ಮುಂಡಗೋಡ: ತಾಲೂಕಿನ ಉಗ್ನಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಶ್ರೀರಾಮ ಸೇನೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇರುವ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಲಾಯಿತು. ಹಲವು ದಿನಗಳಿಂದ ಸ್ವಚ್ಚತೆ ಮಾಡದೇ ಇದ್ದಿದ್ದ ನೀರಿನ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಿದ ಕಾರ್ಯಕರ್ತರು, ಟ್ಯಾಂಕ್ ಸುತ್ತಮುತ್ತಲಿನ ಗಿಡಗಂಟಿಗಳನ್ನು ಹಾಗೂ ಕೊಳಚೆಯನ್ನು ಸ್ವಚ್ಚಗೊಳಿಸಿದ್ರು. ಈ ಮೂಲಕ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದ್ರು.
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ಸಂಕ್ಷಿಪ್ತ ಸುದ್ದಿ
ಮುಂಡಗೋಡಿನಲ್ಲಿ ಹಿರಿಯ ಸಾಧಕರಿಗೆ ಸಚಿವರಿಂದ ಸನ್ಮಾನ..!
ಮುಂಡಗೋಡ: ಪಟ್ಟಣದ ಎಲ್.ವಿ.ಕೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ” ವಿಶ್ವ ಜನಸಂಖ್ಯಾ ದಿನಾಚರಣೆ ಅಭಿಯಾನ ” ಕಾರ್ಯಕ್ರಮದಲ್ಲಿ ಹುನಗುಂದದ ಹಿರಿಯ ಶುಶ್ರೂಕಿ ಶಾಲಿನಿ ನಾಯ್ಕ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಯಿತು. ಸಚಿವ ಶಿವರಾಮ್ ಹೆಬ್ಬಾರ್, ಹಲವು ಹಿರಿಯ ಶುಶ್ರೂಕಿಯರು ಹಾಗೂ ಹಿರಿಯ ಆಶಾ ಕಾರ್ಯಕರ್ತೆಯರಿಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಇದ್ರ ಜೊತೆ ತಾಲೂಕಿನ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸಚಿವರು ಸನ್ಮಾನಿಸಿದ್ರು. ಈ ವೇಳೆ ಹಲವು ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸಂಘದ ಪ್ರಚಾರಕ ಸತೀಶ್ ಕಟ್ಟಿಯವರಿಗೆ ಶೃದ್ಧಾಂಜಲಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ನಲ್ಲಿ ಭಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಿಂದ ದಿ. ಸತೀಶ್ ಕಟ್ಟಿವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ನಿಧನರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸತೀಶ್ ಕಟ್ಟಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕಾ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಣದ ಬತ್ತಿ ಹಚ್ಚಿ ಶೃದ್ದಾಂಜಲಿ ಅರ್ಪಿಸಲಾಯಿತು. ಈ ವೇಳೆ ಭಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರೊಂದಿಗೆ ಭಕ್ತಿಪೂರ್ವಕವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು
ಮುಂಡಗೋಡಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಛತ್ರಪತಿ ಶಿವಾಜಿ ಮಂಡಳದ ವತಿಯಿಂದ ಗೌರವ ಸಮರ್ಪಣೆ ಹಾಗೂ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಭಕ್ತಿಯ ಘೋಷಣೆಗಳೊಂದಿಗೆ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಯೋಧರಾದ ಗಣಪತಿ ರವಳಪ್ಪನವರ್, ಯಲ್ಲಪ್ಪ ನಾಯ್ಕರ್, ಅಣ್ಣಪ್ಪ ಶಿಗ್ಗಾವಿ ಹಾಗೂ ಗಣಪತಿ ಮಟ್ಟಿಮನಿ ಎಂಬುವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಹಲವು ಮುಖಂಡರು ಭಾಗಿಯಾಗಿದ್ರು.
ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ..!
ಮುಂಡಗೋಡ: ತಾಲೂಕಿನ ಅಗಡಿ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಆದ್ರೆ, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಹಳಿಯಾಳ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್, ರಸ್ತೆಗಳ ಗುಂಡಿಗಳಲ್ಲಿ ನಿಯಂತ್ರಣ ತಪ್ಪಿ ಬಿದ್ದಿತ್ತು ಎನ್ನಲಾಗಿದೆ. ಹೀಗಾಗಿ, ರಸ್ತೆಗಳ ಅವ್ಯವಸ್ಥೆಗೆ ಜನರು ಹಿಡಿಶಾಪ ಹಾಕುವಂತಾಗಿದೆ. ಅಂದಹಾಗೆ, ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಕಬ್ಬು ಸಾಗಿಸುತ್ತಿವೆ. ಈ ವೇಳೆ ರಸ್ತೆಗಳ ಗುಂಡಿಗಳಿಂದ ಇನ್ನಿಲ್ಲದ ಕಿರಿಕಿರಿಯಾಗುತ್ತಿದೆ. ಸಂಬಂದಪಟ್ಟ ಇಲಾಖೆ ಈ ಕಡೆ...
ಇಂದೂರಿನಲ್ಲಿ “ಪುನೀತ್” ಪುಣ್ಯಸ್ಮರಣೆ, ಕ್ಯಾಂಡಲ್ ಹಚ್ಚಿ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ರವರ 11 ದಿನದ ಪುಣ್ಯತಿಥಿಯ ನಿಮಿತ್ತ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಸೋಮವಾರ ಸಂಜೆ ಇಲ್ಲಿನ ಮುಖ್ಯ ಸರ್ಕಲ್ ನಲ್ಲಿ ಪುನೀತ್ ರಾಜಕುಮಾರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನಂತರ ಮೇಣದ ಬತ್ತಿ ಹಚ್ಚಿ ಶೃದ್ಧಾಂಜಲಿ ಅರ್ಪಿಸಲಾಯಿತು. ಪುನೀತ್ ರಾಜಕುಮಾರ್ ಮತ್ತೆ ಹುಟ್ಟಿ ಬನ್ನಿ ಅಂತಾ ಘೋಷಣೆ ಕೂಗಿದ ಅಭಿಮಾನಿಗಳು ಪುನೀತ್ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದ್ರು.
ಸಿದ್ದನಕೊಪ್ಪದ ಕಬಡ್ಡಿ ಪಂದ್ಯಾವಳಿಯಲ್ಲಿ ಅತಿಥಿಗಳೇ ಕಣದಲ್ಲಿ ಘರ್ಜನೆ..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಉದ್ಘಾಟನೆಗೆ ಬಂದಿದ್ದ ಅತಿಥಿಗಳು ಕಬಡ್ಡಿ ಆಟ ಆಡಿ ಸಂಭ್ರಮಿಸಿದ್ರು. ಎರಡು ತಂಡಗಳಾಗಿ ಕಣಕ್ಕಿಳಿದ ಅತಿಥಿ ಮಹೋದಯರು ಕಬಡ್ಡಿ ಆಟದ ಮಜಲುಗಳನ್ನು ಪ್ರದರ್ಶಿಸಿದ್ರು. ಮಳಗಿಯ ಸಂತೋಷ ಶೇಟ್ ರಾಯ್ಕರ್,ಪಕ್ಕೀರಪ್ಪ, ಶಿವಾಜಿ ಸಿಂಧೆ, ಪ್ರಕಾಶ ಅಜ್ಜಮನವರ್ ಸೇರಿದಂತೆ ಹಲವರು ಕಬಡ್ಡಿ ಆಟದಲ್ಲಿ ಪಾಲ್ಗೊಂಡರು. ಇನ್ನು ನಿನ್ನೆಯಿಂದಲೂ ಸಿದ್ದನಕೊಪ್ಪ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿವೆ.
ಮುಂಡಗೋಡ ತಾಲೂಕಿನ ಅಂಗನವಾಡಿಗಳಲ್ಲಿ ಮತ್ತೆ ಚಿಣ್ಣರ ಕಲರವ..!
ಮುಂಡಗೋಡ: ತಾಲೂಕಿನಲ್ಲಿ ಸೋಮವಾರದಿಂದ ಅಂಗನವಾಡಿ ಕೇಂದ್ರಗಳು ಮತ್ತೆ ಚಾಲನೆ ಪಡೆದುಕೊಂಡಿವೆ. ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಅಂಗಮವಾಡಿ ಕೇಂದ್ರಗಳನ್ನು ಸ್ವಚ್ಚಗೊಳಿಸಿ, ತಳಿರು ತೋರಣಗಳಿಂದ ಶೃಂಗರಿಸಿ, ಪೂಜೆ ಮಾಡಿ ಪುನರಾರಂಭ ಮಾಡಲಾಗಿದೆ. ಕೊರೋನಾ ಸಂಕಷ್ಟದ ನಡುವೆ ಬಂದ್ ಆಗಿದ್ದ ಅಂಗನವಾಡಿಗಳು ಇಂದಿನಿಂದ ಪುಟ್ಟ ಪುಟ್ಟ ಮಕ್ಕಳ ಕಲರವದೊಂದಿಗೆ ಶುರುವಾದವು. ತಾಲೂಕಿನ ಅಗಡಿಯಲ್ಲಿ ಅಂಗನವಾಡಿಯ ಪುನರಾರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತರು ಮಕ್ಕಳನ್ನು ಬರಮಾಡಿಕೊಂಡರು..
ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು. ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು. ****************** ಜಾಹೀರಾತು
ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಕೋವಿಡ್ ಮಾರ್ಗಸೂಚಿಯ ಅನ್ವಯ ಸರಳವಾಗಿ ಆಚರಿಸಲಾದ ಗಣೇಶೋತ್ಸವಕ್ಕೆ, ಸರಳವಾದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ನಡೆಸಲಾಯಿತು. ಅದಕ್ಕೂ ಮೊದಲು, ಇಂದು ಗಣೇಶನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಜನಾ ಪದಗಳ ಮೂಲಕ ಗಣೇಶನಿಗೆ ಜಯ ಘೋಷಗಳನ್ನು ಕೂಗಿ ಭಕ್ತಿ ಸಮರ್ಪಿಸಲಾಯಿತು..









