಿನ ಮೌಲಾನಾ ಆಜಾದ್ ಪ್ರೌಢಶಾಲೆಯ ವಿದ್ಯಾರ್ಥಿನಿ, ಪರ್ವೀನ್ ಕೌಸರ್ ಅಬ್ದುಲ್ ಕರೀಂ ನರೇಗಲ್,...

Post
ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಪೇಪರ ಮಿಲ್ ನ ಬೃಹತ್ ಗಾತ್ರದ ಯಂತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಹಳೇ ದಾಂಡೇಲಿ ನಿವಾಸಿ ಅಬ್ದುಲ್ ಸಲೀಂ ಖಲಾಸಿ (55) ಸಾವನ್ನಪಿದ್ದ ವ್ಯಕ್ತಿ. ಮೃತ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ನಗರದ ಪೊಲೀಸ ಠಾಣೆಯ ಪಿಎಸ್‌ಐ ಅಮೀನಸಾಬ ಅತ್ತಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗುತ್ತಿಗೆದಾರ ಸಾಜಿದ್ ಪಠಾಣ್ ಹಾಗೂ ಮೇಲ್ವಿಚಾರಕ ಅಬ್ದುಲ್‌ ಖಾದರ ಪಠಾಣ ಇವರ...