Home BIG BREAKING

Category: BIG BREAKING

Post
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..!  ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

 ಮುಂಡಗೋಡ ತಾಲೂಕಿನಲ್ಲಿ ಸದ್ಯ SSLC ಪರೀಕ್ಷೆಯ ಸಲುವಾಗಿ ಇಡೀ ಶಿಕ್ಷಣ ಇಲಾಖೆಯೇ ತಲೆ ಕೆಡಿಸಿಕೊಂಡು 100% ಫಲಿತಾಂಶ ತರಲೇ ಬೇಕು ಅಂತಾ ಹಗಲಿರುಳು ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಡೀ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಕಣ್ಣಿಗೆ ಎಣ್ಣೆಬಿಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ರೆಡಿ ಮಾಡ್ತಿದಾರೆ. ಸತ್ಯ ಅಂದ್ರೆ ನಮ್ಮ ಮುಂಡಗೋಡಿಗೆ ನೂತನವಾಗಿ ಬಂದಿರೋ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಜಕ್ಕೂ ನಮ್ಮ ಪಾಲಿನ ಹೆಮ್ಮೆ. ಪ್ರಬುದ್ದ ತೆಯ ಸಾಕಾರ ಮೂರ್ತಿ..! ಆದ್ರೆ, ಇದೇಲ್ಲದರ ನಡುವೆಯೂ ಕೆಲವ್ರು “ತಾವು ನಡೆದದ್ದೇ...

Post
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!

ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕ‌ಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...

Post
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!

ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!

ಮುಂಡಗೋಡ ಪಟ್ಟಣದ ನೆಹರು ನಗರದಲ್ಲಿ ಜೇನು ನೋಣಗಳ ದಾಳಿಯಾಗಿದೆ. ಪರಿಣಾಮ ಆರು ಜನರಿಗೆ ಗಾಯವಾಗಿದೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪಟ್ಟಣದ ನೆಹರು ನಗರದ ನನ್ನೇಸಾಬ್ ಶೇಖ್ ಮನೆಯ ಹತ್ತಿರದ ಗಿಡದಲ್ಲಿ ಜೇನು ಗೂಡು ಕಟ್ಟಿತ್ತು. ಇವತ್ತು ಮದ್ಯಾನ ಬಿಸಿಲಿನ ತಾಪಕ್ಕೋ ಅಥವಾ ಯಾರಾದ್ರೂ ಕಲ್ಲೆಸೆದ ಕಾರಣಕ್ಕೋ ಜೇನು ನೋಣಗಳು ಎದ್ದಿವೆ. ಈ ಹೊತ್ತಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ಆರು ಜನರಿಗೆ ಕಚ್ಚಿ ಗಾಯಗೊಳಿಸಿವೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯಗೊಳಿಸಿವೆ. ಸದ್ಯ ಗಾಯಾಳುಗಳನ್ನು...

Post
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು

ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು

ಹುಬ್ಬಳ್ಳಿ: ನಗರದಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಮನೆಯೊಂದರಲ್ಲಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ...

Post
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!

ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!

ಹಾವೇರಿ; ಬೆಂಗಳೂರಿನಿಂದ ಹಾವೇರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯವಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಿರಿಯೂರು ಬಳಿ ರೆಸ್ಟ್ ವೇಳೆ ದ್ವಿಚಕ್ರ ವಾಹನ ಸವಾರನೋರ್ವ ರುದ್ರಪ್ಪ ಲಮಾಣಿ ಅವರಿಗೆ ಡಿಕ್ಕಿ ಹೊಡೆದು ತಲೆಗೆ, ಮೂಗಿಗೆ ಗಾಯಗಳು ಆಗಿವೆ ಎಂದು ಲಮಾಣಿ ಅವರನ್ನು ದಾವಣಗೆರೆ ಎಸ್ ರಸ್ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Post
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಮುಂಡಗೋಡಿನ ವ್ಯಕ್ತಿ ಭೀಕರ ಸಾವು ಕಂಡಿದ್ದಾನೆ. ತನ್ನದೇ ಬೈಕ್ ಪಕ್ಕದಲ್ಲಿ ಸಾವನ್ನಪ್ಪಿರೋ ವ್ಯಕ್ತಿ ಅನುಮಾನಾಸ್ಪದವಾಗಿ ಹೆಣವಾಗಿದ್ದಾನೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಮಂಜುನಾಥ್ ಜಾಧವ್(45) ಅಲಿಯಾಸ್ ಮಂಜು ಮೂಡಸಾಲಿ ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿ ಅಂತಾ ಅನುಮಾನಿಸಲಾಗಿದೆ. ಅಸಲು, KA 31 E F 3587 ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್ ನ ಪಕ್ಕದಲ್ಲೇ ರಕ್ತಸಿಕ್ತವಾಗಿ ಬಿದ್ದಿರೋ ವ್ಯಕ್ತಿ, ಮಂಜುನಾಥ್ ಜಾಧವ್ ಅಂತ ಹೇಳಲಾಗ್ತಿದೆ. ಬಂಕಾಪುರ ಪಟ್ಟಣದ ಹೊರವಲಯದ ರಸ್ತೆ ಪಕ್ಕದಲ್ಲಿ ಘಟನೆ ನಡೆದಿದೆ....

Post
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ದಿನಾಂಕ:02.03 2025 ರ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಈ ಕೆಳಗೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಮುನ್ನಚ್ಚರಿಕೆ ಪಾಲಿಸಿ..! ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ,...

Post
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ‌ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...

Post
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...

Post
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!

“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!

ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ...

error: Content is protected !!