Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಭ.ಶಂಭವನಾಥ ಜಿನಮಂದಿರದಲ್ಲಿ ನವರಾತ್ರಿಯ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ..!

ಭ.ಶಂಭವನಾಥ ಜಿನಮಂದಿರದಲ್ಲಿ ನವರಾತ್ರಿಯ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ..!

ಮುಂಡಗೋಡಿನ ಭ.ಶಂಭವನಾಥ ತೀರ್ಥಂಕರರ ಜಿನಮಂದಿರದಲ್ಲಿ ನವರಾತ್ರಿಯ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಜಿನಮಂದರದಲ್ಲಿ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜಾಕೈಂಕರ್ಯಗಳನ್ನು ಜೈನ ಶ್ರಾವಕರು ಹಮ್ಮಿಕೊಂಡಿದ್ದರು. ಪದ್ಮಾವತಿ ಅಮ್ಮನವರಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಸುಮಂಗಲೆಯರು ಜಿನಭಕ್ತಿಗೀತೆಗಳೊಂದಿಗೆ ಅಮ್ಮನವರಿಗೆ ವಿಶೇಷ ಅರ್ಚನೆ ಮಾಡಿದ್ರು. ಈ ವೇಳೆ ಪಟ್ಟಣದ ಹಲವು ಜೈನ ಮುಖಂಡರು, ಶ್ರಾವಕ ಶ್ರಾವಕಿಯರು ಭಾಗಿಯಾಗಿದ್ರು.

Post
ಮುಂಡಗೋಡ ಬೆಟ್ಟಿಂಗ್ ದಂಧೆಯಲ್ಲಿ ಅದ್ವಾನ, “ಬಾಬತ್ತು” ಎಜೇಂಟರನ ಯಡವಟ್ಟಿನಿಂದ ಅಮಾಯಕನಿಗೆ ಶಿಕ್ಷೆಯಾ..? ಇದು ಜಸ್ಟ್ ಬ್ರೇಕಿಂಗ್ ಮಾತ್ರ..!

ಮುಂಡಗೋಡ ಬೆಟ್ಟಿಂಗ್ ದಂಧೆಯಲ್ಲಿ ಅದ್ವಾನ, “ಬಾಬತ್ತು” ಎಜೇಂಟರನ ಯಡವಟ್ಟಿನಿಂದ ಅಮಾಯಕನಿಗೆ ಶಿಕ್ಷೆಯಾ..? ಇದು ಜಸ್ಟ್ ಬ್ರೇಕಿಂಗ್ ಮಾತ್ರ..!

ಮುಂಡಗೋಡಿನ ಅಕ್ರಮ ದಂಧೆಗಳ ಪೈಕಿ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಹಾಲೂ,ಹಣ್ಣು, ತುಪ್ಪ ಸುರಿದು ಸಲುಹುತ್ತಿರೋ ಅದೊಬ್ಬ ಸರ್ಕಾರಿ ಶೂರ ಯಡವಟ್ಟು ಮಾಡಿಕೊಂಡಿದ್ದಾನೆ ಅನ್ನೋ ಸುದ್ದಿ ಹರಿದಾಡ್ತಿದೆ. ಮಾನ್ಯ ಎಸ್ಪಿಯವರ ಹೆಸರಲ್ಲಿ ದಂಧೆಗಿಳಿದಿರೋ ಆ ಕಿಲಾಡಿಯ ಮಂಕು ಬುದ್ದಿಗೆ, ಅಸಲೀ ಆರೋಪಿಗಳು ಯಾರೂ ಅಂತಾನೇ ಅರ್ಥ ಆಗಿಲ್ಲ. ಹೀಗಾಗಿ, ತನ್ನ ದಂಧೆಯ ಕೊಂಡಿಯೊಬ್ಬ ನೀಡಿರೋ ಹೆಸರನ್ನೇ ಬರೆದುಕೊಂಡು ಕೇಸು ದಾಖಲಿಸಿರೋ ಆ ಅಡ್ನಾಡಿಗೆ ಇವಾಗ ಬಿಸಿ ಮುಟ್ಟುವ ಎಲ್ಲಾ ಸೂಚನೆ ಇದೆ. ಸದ್ಯ ಮೀಟಿಂಗ್ ನಡೀತಿದೆ.. ಅಲ್ಲಿ ಆತ...

Post
ಮುಂಡಗೋಡ ಪಟ್ಟಣದ ಮೂರು ಶಿಶು ಪಾಲನ ಕೇಂದ್ರ ಮುಚ್ಚುವ ಆತಂಕ, ಪೋಷಕರಿಂದ ಮನವಿ ಸಲ್ಲಿಸಲು ನಿರ್ಧಾರ..!

ಮುಂಡಗೋಡ ಪಟ್ಟಣದ ಮೂರು ಶಿಶು ಪಾಲನ ಕೇಂದ್ರ ಮುಚ್ಚುವ ಆತಂಕ, ಪೋಷಕರಿಂದ ಮನವಿ ಸಲ್ಲಿಸಲು ನಿರ್ಧಾರ..!

ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು  ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...

Post
ಪಕ್ಷಿಧಾಮದಲ್ಲಿ ಕಳ್ಳರ ಪಾಲಾಗಿದ್ದ ಶ್ರೀಗಂಧದಮರ ಎರಡಲ್ಲ ಕಣ್ರಿ; ಬರೋಬ್ಬರಿ ಐದು..!? ಅಷ್ಟಕ್ಕೂ ಈ ಮಸಲತ್ತಿನ ಸೂತ್ರದಾರಿಗಳು ಯಾರ್ಯಾರು ಗೊತ್ತಾ..?

ಪಕ್ಷಿಧಾಮದಲ್ಲಿ ಕಳ್ಳರ ಪಾಲಾಗಿದ್ದ ಶ್ರೀಗಂಧದಮರ ಎರಡಲ್ಲ ಕಣ್ರಿ; ಬರೋಬ್ಬರಿ ಐದು..!? ಅಷ್ಟಕ್ಕೂ ಈ ಮಸಲತ್ತಿನ ಸೂತ್ರದಾರಿಗಳು ಯಾರ್ಯಾರು ಗೊತ್ತಾ..?

  ಅತ್ತಿವೇರಿ ಪಕ್ಷಿಧಾಮದಲ್ಲಿ ಶ್ರೀಗಂಧದ ಮರ ಕಳ್ಳತನ ಪ್ರಕರಣ ನಾವೇಲ್ಲ ಅಂದುಕೊಂಡಷ್ಟು ಸುಲಭವಾಗಿಲ್ಲ ಅನಿಸ್ತಿದೆ. ಮೇಲ್ನೋಟಕ್ಕೆ ಹೇಳೋದಾದ್ರೆ ಇಲ್ಲಿನ ಅಧಿಕಾರಿಗಳೇ ಇಲಾಖೆಯ ಕಣ್ಣಿಗೆ ಮಣ್ಣೆರೆಚಿದ್ದು ಬಹುತೇಕ ನಿಚ್ಚಳವಾದಂತಾಗಿದೆ. ಯಾಕಂದ್ರೆ, ನಾವು ನಿನ್ನೆ ತಮ್ಮೇದುರು ಬಯಲು ಮಾಡಿದ್ದ ಶ್ರೀಗಂಧದ ಮರಗಳ್ಳತನ ಕೇಸಿನಲ್ಲಿ ನಮಗೆ ಕೆವಲ ಎರಡೇ ಶ್ರೀಗಂಧದ ಮರ ದೋಚಿದ್ದಾರೆ ಅನ್ನೋ ಮಾಹಿತಿಯಿತ್ತು. ಆದ್ರೆ, ಅಲ್ಲಿನ ಅಸಲೀಯತ್ತೇ ಬೇರೆಯದ್ದಿದೆ. ಎರಡಲ್ಲ, ಬರೋಬ್ಬರಿ ಐದು..? ಅಸಲು, ಕರ್ನಾಟಕದ ವಿಖ್ಯಾತ ಅತ್ತಿವೇರಿ ಪಕ್ಷಿಧಾಮದಲ್ಲಿ ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟದಲ್ಲಿ ಬಲಿಯಾಗಿದ್ದು ಕೇವಲ...

Post
ಮುಂಡಗೋಡ ತಾಲೂಕಾಸ್ಪತ್ರೆಯ ಪಕ್ಕದಲ್ಲೇ ಶ್ರೀಗಂಧದ ಮರ ಕಳುವು, ಮತ್ತೆ ಆ್ಯಕ್ಟಿವ್ ಆಯ್ತಾ “ಗಂಧ” ಕಳ್ಳರ ಗ್ಯಾಂಗ್..?

ಮುಂಡಗೋಡ ತಾಲೂಕಾಸ್ಪತ್ರೆಯ ಪಕ್ಕದಲ್ಲೇ ಶ್ರೀಗಂಧದ ಮರ ಕಳುವು, ಮತ್ತೆ ಆ್ಯಕ್ಟಿವ್ ಆಯ್ತಾ “ಗಂಧ” ಕಳ್ಳರ ಗ್ಯಾಂಗ್..?

 ಮುಂಡಗೋಡ: ತಾಲೂಕಾಸ್ಪತ್ರೆಯ ಆರೋಗ್ಯಧಿಕಾರಿ ಕಾರ್ಯಾಲಯದ ಪಕ್ಕದಲ್ಲೇ ಶ್ರೀಗಂಧದ ಮರಗಳು ಕಳ್ಳತನವಾಗಿದೆ. ಬೆಲೆಬಾಳುವ ಎರಡು ಶ್ರೀಗಂಧದ ಮರಗಳನ್ನು ಅನಾಮತ್ತಾಗಿ ಎಗರಿಸಿಕೊಂಡು ಹೋಗಿದ್ದಾರೆ ಕಳ್ಳರು. ಕೋಟೆ ಕೊಳ್ಳೆ ಹೊಡೆದ ಮೇಲೆ ಅದೇಂತದ್ದೋ ಬಾಗಿಲು ಹಾಕಿದ್ರು ಅಂತಾರಲ್ಲ ಹಾಗೆ, ಅರಣ್ಯ ಇಲಾಖೆಯ ಅಧಿಕಾರಿಗಳು ಎಲ್ಲಾ ಮುಗಿದ ಮೇಲೆ ಓಡೋಡಿ ಬಂದಿದ್ದಾರೆ. ಮತ್ತದೇ ತನಿಖೆಗಿಳಿದಿದ್ದಾರೆ. ಅದು ಜನವಸತಿ ಏರಿಯಾ..! ಅಸಲು, ಇವಾಗ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಹೋಗಿರೋ ಜಾಗ ಇದೆಯಲ್ಲ, ಅದು ಬಹುತೇಕ ಜನವಸತಿಯ ಜಾಗವೇ, ಹೀಗಿದ್ದಾಗಲೂ ಯಾರಿಗೂ ಒಂಚೂರು...

Post
ರಾಹುಲ್ ಗಾಂಧಿಗೆ ಬಿಜೆಪಿಯಿಂದ ಅವಮಾನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನಿಂದ ಮುಂಡಗೋಡಿನಲ್ಲಿ ಪ್ರತಿಭಟನೆ, ಆಕ್ರೋಶ..!

ರಾಹುಲ್ ಗಾಂಧಿಗೆ ಬಿಜೆಪಿಯಿಂದ ಅವಮಾನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನಿಂದ ಮುಂಡಗೋಡಿನಲ್ಲಿ ಪ್ರತಿಭಟನೆ, ಆಕ್ರೋಶ..!

 ಮುಂಡಗೋಡ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿ ಐಟಿ ವಿಭಾಗದಿಂದ ಅವಮಾನ ಆಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮುಂಡಗೋಡಿನಲ್ಲಿಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಹಾಗೂ ಮಾಜಿ ಶಾಸಕ ವಿ.ಎಸ್.ಪಾಟೀಲರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಬಿಜೆಪಿ ವಿರುದ್ಧ ಗುಡುಗಿದ್ರು.10 ತಲೆಗಳಿರುವ ರಾಹುಲ್ ಗಾಂಧಿ ಪೋಸ್ಟರ್ ಅನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದೆ. ಈ ಪೋಸ್ಟ್ ಅನ್ನು ಬಿಜೆಪಿ ಐಟಿ ವಿಭಾಗದ...

Post
ದಲಿತ ವ್ಯಕ್ತಿಯ ಹತ್ಯೆ ಹಿನ್ನೆಲೆ, ನ್ಯಾಸರ್ಗಿಗೆ ಡಿಸಿ ಗಂಗೂಬಾಯಿ ಮಾನಕರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಪರಿಹಾರದ ಚೆಕ್ ಹಸ್ತಾಂತರ..!

ದಲಿತ ವ್ಯಕ್ತಿಯ ಹತ್ಯೆ ಹಿನ್ನೆಲೆ, ನ್ಯಾಸರ್ಗಿಗೆ ಡಿಸಿ ಗಂಗೂಬಾಯಿ ಮಾನಕರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಪರಿಹಾರದ ಚೆಕ್ ಹಸ್ತಾಂತರ..!

 ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ನಡೆದ ದಲಿತ ವ್ಯಕ್ತಿಯ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಕರಣ ಸಂಬಂಧ ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮೃತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಅಲ್ದೆ, ಪರಿಹಾರದ ಚೆಕ್ ವಿತರಿಸಿದ್ರು. ಅಮಾನುಷ ಘಟನೆ..! ಕಳೆದ ಸೆ. 17 ರಂದು ನಡೆದಿದ್ದ ಜಗಳದಲ್ಲಿ ನ್ಯಾಸರ್ಗಿಯ ದಲಿತ ವ್ಯಕ್ತಿ ಮಂಜುನಾಥ್ ಬೋವಿ ವಡ್ಡರ ಮೇಲೆ ಅದೇ ಗ್ರಾಮದ ಮತ್ತೋರ್ವ ವ್ಯಕ್ತಿ ಕುರುಬರ್ ಮಾರಣಾಂತಿಕ ಹಲ್ಲೆ ಮಾಡಿದ್ದ, ಹೀಗಾಗಿ, ತೀವ್ರ ಗಾಯಗೊಂಡಿದ್ದ...

Post
ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!

ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!

ಮುಂಡಗೋಡಿನ ಟಿಬೇಟಿಯನ್‌ ಕ್ಯಾಂಪ್‌ ನಂ 1 ರ ಟಿಬೇಟಿಗರ ಮನೆಯೊಂದರಲ್ಲಿ 2019 ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಅಪರಾಧಿಗಳಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್‌ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮುಂಡಗೋಡಿನ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೋಳಂಕಿ ಮತ್ತು ಮಧುಸಿಂಗ್‌ ಗಂಗಾರಾಮಸಿಂಗ್‌ ರಜಪೂತ ಎಂಬುವವರಿಗೆ ಶಿಕ್ಷೆಯಾಗಿದೆ. 2019...

Post
ಮುಂಡಗೋಡ ಶಿಂಗನಳ್ಳಿ ಡ್ಯಾಂ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ನೇಣು ಬಿಗಿದ ಸ್ಥಿತಿಯಲ್ಲಿರೋ ಶವದ ಸುತ್ತ ಅನುಮಾನದ ಹುತ್ತ..?

ಮುಂಡಗೋಡ ಶಿಂಗನಳ್ಳಿ ಡ್ಯಾಂ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ನೇಣು ಬಿಗಿದ ಸ್ಥಿತಿಯಲ್ಲಿರೋ ಶವದ ಸುತ್ತ ಅನುಮಾನದ ಹುತ್ತ..?

ಮುಂಡಗೋಡ ತಾಲೂಕಿನ ಶಿಂಗನಳ್ಳಿ ಜಲಾಶಯದ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ, ಕೊಳೆತು ದುರ್ನಾತ ಬೀರುತ್ತಿದೆ. ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಕೊಳೆತು ವಿಕಾರವಾಗಿದೆ. ಕಾಡಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡಿರೋ ಸ್ಥಿತಿಯಲ್ಲಿರೋ ಶವದ ಬಲಗೈ ಕಟ್ ಆಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಅನ್ನೋ ಬಗ್ಗೆ ಇನ್ನಷ್ಟೇ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ‌. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ,...

Post
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪತ್ರಕರ್ತರಿಂದ ಮುಖ್ಯಮಂತ್ರಿಗೆ ರಕ್ತ ‘ಸಹಿ’ತ ಮನವಿ..!

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪತ್ರಕರ್ತರಿಂದ ಮುಖ್ಯಮಂತ್ರಿಗೆ ರಕ್ತ ‘ಸಹಿ’ತ ಮನವಿ..!

ಕಾರವಾರ : ಜೀವದ ಹಂಗು ತೊರೆದು ಹಗಲು, ರಾತ್ರಿ ಸಮಾಜದ ಒಳಿತಿಗೋಸ್ಕರ ದುಡಿಯುತ್ತಿರುವ ಪತ್ರಕರ್ತ ಸಮೂಹಕ್ಕೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಉ. ಕ. ಜಿಲ್ಲಾಧ್ಯಕ್ಷ ಸದಾನಂದ ದೇಶಭಂಡಾರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ದೊರೆತು 77 ವರ್ಷ ಕಳೆದಿವೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಸರ್ಕಾರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ...