ದೇವರಗುಡ್ಡ: ಐತಿಹಾಸಿಕ ದೇವರಗುಡ್ಡ ಮಾಲತೇಶ ಸ್ಚಾಮಿಯ ಕಾರಣೀಕ ನುಡಿ ಹೊರಬಿದ್ದಿದೆ. “ಅಕಾಶದ ಗುಡ್ಡಕ್ಕೆ ಶಿಶು ಏರಿ ತಲೆ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಕಾರಣಿಕ ನುಡಿ. ವೃತಾಧಾರಿ ಗೊರವಯ್ಯ ನಾಗಪ್ಪಜ್ಜ ದುರಗಪ್ಪಜ್ಜ ಉರ್ಮಿ ಕಾರ್ಣಿಕ ನುಡಿದಿದ್ದಾರೆ. ವಿಜಯ ದಶಮಿಯ ಆಯುಧ ಪೂಜೆ ದಿನದಂದು ಪ್ರತಿವರ್ಷ ಕಾರ್ಣಿಕ ನುಡಿವ ಗೊರವಯ್ಯನವರು, ಇಂದು ಬಿಲ್ಲನ್ನೇರಿ ಕಾರಣಿಕ ನುಡಿದಿದ್ದಾರೆ. ಕಾರಣೀಕ ತಾತ್ಪರ್ಯ..! ಅಂದಹಾಗೆ, ಪ್ರತೀ ವರ್ಷ ಆಯುಧ ಪೂಜೆಯ ದಿನ ನುಡಿಯುವ ದೇವರಗುಡ್ಡದ ಕಾರಣೀಕಚನ್ನು ಬಹುತೇಕ ರೈತರ ಕೃಷಿ...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ದೈವ ದರ್ಶನ..
ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!
ಮುಂಡಗೋಡ: ಬಂಜಾರಾ ಸಮುದಾಯದ ಪವಿತ್ರ ಕ್ಷೇತ್ರ ಸಂತ ಶ್ರೀ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪದ ಬಾಯಾಗಢನಲ್ಲಿ RSS ನವರು ನಡೆಸುತ್ತಿರೋ ಶಿಬಿರಕ್ಕೆ ಬಂಜಾರಾ ಸಮುದಾಯದ ಕೆಲವು ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ, ಹೀಗೆ RSS ನ ಶಿಬಿರವನ್ನು ವಿರೋಧಿಸುವುದು ಸರಿಯಲ್ಲ, ಶಿಬಿರ ನಡೆಯುವಂತಾಗಲಿ ಅಂತಾ ಮುಂಡಗೋಡಿನ ಬಂಜಾರಾ ಮುಖಂಡ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಆಗ್ರಹಿಸಿದ್ದಾರೆ. RSS ಬಗ್ಗೆ ಅರಿವಿದೆ..! ನಮಗೆ RSS ಬಗ್ಗೆ ಅರಿವಿದೆ. ದೇಶಭಕ್ತಿಯನ್ನು ಜಾಗ್ರತಗೊಳಿಸಿ, ಯುವಕರನ್ನು ದೇಶಭಕ್ತಿಯೆಡೆಗೆ ಸಂಘಟಿಸುವುದೇ RSS ಆಗಿದೆ....
ದುಂಢಸಿ, ಅ.ಮ. ಕೊಪ್ಪದಿಂದ ಹೊಂಬುಜ ಕ್ಷೇತ್ರಕ್ಕೆ ಪಾದಯಾತ್ರೆ, ಅರಟಾಳದಲ್ಲಿ ಮುನಿಶ್ರೀ ಚಾಲನೆ..!
ಶಿಗ್ಗಾವಿ: ತಾಲೂಕಿನ ಅ. ಮ.ಕೊಪ್ಪ ಹಾಗೂ ದುಂಡಶಿ ಗ್ರಾಮದ ಜೈನ ಶ್ರಾವಕರು ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿದೇವಿಯ ದರ್ಶನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ನೂರಾರು ಶ್ರಾವಕರ ತಂಡ ಇಂದಿನಿಂದ ಪಾದಯಾತ್ರೆ ಪ್ರಾರಂಭಿಸಿದೆ. ಜೈನರ ಅತಿಶಯ ಕ್ಷೇತ್ರ ಅರಟಾಳದಲ್ಲಿ ಮುನಿಶ್ರೀ ಪುಣ್ಯಸಾಗರ ಮಹಾರಾಜರು ಹಾಗೂ ಬಾ.ಬ್ರ. ಸೋಮದೇವ ಬೈಯಾಜಿಯವವರ ನೇತೃತ್ವದಲ್ಲಿ ಹೊಂಬುಜ ಪಾದಯಾತ್ರೆಗೆ ಚಾಲನೆ ನೀಡಿದ್ರು. ಈ ವೇಳೆ ರವಿ ಪಾಸರ, ಪ್ರಕಾಶ್ ಧರಣೆಪ್ಪನವರ್, ಸುನೀಲ್ ಆರೆಗೊಪ್ಪ, ಸುಧೀರ್ ಛಬ್ಬಿ, ಮಹಾವೀರ ಧಾರವಾಡ, ಪ್ರಶಾಂತ ಬಿಶೆಟ್ಟಿ, ಪಾಯಪ್ಪ ಬ್ಯಾಹಟ್ಟಿ...
ಶಿರಸಿ ಮಾರಿಕಾಂಬೆ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ..!
ಶಿರಸಿ: ಮಾರಿಕಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಇಂದು ದಂಪತಿ ಸಮೇತ ಭೇಟಿ ನೀಡಿದ್ರು.ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿ ಪೀಠಗಳಲ್ಲೊಂದಾದ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ, ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ್ರು. ಪತ್ನಿ ಗೀತಾ ಶಿವರಾಜ್ ಕುಮಾರ್ , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟ ಶಿವರಾಜ್ ಕುಮಾರ್, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆಯೇ ಶಿರಸಿಗೆ ಆಗಮಿಸಿದ್ದಾರೆ. ಇಂದು ಶುಕ್ರವಾರದ ಹಿನ್ನೆಲೆಯಲ್ಲಿ ಮಾರಿಕಾಂಬೆಗೆ ಸೇವೆ ಸಲ್ಲಿಸಿದ್ದಾರೆ.
ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?
ಮುಂಡಗೋಡ: ತಾಲೂಕಿನ ಅಗಡಿ ಶ್ರೀ ಮೈಲಾರಲಿಂಗ ಸ್ವಾಮಿಯ ಎಂಟನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಕಾರಣೀಕ ಉತ್ಸವ ನಡೆಯಿತು. ಆದ್ರೆ ಈ ವರ್ಷದ ಕಾರಣೀಕ ಅಸ್ಪಷ್ಟವಾಗಿ ಕೇಳಿತು. ಕಾರಣೀಕದ ನುಡಿಗಳು ಯಾರಿಗೂ ಸ್ಪಷ್ಟವಾಗಿ ಕೇಳಲೇ ಇಲ್ಲದಿರುವುದು ಭಕ್ತರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ತಂಪಾಯಿತಲೇ ಪರಾಕ್..? “ರಾಜ್ಯ ತಂಪಾಯಿತಲೇ ಪರಾಕ್” ಇದು ಅಗಡಿಯಲ್ಲಿ ಇಂದು ಅಸ್ಪಷ್ಟವಾಗಿ ಕೇಳಿ ಬಂದ ಕಾರಣೀಕ ನುಡಿ. ಒಂದುವೇಳೆ ಇದೇ ಮೈಲಾರಲಿಂಗ ಸ್ವಾಮಿಯ ಕಾರಣೀಕವಾಗಿದ್ದರೆ, ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ, ಅಲ್ಲದೆ, ರಾಜ್ಯದಲ್ಲಿ ಶಾಂತಿ...
“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...
ಮುಂಡಗೋಡ ಮಹಾಲಕ್ಷ್ಮಿ ದೇವಾಲಯದಲ್ಲಿ ಕಾರ್ತಿಕೋತ್ಸವ, ವರ್ಧಂತಿ ಉತ್ಸವ..!
ಮುಂಡಗೋಡ: ಪಟ್ಟಣದ ಇಂದಿರಾನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಇಂದು ಕಾರ್ತಿಕ ಅಮವಾಸ್ಯೆಯ ನಿಮಿತ್ತ ಕಾರ್ತಿಕೋತ್ಸವ ಹಾಗೂ 18 ನೇ ವರ್ಧಂತಿ ಉತ್ಸವ ಕಾರ್ಯಕ್ರಮ ನಡೆಯುತ್ತಿದೆ.. ಇಂದು ಬೆಳಗಿನಿಂದಲೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಹೋಮ ಹವನಗಳು ನಡಯುತ್ತಿವೆ. ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಲಿದೆ.. ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ದೇವಸ್ಥಾನದಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.
ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಇಂದಿನಿಂದ ದೇವಿ ದರ್ಶನಕ್ಕೆ ಅವಕಾಶ..!
ಬೆಳಗಾವಿ: ಸವದತ್ತಿಯ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಇಂದಿನಿಂದ ಸಂಭ್ರಮ ಮತ್ತೆ ಶುರುವಾಗುತ್ತಿದೆ. ಬರೋಬ್ಬರಿ, ಒಂದೂವರೆ ವರ್ಷದ ನಂತರ ಭಕ್ತರ ದರ್ಶನಕ್ಕೆ ಯಲ್ಲಮ್ಮ ದೇವಸ್ಥಾನ ತೆರದುಕೊಳ್ಳುತ್ತಿದೆ. ಇಂದು ಮಂಗಳವಾರ ಬೆಳಿಗ್ಗೆ 6.30ಕ್ಕೆ ಶಾಸ್ತ್ರೋಕ್ತವಾಗಿ ದೇವಸ್ಥಾನ ಓಪನ್ ಮಾಡಿದ ಆಡಳಿತ ಮಂಡಳಿ, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಭಕ್ತರ ಸ್ವಾಗತಕ್ಕೆ ದೇವಸ್ಥಾನ ಆವರಣದಲ್ಲಿ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿದೆ. ಇಷ್ಟು ದಿನ, ಭಕ್ತರಿಲ್ಲದೇ ಭಣಗುಡುತ್ತಿದ್ದ ಏಳುಕೊಳ್ಳದಲ್ಲಿ ಭಕ್ತರ ಸಂಭ್ರಮ ಇಂದಿನಿಂದ ಕಳೆ ಕಟ್ಟಲಿದೆ. ಇನ್ನು, ಮಹಾರಾಷ್ಟ್ರ- ಕರ್ನಾಟಕ ಸೇರಿ ಹಲವು...
ಹುನಗುಂದ ವಿಠ್ಠಲ ರುಕ್ಮಾಯಿ ಮಂದಿರದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ..!
ಮುಂಡಗೋಡ:ತಾಲೂಕಿನ ಹುನಗುಂದ ಗ್ರಾಮದ ವಿಠಲ ರುಕ್ಮಿಣಿ ಹರಿಮಂದಿರದಲ್ಲಿ ರವಿವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 29-8-2021 ರಂದು ರವಿವಾರ ದಿವಸ ಬೆಳಿಗ್ಗೆ 10-00 ಘಂಟೆಗೆ ವಿಠ್ಹಲ ರುಕ್ಮಿಣಿ ಹರಿ ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣನನ್ನು ತೊಟ್ಟಿಲು ಹಾಕುವ ಕಾರ್ಯಕ್ರಮ ಇರುತ್ತದೆ. ಮಧ್ಯಾನ ಪ್ರಸಾಧ ವ್ಯವಸ್ಥೆ ಇರುವದರಿಂದ ಎಲ್ಲಾ ಭಕ್ತಾದಿಗಳು ಭಾಗವಹಿಸಬೇಕೆಂದು ಪಾಂಡುರಂಗ ಸೇವಾ ಸಮಿತಿಯವರು ಮನವಿ ಮಾಡಿದ್ದಾರೆ.
ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಗ್ರಾಮದ ಗ್ರಾಮದೇವಿ ದ್ಯಾಮವ್ವ ತಾಯಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರಿಸಲಾಯಿತು. 108 ದಿನದ ಉಡಿತುಂಬುವ ಕಾರ್ಯಕ್ರಮವನ್ನು ಗ್ರಾಮಸ್ಥರು ಶೃದ್ದಾಪೂರ್ವಕವಾಗಿ ನೆರವೇರಿಸಿದ್ರು. ಈ ವೇಳೆ ದ್ಯಾಮವ್ವ ತಾಯಿಗೆ ಸಾಂಪ್ರದಾಯಿಕವಾಗಿ ಉಡಿ ತುಂಬಲಾಯಿತು. ವಿಶೇಷವಾಗಿ ಪೂಜೆ ನೆರವೇರಿಸಿ ಪ್ರಸಾದ ಹಂಚಲಾಯಿತು. ಈ ವೇಳೆ ಗ್ರಾಮದ ಮುಖಂಡರು, ಮುತ್ತೈದೆಯರು ಸೇರಿದಂತೆ ಹಲವರು ಭಾಗಿಯಾಗಿದ್ರು.









