Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ‌. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ. ನಂತರ ಸ್ಥಳೀಯರು ಹಾಗೂ...

Post
ಜಿಲ್ಲೆಯಲ್ಲಿ ಗೃಹ ಸಚಿವ:  ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್

ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್

ಕಾರವಾರ: ಜಿಲ್ಲೆಯ ಗೋವಾ ಗಡಿ ಪ್ರದೇಶದ ಮೂಲಕ ರಾಜ್ಯಕ್ಕೆ ಮಾದಕ ವಸ್ತುಗಳ ಸಾಗಾಟ ನಡೆಯುವ ಬಗ್ಗೆ ಮತ್ತು ಅನಧಿಕೃತವಾಗಿ ಮದ್ಯ ಸಾಗಾಟವಾಗುವ ಬಗ್ಗೆ ಪರಿಶೀಲಿಸಿ, ಅತ್ಯಂತ ಕಟ್ಟಿನಿಟ್ಟಿನ ಪರಿಶೀಲನಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು. ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಯುದ್ದ ಸಾರಿದ್ದು, ಗಡಿಯ ಮೂಲಕ...

Post
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!

ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!

ಮುಂಡಗೋಡಿನಲ್ಲಿ SSLC ಪರೀಕ್ಣೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಕೋಣೆಯಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಹನ್ ಬಾಹುಬಲಿ ಚಿವಟೆ(16), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ CBSE ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ SSLC ಪರೀಕ್ಷೆ ಬರೆದಿದ್ದ. ಆದ್ರೆ, ಪರೀಕ್ಣೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಅನುಮಾನಿಸಲಾಗಿದೆ. ಇಂದು ಬೆಳಗಿನ 8 ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ...

Post
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!

ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!

ಮುಂಡಗೋಡ ತಾಲೂಕಿನಕೆಲವೆಡೆ ಮಂಗಳವಾರ ಸುರಿದ ಭಾರೀ ಮಳೆ ಗಾಳಿ ಅವಾಂತರ ಸೃಷ್ಟಿಸಿದೆ. ಮೈನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಡ್ಲುಗುಂಡಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಮೇಲ್ಚಾವಣಿಗಳು ಹಾರಿ ಹೋಗಿವೆ. ಶಾಲಾ ಸಮಯದಲ್ಲೇ ವಿದ್ಯಾರ್ಥಿಗಳು ಶಾಲೆಯಲ್ಲಿ ಇದ್ದಾಗಲೇ ದುರಂತ ಸಂಭವಿಸಿದ್ದು ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ಏನಂದ್ರೆ ಏನೂ ತೊಂದರೆ ಆಗಿಲ್ಲ. ಮಂಗಳವಾರ ಮದ್ಯಾನ ಊಟದ ಸಮಯದಲ್ಲಿ ಭಾರಿ ಮಳೆಗಾಳಿ ಶುರುವಾಗಿದೆ. ಇದೇ ಸಮಯದಲ್ಲಿ ಸಿಡ್ಲಗುಂಡಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಳೆ ಬಂದ ಕಾರಣಕ್ಕೆ ಒಂದೇ ಕೊಠಡಿಯಲ್ಲಿ ಸೇರಿದ್ದಾರೆ....

Post
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?

ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?

ಕಾರವಾರ: ರಾಜ್ಯದ ಗೃಹ ಸಚಿವ ಡಾ: ಜಿ. ಪರಮೇಶ್ವರ ಅವರು ಮಾರ್ಚ್ 26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಪ್ರವಾಸದ ವಿವರಗಳು ಇಂತಿವೆ.. ಕಾರವಾರದಲ್ಲಿ.. ಮಾರ್ಚ್ 26 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಎಸ್.ಪಿ. ಕಚೇರಿಯಲ್ಲಿ ವಿಧಾನಸಭಾ/ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಖರೀದಿಸಿ ಪೊಲೀಸ್ ಇಲಾಖೆಗೆ ನೀಡಿರುವ ಹೊಸ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿರಸಿ ಪಟ್ಟಣದ ಟ್ರಾಫಿಕ್ ಪೊಲೀಸ್ ಠಾಣೆಯ ವಿದ್ಯುಕ್ತ ಚಾಲನೆ (Through...

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!

ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ...

Post
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!

IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!

ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ...

Post
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..!  ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?

ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?

ಈ ಸುದ್ದಿ ಬರೆಯುವ ಮುನ್ನ.. ನನ್ನ‌ ಮುಂಡಗೋಡ ತಾಲೂಕಿನ ಪ್ರಾಮಾಣಿಕ ಶಿಕ್ಷಕ‌ ವೃಂದಕ್ಕೆ ನಾನು ತಲೆ ಬಾಗಿ ನಮನ‌ ಸಲ್ಲಿಸ್ತಿನಿ. ಇಡೀ ಶಿಕ್ಷಕ ಸಮುದಾಯದ ಬಗೆಗೆ ನನ್ನ ಹೃದಯದಲ್ಲಿ ಬಹು ಉನ್ನತ ಸ್ಥಾನ ಇದೆ. ಹೆಮ್ಮೆ ಇದೆ. ಹೀಗಾಗಿ, ಬಹುತೇಕ ಪ್ರಾಮಾಣಿಕ ಶಿಕ್ಷಕ ದೇವರುಗಳ ಪಾದಕ್ಕೆ ಶಿರ ಸಾಸ್ಟಾಂಗ ನಮನಗಳನ್ನು ಅರ್ಪಿಸಿ, ನಿಮ್ಮೊಳಗೇ ಮೆರೆದಾಡುವ ಕೆಲ ಕೂಟದ ವಿರುದ್ಧ ಸಮರ ಸಾರಬೇಕಿರೋದು ಸದ್ಯದ ಅವಶ್ಯಕತೆ.‌ ಹಾಗಂತ, ತಾವೇ ಬಹುತೇಕರು ನನಗೆ ನೂರಾರು ಫೋನ್ ಕರೆ ಮಾಡಿ ತಮ್ಮೊಳಗಿನ...

Post
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ

ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ

ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ 125 ಸರಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ...

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್,   ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಮುಂಡಗೋಡ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ, ಖಾಸಗಿ ಫೈನಾನ್ಸ್ ಶಾಖೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮುಂಡಗೋಡ ಬಿಇಓ ಸುಮಾ ಜಿ. ಯವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳು, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಮೂರು ದಿನಗಳ ಒಳಗಾಗಿ ಸೂಕ್ತ ಕಾರಣ ನೀಡಿ ಉತ್ತರಿಸುವಂತೆ...