Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಉತ್ತರ ಕನ್ನಡದ ಇಬ್ಬರು ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆ, ಶಿರಾಲಿಯ ಕುಶಾಲ್, ಕಳಕಿಕಾರೆಯ ಭೂಷಣ್ ಸಾಧನೆ..!

ಉತ್ತರ ಕನ್ನಡದ ಇಬ್ಬರು ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆ, ಶಿರಾಲಿಯ ಕುಶಾಲ್, ಕಳಕಿಕಾರೆಯ ಭೂಷಣ್ ಸಾಧನೆ..!

ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಷ್ಟಿತ ಸೈನಿಕ ಶಾಲೆಗೆ ಆಯ್ಕೆಯಾಗಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿಯ ಪ್ರತಿಭಾವಂತ ವಿದ್ಯಾರ್ಥಿ ಕುಶಾಲ್ ನಿತ್ಯಾನಂದ್ ನಾಯ್ಕ್ ಹಾಗೂ ಮುಂಡಗೋಡ ತಾಲೂಕಿನ ಕಳಕಿಕಾರೆಯ ಭೂಷಣ್ ಪಾಟೀಲ್ ಸೈನಿಕ ಶಾಲೆಗೆ ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.. ಶಿರಾಲಿಯ ಕುಶಾಲ್ ನಾಯ್ಕ್ ಸಾಧನೆ..! ಅಂದಹಾಗೆ, ಭಟ್ಕಳ ತಾಲೂಕಿನ ಶಿರಾಲಿಯ ನಿತ್ಯಾನಂದ್, ಪ್ರೇಮಾ ದಂಪತಿಯ ಸುಪುತ್ರ ಕು. ಕುಶಾಲ್ ನಿತ್ಯಾನಂದ್ ನಾಯ್ಕ್ ವಿಜಯಪುರದ Oxford English medium school ನಲ್ಲಿ ಐದನೇ ತರಗತಿ ಓದುತ್ತಿದ್ದು, ಸದ್ಯ...

Post
ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!

ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!

ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ‌ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...

Post
ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?

ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?

ಭಟ್ಕಳ: ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ‌. ಭೀಕರ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಿಳಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರಿಗೆ ಬಹುಮುಖ್ಯ ಸುಳಿವು ಲಭ್ಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆಗಂತುಕ ಕೊಲೆಯಾದವರ ಸಂಬಂಧಿಯೇ ಆಗಿದ್ದಾನೆ ಅಂತಿದೆ ಪೊಲೀಸ್ ಮೂಲಗಳು. ಹೌದು, ಭಟ್ಕಳ ತಾಲೂಕಿನ ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40)...

Post
ಭಟ್ಕಳದ ಹಾಡವಳ್ಳಿಯಲ್ಲಿ ಭೀಕರ ಕೊಲೆ, ಒಂದೇ ಕುಟುಂಬದ ನಾಲ್ವರ ಹತ್ಯೆ, ಹಾಡಹಗಲೇ ನಡೀತು ಭಯಾನಕ ಕೃತ್ಯ..!

ಭಟ್ಕಳದ ಹಾಡವಳ್ಳಿಯಲ್ಲಿ ಭೀಕರ ಕೊಲೆ, ಒಂದೇ ಕುಟುಂಬದ ನಾಲ್ವರ ಹತ್ಯೆ, ಹಾಡಹಗಲೇ ನಡೀತು ಭಯಾನಕ ಕೃತ್ಯ..!

ಭಟ್ಕಳ: ನಿಜಕ್ಕೂ ಭಟ್ಕಳ ತಾಲೂಕು ಬೆಚ್ಚಿ ಬಿದ್ದಿದೆ. ತಾಲೂಕಿನ ಹಾಡವಳ್ಳಿ ಗ್ರಾಮದಲ್ಲಿ ಹಾಡಹಗಲೇ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಇಡಿ ಇಡಿಯಾಗಿ ನಾಲ್ವರನ್ನು ಬಲಿ ಪಡೆಯಲಾಗಿದೆ. ಹೀಗಾಗಿ, ಆ ಪ್ರದೇಶದಲ್ಲಿ ಈಗ ರಕ್ತ ಸಿಕ್ತ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಹಾಡವಳ್ಳಿ ಗ್ರಾಮದ ಶಂಭು ಹೆಗಡೆ (65) ಆತನ ಪತ್ನಿ ಮಾದೇವಿ ಹೆಗಡೆ (40) ಮಗ ರಾಜೀವ್ ಹೆಗಡೆ (34) ಕುಸುಮಾ ಹೆಗಡೆ (30) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಇನ್ನು ಶವಗಳು ಮನೆಯ ಹೊರಗಡೆ...

Post
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?

ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?

 ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ‌ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿ‌ನಲ್ಲಿ ಆಗಿಯೇ...

Post
ಇಂದೂರು ಜಿ.ಪಂ ಕ್ಷೇತ್ರದಲ್ಲಿ ಬಿಜೆಪಿಗೆ ಶಾಕ್, 250 ಕ್ಕೂ ಹೆಚ್ಚು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಇಂದೂರು ಜಿ.ಪಂ ಕ್ಷೇತ್ರದಲ್ಲಿ ಬಿಜೆಪಿಗೆ ಶಾಕ್, 250 ಕ್ಕೂ ಹೆಚ್ಚು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಮುಂಡಗೋಡ: ಇಂದೂರಿನಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ. ಇಷ್ಟು ದಿನ ಬಲಿಷ್ಟವಾಗಿದ್ದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಬಿಜೆಪಿಗೆ ಇವತ್ತು ಕಾಂಗ್ರೆಸ್ ಶಾಕ್ ನೀಡಿದೆ. ಸುಮಾರು 250 ಕ್ಕೂ ಹೆಚ್ಚು ಬಿಜೆಪಿ ಮುಖಂಡರು, ಕಾರ್ಯಕರ್ತರು ಕೈ ಹಿಡಿದಿದ್ದಾರೆ. ಇದ್ರೊಂದಿಗೆ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಇಂದೂರು, ಕೊಪ್ಪ, ಇಂದಿರಾನಗರದಲ್ಲಿ ಕಾಂಗ್ರೆಸ್ ಗೆ ಬೂಸ್ಟ್ ಸಿಕ್ಕಂತಾಗಿದೆ. ಇಂದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಹ್ಮದ್ ರಫೀಕ್ ದೇಸಳ್ಳಿ, ಮಾಜಿ ಉಪಾಧ್ಯಕ್ಷ ಬಿಷ್ಟನಗೌಡ ಪಾಟೀಲ್, ಸೊಸೈಟಿ ಮಾಜಿ ಅಧ್ಯಕ್ಷ ರವಿಚಂದ್ರ ದುಗ್ಗಳ್ಳಿ ಸೇರಿದಂತೆ...

Post
ಅಗಡಿ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತ, ನಂದಿಕಟ್ಟಾದ ಇಬ್ಬರು ಸೇರಿ, ನಾಲ್ವರಿಗೆ ಗಂಭೀರ ಗಾಯ..!

ಅಗಡಿ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತ, ನಂದಿಕಟ್ಟಾದ ಇಬ್ಬರು ಸೇರಿ, ನಾಲ್ವರಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಗಡಿಭಾಗ ಅಗಡಿ ಮಿಲ್ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಪರಿಣಾಮ ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್ ಗಳ‌ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಘಟನೆ ನಡೆದಿದೆ. ಅಗಡಿ ಶಾಂತಿನಗರದ ಸುರೇಶ್ ಎಂಬುವ ಯುವಕ, ನಂದಿಕಟ್ಟಾ ಗ್ರಾಮದ ಮಹಮದ್ ದುಂಡಸಿ (37), ಈಸಾಕ್ ಯಲ್ಲಾಪುರ (35) ಇಬ್ಬರು ಯುವಕರಿಗೆ ಹಾಗೂ ಕಲಘಟಗಿ ತಾಲೂಕಿನ ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ನೆಲ್ಲಿಹರವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ....

Post
ಅಗಡಿ ಮಿಲ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಅಗಡಿ ಮಿಲ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಅಗಡಿ ಮಿಲ್ ಬಳಿ ಮತ್ತೊಂದು ಬೈಕ್ ಅಪಘಾತವಾಗಿದೆ. ಪರಿಣಾಮ ಓರ್ವ ಯುವಕನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿವೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ಮಲ್ಲಿಕಜಾನ್ ವಾಲೀಕಾರ್ ಎಂಬುವವನೇ ಬೈಕ್‌ಅಪಘಾತದಲ್ಲಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಅಗಡಿ ಸಮೀಪದ ಪೆಟ್ರೊಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಇಂದು ಕೆಲಸ ಮುಗಿಸಿ ಹೊರಟಿದ್ದಾಗ ಘಟನೆ ನಡೆದಿದೆ. ಇನ್ನು ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!

ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!

ಶಿವರಾತ್ರಿಯ ದಿನವೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ ಅಗಡಿಯ ಯುವಕ ಸಾವು ಕಂಡಿದ್ದಾನೆ. ಆದ್ರೆ ಈ ಯುವಕನ ಕುಟುಂಬಸ್ಥರು ನಿಜಕ್ಕೂ ತನ್ನ ಕರುಳಿನ ಕುಡಿಯ ಸಾವಿಗೂ ಒಂದು ಸಾರ್ಥಕತೆಯ ಮೆರಗು ಕೊಟ್ಟಿದ್ದಾರೆ. ಮಣ್ಣಿನಲ್ಲಿ‌ ಮಣ್ಣಾಗ ಹೊರಟಿದ್ದ ಅಮೂಲ್ಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಆದರ್ಶ ಮೆರೆದಿದ್ದಾರೆ. ನೋವಿನಲ್ಲೂ ಕುಟುಂಬಸ್ಥರ ಕಳಕಳಿ..! ಅಗಡಿ ಗ್ರಾಮದ ಸಂಜು ಸಿದ್ದಪ್ಪ ಗಳಗಿ (23) ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ. ಸಂಜುವಿನ ತಲೆಗೆ...

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...