ಬೆಂಗಳೂರು: ನಟ ಪುನಿತ್ ರಾಜಕುಮಾರ್ ತೀವ್ರ ಗಂಭೀರ ಹಿನ್ನೆಲೆಯಲ್ಲಿ ಇವತ್ತಷ್ಟೇ ರಾಜ್ಯಾಧ್ಯಂತ ತೆರೆಕಂಡಿದ್ದ ಶಿವರಾಜ್ ಕುಮಾರ್ ಅಭಿನಯದ, ಭಜರಂಗಿ- 2 ಚಿತ್ರ ಪ್ರದರ್ಶನ ರದ್ದು ಪಡಿಸಲಾಗಿದೆ, ಸಂಜೆ 4 ಗಂಟೆಯಿಂದ ರಾಜ್ಯಾಧ್ಯಂತ ಚಿತ್ರ ಪ್ರದರ್ಶನ ರದ್ದಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇವತ್ತು ಬೆಳಿಗ್ಗೆಯಷ್ಟೇ ತೆರೆಕಂಡಿದ್ದ ಭಜರಂಗಿ-2 ಟೀಂ ಗೆ ಖುದ್ದು ಪುನಿತ್ ರಾಜಕುಮಾರ್ ಶುಭಕೋರಿದ್ದರು
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಏಕ್ ದಂ ಫ್ರೆಶ್
ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ, ಆರೋಗ್ಯ ಕ್ಷೀಣ,ಕ್ಷೀಣ..! ಅಭಿಮಾನಿಗಳ ಆಕ್ರಂಧನ..!
ಬೆಂಗಳೂರು: ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ. ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಲೇ ಸಾಗಿದೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಾವೂ ಎಲ್ಲಾ ರೀತಿಯ ಚಿಕಿತ್ಸೆ ಮಾಡುತ್ತಿದ್ದೇವೆ ಅಂತಾ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ರಂಗನಾಥ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಪುನಿತ್ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು. ಆನಂತರ ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಕ್ರಂ ಆಸ್ಪತ್ರೆಗೆ ರವಾನಿಸುವ ಮಾರ್ಗಮದ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತವಾಗಿತ್ತು. ಹೀಗಾಗಿ, ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕ್ಷಣ...
ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಣ್ಣನ ಆಕ್ರೋಶ..! ಕಂಪನಿ ಮಾಲೀಕಗೆ ಪತ್ರ ಬರೆದ ಹಿಂದು ಹುಲಿ..!!
ಶಿರಸಿ: ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಾಹೀರಾತು ಪ್ರಶ್ನಿಸಿ ಸಿಎಟ್ ಟೈಯರ್ ಕಂಪನಿ ಮಾಲೀಕ ಅನಂತ ವರಧನ್ ಗೆ ಪತ್ರ ಬರೆದಿದ್ದಾರೆ. ಸಿಎಟ್ ಜಾಹೀರಾತಿನಲ್ಲಿ ಹಿಂದುಗಳ ಆಚರಣೆಗಳನ್ನು ನಟ ಅಮೀರ್ ಖಾನ್ ಹೀಯಾಳಿಸಿರುವ ಕುರಿತು ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಜಾಹಿರಾತಿನಲ್ಲಿ ಹಿಂದುಗಳ ಭಾವನೆಯನ್ನು ತುಳಿಯುವ ಕ್ಷುಲ್ಲಕ ಕುತಂತ್ರ ಎಂದು ಆರೋಪಿಸಿರುವ ಅನಂತಕುಮಾರ್ ಹೆಗಡೆ, ಆಮೀರ್ ಖಾನ್ ನಟಿಸಿರುವ ಜಾಹಿರಾತಿನಲ್ಲಿ ಹಿಂದುಗಳು ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ ಆದರೆ, ಅಮೀರ್...
ಭಾರೀ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನರ ಸಾವು..!
ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯಲ್ಲಿದ್ದ 7 ಜನರು ಸಾವು ಕಂಡ ಹೃದಯ ವಿದ್ರಾವಕ ಘಟನೆ, ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಭಾರೀ ಮಳೆಯಿಂದ ಕುಸಿದು ಬಿದ್ದಿದ್ದು, 7 ವರ್ಷದ ಮಗು ಸೇರಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲು ಅಗ್ನಿಶಾಮಕ ದಳ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ
ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಇಂದಿನಿಂದ ದೇವಿ ದರ್ಶನಕ್ಕೆ ಅವಕಾಶ..!
ಬೆಳಗಾವಿ: ಸವದತ್ತಿಯ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಇಂದಿನಿಂದ ಸಂಭ್ರಮ ಮತ್ತೆ ಶುರುವಾಗುತ್ತಿದೆ. ಬರೋಬ್ಬರಿ, ಒಂದೂವರೆ ವರ್ಷದ ನಂತರ ಭಕ್ತರ ದರ್ಶನಕ್ಕೆ ಯಲ್ಲಮ್ಮ ದೇವಸ್ಥಾನ ತೆರದುಕೊಳ್ಳುತ್ತಿದೆ. ಇಂದು ಮಂಗಳವಾರ ಬೆಳಿಗ್ಗೆ 6.30ಕ್ಕೆ ಶಾಸ್ತ್ರೋಕ್ತವಾಗಿ ದೇವಸ್ಥಾನ ಓಪನ್ ಮಾಡಿದ ಆಡಳಿತ ಮಂಡಳಿ, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಭಕ್ತರ ಸ್ವಾಗತಕ್ಕೆ ದೇವಸ್ಥಾನ ಆವರಣದಲ್ಲಿ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿದೆ. ಇಷ್ಟು ದಿನ, ಭಕ್ತರಿಲ್ಲದೇ ಭಣಗುಡುತ್ತಿದ್ದ ಏಳುಕೊಳ್ಳದಲ್ಲಿ ಭಕ್ತರ ಸಂಭ್ರಮ ಇಂದಿನಿಂದ ಕಳೆ ಕಟ್ಟಲಿದೆ. ಇನ್ನು, ಮಹಾರಾಷ್ಟ್ರ- ಕರ್ನಾಟಕ ಸೇರಿ ಹಲವು...
ನಕಲಿ ಸಹಿ ಮಾಡಿ ಭೂಮಿ ನೋಂದಾಯಿಸಿದ್ದ ಗ್ರೇಡ್2 ತಹಶೀಲ್ದಾರ್ ಅರೆಸ್ಟ್..!
ಚಿಕ್ಕೋಡಿ: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರಿಗೆ ಜಮೀನು ನೊಂದಾಯಿಸಿದ್ದ ಚಿಕ್ಕೋಡಿ ಗ್ರೇಡ್ 2 ತಹಶೀಲ್ದಾರ್ ಅರೆಸ್ಟ್ ಆಗಿದ್ದಾರೆ. ಚಿಕ್ಕೋಡಿ ತಹಶೀಲ್ದಾರರ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರುಣ್ ಶ್ರೀಖಂಡೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಏನದು ಕೇಸ್..? ಬಂಧಿತ ಗ್ರೇಡ್ 2 ತಹಶೀಲ್ದಾರ್ ಶ್ರೀಖಂಡೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ಮಾರುತಿ ಕರಿಗಾರ ಎಂಬುವರಿಗೆ ಸೇರಿದ್ದ ರಿ.ನಂ 436/5ಮತ್ತು 436/6 ರ ಜಮೀನು ಕೊಟ್ಟಿ ದಾಖಲೆ ಸೃಷ್ಠಿಸಿ, ಖರೀದಿ ಮಾಡಿ, ಪೋರ್ಜರಿ ಸಹಿ...
ಏಕಾಏಕಿ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದು ನರಳಾಡಿದ್ಲು ಯುವತಿ, ಭಯಬಿಟ್ಟು ಕಾಪಾಡಿದ್ರು ಮುಂಡಗೋಡಿಗರು..!
ನಿಜಕ್ಕೂ ಮುಂಡಗೋಡಿನ ಮಣ್ಣ ಕಣಕಣದಲ್ಲೇ ಮಾನವೀಯತೆ ಇದೆ ಅನ್ನೋದಕ್ಕೆ ಇವತ್ತಿನ ಈ ಘಟನೆಯೇ ಸಾಕ್ಷಿ. ಯುವತಿಯೊಬ್ಳು ರಸ್ತೆಯ ಮದ್ಯದಲ್ಲೇ ಪ್ರಜ್ಞಾಹೀನವಾಗಿ ಬಿದ್ದಾಗ ಸಾರ್ವಜನಿಕರೇ ಆ ಯುವತಿಯನ್ನ ಆಸ್ಪತ್ರೆಗೆ ಸೇರಿಸಿರೋ ಘಟನೆ ನಡೆದಿದೆ. ಏನಾಯ್ತು..? ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ಸಮೀಪ ಬಂಕಾಪುರ ರಸ್ತೆಯಲ್ಲಿ ಇಂದು ಮದ್ಯಾಹ್ನ ಓರ್ವ ಯುವತಿ ಏಕಾಏಕಿ ಪ್ರಜ್ಞೆ ತಪ್ಪಿ ರಸ್ತೆಯಲ್ಲೆ ಬಿದ್ದಿದ್ದಾಳೆ. ಆ ಹೊತ್ತಲ್ಲಿ ಆಕೆಯ ಜೊತೆಗಿದ್ದ ಓರ್ವ ಅಜ್ಜಿ ಆತಂಕದಲ್ಲಿ ಚೀರಾಟ ಶುರುವಿಟ್ಟಿದ್ದಾಳೆ. ಆ ಕ್ಷಣ ನಿಜಕ್ಕೂ ಈ ಘಟನೆ ಯಾರಿಗೂ...
ಪುಟ್ಟ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ, ತಪ್ಪಿದ ಭಾರೀ ದುರಂತ..!
ಉಡುಪಿ: ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ಘಟನೆ ನಡೆದಿದೆ. ಟೈಯರ್ ಸ್ಪೋಟಗೊಂಡು ಡಿವೈಡರ್ ಹಾರಿ ನುಗ್ಗಿದ ಅಂಬುಲೆನ್ಸ್, ಇಡಿ ಇಡಿಯಾಗಿ ನದಿಗೆ ಹಾರುವುದರಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿ ಬಚಾವ್ ಆಗಿದೆ. ಹೀಗಾಗಿ, ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದೆ. ಇದ್ರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿ ಮಗುವನ್ನು ಕರೆದೊಯ್ಯುತ್ತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ...
ನಾಯಿ ಬೇಟೆಯಾಡಲು ಬಂದ ಚಿರತೆಗೆ ಏನಾಯ್ತು..? ಕುಮಟಾದಲ್ಲೊಂದು ವಿಚಿತ್ರ ಘಟನೆ..!
ಕುಮಟಾ: ನಾಯಿ ಬೇಟೆಯಾಡಲು ಬಂದ ಚಿರತೆಯೊಂದು, ತಾನೆ ನಾಯಿ ಬಲೆಯಲ್ಲಿ ಸಿಲಕಿದ ಘಟನೆ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಯ ಹತ್ತಿರ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ಚಿರತೆ, ನಾಯಿಯ ಬೋನಿನೋಳಗೆ ಹೋಗಿದೆ. ಬೋನಿನೊಳಗೆ ಹೋಗಿದ್ದನ್ನ ಗಮನಿಸಿದ ಮನೆಯ ಮಾಲೀಕರು, ತಕ್ಷಣ ಬೋನ್ ಲಾಕ್ ಮಾಡಿದ್ದಾರೆ. ಹೀಗಾಗಿ, ನಾಯಿ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳಲು ಬಂದಿದ್ದ ಚಿರತೆ ಈಗ ನಾಯಿ ಬೋನಲ್ಲೇ ಬಲೆ ಬಿದ್ದಿದೆ. ಹೀಗಾಗಿ, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಚಿರತೆ...
ಕಾರವಾರ ಯುವಕನಿಗೆ ನಿಫಾ ವೈರಸ್ ಇಲ್ಲ, ಪುಣೆಯಿಂದ ಬಂದ ವರದಿ ನೆಗೆಟಿವ್..! ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ..!!
ಕಾರವಾರ: ನಿಫಾ ವೈರಸ್ ಆತಂಕದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರದ ಯುವಕ ಸದ್ಯ ರಿಲೀಫ್ ಆಗಿದ್ದಾನೆ. ಯಾಕಂದ್ರೆ, ನಿಫಾ ಆತಂಕಿತ ಯುವಕನ ನಿಫಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಇದ್ರಿಂದ ನಿಫಾ ಆತಂಕಕ್ಕಿಡಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಯುವಕ ನಿಟ್ಟುಸಿರು ಬಿಟ್ಟಿದ್ದಾರೆ. ಹಾಗಂತ, ದಕ್ಷಿಣಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ, ಕಾರವಾರ ಮೂಲದ ಯುವಕನ ಬ್ಲಡ್, ಯುರಿನ್ ಮತ್ತು ಸ್ವಾಬ್ ಸ್ಯಾಂಪಲನ್ನು ಟೆಸ್ಟ್ ಗೆ ಕಳಿಸಿತ್ತು. ಗೋವಾದಲ್ಲಿ...









