ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ರಾಜಕೀಯ ಪಡಸಾಲೆ..
ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?
ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ. ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...
ಬೆಳಿಗ್ಗೆ ಬಿಜೆಪಿ, ರಾತ್ರಿ ಕಾಂಗ್ರೆಸ್ ಅನ್ನೋ “ಶಕುನಿ” ಲೀಡರ್ಸ್ ನಮಗೆ ಬೇಕಾಗಿಲ್ಲ: ರವಿಗೌಡ ಪಾಟೀಲ್ ಖಡಕ್ ಮಾತು..!
ಬೆಳಿಗ್ಗೆ ಬಿಜೆಪಿಯಲ್ಲಿ ಚಹಾ ಕುಡಿದು, ರಾತ್ರಿಯಾದಂತೆ ಕಾಂಗ್ರೆಸ್ ಜೊತೆ ಚೀಯರ್ಸ್ ಹೇಳೊ, ಬೆನ್ನಿಗೆ ಚೂರಿ ಹಾಕೊ ಕಾರ್ಯಕರ್ತರು, ಮುಖಂಡರು ನಮಗೆ ಬೇಕಾಗಿಲ್ಲ. ಅಂತಹ ಮನಸ್ಥಿತಿಯವರು ಇದ್ರೆ ಈಗಲೇ ಈ ಸಭೆಯಿಂದಲೇ ಎದ್ದು ಹೋಗಿ ಅಂತಾ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲ್ ಖಡಕ್ಕಾಗೇ ಎಚ್ಚರಿಸಿದ್ರು. ಅವ್ರು, ಮುಂಡಗೋಡ ತಾಲೂಕಿನ ಇಂದೂರಿನ ಕಲ್ಮೇಶ್ವರ ದೇವಸ್ಥಾನದಲ್ಲಿ ನಡೆದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ರು. ಕೊಪ್ಪರಿಗೆ ಹಾಲಿನಲ್ಲಿ ಒಂದು ಸಣ್ಣ ಉಪ್ಪಿನ...
ಪ್ರವೀಣ್ ಹತ್ಯೆಗೆ ಖಂಡನೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರ “ರಾಜೀನಾಮೆ” ಬಾಣ..!
ವಿಜಯಪುರ: ಬಿಜೆಪಿ ಮುಖಂಡ ಪ್ರವೀಣ್ ಕೊಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಖುದ್ದು ಬಿಜೆಪಿ ಪಕ್ಷದಲ್ಲಿ ತಮ್ಮದೇ ಪಕ್ಷದ ಆಡಳಿತದ ವಿರುದ್ಧ ಕಾರ್ಯಕರ್ತರು ಸಿಡಿದೇಳುತ್ತಿದ್ದಾರೆ. ಜೊತೆಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಪದಾಧಿಕಾರಿಗಳು ತಮ್ಮ ಒಡಲಾಳದ ಆಕ್ರೋಶ ಹೊರಹಾಕುತ್ತಿದ್ದಾರೆ. ಹಿಂಡು ಹಿಂಡು ರಾಜೀನಾಮೆ..! ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಹಾಗೂ ಒಂಭತ್ತು ಮಂಡಳಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಸಾಮಾಜಿಕ ಜಾಲ ತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ...
ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಅನ್ನೋದು ಕೋಮಾ ಸ್ಥಿತಿಗೆ ತಲಪೇ ಬಿಡ್ತಾ..? ಸದ್ಯದ ಪರಿಸ್ಥಿತಿ ನೋಡಿದ್ರೆ ಹಾಗೇ ಅನ್ನಿಸ್ತಿದೆ. ತಾಲೂಕಿನಲ್ಲಿ ಒಂದೊಳ್ಳೆ ಅವಕಾಶ ಹೊಂದಿದ್ದ ಕೈ ಪಡೆಗೆ, ಸಿಕ್ಕ ಅವಕಾಶ ಬಳಸಿಕೊಳ್ಳುವ ಯಾವೊಂದೂ ಕಾರ್ಯಗಳೂ ಜಾರಿಯಾಗಲೇ ಇಲ್ಲ ಅನ್ನೋದು ಖುದ್ದು ಅದೇ ಪಕ್ಷದ ನಿಷ್ಟಾವಂತರನ್ನು ಚಿಂತೆಗೀಡು ಮಾಡಿದೆ. ಇನ್ನು, ನಾನೇ ಅಭ್ಯರ್ಥಿ ಅಂತಾ ಗುಂಗು ಹಿಡಿಸಿ, ಅದೇಲ್ಲೋ ಕುಳಿತು ರಿಮೋಟ್ ಒತ್ತುವ ಪ್ರಶಾಂತಣ್ಣ, ಅದೇಷ್ಟೋ ದಿನಗಳಿಂದ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ. ಹೀಗಾಗಿ, ಪಕ್ಷ ಕ್ಷೇತ್ರದಲ್ಲಿ ವಿಲ ವಿಲ ಅಂತಿದೆ....
ಬಾಚಣಕಿ ಗ್ರಾಪಂ ಅಧ್ಯಕ್ಷ ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಇಂದು ಮದ್ಯಾನ 1 ಗಂಟೆಯ ನಂತರ ನಡೆಯಲಿರೋ ಚುನಾವಣೆಯಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ..? ಅನ್ನೋ ಕುತೂಹಲಕ್ಕೆ ಉತ್ತರ ಸಿಗಲಿದೆ. 13 ಸದಸ್ಯ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಹೀಗಾಗಿನೇ ಕಾಂಗ್ರೆಸ್ ಬೆಂಬಲಿತ ನಾಗರಾಜ್ ಉಪಾದ್ಯೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ರು. ಅದ್ರಂತೆ, ಅರಶಿಣಗೇರಿಯ ತಿಪ್ಪವ್ವ ಢಾಕಪ್ಪ...
ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?
ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು,...
ಮುಂಡಗೋಡಿನಲ್ಲಿ ವಿ.ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಶುರು..!
ಮುಂಡಗೋಡ: ತಹಶೀಲ್ದಾರ್ ಕಚೇರಿಯಲ್ಲಿ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿರುಸಿನ ಮತದಾನ ಶುರುವಾಗಿದೆ. ಬೆಳಗಿನಿಂದಲೂ ಶಿಕ್ಷಕರು ಬಂದು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮತದಾನ ನಡೆಯುವ ತಹಶೀಲ್ದಾರ್ ಕಚೇರಿಯ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 144 ಸೆಕ್ಸೆನ್ ಜಾರಿ ಮಾಡಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುಂಡಗೋಡ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಇನ್ನು, ಮತದಾರರ ಯಾದಿಯನ್ನು ಹಿಡಿದು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ಬೆಂಬಲಿಗರ ಜೊತೆ ಒಂದೆಡೆ ಕುಳಿತು...
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...









