ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ 12 ವರ್ಷ ಮೇಲ್ಪಟ್ಟ ಬಾಲಕ/ಬಾಲಕೀಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ-2025 ನ್ನು ಏ.15 ರಿಂದ ಏ.29 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8.30 ಗಂಟೆಯವರೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ನೋಂದಣಿಗೆ ಏ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತಿದಾರ ಶಿವಾನಂದ ನಾಯ್ಕ ಮೊ. ಸಂಖ್ಯೆ: 8722516856 ನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವು ಏ.12 ಮತ್ತು 13 ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿದೆ. ಕದಂಬೋತ್ಸವ-2025 ರ ಉದ್ಘಾಟನೆಯನ್ನು,ಏ.12 ರಂದು ಸಂಜೆ 5 ಗಂಟೆಗೆ ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ...
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಜಿಲ್ಲೆಗೆ ನೀಡಿದ ನಿಗಧಿತ ಮಾನವ ದಿನಗಳನ್ನು ಸೃಜಿಸುವ ಕಾರ್ಯದಲ್ಲಿ ಶೇ.100 ರಷ್ಟು ಸಾಧನೆ ಮಾಡಿದ್ದು, 2023-24 ರ ಅವಧಿಯಲ್ಲೂ ಸಹ ಶೇ.100 ಸಾಧನೆ ಮಾಡಿದ್ದು, ಸತತ ಎರಡನೇ ವರ್ಷವೂ ಗುರಿ ಸಾಧಿಸುವ ಮೂಲಕ ವಿಶೇಷ ಸಾಧನೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ...
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ಕಾರವಾರ: ಮಾದಕ ವಸ್ತುಗಳ ಬಳಕೆಯಿಂದ ಅದನ್ನು ಸೇವನೆ ಮಾಡುವ ವ್ಯಕ್ತಿಯ ಕುಟುಂಬದ ಮೇಲೆ ಮಾತ್ರವಲ್ಲದೇ ಇಡೀ ಸಮಾಜದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಸ್.ವಿಜಯ ಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದರು. ಅವರು ಭಾನುವಾರ ಕ್ರಿಮ್ಸ್ ನ ಕುವೆಂಪು ಕಲಾಭವನದಲ್ಲಿ , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಉತ್ತರ ಕನ್ನಡ...
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದರು. ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ, ಹೃದಯ ತಪಾಸಣೆ ನಡೆಸಲಾಯಿತು. ನೂರಾರು ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ನಂದಿಕಟ್ಟಾ ಗ್ರಾಮ...
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಮುಂಡಗೋಡ: ಪಟ್ಟಣದ ಗಾಂಧಿನಗರ ಸ್ಲಂ ಬೋರ್ಡ್ ಘೋಷಣೆಗೆ ಸಂಬಂಧಿಸಿದಂತೆ ಶನಿವಾರ ಜಂಟಿ ತನಿಖಾ ತಂಡಕ್ಕೆ ಗಾಂಧಿನಗರದ ನಿವಾಸಿಗಳು ಪರ-ವಿರೋಧ ಪ್ರತ್ಯೇಕ ವಾಗಿ ದಾಖಲೆ ಸಮೇತ ಮನವಿ ಸಲ್ಲಿಸಿದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ಇಪ್ಪತೈದು ಎಕರೆ ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಇದ್ದರು ಸುಳ್ಳು ದಾಖಲೆ ನೀಡಿ ಸ್ಲಂ ಬೋರ್ಡ್ ಘೋಷಣೆ ಮಾಡಲಾಗಿದೆ. ಎಂದು ವೇಕಟೇಶ ಶಿರಾಲಿ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು ಈ ದೂರಿನ ಅನ್ವಯ ಜಿಲ್ಲಾ ಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸತ್ಯ ಶೋಧನಾ ವರದಿ ನೀಡುವಂತೆ...









