ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ರಾತ್ರೋ ರಾತ್ರಿ ಎಳೆದು ತಂದಿದ್ದಾರೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ ಅಡಿಕೆ ಕಳ್ಳತನದ ಕೇಸ್ ಸಾರಾಸಗಟಾಗಿ ಬೇಧಿಸಿದೆ. ಕೊಪ್ಪ (ಇಂದೂರು) ಗ್ರಾಮದ ಫಕ್ಕಿರೇಶ ಮಲ್ಲಪ್ಪ ದೊಡ್ಮನಿ ಎಂಬುವವನೇ ಅಡಿಕೆ ಕಳ್ಳತನದ ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಖಚಿತ ಸುಳಿವಿನ ಮೇರೆಗೆ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿದಂತೆ ಮತ್ತವರ ತಂಡ ದಾಳಿ ಮಾಡಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಜನನ-ಮರಣ ನೋಂದಣಿ ನೂತನ ಆದೇಶ ಹಿಂಪಡೆಯಿರಿ, ಸರ್ಕಾರಕ್ಕೆ ಮುಂಡಗೋಡಿನ ವಕೀಲರ ಆಗ್ರಹ..!
ಮುಂಡಗೋಡ : ಪಟ್ಟಣದಲ್ಲಿ ಇಂದು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ, ವಕೀಲರ ಸಂಘ ಮನವಿಯೊಂದನ್ನ ಅರ್ಪಿಸಿದೆ. ಜನನ-ಮರಣ ನೋಂದಣಿ ಸಂಬಂಧ ರಾಜ್ಯ ಸರ್ಕಾರದ ಅಧಿಸೂಚನೆ ವಾಪಸ್ ಪಡೆದು, ಈ ಹಿಂದಿನಂತೆ ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ. ಜನನ-ಮರಣ ನೋಂದಣಿ ಸಂದರ್ಭದಲ್ಲಿ ವಿಳಂಭ ಅಥವಾ ಬೇರೆ ಯಾವುದೋ ವಿವಾದಕ್ಕೆ ಸಂಬಂಧಿಸಿದಂತೆ, ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ ಅಂತಹ ವ್ಯಕ್ತಿಗಳು ಈ ಹಿಂದೆ, ಜನನ-ಮರಣ ನೋಂದಣಿ ಕಾಯ್ದೆ ಕಲಂ, 13 ರ ಪ್ರಕಾರ ಸ್ಥಳೀಯ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ...
ನಂದಿಕಟ್ಟಾದಲ್ಲಿ ಪ್ರವೀಣ್ ಹತ್ಯೆಗೆ ಖಂಡನೆ, ಬಿಜೆಪಿ ಯುವ ಮೋರ್ಚಾದಿಂದ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕೊಟ್ಟಾರು ಸಾವಿಗೆ, ಬಿಜೆಪಿ ಯುವ ಮೋರ್ಚಾ ಘಟಕ ಕಂಬನಿ ಮಿಡಿದಿದೆ. ಹತ್ಯೆಯಾಗಿರೋ ಪ್ರವೀಣ್ ಕೊಟ್ಟಾರು ಭಾವಚಿತ್ರಕ್ಕೆ ಹೂ ಹಾರ ಹಾಕಿ ಶೃದ್ಧಾಂಜಲಿ ಸಲ್ಲಿಸಿದ ಯುವ ಕಾರ್ಯಕರ್ತರು, ಹಂತಕರಿಗೆ ಹೆಡೆಮುರಿ ಕಟ್ಟುವಂತೆ ಆಗ್ರಹಿಸಿದ್ದಾರೆ. ಈ ವೇಳೆ ನಂದಿಕಟ್ಟಾ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮುಂಡಗೋಡ ಬಿಜೆಪಿ ಯುವ ಮೋರ್ಚಾದಿಂದ ಪ್ರವೀಣ್ ನೆಟ್ಟಾರು ಗೆ ಶೃದ್ಧಾಂಜಲಿ..!
ಮುಂಡಗೋಡ: ಬಿಜೆಪಿ ಯುವ ಮುಖಂಡ, ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಖಂಡನೆ ವ್ಯಕ್ತ ಪಡಿಸಿದೆ. ಪಟ್ಟಣದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಹತ್ಯೆಯಾದ ಪ್ರವೀಣ್ ಕೊಟ್ಟಾರುಯವರಿಗೆ ಶೃದ್ಧಾಂಜಲಿ ಅರ್ಪಿಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರೋ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಯುವ ಮೋರ್ಚಾದ ಪದಾಧಿಕಾರಿಗಳು ಹಾಜರಿದ್ದರು.
ಉಗ್ನಿಕೇರಿಯಲ್ಲಿ ವಿಶಿಷ್ಟವಾಗಿ ಆಚರಣೆಗೊಂಡ ಕಾರ್ಗಿಲ್ ವಿಜಯ್ ದಿವಸ್..!
ಮುಂಡಗೋಡ: ತಾಲೂಕಿನ ಉಗ್ನಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಶ್ರೀರಾಮ ಸೇನೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇರುವ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಲಾಯಿತು. ಹಲವು ದಿನಗಳಿಂದ ಸ್ವಚ್ಚತೆ ಮಾಡದೇ ಇದ್ದಿದ್ದ ನೀರಿನ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಿದ ಕಾರ್ಯಕರ್ತರು, ಟ್ಯಾಂಕ್ ಸುತ್ತಮುತ್ತಲಿನ ಗಿಡಗಂಟಿಗಳನ್ನು ಹಾಗೂ ಕೊಳಚೆಯನ್ನು ಸ್ವಚ್ಚಗೊಳಿಸಿದ್ರು. ಈ ಮೂಲಕ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದ್ರು.
ಮುಂಡಗೋಡಿನಲ್ಲಿ ಹಿರಿಯ ಸಾಧಕರಿಗೆ ಸಚಿವರಿಂದ ಸನ್ಮಾನ..!
ಮುಂಡಗೋಡ: ಪಟ್ಟಣದ ಎಲ್.ವಿ.ಕೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ” ವಿಶ್ವ ಜನಸಂಖ್ಯಾ ದಿನಾಚರಣೆ ಅಭಿಯಾನ ” ಕಾರ್ಯಕ್ರಮದಲ್ಲಿ ಹುನಗುಂದದ ಹಿರಿಯ ಶುಶ್ರೂಕಿ ಶಾಲಿನಿ ನಾಯ್ಕ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಯಿತು. ಸಚಿವ ಶಿವರಾಮ್ ಹೆಬ್ಬಾರ್, ಹಲವು ಹಿರಿಯ ಶುಶ್ರೂಕಿಯರು ಹಾಗೂ ಹಿರಿಯ ಆಶಾ ಕಾರ್ಯಕರ್ತೆಯರಿಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಇದ್ರ ಜೊತೆ ತಾಲೂಕಿನ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸಚಿವರು ಸನ್ಮಾನಿಸಿದ್ರು. ಈ ವೇಳೆ ಹಲವು ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸಂಘದ ಪ್ರಚಾರಕ ಸತೀಶ್ ಕಟ್ಟಿಯವರಿಗೆ ಶೃದ್ಧಾಂಜಲಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ನಲ್ಲಿ ಭಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಿಂದ ದಿ. ಸತೀಶ್ ಕಟ್ಟಿವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ನಿಧನರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸತೀಶ್ ಕಟ್ಟಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕಾ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಣದ ಬತ್ತಿ ಹಚ್ಚಿ ಶೃದ್ದಾಂಜಲಿ ಅರ್ಪಿಸಲಾಯಿತು. ಈ ವೇಳೆ ಭಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರೊಂದಿಗೆ ಭಕ್ತಿಪೂರ್ವಕವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು
ಮುಂಡಗೋಡಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಛತ್ರಪತಿ ಶಿವಾಜಿ ಮಂಡಳದ ವತಿಯಿಂದ ಗೌರವ ಸಮರ್ಪಣೆ ಹಾಗೂ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಭಕ್ತಿಯ ಘೋಷಣೆಗಳೊಂದಿಗೆ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಯೋಧರಾದ ಗಣಪತಿ ರವಳಪ್ಪನವರ್, ಯಲ್ಲಪ್ಪ ನಾಯ್ಕರ್, ಅಣ್ಣಪ್ಪ ಶಿಗ್ಗಾವಿ ಹಾಗೂ ಗಣಪತಿ ಮಟ್ಟಿಮನಿ ಎಂಬುವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಹಲವು ಮುಖಂಡರು ಭಾಗಿಯಾಗಿದ್ರು.
ಹುನಗುಂದದ ಸಹಕಾರಿ ಧುರೀಣ ಸಿದ್ದಪ್ಪ ಬೀರವಳ್ಳಿ ವಿಧಿವಶ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಸಹಕಾರಿ ಧುರೀಣ, ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿದ್ದಪ್ಪ ಸಣ್ಣಕಲ್ಲಪ್ಪ ಬೀರವಳ್ಳಿ(65) ಹೃದಯಾಘತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿರೋ ಸಿದ್ದಪ್ಪ ಬೀರವಳ್ಳಿ, ಮೃದುಸ್ವಭಾವದ, ಜನಾನುರಾಗಿ ವ್ಯಕ್ತಿತ್ವದವರಾಗಿದ್ದರು. ಈ ಹಿಂದೆ ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಿದ್ದಪ್ಪ ಬೀರವಳ್ಳಿ, ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದರು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರೋ, ಸಿದ್ದಪ್ಪ ಬೀರವಳ್ಳಿಯವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...









