ಮುಂಡಗೋಡ: ಬಿಜೆಪಿ ಯುವ ಮುಖಂಡ, ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಖಂಡನೆ ವ್ಯಕ್ತ ಪಡಿಸಿದೆ. ಪಟ್ಟಣದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಹತ್ಯೆಯಾದ ಪ್ರವೀಣ್ ಕೊಟ್ಟಾರುಯವರಿಗೆ ಶೃದ್ಧಾಂಜಲಿ ಅರ್ಪಿಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರೋ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಯುವ ಮೋರ್ಚಾದ ಪದಾಧಿಕಾರಿಗಳು ಹಾಜರಿದ್ದರು.
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಸಂಕ್ಷಿಪ್ತ ಸುದ್ದಿ
ಉಗ್ನಿಕೇರಿಯಲ್ಲಿ ವಿಶಿಷ್ಟವಾಗಿ ಆಚರಣೆಗೊಂಡ ಕಾರ್ಗಿಲ್ ವಿಜಯ್ ದಿವಸ್..!
ಮುಂಡಗೋಡ: ತಾಲೂಕಿನ ಉಗ್ನಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಶ್ರೀರಾಮ ಸೇನೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇರುವ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಲಾಯಿತು. ಹಲವು ದಿನಗಳಿಂದ ಸ್ವಚ್ಚತೆ ಮಾಡದೇ ಇದ್ದಿದ್ದ ನೀರಿನ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಿದ ಕಾರ್ಯಕರ್ತರು, ಟ್ಯಾಂಕ್ ಸುತ್ತಮುತ್ತಲಿನ ಗಿಡಗಂಟಿಗಳನ್ನು ಹಾಗೂ ಕೊಳಚೆಯನ್ನು ಸ್ವಚ್ಚಗೊಳಿಸಿದ್ರು. ಈ ಮೂಲಕ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದ್ರು.
ಮುಂಡಗೋಡಿನಲ್ಲಿ ಹಿರಿಯ ಸಾಧಕರಿಗೆ ಸಚಿವರಿಂದ ಸನ್ಮಾನ..!
ಮುಂಡಗೋಡ: ಪಟ್ಟಣದ ಎಲ್.ವಿ.ಕೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ” ವಿಶ್ವ ಜನಸಂಖ್ಯಾ ದಿನಾಚರಣೆ ಅಭಿಯಾನ ” ಕಾರ್ಯಕ್ರಮದಲ್ಲಿ ಹುನಗುಂದದ ಹಿರಿಯ ಶುಶ್ರೂಕಿ ಶಾಲಿನಿ ನಾಯ್ಕ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಯಿತು. ಸಚಿವ ಶಿವರಾಮ್ ಹೆಬ್ಬಾರ್, ಹಲವು ಹಿರಿಯ ಶುಶ್ರೂಕಿಯರು ಹಾಗೂ ಹಿರಿಯ ಆಶಾ ಕಾರ್ಯಕರ್ತೆಯರಿಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಇದ್ರ ಜೊತೆ ತಾಲೂಕಿನ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸಚಿವರು ಸನ್ಮಾನಿಸಿದ್ರು. ಈ ವೇಳೆ ಹಲವು ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸಂಘದ ಪ್ರಚಾರಕ ಸತೀಶ್ ಕಟ್ಟಿಯವರಿಗೆ ಶೃದ್ಧಾಂಜಲಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ನಲ್ಲಿ ಭಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಿಂದ ದಿ. ಸತೀಶ್ ಕಟ್ಟಿವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ನಿಧನರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸತೀಶ್ ಕಟ್ಟಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕಾ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಣದ ಬತ್ತಿ ಹಚ್ಚಿ ಶೃದ್ದಾಂಜಲಿ ಅರ್ಪಿಸಲಾಯಿತು. ಈ ವೇಳೆ ಭಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರೊಂದಿಗೆ ಭಕ್ತಿಪೂರ್ವಕವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು
ಮುಂಡಗೋಡಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಛತ್ರಪತಿ ಶಿವಾಜಿ ಮಂಡಳದ ವತಿಯಿಂದ ಗೌರವ ಸಮರ್ಪಣೆ ಹಾಗೂ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಭಕ್ತಿಯ ಘೋಷಣೆಗಳೊಂದಿಗೆ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಯೋಧರಾದ ಗಣಪತಿ ರವಳಪ್ಪನವರ್, ಯಲ್ಲಪ್ಪ ನಾಯ್ಕರ್, ಅಣ್ಣಪ್ಪ ಶಿಗ್ಗಾವಿ ಹಾಗೂ ಗಣಪತಿ ಮಟ್ಟಿಮನಿ ಎಂಬುವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಹಲವು ಮುಖಂಡರು ಭಾಗಿಯಾಗಿದ್ರು.
ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ..!
ಮುಂಡಗೋಡ: ತಾಲೂಕಿನ ಅಗಡಿ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಆದ್ರೆ, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಹಳಿಯಾಳ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್, ರಸ್ತೆಗಳ ಗುಂಡಿಗಳಲ್ಲಿ ನಿಯಂತ್ರಣ ತಪ್ಪಿ ಬಿದ್ದಿತ್ತು ಎನ್ನಲಾಗಿದೆ. ಹೀಗಾಗಿ, ರಸ್ತೆಗಳ ಅವ್ಯವಸ್ಥೆಗೆ ಜನರು ಹಿಡಿಶಾಪ ಹಾಕುವಂತಾಗಿದೆ. ಅಂದಹಾಗೆ, ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಕಬ್ಬು ಸಾಗಿಸುತ್ತಿವೆ. ಈ ವೇಳೆ ರಸ್ತೆಗಳ ಗುಂಡಿಗಳಿಂದ ಇನ್ನಿಲ್ಲದ ಕಿರಿಕಿರಿಯಾಗುತ್ತಿದೆ. ಸಂಬಂದಪಟ್ಟ ಇಲಾಖೆ ಈ ಕಡೆ...
ಇಂದೂರಿನಲ್ಲಿ “ಪುನೀತ್” ಪುಣ್ಯಸ್ಮರಣೆ, ಕ್ಯಾಂಡಲ್ ಹಚ್ಚಿ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ರವರ 11 ದಿನದ ಪುಣ್ಯತಿಥಿಯ ನಿಮಿತ್ತ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಸೋಮವಾರ ಸಂಜೆ ಇಲ್ಲಿನ ಮುಖ್ಯ ಸರ್ಕಲ್ ನಲ್ಲಿ ಪುನೀತ್ ರಾಜಕುಮಾರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನಂತರ ಮೇಣದ ಬತ್ತಿ ಹಚ್ಚಿ ಶೃದ್ಧಾಂಜಲಿ ಅರ್ಪಿಸಲಾಯಿತು. ಪುನೀತ್ ರಾಜಕುಮಾರ್ ಮತ್ತೆ ಹುಟ್ಟಿ ಬನ್ನಿ ಅಂತಾ ಘೋಷಣೆ ಕೂಗಿದ ಅಭಿಮಾನಿಗಳು ಪುನೀತ್ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದ್ರು.
ಸಿದ್ದನಕೊಪ್ಪದ ಕಬಡ್ಡಿ ಪಂದ್ಯಾವಳಿಯಲ್ಲಿ ಅತಿಥಿಗಳೇ ಕಣದಲ್ಲಿ ಘರ್ಜನೆ..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಉದ್ಘಾಟನೆಗೆ ಬಂದಿದ್ದ ಅತಿಥಿಗಳು ಕಬಡ್ಡಿ ಆಟ ಆಡಿ ಸಂಭ್ರಮಿಸಿದ್ರು. ಎರಡು ತಂಡಗಳಾಗಿ ಕಣಕ್ಕಿಳಿದ ಅತಿಥಿ ಮಹೋದಯರು ಕಬಡ್ಡಿ ಆಟದ ಮಜಲುಗಳನ್ನು ಪ್ರದರ್ಶಿಸಿದ್ರು. ಮಳಗಿಯ ಸಂತೋಷ ಶೇಟ್ ರಾಯ್ಕರ್,ಪಕ್ಕೀರಪ್ಪ, ಶಿವಾಜಿ ಸಿಂಧೆ, ಪ್ರಕಾಶ ಅಜ್ಜಮನವರ್ ಸೇರಿದಂತೆ ಹಲವರು ಕಬಡ್ಡಿ ಆಟದಲ್ಲಿ ಪಾಲ್ಗೊಂಡರು. ಇನ್ನು ನಿನ್ನೆಯಿಂದಲೂ ಸಿದ್ದನಕೊಪ್ಪ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿವೆ.
ಮುಂಡಗೋಡ ತಾಲೂಕಿನ ಅಂಗನವಾಡಿಗಳಲ್ಲಿ ಮತ್ತೆ ಚಿಣ್ಣರ ಕಲರವ..!
ಮುಂಡಗೋಡ: ತಾಲೂಕಿನಲ್ಲಿ ಸೋಮವಾರದಿಂದ ಅಂಗನವಾಡಿ ಕೇಂದ್ರಗಳು ಮತ್ತೆ ಚಾಲನೆ ಪಡೆದುಕೊಂಡಿವೆ. ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಅಂಗಮವಾಡಿ ಕೇಂದ್ರಗಳನ್ನು ಸ್ವಚ್ಚಗೊಳಿಸಿ, ತಳಿರು ತೋರಣಗಳಿಂದ ಶೃಂಗರಿಸಿ, ಪೂಜೆ ಮಾಡಿ ಪುನರಾರಂಭ ಮಾಡಲಾಗಿದೆ. ಕೊರೋನಾ ಸಂಕಷ್ಟದ ನಡುವೆ ಬಂದ್ ಆಗಿದ್ದ ಅಂಗನವಾಡಿಗಳು ಇಂದಿನಿಂದ ಪುಟ್ಟ ಪುಟ್ಟ ಮಕ್ಕಳ ಕಲರವದೊಂದಿಗೆ ಶುರುವಾದವು. ತಾಲೂಕಿನ ಅಗಡಿಯಲ್ಲಿ ಅಂಗನವಾಡಿಯ ಪುನರಾರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತರು ಮಕ್ಕಳನ್ನು ಬರಮಾಡಿಕೊಂಡರು..
ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು. ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು. ****************** ಜಾಹೀರಾತು









