ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತೋರ್ವ ಸಣ್ಣಪುಟ್ಟ ಗಾಯವಾಗಿದೆ. ಬೈಕ್ ಅಪಘಾತದಲ್ಲಿ ಮೃತಪಟ್ಟವನನ್ನು ಮುಂಡಗೋಡಿನ ಅರವಿಂದ್ ಬೆಲ್ದವರ್ ಅಂತಾ ಗುರುತಿಸಲಾಗಿದೆ. ಗಾಯಗೊಂಡವರ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: Uncategorized
ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!
ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ಇಂದೂರು ಕೊಪ್ಪದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು..!
ಮುಂಡಗೋಡ: ತಾಲೂಕಿನ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಕೊಪ್ಪ ಗ್ರಾಮದಲ್ಲಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪಕ್ಷದ ಶಾಲು ಹೊದಿಸಿ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ. ಇಂದೂರಿನ ಬಿಜೆಪಿ ಮುಖಂಡ ಬಿ.ಕೆ.ಪಾಟೀಲ್, ಕೊಪ್ಪ ಗ್ರಾಮದ ಚನ್ನಬಸಪ್ಪ ಮುಂಗೈ ಸೇರಿದಂತೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ್ರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಹಿರಿಯ ದುರೀಣ ಎಚ್.ಎಂ.ನಾಯ್ಕ್, ಮಹ್ಮದ್ ರಫೀಕ್ ದೇಸಳ್ಳಿ, ಪಿ.ಜಿ.ತಂಗಚ್ಚನ್, ರಾಜಶೇಖರ್ ಪಾಟೀಲ್,...
ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!
ಬಸವೇಶ್ವರಿ ಮಾತೆಯವರಿಗೆ, ಸಚಿವ ಶಿವರಾಮ್ ಹೆಬ್ಬಾರ್ ನಿಂದನೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ, ಇವತ್ತು ಮುಂಡಗೋಡಿನಲ್ಲಿ ಮತ್ತೊಂದು ಪತ್ರಿಕಾಗೋಷ್ಟಿ ನಡೆದಿದೆ. ಬಿಜೆಪಿ ಮುಖಂಡರು ಹಾಗೂ ಉಗ್ನಿಕೇರಿ ಗ್ರಾಮದ ಹಲವರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಮಾತೆ ಬಸವೇಶ್ವರಿಯವರಿಗೆ ಸಚಿವ್ರು ಏನಂದ್ರೆ ಏನೂ ಅಂದಿಲ್ಲ, ಯಾವುದೇ ರೀತಿ ಹಗುರವಾಗಿ ಮಾತನಾಡಿಲ್ಲ ಅಂತಾ ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು, ಪತ್ರಿಕಾಗೋಷ್ಟಿಯಲ್ಲಿ ಭಾಗವಸಿದ್ದ ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ್, ಉಮೇಶ್...
ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!
ಮುಂಡಗೋಡಿನ ಯುವ ಪಡೆಯೊಂದು ನೊಂದವರ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ. ತಾಲೂಕಿನಲ್ಲಿ ರೋಗಗಳಿಂದ ಬಳಲಿ, ಆರ್ಥಿಕವಾಗಿಯೂ ಜರ್ಜಿತವಾಗಿರೋ ಕುಟುಂಬಗಳಿಗೆ ಆಸರೆಯ ಕಿರಿಬೆರಳು ನೀಡುವ ಮಹತ್ಕಾರ್ಯ ಮಾಡುತ್ತಿದೆ. ಹೀಗಾಗಿ, ಮೊಟ್ಟ ಮೊದಲು, ಆ ಎಲ್ಲಾ ಯುವಕರಿಗೂ ಪಬ್ಲಿಕ್ ಫಸ್ಟ್ ನ್ಯೂಸ್ ವತಿಯಿಂದ, ಬಿಗ್ ಸೆಲ್ಯೂಟ್..! “ಭವತಿ ಭಿಕ್ಷಾಂದೇಹಿ” ಅಂದಹಾಗೆ, ಮುಂಡಗೋಡಿನ ಅಯ್ಯಪ್ಪ ಭಜಂತ್ರಿ ಮತ್ತು ಅವರ ತಂಡ ಇಂತಹದ್ದೊಂದು ಮಾನವೀಯ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯೂ ಆಗಿದೆ. ಅಷ್ಟಕ್ಕೂ ಇಲ್ಲಿ ನೊಂದವರ ಕಣ್ಣೀರ ಹನಿ ಒರೆಸುವ ಜೊತೆಗೆ,...
ಮುಂದಿನ 4 ದಿನಗಳ ಕಾಲ ಬಾರೀ ಮಳೆ ಮುನ್ಸೂಚನೆ..!
ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಹೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!
ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಸದ್ಯ ನಡೆಯುತ್ತಿರೋ ವಿದ್ಯಮಾನಗಳು ಬಹುಶಃ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸಿದೆ. ಮಠದ ಅಂಗಳದಲ್ಲಿ ಎರಡು ಗುಂಪುಗಳ ನಡುವೆ ಉತ್ತರಾಧಿಕಾರಿಯ ಕಿಚ್ಚು ನಿಗಿ ನಿಗಿಸುತ್ತಿದೆ. ತಾಲೂಕಾ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದವರು ಸದಸ್ಯರು ಕೂಡ ಈಗ ತಗಾದೆ ತೆಗೆದಿದ್ದಾರೆ. ಏನಿದು ತಗಾದೆ..? ಅಂದಹಾಗೆ, ಈಗಾಗಲೇ, ಕಳೆದ ರಾತ್ರಿ ಒಂದು ಗುಂಪು ಗಂಗಾಧರಯ್ಯ ಹಿರೇಮಠ ಎಂಬುವವರನ್ನು ಹನುಮಾಪುರ ಶ್ರೀಕಾಳಿಕಾಮಠದ ಉತ್ತರಾಧಿಕಾರಿ ಅಂತಾ ಘೋಷಣೆ ಮಾಡಿ, ಪಟ್ಟಾಧಿಕಾರದ ವಿಧಿವಿಧಾನಗಳನ್ನೂ...
ಇಂದಿರಾನಗರ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರು, ಇಬ್ಬರು ಗಂಭೀರ..!
ಮುಂಡಗೋಡ: ತಾಲೂಕಿನ ಇಂದಿರಾನಗರ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಗಾಂಧಿ ನಗರದ ದುರ್ಗಪ್ಪ ಕೊರವರ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಓಣಿಕೇರಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...
ಹುನಗುಂದ ಗ್ರಾಮದಲ್ಲೂ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು. ಈ ವೇಳೆ ಗ್ರಾಪಂ ಸದಸ್ಯ ಈಶ್ವರಗೌಡ ಅರಳಿಹೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು..







