ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಅವ್ಯವಸ್ಥೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ರು. ಹೀಗಾಗಿ, ಬಸ್ ನಿಲ್ದಾಣದಲ್ಲೇ ಬಸ್ ಗಳು ನಿಂತು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ಸೇ ಇಲ್ಲ..! ಅಂದಹಾಗೆ, ಇದು ಇವತ್ತಿನ ಸಮಸ್ಯೆ ಅಷ್ಟೇ ಅಲ್ಲ. ಮುಂಡಗೋಡ ಬಸ್ ನಿಲ್ದಾಣದಲ್ಲಿ ನಿತ್ಯವೂ ಇದೇ ಗೋಳು. ಶಾಲಾ,ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಪರಿಪಾಟಲು ಅಂತೂ ಹೇಳತೀರದ್ದು. ಹೀಗಾಗಿ, ಅದೇಷ್ಟೇ ಬಾರಿ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ದೂರು
ಈ ಮಕ್ಕಳು ಬಡವರ ಹೊಟ್ಟೆಯಲ್ಲಿ ಹುಟ್ಟಿದ್ದೇ ತಪ್ಪಾ..? ಮಕ್ಕಳ ಕಲ್ಯಾಣದ ಹೊಣೆ ಹೊತ್ತ ಅಧಿಕಾರಿಗಳೇ ಗಮನಿಸಿ, ಒಣಗುತ್ತಿವೆ ಕಂದಮ್ಮಗಳು..!
ಮುಂಡಗೋಡ: ಸರ್ಕಾರ ಬಡ ಮಕ್ಕಳಿಗೆ ಅಂತಾ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲೂ ಹಳ್ಳಿಗಾಡಿನ ಕಂದಮ್ಮಗಳಿಗೆ ಯಾವುದೇ ಅಪೌಷ್ಟಿಕತೆ ಬರದೆ ಇರಲಿ ಅಂತಾ ಅಂಗನವಾಡಿಗಳ ಮೂಲಕ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಅಲ್ಲದೇ ವಲಸೆ ಬರುವ ಕುಟುಂಬಗಳ ಮಕ್ಕಳಿಗಾಗೇ ಆಯಾ ವ್ಯಾಪ್ತಿಯ ಅಂಗನವಾಡಿಗಳ ಮೂಲಕ ವಿಶೇಷ ಕಾಳಜಿಗಳನ್ನೂ ವ್ಯವಸ್ಥೆ ಮಾಡಿದೆ. ಒಣಗುತ್ತಿವೆ ಕಂದಮ್ಮಗಳು..! ಆದ್ರೆ ಮುಂಡಗೋಡ ತಾಲೂಕಿನ ಅಧಿಕಾರಿಗಳಿಗೆ ಮಾತ್ರ ಇದೇಲ್ಲ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ತಾಲೂಕಿನಲ್ಲಿ ಸದ್ಯ ಕಬ್ಬು ಕಟಾವು ಮಾಡಲು ದೂರದ ಜಿಲ್ಲೆಗಳಿಂದ ಬಂದ ಆ...
ಕಾತೂರು ಅರಣ್ಯದ ಆ ಪ್ರದೇಶದಲ್ಲಿ ಸಿಕ್ಕಿದ್ದು 12 ಬುಡುಚಿಗಳಂತೆ..! ಎಲ್ಲದಕ್ಕೂ FIR ಆಗಿದೆಯಂತೆ, ಹಾಗಿದ್ರೆ ಈ ಪ್ರಶ್ನೆಗಳಿಗೆ ಉತ್ತರಿಸೋರ್ಯಾರು RFO ಸಾಹೇಬ್ರೆ..?
ಮುಂಡಗೋಡ: ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಮರಗಳ ಮಾರಣಹೋಮದ ಸುದ್ದಿ ಪಬ್ಲಿಕ್ ಫಸ್ಟ್ ನಲ್ಲಿ ಬಿತ್ತರಿಸಿದ್ದೇ ತಡ, ಕಾತೂರಿನ RFO ಸಾಹೇಬ್ರು ಉರಿದುಬಿದ್ದಿದ್ದಾರಂತೆ. ಅದೇಲ್ಲ ಬುಡುಚಿಗಳು ಹಳೆಯವು, ಅದರ ಮೇಲೆ ಈಗಾಗಲೇ ಕೇಸು ದಾಖಲಿಸಲಾಗಿದೆ ಅಂತೇಲ್ಲ ಬುಸುಗುಟ್ಟಿದ್ದಾರಂತೆ. ಆದ್ರೆ, ಒಂದು ಮಾತ್ರ ಅರ್ಥವಾಗ್ತಿಲ್ಲ. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಕೇವಲ ಎಫ್ ಐ ಆರ್ ಗಷ್ಟೇ ಸೀಮಿತವಾಗಿಬಿಟ್ರಾ..? ಅಥವಾ ಅರಣ್ಯದಲ್ಲಿ ರಕ್ಷಣೆಯ ಜವಾಬ್ದಾರಿಯನ್ನೇ ಮರೆತ್ರಾ..? ಈ ಪ್ರಶ್ನೆ ಸದ್ಯ ಪರಿಸರ ಪ್ರಿಯರಿಗೆ ಕಾಡ್ತಿದೆ. 12 FIR ಆಗಿದೆಯಂತೆ..! ನಂಗೆ...
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!
ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...
ಮುಂಡಗೋಡಿನಲ್ಲಿ ಮತ್ತೇ ಭಾರೀ ಮಳೆ, ಬಂಕಾಪುರ ರಸ್ತೆ ನಿವಾಸಿಗಳಿಗೆ ಮತ್ತದೇ ಗೋಳು, ಇನ್ನಾದ್ರೂ ಎಚ್ಚೆತ್ತುಕೊಳ್ಳಿ ಮಿಸ್ಟರ್ ಚೀಫ್ ಆಫೀಸರ್ರೇ.!
ಮುಂಡಗೋಡಿನಲ್ಲಿ ಮತ್ತೆ ಭಾರೀ ಮಳೆಯಾಗಿದೆ. ಬಂಕಾಪುರ ರಸ್ತೆಯಲ್ಲಿ ಮತ್ತದೇ ಗೋಳು ಎದುರಾಗಿದೆ. ಶನಿವಾರದಂತೆ ಇವತ್ತೂ ಕೂಡ ಇಲ್ಲಿನ ನಿವಾಸಿಗಳು “ಶಿವ”ರಾತ್ರಿ ಜಾಗರಣೆ ಮಾಡುವಂತಾಗಿದೆ. ಹೀಗೆ ಭಜನೆ ಮಾಡಿದ ಮೇಲಾದ್ರೂ “ಜನಪ್ರತಿನಿಧಿ” ಸಾಹೇಬ್ರುಗಳು ಈ ನಿವಾಸಿಗಳ ಗೋಳು ಕೇಳ್ತಾರಾ ಅನ್ನೋದೊಂದೇ ಸದ್ಯದ ಪ್ರಶ್ನೆಯಾಗಿದೆ. ಶನಿವಾರದಂತೆ..! ಅಸಲು, ಶನಿವಾರ ಇಂತದ್ದೇ ಮಳೆ ಧುತ್ತನೇ ಸುರಿದು ಹೋದಾಗ, ಪಾಪ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾತ್ರೋ ರಾತ್ರಿ ಎದ್ನೊ ಬಿದ್ನೊ ಅಂತಾ ಬಂದಿದ್ರಂತೆ. ಪಾಪ ಅದೇಲ್ಲಿ ಬೆಚ್ಚಗೆ ಮಲಗಿದ್ರೋ ಏನೋ ಮಾದ್ಯಮಗಳು...
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?
ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...
ಉಗ್ರ ಸ್ವರೂಪಕ್ಕಿಳಿದ ವಿದ್ಯಾರ್ಥಿಗಳ ಹೋರಾಟ, ಮುಂಡಗೋಡಿನಲ್ಲೇ ರಸ್ತೆ ತಡೆದ ನಂದಿಕಟ್ಟಾ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಸ್ಥರ ಆಕ್ರೋಶ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ವಿದ್ಯಾರ್ಥಿಗಳಿಗೆ ನಿತ್ಯವೂ ಉಂಟಾಗ್ತಿರೊ ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲೇ ಬೇಕು. ನಮಗೆ ಬಸ್ ಬೇಕೆ ಬೇಕು ಅಂತಾ ಸತತವಾಗಿ ಪ್ರತಿಭಟನೆ ಕೈಗೊಂಡಿರೋ ನಂದಿಕಟ್ಟ ಭಾಗದ ವಿದ್ಯಾರ್ಥಿಗಳು, ಪೋಷಕರು ಇವತ್ತು ಮುಂಡಗೋಡಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡ್ರು. ನಾಲಾಯಕ ಸಾರಿಗೆ ಅಧಿಕಾರಿಗಳೇ..! ಅಸಲು, ನಿನ್ನೆ ಸಂಜೆ 4.30 ರಿಂದ ಇಂದೂರಿನ ಸಮೀಪ ಪ್ರೌಢಶಾಲೆಯ ಹತ್ತಿರ ಬಸ್ ತಡೆದು ಪ್ರತಿಭಟಿಸಿದ್ದ ವಿದ್ಯಾರ್ಥಿಗಳಿಗೆ ಯಾರೂ ಕ್ಯಾರೇ ಅಂದಿರಲಿಲ್ಲ....
ನಮಗೆ ಬಸ್ ಬೇಕೇ ಬೇಕು..! ಇಂದೂರಿನಲ್ಲಿ ವಿದ್ಯಾರ್ಥಿಗಳಿಂದ ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆ ಹತ್ತಿರ ಸುರಿವ ಮಳೆಯಲ್ಲೇ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ರು. ಅಸಲು, ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಕೆಂದಲಗೇರಿ, ಹುಲಿಹೊಂಡ, ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಇಂದೂರುಹೈಸ್ಕೂಲ್ ಹತ್ತಿರ.. ಅಂದಹಾಗೆ, ಇಂದು ಸಂಜೆ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಸುಮಾರು...
ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!
ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...









