ಮುಂಡಗೋಡ ತಾಲೂಕಿನ ಬಾಚಣಕಿ, ಅರಶಿಣಗೇರಿ, ಹುನಗುಂದ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಗೆ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಕೆಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಶಿರಸಿ- ಹುಬ್ಬಳ್ಳಿ ರಸ್ತೆಯ ಬಾಚಣಕಿ ಡ್ಯಾಂ ಬಳಿ ರಸ್ತೆಯ ಮೇಲೆ ನೀರು ತುಂಬಿ ಜಲಾವೃತವಾಗಿದೆ. ಅಲ್ಲದೇ ವಡಗಟ್ಟಾ ಬಳಿಯೂ ರಸ್ತೆಯ ಮೇಲೆ ನೀರಿ ಹರಿದು ಸಂಚಾರಕ್ಕೆ ಅಡಚಣೆಯಾಗಿದೆ.
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
“ಹರ್ ಘರ್ ತಿರಂಗಾ” ಪ್ರಯುಕ್ತ ಕಾರವಾರದಲ್ಲಿ “ಸೈಕ್ಲೊತಾನ್” ಕಾರ್ಯಕ್ರಮ..!
ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಕಾರವಾರ ಬೈಸಿಕಲ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ಹರ್ ಘರ್ ತಿರಂಗ” ಕಾರ್ಯಕ್ರಮದ ಅಡಿಯಲ್ಲಿ “ಸೈಕ್ಲೊತಾನ್” ಕಾರ್ಯಕ್ರಮ ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾದ “ಸೈಕ್ಲೊತಾನ್” ಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಚಾಲನೆ ನೀಡಿದ್ರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ...
ಮುಂಡಗೋಡ ಬಸವನ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆ, ಆತ್ಮಹತ್ಯೆ ಮಾಡಿಕೊಂಡನಾ ಕಂಬಾರಗಟ್ಟಿಯ ಶಿವಾಜಿ..?
ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ವ್ಯಕ್ತಿಯೋರ್ವನ ಶವ ದೊರೆತಿದೆ. ಬೆಳ್ಳಂ ಬೆಳಿಗ್ಗೆ ಹೊಂಡದಲ್ಲಿ ಶವ ತೇಲುತ್ತಿರುವುದನ್ನು ಕಂಡ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪಿಎಸ್ಐ ಪರಶುರಾಮ್ ಟೀಂ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ. ಇನ್ನು ಹೊಂಡದಲ್ಲಿ ಪತ್ತೆಯಾಗಿರೋ ಶವ ಮುಂಡಗೋಡ ಪಟ್ಟಣದ ಕಂಬಾರಗಟ್ಟಿಯ ಶಿವಾಜಿ ಬಿಸೆಟ್ಟಿ (60) ಅಂತಾ ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಶಂಕಿಸಲಾಗಿದೆ. ಸದ್ಯ ಶವ ಹೊರತೆಗೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನಂದಿಗಟ್ಟಾದ ಮಾರುತಿ ರಾಧಾಪುರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿರಸಿ ಸಮೀಪದ ಕೋಳಿಗಾರ್ ಬಳಿ ನಡೆದ ಸ್ಕೂಟಿ ಹಾಗೂ ಕಾರ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಶಿರಸಿ ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ ರಾದಾಪುರ, ಗುರುವಾರ ಬೆಳಿಗ್ಗೆ ಕರ್ತವ್ಯಕ್ಕಾಗಿ ಆಫೀಸಿಗೆ ತೆರಳುತ್ತಿದ್ದ ವೇಳೆ, ಕೋಳಿಗಾರ ಸಮೀಪ ಸ್ಕೂಟಿ ಹಾಗು ಕಾರು ಮುಖಾಮುಕಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲು ರವಾನಿಸುವ ಸಂದರ್ಭದಲ್ಲೇ ದಾರಿ...
ಗ್ರಾಮಕ್ಕೆ ಬಾರದ ಬಸ್, ಹುನಗುಂದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ..!
ಕಳೆದ ಒಂದು ವಾರದಿಂದ ಮುಂಡಗೋಡ ತಾಲೂಕಿನ ಹುನಗುಂದಕ್ಕೆ ಸಾರಿಗೆ ಬಸ್ ಸಂಚಾರ ಬಹುತೇಕ ಸ್ಥಗಿತವಾಗಿದೆ. KSRTC ಬಸ್ ಚಾಲಕ ಹಾಗೂ ನಿರ್ವಾಹಕರ ಬೇಜವಾಬ್ದಾರಿಗಳಿಂದ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಮುಂಡಗೋಡ ಸೇರಿದಂತೆ ವಿವಿದೆಡೆ ಪ್ರಯಾಣಿಸುವ ನೂರಾರು ವಿದ್ಯಾರ್ಥಿಗಳ ಜೀವನ ಅತಂತ್ರವಾಗಿದೆ. ಹೀಗಾಗಿ, ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿಭಟನೆ ನಡೆಸಿದ್ರು. ಹುನಗುಂದ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ವಿದ್ಯಾರ್ಥಿಗಳು ಬೆಳಗ್ಗಿನಿಂದಲೂ ಕಾಯ್ದು ಕುಳಿತಿದ್ದರು. ಆದ್ರೆ, ಬಸ್ ಬರಲೇ ಇಲ್ಲ. ಹೀಗಾಗಿ, ವಿದ್ಯಾರ್ಥಿಗಳಿಗೆ ಬಸ್ ಬರದೇ ಇರುವ ಕಾರಣಕ್ಕೆ...
ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ
ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!
ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ. ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ...
ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ- ಅಪಾರ ಹಾನಿ, ಒಟ್ಟೂ ಹಾನಿಯ ವಿವರ ಇಲ್ಲಿದೆ ನೋಡಿ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ಮಾಹೆಯಲ್ಲಿ ವಾಡಿಕೆ ಮಳೆಯ ಪ್ರಮಾಣ 993. 4 ಮಿಮಿ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ.81 ರಷ್ಟು ಅತ್ಯಧಿಕ ಮಳೆ ದಾಖಲಾಗಿದ್ದು, ಜನವರಿ 2024 ರಿಂದ ಇಲ್ಲಿಯವರೆಗೆ 1882.3 ಮಿಮಿ ವಾಡಿಕೆ ಮಳೆ ಇದ್ದು, 2745.7 ಮಿಮೀ...
ಉ. ಕನ್ನಡ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಅಗಷ್ಟ 3 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ...
ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ...









