ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಸಿಕ್ಕಿದ್ದ ಮಹಿಳೆಯ ಶವ ಕೇಸ್ ಖುಲ್ಲಂ ಖುಲ್ಲಾ ಆದಂತಾಗಿದೆ. ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರಿನಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಹೆಣ ಎಸೆದು ಹೋಗಿದ್ದ ಹಂತಕರನ್ನು ಕುಮಟಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಸಲು, ಇಲ್ಲಿ ಖುದ್ದು ಪತಿಯ ಸಹೋದರನೇ ತನ್ನ ತಾಯಿ, ಸಹೋದರಿ, ದೊಡ್ಡಮ್ಮಳ ಜೊತೆ ಸೇರಿಕೊಂಡು ತಮ್ಮನ ಪತ್ನಿಯನ್ನ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಕೇಸಲ್ಲಿ ಈಗ ಮುಂಡಗೋಡ ತಾಲೂಕಿನ ಇಂದೂರಿನ ಓರ್ವ ಆರೋಪಿ ಸೇರಿ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಕುಮಟಾ ದೇವಿಮನೆ ಘಟ್ಟದಲ್ಲಿ ಸಿಕ್ಕ ಮಹಿಳೆಯ ಹೆಣ ಶಿಗ್ಗಾವಿಯದ್ದು, ಅಷ್ಟಕ್ಕೂ ಆ ಹೆಣ ಸಾಗಿಸಿದ್ದು ಮುಂಡಗೋಡ ತಾಲೂಕಿನ ಆ ಕ್ರೂಸರ್ ಚಾಲಕನಾ..?
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಮಹಿಳೆಯ ಮರ್ಡರ್ ಗೂ ಮುಂಡಗೋಡ ತಾಲೂಕಿಗೂ ನಂಟಿನ ಗಂಟು ಬಿದ್ದಿದೆಯಂತೆ. ಮುಂಡಗೋಡ ಪಟ್ಟಣದಿಂದ ಕಲಘಟಗಿಗೆ ಹೋಗುವ ಮಾರ್ಗದಲ್ಲಿ ಜಸ್ಟ್ 10 ಕಿಮೀ ದಾಟಿದ್ರೆ ಸಿಗುವ ಊರಿನ ಚಾಲಕನೊಬ್ಬ ಮಹಿಳೆಯ ಮರ್ಡರ್ ಮಿಸ್ಟ್ರಿಯಲ್ಲಿ ತಗಲಾಕ್ಕೊಂಡಿದ್ದಾನಾ..? ಹಾಗಂತ ಅನುಮಾನ ಶುರುವಾಗಿದೆ. ಹೀಗಾಗಿ, ಮುಂಡಗೋಡ ಪೊಲೀಸರ ಸಹಕಾರದಲ್ಲಿ ಕುಮಟೆಯ ಖಾಕಿಗಳು ಆರೋಪಿಯ ಬೆನ್ನು ಬಿದ್ದಿದ್ದಾರೆ ಎನ್ನಲಾಗಿದೆ. ಇನ್ನೇನು ಕನ್ಪರ್ಮ ಅನ್ನೋ ಕಾರಣ ಸಿಕ್ರೆ ಆತನ ಅರೆಸ್ಟ್ ಗ್ಯಾರಂಟಿ ಎನ್ನಲಾಗಿದೆ. ಹೀಗಾಗಿ, ಆ ಚಾಲಕನ ಬಗ್ಗೆ...
ಸೊಂಟ ನೋವಿಗೆ ಪ್ಯಾರಾಲಿಸಿಸ್ ಇಂಜೆಕ್ಷನ್ ಕೊಟ್ಟ ವೈದ್ಯ ಮಹಾಶಯ..! ಕಾರವಾರದ ಹಳಗಾದಲ್ಲಿ ಪ್ಯಾರಾಲಿಸಿಸ್ ಇಂಜೆಕ್ಷನ್ ಪಡೆದ ಮಹಿಳೆ ಸಾವು..!
ಕಾರವಾರ : ಹಳಗಾದ ಪ್ಯಾರಾಲಿಸೀಸ್ ಇಂಜೆಕ್ಷನ್ ತೆಗೆದುಕೊಳ್ಳಲು ಹೋಗುವವರೇ ಹುಶಾರ್..! ಪ್ಯಾರಾಲಿಸೀಸ್ ಆಗದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್ ತೆಗೆದುಕೊಂಡ ಮಹಿಳೆಯೋರ್ವಳು ಇವತ್ತು ಸಾವನ್ನಪ್ಪಿದ್ದಾಳೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಎಂಬುವ ಮೃತಪಟ್ಟ ಮಹಿಳೆಯಾಗಿದ್ದಾಳೆ. ಈಕೆ ಇಂದು ತನ್ನ ತಂದೆಗೆ ಪ್ಯಾರಾಲಿಸಿಸ್ ಚಿಕಿತ್ಸೆ ಕೊಡಿಸಲೆಂದು ಕೊಪ್ಪಳದಿಂದ ಕಾರವಾರದ ಹಳಗಾ ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ತನಗೆ ಬ್ಯಾಕ್ ಪೇನ್, ಅಂದ್ರೆ ಸೊಂಟ ನೋವು ಬಾಧಿಸುತ್ತಿರೋ ಹಿನ್ನೆಲೆಯಲ್ಲಿ ವೈದ್ಯರಿಗೆ ಹೇಳಿದ್ದಾಳೆ. ಮುಂಜಾಗ್ರತೆಗಾಗಿ..! ಹೀಗಾಗಿ, ವೈದ್ಯರು ಪ್ಯಾರಾಲಿಸಿಸ್ ಬರದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್...
ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಗುರುತು ಸಿಕ್ಕರೆ ಕರೆಮಾಡಿ ಮಾಹಿತಿ ನೀಡಿ..!
ಕುಮಟಾ: ತಾಲೂಕಿನ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು, 26 ರಿಂದ 30 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದ್ದು, ಮಹಿಳೆಯ ಕೈ ಮೇಲೆ ಟ್ಯಾಟೂಗಳು ಇವೆ. ಬಹುಶಃ ಕೊಲೆ ಮಾಡಿ ಬೀಸಾಡಿರೋ ಶಂಕೆ ಇದೆ. ಸದ್ಯ ಕುಮಟಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮಹಿಳೆಯ ಗುರುತು ಪತ್ತೆಗೆ ಇಳಿದಿದ್ದಾರೆ. ತಮಗೇನಾದ್ರೂ ಈ ಮಹಿಳೆಯ ಗುರುತು ಸಿಕ್ಕರೆ ತಕ್ಷಣವೇ ಕುಮಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ವಿನಂತಿಸಿದ್ದಾರೆ. ಕುಮಟಾ ಪೋಲಿಸ್ ಠಾಣೆಯ...
ಮುಂಡಗೋಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಧಿವಶ, ಹಲವರ ಸಂತಾಪ..!
ಮುಂಡಗೋಡ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನರಸಿಂಹ ಪರಮೇಶ್ವರ ಭಟ್ (56) ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಂಶುಪಾಲರು ತಡರಾತ್ರಿ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೂಲತಃ ಯಲ್ಲಾಪುರ ಪಟ್ಟಣದವರಾಗಿದ್ದ ನರಸಿಂಹ ಪರಮೇಶ್ವರ ಭಟ್, ಕಳೆದ 13 ವರ್ಷಗಳಿಂದ ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಆ ನಂತರದಲ್ಲಿ ಕಳೆದ ಫೆಬ್ರುವರಿಯಲ್ಲಿ ಮುಂಡಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡಿದ್ದರು. ಅಲ್ದೇ ಫೆ. 7...
ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಜಪ್ತಿ..!
ರಾಮನಗರ: ಜೋಯಿಡಾ ತಹಶೀಲ್ದಾರ್ ಹಾಗೂ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಮರಳು ವಶಪಡಿಸಿಕೊಂಡಿದ್ದಾರೆ. ಬರೋಬ್ಬರಿ 23 ಟಿಪ್ಪರ್ ನಷ್ಟು ಮರಳು ಜಪ್ತಿ ಪಡಿಸಿಕೊಂಡಿದ್ದು ಅಕ್ರಮಿಗಳ ಹೆಡೆಮುರಿ ಕಟ್ಟಿದ್ದಾರೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೈಜಗಾಂವ್, ಆಮ್ಸೆತ್, ಗೌಳಿವಾಡ ಮತ್ತು ಪಾಯಸವಾಡಿ ಗ್ರಾಮಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 23 ಟಿಪ್ಪರ್ ನಷ್ಟು, ಅಂದಾಜು 3 ಲಕ್ಷ 30 ಸಾವಿರ ರೂಪಾಯಿ ಮೌಲ್ಯದ ಮರಳು ವಶಪಡಿಸಿಕೊಂಡಿದ್ದಾರೆ. ಜೋಯಿಡಾ ತಹಶೀಲ್ದಾರ್ ಬಸವರಾಜ ತೆರನಹಳ್ಳಿ ಮಾರ್ಗದರ್ಶನದಲ್ಲಿ ರಾಮನಗರ...
ಬಾರದ ಮಳೆಗಾಗಿ ಕಲಕೇರಿ ಗ್ರಾಮದ ಮಹಿಳೆಯರ ವಿಶೇಷ ಆಚರಣೆ, ಹುಯ್ಯೋ ಹುಯ್ಯೋ ಮಳೆರಾಯ ಅಂದ್ರು ಮಹಿಳೆಯರು..!
ಮುಂಡಗೋಡ: ಜೂನ್ ತಿಂಗಳು ಕಳೆಯುತ್ತ ಬಂದರೂ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದು ತಾಲೂಕಿನ ಅನ್ನದಾತರಿಗೆ ಭಾರೀ ಆತಂಕ ತಂದಿಟ್ಟಿದೆ. ಬಹುತೇಕ ಬಿತ್ತನೆ ಕಾರ್ಯಕ್ಕೆ ಮಳೆರಾಯನ ಮುನಿಸಿನಿಂದ ಭಾರೀ ಅಡಚಣೆಯಾಗಿದೆ. ಕೆಲವು ಕಡೆ ಬೀಜ ಬಿತ್ತನೆ ಕಾರ್ಯ ಮಾಡಿದ್ದರೂ ಬೀಜ ಮೊಳಕೆಯೊಡೆಯಲು ನೀರಿನ ಅಭಾವ ತಲೆದೋರಿದೆ. ಹೀಗಾಗಿ, ತಾಲೂಕಿನ ಕಲಕೇರಿಯ ಮಹಿಳೆಯರು ಮಳೆಗಾಗಿ ವಿಶೇಷ, ವಿಶಿಷ್ಟ ಕಾರ್ಯ ಮಾಡಿದ್ದಾರೆ. ಕಪ್ಪೆಯ ಮೆರವಣಿಗೆ..! ಯಸ್, ಕಲಕೆರಿಯ ಮಹಿಳೆಯರು ಇಂದು ಬೆಳಗಿನಿಂದ ಮಳೆಗಾಗಿ ಕಪ್ಪೆಯ ಪೂಜೆ ಮಾಡಿ ಪ್ರಾರ್ಥಿಸಿದ್ದಾರೆ. ಮಳೆರಾಯನಿಗೆ...
ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?
ಮುಂಡಗೋಡ: ತಾಲೂಕಿನ ಬಾಚಣಕಿ ಸಮೀಪ ಸ್ಕೂಟಿ ಅಪಘಾತವಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಬಹುಶಃ ಯಮರೂಪಿ ರಸ್ತೆ ಗುಂಡಿಗೆ ಒಂದು ಜೀವ ಬಲಿಯಾದಂತಾಗಿದೆ. ಮೃತ ಬೈಕ್ ಸವಾರನನ್ನು ಮುಂಡಗೋಡಿನ ನಂದೀಶ್ವರ ನಗರದ ನಿವಾಸಿ ಉದಯ್ ಕುರ್ಡೇಕರ್ (47) ಅಂತಾ ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಉದಯ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡಿದ್ದಾರೆ. ದುರಂತ ಅಂದ್ರೆ ರಾತ್ರಿ ಆಗಿದ್ದ ಕಾರಣ ತಕ್ಷಣವೇ ಯಾರೂ...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...









