Stock Market Highlights : ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದ್ದು, ಸತತ ಎರಡನೇ ದಿನ ನಷ್ಟಕ್ಕೆ ಗುರಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಸ್ 271 ಪಾಯಿಂಟ್ಸ್ ಇಳಿಕೆಗೊಂಡಿದ್ದು, ನಿಫ್ಟಿ ಸೂಚ್ಯಂಕವು 24950 ಗಡಿಯ ಮಾರ್ಕ್ನಲ್ಲಿ ಕೊನೆಗೊಂಡಿದೆ. ದಿನದ ವಹಿವಾಟಿನ ಟಾಪ್ ಗೇನರ್ ಹಾಗೂ ಲೂಸರ್ಸ್ ಮಾಹಿತಿ ಇಲ್ಲಿದೆ. ದೇಶೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತಕ್ಕೆ ಒಳಗಾಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆಗೊಂಡು 82,059 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ...
Top Stories
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
Category: ರಾಷ್ಟ್ರೀಯ ಸುದ್ದಿ
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
ನವದೆಹಲಿ: ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಯೋಗಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆಯ್ಕೆ ಮಾಡಿದ ವಿಷಯವು ಇದೀಗ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಜೊತೆಗೆ ಕಾಂಗ್ರೆಸ್ನೊಳಗೂ ದೊಡ್ಡ ಆಕ್ರೋಶಕ್ಕೆ ನಾಂದಿ ಹಾಡಿದೆ. ತಾನು ತರೂರ್ ಹೆಸರು ಶಿಫಾರಸು ಮಾಡದೇ ಇದ್ದರೂ ಅವರನ್ನು ಆಯ್ಕೆ ಮಾಡಿದ ಕೇಂದ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಮೋದಿ ಸರ್ಕಾರ ರಾಜಕೀಯದ ಆಟ ಆಡುತ್ತಿದೆ’ ಎಂದಿದೆ....
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ರಚಿಸಬೇಕಿದೆ. ಸಂವಿಧಾನದ 143(1) ನೇ ವಿಧಿಯು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ನ ಅಭಿಪ್ರಾಯ...
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಅಮೀರ್ ನಜೀರ್ ವಾನಿ ಮತ್ತು ಆತನ ತಾಯಿಯ ನಡುವಿನ ಮಾತುಕತೆಯನ್ನು ತೋರಿಸುವ ವೀಡಿಯೊ ಕ್ಲಿಪ್ ಹೊರಬಿದ್ದಿದೆ. ಮಾತುಕತೆಯ ಸಮಯದಲ್ಲಿ ತಾಯಿ ತನ್ನ ಮಗನಿಗೆ ಭದ್ರತಾ ಪಡೆಗಳಿಗೆ ಶರಣಾಗುವಂತೆ ಬೇಡಿಕೊಂಡಿದ್ದಾಳೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ವಾನಿ ಹತನಾಗುವ ಸ್ವಲ್ಪ ಸಮಯದ ಮೊದಲು ವೀಡಿಯೊ ಕರೆ ಮೂಲಕ ತಾಯಿ ಜೊತೆ ಮಾತನಾಡಿದ್ದಾನೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಕ್ಲಿಪ್ನಲ್ಲಿ, ಭಯೋತ್ಪಾದಕ ವಾನಿ ತನ್ನ ತಾಯಿಯೊಂದಿಗೆ ಮಾತನಾಡುತ್ತಿರುವಾಗ ಎಕೆ...
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. ಶುಕ್ರವಾರ ‘ಯೂಮ್-ಎ-ತಶಕೂರ್’ ಆಚರಣೆಯ ಭಾಗವಾಗಿ ಪಾಕಿಸ್ತಾನಿ ಸೈನಿಕರನ್ನು ಉದ್ದೇಶಿಸಿ ಮಾತನಾಡುವಾಗ ಷರೀಫ್ ಭಾರತದ ದಾಳಿಯನ್ನು ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಶುಕ್ರವಾರ ಮಿಲಿಟರಿಗೆ...
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!
ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ ಮಲ್ಹೋತ್ರಾ ಕೂಡ ಒಬ್ಬರು, ಅವರು “ಟ್ರಾವೆಲ್ ವಿತ್ ಜೋ” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಕಮಿಷನ್ ಏಜೆಂಟ್ಗಳ ಮೂಲಕ...
ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!
ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ವಾಯುದಾಳಿಗಳನ್ನು ಒಳಗೊಂಡ ಆಪರೇಷನ್ ಸಿಂಧೂರದ ನಂತರ ವಿವಿಧ ವರದಿಗಳು ಚೀನಾ ಸರಬರಾಜು ಮಾಡಿದ PL-15 ಕ್ಷಿಪಣಿಗಳು ಮತ್ತು ಟರ್ಕಿಶ್ UAV ಗಳ ಬಳಕೆ ಸೇರಿದಂತೆ ಪಾಕಿಸ್ತಾನಕ್ಕೆ ಚೀನಾದ ಮಿಲಿಟರಿ ಬೆಂಬಲದ ವ್ಯಾಪ್ತಿಯನ್ನು ಎತ್ತಿ ತೋರಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ ಮೇಲೆ ಪಾಕಿಸ್ತಾನದ ಮಿಲಿಟರಿ ದಾಳಿ ನಡೆಸಲು ಚೀನಾ ಬೆಂಬಲಿಸುವ ಮೂಲಕ ಪ್ರಾಕ್ಸಿ ಯುದ್ಧವನ್ನು ನಡೆಸುವ ಮಾರ್ಗವನ್ನು ತೆಗೆದುಕೊಂಡಿತು. ಜಿಲ್ಲಾ ಮಟ್ಟದ...
ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್..!
ನವದೆಹಲಿ:ಪಾಕಿಸ್ತಾನ ಸರ್ಕಾರವು “ತನ್ನ ನಾಗರಿಕರಿಂದ ಸಂಗ್ರಹಿಸಿದ ತೆರಿಗೆಯನ್ನು ಖರ್ಚು ಮಾಡಿ ಘೋಷಿತ ಭಯೋತ್ಪಾದಕ ಮಸೂದ್ ಅಜರ್ಗೆ 14 ಕೋಟಿ ರೂ.ಗಳನ್ನು ನೀಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ ಹಾಗೂ” ಯೋಜನೆಗಳ ಬಗ್ಗೆ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ವಿಶ್ವಸಂಸ್ಥೆಯು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸಿದ ಹಾಗೂ 2019 ರ ಪುಲ್ವಾಮಾ ಮತ್ತು 2016 ರ ಉರಿ ದಾಳಿಯ ಹಿಂದಿನ ನಿಷೇಧಿತ ಜೈಶ್-ಎ-ಮೊಹಮ್ಮದ್ ಗುಂಪಿನ ಮುಖ್ಯಸ್ಥ ಮಸೂದ್ ಅಜರಗೆ ಭಾರತವು ನಾಶಪಡಿಸಿದ ಭಯೋತ್ಪಾದಕ ಶಿಬಿರಗಳ...
ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?
ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ ಶಶಿ ತರೂರ್ ಬಹುಪಕ್ಷೀಯ ನಿಯೋಗದ ನೇತೃತ್ವ ವಹಿಸಬಹುದು ಎಂದು ಅದು ಹೇಳಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು...
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಎಕ್ಸ್ ಹ್ಯಾಂಡಲ್ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. “ಬಾಂಗ್ಲಾದೇಶದ ಸೈನ್ಯ ಈಗ ಹೋಗಿ ಕೋಲ್ಕತ್ತಾ ವಶಪಡಿಸಿಕೊಳ್ಳಿ ಎಂದು ಹೇಳಿದರೆ, ನಾನು ಒಂದು ಯೋಜನೆ ಹಾಕುತ್ತೇನೆ. 70 ಫೈಟರ್ ಜೆಟ್ಗಳನ್ನು...









