ಧಾರವಾಡ: ತಾಲೂಕಿನ ಮುಮ್ಮಿಗಟ್ಟಿ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಬೆಂಕಿ ಅವಘಡವಾಗಿದೆ. ಪೆಟ್ರೋಲ್ ಹಾಕಿಸಿಕೊಳ್ಳುವಾಗಲೇ ಬೈಕ್ ಗೆ ತಗುಲಿದ ಬೆಂಕಿಯಿಂದ, ಪೆಟ್ರೊಲ್ ಬಂಕ್ ನಲ್ಲಿ ಬೆಂಕಿ ಆವರಿಸಿಕೊಂಡಿದೆ. ಬೈಕ್ ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಬಂಕ್ ನ ಸಿಬ್ಬಂದಿಗಳು ಸಮಯಪ್ರಜ್ಞೆಯಿಂದ ಬೆಂಕಿ ನಂದಿಸಿದ್ದಾರೆ. ಇದ್ರಿಂದ ಭಾರೀ ಬೆಂಕಿ ದುರಂತ ಅದೃಷ್ಟವಶಾತ್ ತಪ್ಪಿದೆ. ಘಟನೆಯ ಸಂಪೂರತಣ ದೃಷ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ಹುಬ್ಬಳ್ಳಿ ಧಾರವಾಡ
ಅಯ್ಯೋ ಕರ್ಮವೇ, ಎಂಥಾ ಕಾಲ ಬಂತಪ್ಪಾ..? ಪೊಲೀಸರೇ ಇಲ್ಲಿ ಗಾಂಜಾ ವ್ಯಾಪಾರಿಗಳಂತೆ..!
ಹುಬ್ಬಳ್ಳಿ: ಇದು ಅಕ್ಷರಶಃ ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಾನೂನನ್ನು ರಕ್ಷಣೆ ಮಾಡಬೇಕಿದ್ದವರೆ ಇಲ್ಲಿ ಕಾನೂನನ್ನೇ ಮರೆತಂತೆ ಕಾಣುತ್ತೆ.. ಗಾಂಜಾ ಗಮ್ಮತ್ತು ಇದೀಗ ಎಲ್ಲೆಡೆ ಜೋರಾಗಿದ್ದು ಅದನ್ನ ತಡೆಹಿಡಿಯಬೇಕಾದವರೆ ಇದೀಗ ಅವರೇ ಮಾರಾಟ ಮಾಡಿ ತಗಲಾಕ್ಕೊಂಡಿದಾರೆ. ಸಸ್ಪೆಂಡ್ ಆಗಿ ಆಗಿದ್ದಾರೆ. ವಾಣಿಜ್ಯ ನಗರಿ, ಛೋಟಾ ಮುಂಬೈ ಅಂತೆಲ್ಲ ಕರೆಸಿಕೊಳ್ಳುವ ಹುಬ್ಬಳ್ಳಿ, ಇದೀಗ ಗಾಂಜಾ ನಗರಿಯಾಗುವತ್ತ ಸಾಗುತ್ತಿದೆ.. ವಿದ್ಯಾರ್ಥಿಗಳು, ಯುವಕರ ಗುಂಪು ಸದ್ದಿಲ್ಲದೆ ಗಾಂಜಾ ಗಮ್ಮತ್ತಿಗೆ ಒಳಗಾಗುತ್ತಿದ್ದಾರೆ.. ಇದಕ್ಕೆ ಕಡಿವಾಣ ಹಾಕಬೇಕು. ಯುವಕರನ್ನು ಸರಿದಾರಿಗೆ ತರಬೇಕಾದ ಖಾಕಿಯೇ...
ಸೈಕ್ಲಿಂಗ್ ಮಾಡುವಾಗಲೇ ಸಾವನ್ನಪ್ಪಿದ ಸೈಕ್ಲಿಸ್ಟ್..!
ಹುಬ್ಬಳ್ಳಿಯ ಸೈಕ್ಲಿಸ್ಟ್ ಒಬ್ಬರು ಸೈಕ್ಲಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿಗ್ಗಾಂವ ಸಮೀಪ ನಡೆದಿದೆ. ಬಸವಗೌಡ ಶಂಕರಗೌಡ ಶಿವಳ್ಳಿ (35) ಮೃತರಾಗಿದ್ದು, ಬಿವ್ಹಿಬಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ಅಲ್ಲದೇ ಹಲವಾರು ವರ್ಷಗಳಿಂದ ಸೈಕ್ಲಿಸ್ಟ್ ಆಗಿದ್ದು, ವಿವಿಧ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದರು. ಇಂದು ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಯೋಜಿಸಿದ್ದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಶಿಗ್ಗಾಂವ ಬಳಿ ಏಕಾಏಕಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ******************* ಜಾಹೀರಾತು
ಕಲಘಟಗಿಯಲ್ಲಿ 2 ಕಿಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಂತೋಷ ಲಾಡ್ ನೇತೃತ್ವ..!
ಕಲಘಟಗಿ: ಕೋವಿಡ್ ಆತಂಕದ ನಡುವೆಯೇ ಕಲಘಟಗಿಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 2 ಕಿಮೀ ಉದ್ದದ 9 ಅಡಿ ಅಗಲ ಇರುವ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಸಾವಿರಾರು ಜನರಿಂದ ರಾಷ್ಟ್ರಭಕ್ತಿಯ ಘೋಷಣೆಗಳು ಮೊಳಗಿದವು. ದೇಶಭಕ್ತಿಯ ಗೀತೆಗಳ ಮೂಲಕ, ಘೋಷಣೆ ಗಳ ಮೂಲಕ ವಿಶೇಷ ರಾಷ್ಟ್ರಧ್ವಜದ ಮೆರವಣಿಗೆ ನಡೆಸಲಾಯಿತು.
ಬೈಕ್ ಅಪಘಾತ: ಕುಬಿಹಾಳ ಗ್ರಾಮ ಪಂಚಾಯತ ಪಿಡಿಓ ಸಾವು..!
ಹುಬ್ಬಳ್ಳಿ: ಬೈಕ್ – ಕಾರ್ ನಡುವೆ ಮುಖಾ-ಮುಖಿಯಾಗಿ ಪಿಡಿಓ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರೂರ ಬ್ರಿಡ್ಜ್ ಬಳಿ ನಡೆದಿದೆ. ಕುಂದಗೋಳ ತಾಲೂಕಿನ ಸಂಶಿ ನಿವಾಸಿಯಾದ ಪ್ರಭುಗೌಡ ಬಸನಗೌಡ ತೇಂಬದಮನಿ ಮೃತ ಪಿಡಿಓ ಆಗಿದ್ದಾರೆ. ಕುಬಿಹಾಳ ಗ್ರಾಮ ಪಂಚಾಯತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಇವತ್ತು ಸಂಜೆ ಕೆಲಸ ಮುಗಿಸಿ ಊರ ಕಡೆ ಹೋಗುವಾಗ ಎದುರಿಗೆ ಬಂದ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಎಸ್ ಡಿ ಎಂ ಆಸ್ಪತ್ರೆಗೆ ಸಾಗಿಸುವ ಮಧ್ಯೆ...
ಟೂರ್ ಪ್ಲಾನ್ ಬದಲು, ನೇರವಾಗಿ ಉತ್ತರ ಕನ್ನಡಕ್ಕೆ ಬರಬೇಕಿದ್ದ ಸಿಎಂ ಹೋಗಿದ್ದೇಲ್ಲಿಗೆ..?
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈಗಾಗಲೇ ಹುಬ್ಬಳ್ಳಿಗೆ ನೂತನ ಸಿಎಂ ಆಗಮನವಾಗಿದ್ದು ಹುಬ್ಬಳ್ಳಿಯ ಭೇಟಿಗಾಗಿ ಬೊಮ್ಮಾಯಿ ಟೂರ್ ಪ್ಲಾನ್ ಬದಲಾಯಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಉತ್ತರ ಕನ್ನಡ ಜಿಲ್ಲೆಗೆ ತೆರಳಬೇಕಿದ್ದ ಸಿಎಂ, ಹುಬ್ಬಳ್ಳಿಗೆ ಅಗಮಿಸುತ್ತಿದ್ದಂತೆಯೇ ಟೂರ್ ಪ್ಲಾನ್ ಬಹುತೇಕ ಬದಲಾಗಿದೆ. ಹುಬ್ಬಳ್ಳಿಯ ಕೇಶಕುಂಜ ಸೇರಿದಂತೆ, ಬೊಮ್ಮಾಯಿ ತಂದೆ ದಿ.S R ಪಾಟೀಲ ಸಮಾಧಿಗೆ ಭೇಟಿ ನೀಡಿದ ಸಿಎಂ, ಅಲ್ಲಿಂದ ನೇರವಾಗಿ ನಗರದಲ್ಲಿರೋ ರಂಭಾಪುರಿ ಮಠಕ್ಕೆ ಭೇಟಿ ನೀಡಿ...
ಆಟೋಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಇಬ್ಬರ ದುರ್ಮರಣ.!
ಹುಬ್ಬಳ್ಳಿ: ಲಾರಿ ಹಾಗೂ ಆಟೋ ಮದ್ಯೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ, ಹುಬ್ಬಳ್ಳಿಯ ಹೊರಹೊಲಯದ ಗಬ್ಬೂರು ಬೈಪಾಸ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ವರೂರಿಗೆ ಹೊರಟಿದ್ದ ಆಟೋಗೆ, ಎದುರಿನಿಂದ ಬಂದ ಲಾರಿಯಿಂದ ಡಿಕ್ಕಿಯಾಗಿದೆ. ಹೀಗಾಗಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಆದ್ರೆ, ಸಾವಿಗೀಡಾದ ವ್ಯಕ್ತಿಗಳ ಗುರುತು ಇನ್ನು ಪತ್ತೆಯಾಗಿಲ್ಲ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸ್ರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಆ ಹುಬ್ಬಳ್ಳಿ ಹುಡುಗನ ಮರ್ಡರ್ ಹಿಂದೆ ಇದ್ದಿದ್ದು “ಗಾಜಿನ ಪುರಾಣ”
ಹುಬ್ಬಳ್ಳಿ: ಆ ಯುವಕ ತನ್ನ ಮುಂದಿನ ಬದುಕಿನ ಬಗ್ಗೆ ಸಾವಿರಾರು ಕನಸು ಕಂಡವನು. ಪ್ರತಿಷ್ಠಿತ ಮನೆತನದಲ್ಲಿ ಹುಟ್ಟಿದ್ದ ಆ ಯುವಕ ಗೆಳೆಯರ ಜೊತೆ ಎಂಜಾಯ್ ಮಾಡುತ್ತಾ ಮನೆಯ ಮುದ್ದು ಮಗನಾಗಿದ್ದವನು. ಆದ್ರೆ ಆ ಯುವಕನ ಮೇಲೆ ಅದಾಗಲೇ ಒಂದು ಗ್ಯಾಂಗ್ ನ ಕಣ್ಣು ಬಿದ್ದಿತ್ತು. ನಿನ್ನೆ ಯುವಕನ ಜೊತೆ ಸಣ್ಣದಾಗಿ ಜಗಳ ಮಾಡಿದ್ದ ಆ ಗ್ಯಾಂಗ್ ಸದ್ದಿಲ್ಲದೆ ಯುವಕನ ಪ್ರಾಣ ತಿಂದು ಹಾಕಿದೆ. ಸ್ಮಾರ್ಟ್ ಹುಡುಗ ಕಣ್ರಿ..! ಆಸ್ಪತ್ರೆಯ ಎದುರು ನಿಂತಿರೋ ನೂರಾರು ಜನರು..ಶವಾಗರದ ಬಳಿ ಬಂದು...
ಆ ನೀಚ ಪತಿ ಕುಡಿದ ಮತ್ತಿನಲ್ಲಿ, ತನ್ನ ಪತ್ನಿಯ ಮೂಗನ್ನೇ ಕಚ್ಚಿ ತಿಂದುಬಿಟ್ಟ..!
ಆತ ಕುಡಿದ ಮತ್ತಿನಲ್ಲಿದ್ದ ಪತಿ, ಪತ್ನಿ ಮನೆಯಲ್ಲಿ ಬಂದು ಉಳಿದಿದ್ದ ಆತನದು ನಿತ್ಯದ ಕಾಯಕ ಕುಡಿತ ಮತ್ತು ಜಗಳ. ನಿತ್ಯ ಕುಡಿದು ಬಂದು ಬೈಯುತ್ತಲೇ ಇದ್ದರೂ ಸಹ ಪತ್ನಿ ಹೇಗೋ ಹೊಂದಿಕೊಂಡು ಹೊರಟ್ಟಿದ್ದಳು. ಇಂದಲ್ಲ ನಾಳೆ ನನ್ನ ಪತಿ ಸುಧಾರಿಸಿಯಾನೂ ಅಂತಾನೆ ಅವಳು ತಿಳಿದಿದ್ದಳು. ಆದ್ರೆ ಪತ್ನಿಯನ್ನ ಚೆನ್ನಾಗಿ ನೋಡಕೊಳ್ಳಬೇಕಾದ ದುರುಳ ಪತಿ ಮಾಡಿದ್ದು ಮಾತ್ರ ವಿಚಿತ್ರ ಕಾರ್ಯ..ಕುಡಿತದ ಮತ್ತಿನಲ್ಲೇ ತೇಲುತ್ತಿದ್ದ ಪತಿ ಮಾತ್ರ ಹೆಂಡತಿಯ ಮೂಗನ್ನೇ ಕಚ್ಚಿಬಿಟ್ಟಿದ್ದಾನೆ. ಹೌದು, ಹೀಗೆ ಸಂಪೂರ್ಣವಾಗಿ ರಕ್ತಸಿಕ್ತವಾಗಿರು ಮೂಗು..ಮೂಗಿನಿಂದ ನಿರಂತರವಾಗಿ...
ಧಾರವಾಡ ಯೋಗಿಶಗೌಡ ಹತ್ಯೆ ಕೇಸ್ ಗೆ ಮೇಜರ್ ಟ್ವಿಸ್ಟ್..!
ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗಿಶಗೌಡ ಕೊಲೆ ಕೇಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿಯೇ ಈಗ ಖುದ್ದು ವಿನಯ ಕುಲಕರ್ಣಿ ವಿರುದ್ಧವೇ ಪರೋಕ್ಷ ಹೇಳಿಕೆ ನೀಡಿದ್ದು, ಇಷ್ಟು ದಿನ ಹೇಳದೇ ಇರೋ ಸತ್ಯಗಳನ್ನೆಲ್ಲ ಇನ್ನು ಮುಂದೆ ಹೇಳುವೆ ಅಂತಾ ಹೇಳಿದ್ದಾನೆ. ಮತ್ತೊಂದು ಕಡೆ ನಿನ್ನೆಯಷ್ಟೇ ಸಿಬಿಐ ಬಂಧಿಸಿದ್ದ ಸೋಮು ನ್ಯಾಮಗೌಡನಿಗೆ ಇವತ್ತು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. 2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿಲ್ಲಾ...









