ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೈಕೋರ್ಟ್ ಮದ್ಯಂತರ ಆದೇಶ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ ದಿಢೀರ್ ವಾಪಸ್..!
ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ಹಾವು ಏಣಿ ಆಟ ಮುಂದುವರೆದಿದೆ. ಅಧ್ಯಕ್ಷ ಸುನಿಲ್ ವಾಗು ಸಳಕೆ ಜುಲೈ 16 ರಂದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೊಂದು ಆಟ ಶುರುವಿಟ್ಟು ಸೆಡ್ಡು ಹೊಡೆದಿದ್ದಾರೆ. ಮದ್ಯಂತರ ಆದೇಶ..! ಅಂದಹಾಗೆ, ನಾಗನೂರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯುವಂತೆ ಕೆಲವು ಸದಸ್ಯರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗದ ಸಹಾಯಕ್ ಆಯುಕ್ತರು ಜುಲೈ 25...
ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಅನ್ನೋದು ಕೋಮಾ ಸ್ಥಿತಿಗೆ ತಲಪೇ ಬಿಡ್ತಾ..? ಸದ್ಯದ ಪರಿಸ್ಥಿತಿ ನೋಡಿದ್ರೆ ಹಾಗೇ ಅನ್ನಿಸ್ತಿದೆ. ತಾಲೂಕಿನಲ್ಲಿ ಒಂದೊಳ್ಳೆ ಅವಕಾಶ ಹೊಂದಿದ್ದ ಕೈ ಪಡೆಗೆ, ಸಿಕ್ಕ ಅವಕಾಶ ಬಳಸಿಕೊಳ್ಳುವ ಯಾವೊಂದೂ ಕಾರ್ಯಗಳೂ ಜಾರಿಯಾಗಲೇ ಇಲ್ಲ ಅನ್ನೋದು ಖುದ್ದು ಅದೇ ಪಕ್ಷದ ನಿಷ್ಟಾವಂತರನ್ನು ಚಿಂತೆಗೀಡು ಮಾಡಿದೆ. ಇನ್ನು, ನಾನೇ ಅಭ್ಯರ್ಥಿ ಅಂತಾ ಗುಂಗು ಹಿಡಿಸಿ, ಅದೇಲ್ಲೋ ಕುಳಿತು ರಿಮೋಟ್ ಒತ್ತುವ ಪ್ರಶಾಂತಣ್ಣ, ಅದೇಷ್ಟೋ ದಿನಗಳಿಂದ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ. ಹೀಗಾಗಿ, ಪಕ್ಷ ಕ್ಷೇತ್ರದಲ್ಲಿ ವಿಲ ವಿಲ ಅಂತಿದೆ....
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ...
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಪಂಚಾಯತಿಯಲ್ಲಿ ಪಕ್ಷಾಂತರ, ಗ್ರಾಪಂ ಸದಸ್ಯ ರಾಜೂ ಹರಿಜನ್ ಬಿಜೆಪಿ ಸೇರ್ಪಡೆ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಸದಸ್ಯ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯ ರಾಜೂ ಫಕ್ಕೀರವ್ವ ಹರಿಜನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದ್ರೊಂದಿಗೆ, ಗ್ರಾಮ ಪಂಚಾಯತಿ ಮಟ್ಟದ ರಾಜಕೀಯ ಮೇಲಾಟ ಮತ್ತೊಂದು ಮಗ್ಗಲಿಗೆ ಹೊರಳಿದೆ. ಅಧ್ಯಕ್ಷರ ಬದಲಾವಣೆ ಎಫೆಕ್ಟ್..? ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಅನ್ನಪೂರ್ಣ ಬೆಣ್ಣಿ ಮೇಡಂ ಒಪ್ಪಂದದಂತೆ ತಮ್ಮ ಪದವಿಗೆ ರಾಜೀನಾಮೆ ನೀಡಲು ಕೊಂಚ ತಡ ಮಾಡಿದ್ರು. ಹೀಗಾಗಿ, ತಮ್ಮದೇ ಪಕ್ಷದ ಸದಸ್ಯರಲ್ಲಿ ಸಾಕಷ್ಟು ತಳಮಳಕ್ಕೆ...
ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!
ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯ ಭರ್ತಿಯಾಗಿದೆ. ನಿರಂತರವಾಗಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ಬಾಚಣಕಿ ಜಲಾಶಯ ಭರ್ತಿಯಾಗಿದ್ದು, ಉಬ್ಬು ಬಿದ್ದಿದೆ. ಹೀಗಾಗಿ, ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು ಬಾಚಣಕಿ ಜಲಾಶಯ ಬಾಚಣಕಿ, ಮಜ್ಜಿಗೇರಿ, ಇಂದೂರು, ಕೊಪ್ಪ, ಇಂದಿರಾನಗರ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ಜೀವನಾಡಿಯಾಗಿದೆ. ಹೀಗಾಗಿ, ಸದ್ಯ ಜಲಾಶಯ ಭರ್ತಿಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು, ಜಲಾಶಯ ಭರ್ತಿ ಹಿನ್ನೆಲೆ ನಿತ್ಯವೂ ಪ್ರವಾಸಿಗರು ಬರುತ್ತಿದ್ದಾರೆ. ಅದ್ರಲ್ಲೂ ಟಿಬೇಟಿಗರು ಈ ಜಲಾಶಯದಲ್ಲಿ ಬಂದು ಮೋಜು ಮಸ್ತಿಮಾಡುತ್ತಿದ್ದಾರೆ.
ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಅಬ್ಬರದ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ ನದಿ ತುಂಬಿ ಹರಿಯುತ್ತಿರುವುದರಿಂದ ಕೋನಳ್ಳಿ, ಗುಡ್ನಕಟ್ಟಾ ಮತ್ತು ಮೂರೂರಿನಲ್ಲಿ ನೆರೆ ಸೃಷ್ಟಿಯಾಗಿದೆ. ಈ ಭಾಗದ 70 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ನದಿ ಇಕ್ಕೆಲಗಳಲ್ಲಿರುವ ಇನ್ನಷ್ಟು ಗ್ರಾಮಗಳಿಗೆ ನೆರೆ ಭೀತಿ ಎದುರಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಕುಮಟಾ ತಾಲೂಕಿನ ಅಘನಾಶಿನಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಅಪಾಯದ ಮಟ್ಟದಲ್ಲೇ ಹರಿಯಲಾರಂಭಿಸಿದೆ. ಇನ್ನು ಹೊನ್ನಾವರ ತಾಲೂಕಿನ ಗುಂಡಬಾಳ , ಹಡಿನಬಾಳ , ಸಾಲಕೋಡು ಭಾಗದಲ್ಲಿ...









